Homeಕರೋನಾ ತಲ್ಲಣಮೈದುಂಬಿ ಹರಿಯುವ ನದಿಗಳು, ಧುಮ್ಮಿಕ್ಕುತ್ತಿರುವ ಜಲಪಾತಗಳ ನಡುವೆ ಬಣಗುಡುತ್ತಿರುವ ಮಲೆನಾಡಿನ ಪ್ರವಾಸಿ ತಾಣಗಳು

ಮೈದುಂಬಿ ಹರಿಯುವ ನದಿಗಳು, ಧುಮ್ಮಿಕ್ಕುತ್ತಿರುವ ಜಲಪಾತಗಳ ನಡುವೆ ಬಣಗುಡುತ್ತಿರುವ ಮಲೆನಾಡಿನ ಪ್ರವಾಸಿ ತಾಣಗಳು

ಜೋಗ ಜಲಪಾತ, ಚಿಕ್ಕಮಗಳೂರಿನ ಬೆಟ್ಟಗಳ ಸಾಲು, ಕೊಡಗಿನ ಕಾಡು ಬೆಟ್ಟಗಳು ಎಲ್ಲೆಡೆ ಮಳೆಗಾಲದ ಜೂನ್, ಜುಲೈ ತಿಂಗಳಲ್ಲಿ ಪ್ರತಿ ವರ್ಷ ಪ್ರವಾಸಿಗರ ದಂಡು ನೆರೆದಿರುತ್ತಿತ್ತು.

- Advertisement -
- Advertisement -

ಬೆಳಗಾವಿಯಿಂದ ಕೊಡಗಿನ ತುದಿಯವರೆಗೆ ವಾರವಿಡಿ ಇನ್ನಿಲ್ಲದ ಮಳೆ. ಗುಡುಗು, ಸಿಡಿಲು, ಮಳೆ ಬಿಲ್ಲುಗಳ ಜೂಟಾಟ. ಘಟ್ಟದಲ್ಲಿ ಕಳೆದ ಒಂದು ವಾರದಿಂದ ಭಾರೀ ಮಳೆಯಾಗುತ್ತಿದೆ. ಮಳೆಯ ಆರ್ಭಟಕ್ಕೆ ನದಿಗಳು ತುಂಬಿಹರಿಯುತ್ತಿವೆ. ಅಣೆಕಟ್ಟೆಗಳಿಗೆ ಒಳ ಹರಿವು ಹೆಚ್ಚಿದೆ. ಕೃಷ್ಣಾ ಕಾವೇರಿ ಕೊಳ್ಳದ ನದಿಗಳೆಲ್ಲ ಕೆಂಪು ಸಮುದ್ರದಂತೆ ರಭಸದಿಂದ ಭೋರ್ಗರೆಯತೊಡಗಿವೆ. ಆದರೆ, ಕೊರೊನಾ ಸಾಂಕ್ರಾಮಿಕದಿಂದ ಮಲೆನಾಡಿನ ಪ್ರವಾಸಿ ತಾಣಗಳು ಪ್ರವಾಸಿಗರಿಲ್ಲದೆ ಬಣಗುಡುತ್ತಿವೆ.

ಹೌದು, ರಾಜ್ಯದೆಲ್ಲೆಡೆ ರೈತರ ಮೊಗದಲ್ಲಿ ಸಂತಸ ಅರಳಿದೆ. ಹಳ್ಳಿ ಹಳ್ಲಿಯಲ್ಲೂ ಜನರು ಗೊಬ್ಬರ, ಭತ್ತ, ಟ್ರಿಲ್ಲರ್, ನಾಟಿಗಳ ಅವಸರದ ಓಡಾಟದಲ್ಲಿ ಮುಳುಗಿದ್ದಾರೆ. ಜೂನ್ ತಿಂಗಳು ಬಂದರೆ ಎಲ್ಲರಿಗೂ ಆತಂಕ, ಸಂತಸ, ಚಿಂತೆ ಪ್ರಾರಂಭವಾಗಿ ಬಿಡುತ್ತದೆ. ಸಮಯಕ್ಕೆ ಸರಿಯಾಗಿ ಮಳೆ ಬಂದರೆ ಸರಿ, ಬರದಿದ್ದರೆ ಏನು ಎತ್ತ ಎಂಬ ನಿರಾಶೆ, ಅನಿಶ್ಚಿತತೆ. ಮುಂಗಾರು ಕೈಕೊಟ್ಟರೆ ವರ್ಷದ ಕೂಳಿನ ಕತೆ ಏನೆಂಬ ಚಿಂತೆ..   ಈ ವರ್ಷ ಜನರಲ್ಲಿ ಯಾವುದೇ ಆತಂಕಗಳಿಲ್ಲ. ಏಕೆಂದರೆ ಮುಂಗಾರು ಸರಿಯಾದ ಸಮಯಕ್ಕೆ ಬಂದಿದೆ, ವರುಣ ಆರ್ಭಟಿಸೊಡಗಿದ್ದಾನೆ. ರಾಜ್ಯದಲ್ಲಿ ಕೃಷಿ ಚಟುವಟಿಕೆಗಳು ಚುರುಕುಗೊಳ್ಳುತ್ತಿವೆ. ಎತ್ತು ಕೋಣಗಳನ್ನು ಗದ್ದೆಗೆ ಹೊಡೆದುಕೊಂಡು ಜನರು ಪದಗಳನ್ನು ಹಾಡುತ್ತಿದ್ದಾರೆ.

ಕೃಷಿಯ ಕತೆ ಹಾಗಾದರೆ ಮಳೆಗಾಲದಲ್ಲಿ ಮಲೆನಾಡಿನ ಚಿತ್ರವೇ ಬೇರೆ. ದಿನವಿಡೀ ಬಿಡುವಿರದೇ  ಸುರಿಯುವ ಜಡಿ ಮಳೆ. ಬೇಸಿಗೆಯ ಬಿರು ಬಿಸಿಲಿಗೆ  ಬತ್ತಿ ಬಸವಳಿದು ಒಣಗಿದ್ದ ಹಳ್ಳ ಕೊಳ್ಲಗಳೆಲ್ಲ ಮರು ಹುಟ್ಟು ಪಡೆದು ಧುಮ್ಮಿಕ್ಕುವ ಕಲರವ. ಪ್ರಕೃತಿ ಹಚ್ಚ ಹಸಿರಾಗಿ ನಳ ನಳಿಸುವ ಸಂಭೃಮ. ನಡುವೆ ಮಾರು ಮಾರಿಗೆ ಬೆಟ್ಟದಿಂದ ಧುಮ್ಮಿಕ್ಕುವ ಝರಿಗಳು. ರಭಸದಿಂದ ಭೋರ್ಗರೆಯುವ ಜಲಪಾತಗಳು. ಮಲೆನಾಡಿನ ಮಳೆಗಾಲವೇ ಹಾಗೆ..! ದೇಶದ ಮೂಲೆ ಮೂಲೆಯಿಂದ ಪ್ರವಾಸಿಗರನ್ನು ತನ್ನತ್ತ ಸೂಜಿಗಲ್ಲಿನಂತೆ ಸೆಳೆಯುತ್ತದೆ. ಜಿಟಿ ಜಿಟಿ ಮಳೆಯ ನಡುವೆ ಆ ಬೆಟ್ಟದಿಂದ ಈ ಗುಡ್ಡದಿಂದ ಇಳಿಯುವ ಜಲಧಾರೆಯ ರುದ್ರ ರಮಣೀಯ ದೃಶ್ಯಗಳನ್ನು ನೋಡಲು ಪ್ರವಾಸಿಗರ ದಂಡು ಮುಗಿ ಬೀಳುತ್ತದೆ. ಮಲೆನಾಡಿನ ಸುತ್ತ ಮುತ್ತಲಿನ ಪ್ರವಾಸಿ ತಾಣಗಳಲ್ಲಿ ಹೊಟೇಲು, ಲಾಡ್ಜು, ಟೀ, ತಿಂಡಿ ತಿನಿಸು ಮಾರುವವರು, ಬಾಡಿಗೆ ವಾಹನ ನಡೆಸುವವರು ಎಲ್ಲರ ಬದುಕು ಈ ಮಳೆಗಾಲದ ಮೇಲೆಯೇ ನಿಂತಿದೆ.

ಇದನ್ನೂ ಓದಿ : ಪಶ್ಚಿಮ ಘಟ್ಟದಲ್ಲಿ ಮುಂದುವರೆದ ಮಳೆ : ಮುಳುಗಡೆ ಭೀತಿಯಲ್ಲಿ ಬೆಳಗಾವಿ ಜಿಲ್ಲೆಯ ಗ್ರಾಮಗಳು

ಸುಪ್ರಸಿದ್ದ ಜೋಗ ಜಲಪಾತ, ಚಿಕ್ಕಮಗಳೂರಿನ ಬೆಟ್ಟಗಳ ಸಾಲು, ಕೊಡಗಿನ ಕಾಡು ಬೆಟ್ಟಗಳು ಎಲ್ಲೆಡೆ ಮಳೆಗಾಲದ ಜೂನ್ ಜುಲೈ ತಿಂಗಳಲ್ಲಿ ಪ್ರತಿ ವರ್ಷ ಪ್ರವಾಸಿಗರ ಜನ ಜಾತ್ರೆ ನೆರೆಯುತ್ತಿತ್ತು. ಆದರೆ ಈ ವರ್ಷ ಕೊರೊನಾ ಕಾರಣದಿಂದ ಮಲೆನಾಡಿನ ಯಾವ ಪ್ರವಾಸಿ ತಾಣಗಳೂ ಸಾರ್ವಜನಿಕರ ಪ್ರವೇಶಕ್ಕೆ ತೆರೆದಿಲ್ಲ. ಎಲ್ಲೆಡೆ ಸಂಚಾರ ನಿರ್ಬಂಧವಿದೆ. ವಾರಾಂತ್ಯದ ರಜೆ ಕಳೆಯಲು ಬರುತ್ತಿದ್ದ ಐಟಿ ಉದ್ಯೋಗಿಗಳೂ ಈ ವರ್ಷ ಮನೆಯಿಂದಲೇ ಕೆಲಸ ಮಾಡುತ್ತಿದ್ದಾರೆ. ಇದರ ಪರಿಣಾಮ ಮಲೆನಾಡಿನ ಪ್ರವಾಸಿ ತಾಣಗಳು ಜನರಿಲ್ಲದೇ ಬಣಗುಡುವಂತಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಫಾಲ್ಸ್, ತೀರ್ಥಕೆರೆ ಫಾಲ್ಸ್, ಸಗೀರ್ ಫಾಲ್ಸ್‌, ಸಿರಿಮನೆ ಫಾಲ್ಸ್, ಕಲ್ಲತ್ತಿಗರಿ ಫಾಲ್ಸ್, ಶಂಕರ್ ಫಾಲ್ಸ್ ಸೇರಿದಂತೆ ಜಿಲ್ಲೆಯ ದಶದಿಕ್ಕುಗಳಲ್ಲೂ ಜಲಪಾತಗಳು ಮೈದುಂಬಿ ಧುಮುಕುತ್ತಿವೆ. ಚಿಕ್ಕಮಗಳೂರು-ಮಂಗಳೂರು ಮಾರ್ಗದ ಚಾರ್ಮಡಿ ಘಾಟಿಯ ಫಾಲ್ಸ್‌ಗಳು ನೋಡುಗರ ಕಣ್ಣು ಕೋರೈಸುವಂತೆ ಧುಮ್ಮಿಕ್ಕುತ್ತಿವೆ. ಯಾವಾಗಲೂ ಪ್ರವಾಸಿಗರಿಂದ ಗಿಜಿಗುಡುತ್ತಿದ್ದ ಶಿವಮೊಗ್ಗ-ಮಂಗಳೂರು ಸಂಪರ್ಕಿಸುವ ಚಾರ್ಮಾಡಿಯ ರಸ್ತೆ ಜನರಿಲ್ಲದೇ ಬಿಕೋ ಎನ್ನುತ್ತಿದೆ.

ಚಾರ್ಮಾಡಿ ಘಾಟ್‌ನಲ್ಲಿ ರಸ್ತೆ ಬದಿಯ ಜಲಪಾತ

ಉತ್ತರ ಕನ್ನಡ, ಶಿವಮೊಗ್ಗ, ಕೊಡಗಿನಲ್ಲೂ ಇದೇ ಕತೆ.  ಸಸ್ಯ ಸಂಪದ್ಭರಿತವಾದ ಉತ್ತರ ಕನ್ನಡ ಜಿಲ್ಲೆ ತನ್ನ ಕಾಡಿನ ಗರ್ಭದಲ್ಲಿ ನೂರಾರು ಪ್ರಾಕೃತಿಕ ಕೌತುಕವನ್ನು ಅಡಗಿಸಿಟ್ಟುಕೊಂಡಿದೆ. ಇಲ್ಲಿನ ಕಾಡು ಕಣಿವೆಗಳಲ್ಲಿ ಪ್ರತಿ ವರ್ಷವೂ ಒಂದೊಂದು ಹೊಸ ಜಲಪಾತ ಸಂಶೋಧನೆಯಾಗುತ್ತದೆ. ಜನಾಕರ್ಷಣೆಯ ತಾಣವಾಗಿ ಮಾರ್ಪಡುತ್ತಿದೆ. ಮಾಗೋಡ್ ಫಾಲ್ಸ್‌, ಉಂಚಳ್ಳಿ ಫಾಲ್ಸ್, ಶಿರ್ಲೆ ಫಾಲ್ಸ್, ಸಾತೊಡ್ಡಿ ಫಾಲ್ಸ್, ಶಿವಗಂಗಾ ಫಾಲ್ಸ್, ವಾಗಳ್ಳಿ ಫಾಲ್ಸ್ ಹೀಗೆ ಹಲವು ಫಾಲ್ಸ್‌ಗಳಿವೆ. ಪಕ್ಕದಲ್ಲಿ ಜೋಗ, ಕಾಳಿ ಅಘನಾಶಿನಿ, ಬೇಡ್ತಿ, ಶರಾವತಿಯ ಕಣಿವೆಯಲ್ಲಿ ಹೇಳ ಹೆಸರಿಲ್ಲದ ಮಳೆಗಾಲದಲ್ಲಿ ಮಾತ್ರ ಕಾಣುವ ಅಪರೂಪದ ಇನ್ನೆಷ್ಟೊ ಅದ್ಭುತ ಜಲಪಾತಗಳು. ಇವನ್ನೆಲ್ಲ ನೋಡಲು ಸದ್ಯ ಯಾವ ಪ್ರವಾಸಿಗರಿಗೂ ಅವಕಾಶವಿಲ್ಲ.

ಕೊರೊನಾ ಸಾಂಕ್ರಾಮಿಕ ಮುಗಿಯುವ ಲಕ್ಷಣ ಕಾಣುತ್ತಿಲ್ಲ. ಪ್ರವಾಸೋದ್ಯಮವನ್ನೇ ನೆಚ್ಚಿಕೊಂಡು ಬದುಕುತ್ತಿರುವ ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗದ ಜನರ ಪರಿಸ್ಥಿತಿಯನ್ನು ಕೇಳುವವರೂ ಯಾರೂ ಇಲ್ಲ. ಭೋರ್ಗರೆಯುವ ಜಲಪಾತಗಳ ಮುಂದಿನ ಖಾಲಿತನದಲ್ಲಿ ಇವರೆಲ್ಲರ ಹಸಿವು ಸಂಕಟ ಮಡುಗಟ್ಟುತ್ತಿದೆ.

ವಿಶ್ವ ವಿಖ್ಯಾತ ಜೋಗ ಜಲಪಾತದ ಸುತ್ತಮುತ್ತ ಪ್ರವಾಸಿಗರನ್ನೇ ನಂಬಿ ಸರಿಸುಮಾರು 500 ಕುಟುಂಬಗಳು ಜೀವನ ನಡೆಸುತ್ತಿವೆ. ಜೀವನೋಪಾಯಕ್ಕಾಗಿ,  ಹೋಮ್‌ ಸ್ಟೇ, ಲಾಡ್ಜು, ಟೀ ಅಂಗಡಿ, ಹೊಟೇಲ್, ಜೀಪು ಕಾರು ಬಾಡಿಗೆ, ಫೊಟೋಗ್ರಫಿ, ಅಡ್ವೆಂಚರ್ ಟೂರಿಸ್ಟ್ ಗೈಡ್‌, ಟ್ರಕ್ಕಿಂಗ್‌ ಪಾರ್ಟನರ್‌ ಹೀಗೆ ಇಲ್ಲಿನ ಜನರು  ಬೆಂಗಳೂರಿನಿಂದ ಬರುವ ಪ್ರವಾಸಿಗರನ್ನೇ ನಂಬಿ ಕುಳಿತಿದ್ದಾರೆ.

ಮುಂಗಾರಿಗೆ ಜೀವಪಡೆದ ರೈಲು ಮಾರ್ಗದ ಪಕ್ಕದ ಸಾಲು ಸಾಲು ಜಲಪಾತಗಳು

ಈ ವರ್ಷ ಮುಂಗಾರು ಕೈಹಿಡಿದಿದೆ. ಆದರೆ ಕೊರೊನಾ ಕೈಕೊಟ್ಟಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ ಫಾಲ್ಸ್, ಶಿವಮೊಗ್ಗದ ಆಗುಂಬೆ, ಕೊಡಚಾದ್ರಿ, ಸಕಲೇಶಪುರ, ಮಡಿಕೇರಿ, ವಿರಾಜಪೇಟೆ, ಸುಬ್ರಹ್ಮಣ್ಯದ ಸುತ್ತ ಮುತ್ತದ  ಜಲಪಾತಗಳು ಜನರನ್ನು ಕೈಬೀಸಿ ಕರೆಯುತ್ತಿವೆ. ಆದರೆ ಪ್ರವಾಸಿಗರು ಮಾತ್ರ ಎಲ್ಲಿಗೂ ಹೋಗುವಂತಿಲ್ಲ. ಒಟ್ಟಿನಲ್ಲಿ ಸಾಂಕ್ರಾಮಿಕದಿಂದಾಗಿ ಈ ವರ್ಷ ಮಲೆನಾಡಿನಲ್ಲಿ ಮುಂಗಾರಿನ ಕಲರವವಿಲ್ಲ. ಪ್ರತಿವರ್ಷದಂತೆ ಮುಂಗಾರು ಈ ವರ್ಷವೂ ಮಲೆನಾಡಿನ ಪ್ರಾಕೃತಿಕ ಸೌಂದರ್ಯಕ್ಕೆ ಮೆರಗು ನೀಡಿದೆ. ಶಿವಮೊಗ್ಗ, ಮಡಿಕೇರಿ, ಚಿಕ್ಕಮಗಳೂರು ನಗರಗಳು ಪ್ರವಾಸಿಗರಿಲ್ಲದೇ ನೀರವ ಮೌನದಲ್ಲಿ ಮುಳುಗಿವೆ.


ಇದನ್ನೂ ಓದಿ : ತಮಿಳುನಾಡಿನಲ್ಲಿ ಮಹಿಳೆಯರು, ಬ್ರಾಹ್ಮಣೇತರಿಗೆ ಅರ್ಚಕ ಹುದ್ದೆ, ರಾಜ್ಯದಲ್ಲಿಯೂ ಚರ್ಚೆ ಆರಂಭ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...