Homeಕರೋನಾ ತಲ್ಲಣಮೈದುಂಬಿ ಹರಿಯುವ ನದಿಗಳು, ಧುಮ್ಮಿಕ್ಕುತ್ತಿರುವ ಜಲಪಾತಗಳ ನಡುವೆ ಬಣಗುಡುತ್ತಿರುವ ಮಲೆನಾಡಿನ ಪ್ರವಾಸಿ ತಾಣಗಳು

ಮೈದುಂಬಿ ಹರಿಯುವ ನದಿಗಳು, ಧುಮ್ಮಿಕ್ಕುತ್ತಿರುವ ಜಲಪಾತಗಳ ನಡುವೆ ಬಣಗುಡುತ್ತಿರುವ ಮಲೆನಾಡಿನ ಪ್ರವಾಸಿ ತಾಣಗಳು

ಜೋಗ ಜಲಪಾತ, ಚಿಕ್ಕಮಗಳೂರಿನ ಬೆಟ್ಟಗಳ ಸಾಲು, ಕೊಡಗಿನ ಕಾಡು ಬೆಟ್ಟಗಳು ಎಲ್ಲೆಡೆ ಮಳೆಗಾಲದ ಜೂನ್, ಜುಲೈ ತಿಂಗಳಲ್ಲಿ ಪ್ರತಿ ವರ್ಷ ಪ್ರವಾಸಿಗರ ದಂಡು ನೆರೆದಿರುತ್ತಿತ್ತು.

- Advertisement -
- Advertisement -

ಬೆಳಗಾವಿಯಿಂದ ಕೊಡಗಿನ ತುದಿಯವರೆಗೆ ವಾರವಿಡಿ ಇನ್ನಿಲ್ಲದ ಮಳೆ. ಗುಡುಗು, ಸಿಡಿಲು, ಮಳೆ ಬಿಲ್ಲುಗಳ ಜೂಟಾಟ. ಘಟ್ಟದಲ್ಲಿ ಕಳೆದ ಒಂದು ವಾರದಿಂದ ಭಾರೀ ಮಳೆಯಾಗುತ್ತಿದೆ. ಮಳೆಯ ಆರ್ಭಟಕ್ಕೆ ನದಿಗಳು ತುಂಬಿಹರಿಯುತ್ತಿವೆ. ಅಣೆಕಟ್ಟೆಗಳಿಗೆ ಒಳ ಹರಿವು ಹೆಚ್ಚಿದೆ. ಕೃಷ್ಣಾ ಕಾವೇರಿ ಕೊಳ್ಳದ ನದಿಗಳೆಲ್ಲ ಕೆಂಪು ಸಮುದ್ರದಂತೆ ರಭಸದಿಂದ ಭೋರ್ಗರೆಯತೊಡಗಿವೆ. ಆದರೆ, ಕೊರೊನಾ ಸಾಂಕ್ರಾಮಿಕದಿಂದ ಮಲೆನಾಡಿನ ಪ್ರವಾಸಿ ತಾಣಗಳು ಪ್ರವಾಸಿಗರಿಲ್ಲದೆ ಬಣಗುಡುತ್ತಿವೆ.

ಹೌದು, ರಾಜ್ಯದೆಲ್ಲೆಡೆ ರೈತರ ಮೊಗದಲ್ಲಿ ಸಂತಸ ಅರಳಿದೆ. ಹಳ್ಳಿ ಹಳ್ಲಿಯಲ್ಲೂ ಜನರು ಗೊಬ್ಬರ, ಭತ್ತ, ಟ್ರಿಲ್ಲರ್, ನಾಟಿಗಳ ಅವಸರದ ಓಡಾಟದಲ್ಲಿ ಮುಳುಗಿದ್ದಾರೆ. ಜೂನ್ ತಿಂಗಳು ಬಂದರೆ ಎಲ್ಲರಿಗೂ ಆತಂಕ, ಸಂತಸ, ಚಿಂತೆ ಪ್ರಾರಂಭವಾಗಿ ಬಿಡುತ್ತದೆ. ಸಮಯಕ್ಕೆ ಸರಿಯಾಗಿ ಮಳೆ ಬಂದರೆ ಸರಿ, ಬರದಿದ್ದರೆ ಏನು ಎತ್ತ ಎಂಬ ನಿರಾಶೆ, ಅನಿಶ್ಚಿತತೆ. ಮುಂಗಾರು ಕೈಕೊಟ್ಟರೆ ವರ್ಷದ ಕೂಳಿನ ಕತೆ ಏನೆಂಬ ಚಿಂತೆ..   ಈ ವರ್ಷ ಜನರಲ್ಲಿ ಯಾವುದೇ ಆತಂಕಗಳಿಲ್ಲ. ಏಕೆಂದರೆ ಮುಂಗಾರು ಸರಿಯಾದ ಸಮಯಕ್ಕೆ ಬಂದಿದೆ, ವರುಣ ಆರ್ಭಟಿಸೊಡಗಿದ್ದಾನೆ. ರಾಜ್ಯದಲ್ಲಿ ಕೃಷಿ ಚಟುವಟಿಕೆಗಳು ಚುರುಕುಗೊಳ್ಳುತ್ತಿವೆ. ಎತ್ತು ಕೋಣಗಳನ್ನು ಗದ್ದೆಗೆ ಹೊಡೆದುಕೊಂಡು ಜನರು ಪದಗಳನ್ನು ಹಾಡುತ್ತಿದ್ದಾರೆ.

ಕೃಷಿಯ ಕತೆ ಹಾಗಾದರೆ ಮಳೆಗಾಲದಲ್ಲಿ ಮಲೆನಾಡಿನ ಚಿತ್ರವೇ ಬೇರೆ. ದಿನವಿಡೀ ಬಿಡುವಿರದೇ  ಸುರಿಯುವ ಜಡಿ ಮಳೆ. ಬೇಸಿಗೆಯ ಬಿರು ಬಿಸಿಲಿಗೆ  ಬತ್ತಿ ಬಸವಳಿದು ಒಣಗಿದ್ದ ಹಳ್ಳ ಕೊಳ್ಲಗಳೆಲ್ಲ ಮರು ಹುಟ್ಟು ಪಡೆದು ಧುಮ್ಮಿಕ್ಕುವ ಕಲರವ. ಪ್ರಕೃತಿ ಹಚ್ಚ ಹಸಿರಾಗಿ ನಳ ನಳಿಸುವ ಸಂಭೃಮ. ನಡುವೆ ಮಾರು ಮಾರಿಗೆ ಬೆಟ್ಟದಿಂದ ಧುಮ್ಮಿಕ್ಕುವ ಝರಿಗಳು. ರಭಸದಿಂದ ಭೋರ್ಗರೆಯುವ ಜಲಪಾತಗಳು. ಮಲೆನಾಡಿನ ಮಳೆಗಾಲವೇ ಹಾಗೆ..! ದೇಶದ ಮೂಲೆ ಮೂಲೆಯಿಂದ ಪ್ರವಾಸಿಗರನ್ನು ತನ್ನತ್ತ ಸೂಜಿಗಲ್ಲಿನಂತೆ ಸೆಳೆಯುತ್ತದೆ. ಜಿಟಿ ಜಿಟಿ ಮಳೆಯ ನಡುವೆ ಆ ಬೆಟ್ಟದಿಂದ ಈ ಗುಡ್ಡದಿಂದ ಇಳಿಯುವ ಜಲಧಾರೆಯ ರುದ್ರ ರಮಣೀಯ ದೃಶ್ಯಗಳನ್ನು ನೋಡಲು ಪ್ರವಾಸಿಗರ ದಂಡು ಮುಗಿ ಬೀಳುತ್ತದೆ. ಮಲೆನಾಡಿನ ಸುತ್ತ ಮುತ್ತಲಿನ ಪ್ರವಾಸಿ ತಾಣಗಳಲ್ಲಿ ಹೊಟೇಲು, ಲಾಡ್ಜು, ಟೀ, ತಿಂಡಿ ತಿನಿಸು ಮಾರುವವರು, ಬಾಡಿಗೆ ವಾಹನ ನಡೆಸುವವರು ಎಲ್ಲರ ಬದುಕು ಈ ಮಳೆಗಾಲದ ಮೇಲೆಯೇ ನಿಂತಿದೆ.

ಇದನ್ನೂ ಓದಿ : ಪಶ್ಚಿಮ ಘಟ್ಟದಲ್ಲಿ ಮುಂದುವರೆದ ಮಳೆ : ಮುಳುಗಡೆ ಭೀತಿಯಲ್ಲಿ ಬೆಳಗಾವಿ ಜಿಲ್ಲೆಯ ಗ್ರಾಮಗಳು

ಸುಪ್ರಸಿದ್ದ ಜೋಗ ಜಲಪಾತ, ಚಿಕ್ಕಮಗಳೂರಿನ ಬೆಟ್ಟಗಳ ಸಾಲು, ಕೊಡಗಿನ ಕಾಡು ಬೆಟ್ಟಗಳು ಎಲ್ಲೆಡೆ ಮಳೆಗಾಲದ ಜೂನ್ ಜುಲೈ ತಿಂಗಳಲ್ಲಿ ಪ್ರತಿ ವರ್ಷ ಪ್ರವಾಸಿಗರ ಜನ ಜಾತ್ರೆ ನೆರೆಯುತ್ತಿತ್ತು. ಆದರೆ ಈ ವರ್ಷ ಕೊರೊನಾ ಕಾರಣದಿಂದ ಮಲೆನಾಡಿನ ಯಾವ ಪ್ರವಾಸಿ ತಾಣಗಳೂ ಸಾರ್ವಜನಿಕರ ಪ್ರವೇಶಕ್ಕೆ ತೆರೆದಿಲ್ಲ. ಎಲ್ಲೆಡೆ ಸಂಚಾರ ನಿರ್ಬಂಧವಿದೆ. ವಾರಾಂತ್ಯದ ರಜೆ ಕಳೆಯಲು ಬರುತ್ತಿದ್ದ ಐಟಿ ಉದ್ಯೋಗಿಗಳೂ ಈ ವರ್ಷ ಮನೆಯಿಂದಲೇ ಕೆಲಸ ಮಾಡುತ್ತಿದ್ದಾರೆ. ಇದರ ಪರಿಣಾಮ ಮಲೆನಾಡಿನ ಪ್ರವಾಸಿ ತಾಣಗಳು ಜನರಿಲ್ಲದೇ ಬಣಗುಡುವಂತಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಫಾಲ್ಸ್, ತೀರ್ಥಕೆರೆ ಫಾಲ್ಸ್, ಸಗೀರ್ ಫಾಲ್ಸ್‌, ಸಿರಿಮನೆ ಫಾಲ್ಸ್, ಕಲ್ಲತ್ತಿಗರಿ ಫಾಲ್ಸ್, ಶಂಕರ್ ಫಾಲ್ಸ್ ಸೇರಿದಂತೆ ಜಿಲ್ಲೆಯ ದಶದಿಕ್ಕುಗಳಲ್ಲೂ ಜಲಪಾತಗಳು ಮೈದುಂಬಿ ಧುಮುಕುತ್ತಿವೆ. ಚಿಕ್ಕಮಗಳೂರು-ಮಂಗಳೂರು ಮಾರ್ಗದ ಚಾರ್ಮಡಿ ಘಾಟಿಯ ಫಾಲ್ಸ್‌ಗಳು ನೋಡುಗರ ಕಣ್ಣು ಕೋರೈಸುವಂತೆ ಧುಮ್ಮಿಕ್ಕುತ್ತಿವೆ. ಯಾವಾಗಲೂ ಪ್ರವಾಸಿಗರಿಂದ ಗಿಜಿಗುಡುತ್ತಿದ್ದ ಶಿವಮೊಗ್ಗ-ಮಂಗಳೂರು ಸಂಪರ್ಕಿಸುವ ಚಾರ್ಮಾಡಿಯ ರಸ್ತೆ ಜನರಿಲ್ಲದೇ ಬಿಕೋ ಎನ್ನುತ್ತಿದೆ.

ಚಾರ್ಮಾಡಿ ಘಾಟ್‌ನಲ್ಲಿ ರಸ್ತೆ ಬದಿಯ ಜಲಪಾತ

ಉತ್ತರ ಕನ್ನಡ, ಶಿವಮೊಗ್ಗ, ಕೊಡಗಿನಲ್ಲೂ ಇದೇ ಕತೆ.  ಸಸ್ಯ ಸಂಪದ್ಭರಿತವಾದ ಉತ್ತರ ಕನ್ನಡ ಜಿಲ್ಲೆ ತನ್ನ ಕಾಡಿನ ಗರ್ಭದಲ್ಲಿ ನೂರಾರು ಪ್ರಾಕೃತಿಕ ಕೌತುಕವನ್ನು ಅಡಗಿಸಿಟ್ಟುಕೊಂಡಿದೆ. ಇಲ್ಲಿನ ಕಾಡು ಕಣಿವೆಗಳಲ್ಲಿ ಪ್ರತಿ ವರ್ಷವೂ ಒಂದೊಂದು ಹೊಸ ಜಲಪಾತ ಸಂಶೋಧನೆಯಾಗುತ್ತದೆ. ಜನಾಕರ್ಷಣೆಯ ತಾಣವಾಗಿ ಮಾರ್ಪಡುತ್ತಿದೆ. ಮಾಗೋಡ್ ಫಾಲ್ಸ್‌, ಉಂಚಳ್ಳಿ ಫಾಲ್ಸ್, ಶಿರ್ಲೆ ಫಾಲ್ಸ್, ಸಾತೊಡ್ಡಿ ಫಾಲ್ಸ್, ಶಿವಗಂಗಾ ಫಾಲ್ಸ್, ವಾಗಳ್ಳಿ ಫಾಲ್ಸ್ ಹೀಗೆ ಹಲವು ಫಾಲ್ಸ್‌ಗಳಿವೆ. ಪಕ್ಕದಲ್ಲಿ ಜೋಗ, ಕಾಳಿ ಅಘನಾಶಿನಿ, ಬೇಡ್ತಿ, ಶರಾವತಿಯ ಕಣಿವೆಯಲ್ಲಿ ಹೇಳ ಹೆಸರಿಲ್ಲದ ಮಳೆಗಾಲದಲ್ಲಿ ಮಾತ್ರ ಕಾಣುವ ಅಪರೂಪದ ಇನ್ನೆಷ್ಟೊ ಅದ್ಭುತ ಜಲಪಾತಗಳು. ಇವನ್ನೆಲ್ಲ ನೋಡಲು ಸದ್ಯ ಯಾವ ಪ್ರವಾಸಿಗರಿಗೂ ಅವಕಾಶವಿಲ್ಲ.

ಕೊರೊನಾ ಸಾಂಕ್ರಾಮಿಕ ಮುಗಿಯುವ ಲಕ್ಷಣ ಕಾಣುತ್ತಿಲ್ಲ. ಪ್ರವಾಸೋದ್ಯಮವನ್ನೇ ನೆಚ್ಚಿಕೊಂಡು ಬದುಕುತ್ತಿರುವ ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗದ ಜನರ ಪರಿಸ್ಥಿತಿಯನ್ನು ಕೇಳುವವರೂ ಯಾರೂ ಇಲ್ಲ. ಭೋರ್ಗರೆಯುವ ಜಲಪಾತಗಳ ಮುಂದಿನ ಖಾಲಿತನದಲ್ಲಿ ಇವರೆಲ್ಲರ ಹಸಿವು ಸಂಕಟ ಮಡುಗಟ್ಟುತ್ತಿದೆ.

ವಿಶ್ವ ವಿಖ್ಯಾತ ಜೋಗ ಜಲಪಾತದ ಸುತ್ತಮುತ್ತ ಪ್ರವಾಸಿಗರನ್ನೇ ನಂಬಿ ಸರಿಸುಮಾರು 500 ಕುಟುಂಬಗಳು ಜೀವನ ನಡೆಸುತ್ತಿವೆ. ಜೀವನೋಪಾಯಕ್ಕಾಗಿ,  ಹೋಮ್‌ ಸ್ಟೇ, ಲಾಡ್ಜು, ಟೀ ಅಂಗಡಿ, ಹೊಟೇಲ್, ಜೀಪು ಕಾರು ಬಾಡಿಗೆ, ಫೊಟೋಗ್ರಫಿ, ಅಡ್ವೆಂಚರ್ ಟೂರಿಸ್ಟ್ ಗೈಡ್‌, ಟ್ರಕ್ಕಿಂಗ್‌ ಪಾರ್ಟನರ್‌ ಹೀಗೆ ಇಲ್ಲಿನ ಜನರು  ಬೆಂಗಳೂರಿನಿಂದ ಬರುವ ಪ್ರವಾಸಿಗರನ್ನೇ ನಂಬಿ ಕುಳಿತಿದ್ದಾರೆ.

ಮುಂಗಾರಿಗೆ ಜೀವಪಡೆದ ರೈಲು ಮಾರ್ಗದ ಪಕ್ಕದ ಸಾಲು ಸಾಲು ಜಲಪಾತಗಳು

ಈ ವರ್ಷ ಮುಂಗಾರು ಕೈಹಿಡಿದಿದೆ. ಆದರೆ ಕೊರೊನಾ ಕೈಕೊಟ್ಟಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ ಫಾಲ್ಸ್, ಶಿವಮೊಗ್ಗದ ಆಗುಂಬೆ, ಕೊಡಚಾದ್ರಿ, ಸಕಲೇಶಪುರ, ಮಡಿಕೇರಿ, ವಿರಾಜಪೇಟೆ, ಸುಬ್ರಹ್ಮಣ್ಯದ ಸುತ್ತ ಮುತ್ತದ  ಜಲಪಾತಗಳು ಜನರನ್ನು ಕೈಬೀಸಿ ಕರೆಯುತ್ತಿವೆ. ಆದರೆ ಪ್ರವಾಸಿಗರು ಮಾತ್ರ ಎಲ್ಲಿಗೂ ಹೋಗುವಂತಿಲ್ಲ. ಒಟ್ಟಿನಲ್ಲಿ ಸಾಂಕ್ರಾಮಿಕದಿಂದಾಗಿ ಈ ವರ್ಷ ಮಲೆನಾಡಿನಲ್ಲಿ ಮುಂಗಾರಿನ ಕಲರವವಿಲ್ಲ. ಪ್ರತಿವರ್ಷದಂತೆ ಮುಂಗಾರು ಈ ವರ್ಷವೂ ಮಲೆನಾಡಿನ ಪ್ರಾಕೃತಿಕ ಸೌಂದರ್ಯಕ್ಕೆ ಮೆರಗು ನೀಡಿದೆ. ಶಿವಮೊಗ್ಗ, ಮಡಿಕೇರಿ, ಚಿಕ್ಕಮಗಳೂರು ನಗರಗಳು ಪ್ರವಾಸಿಗರಿಲ್ಲದೇ ನೀರವ ಮೌನದಲ್ಲಿ ಮುಳುಗಿವೆ.


ಇದನ್ನೂ ಓದಿ : ತಮಿಳುನಾಡಿನಲ್ಲಿ ಮಹಿಳೆಯರು, ಬ್ರಾಹ್ಮಣೇತರಿಗೆ ಅರ್ಚಕ ಹುದ್ದೆ, ರಾಜ್ಯದಲ್ಲಿಯೂ ಚರ್ಚೆ ಆರಂಭ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...