Homeಆರೋಗ್ಯGood News: ಕೊರೊನಾ ವಿರುದ್ಧ ಸಮರ - ಭಾರತದಲ್ಲಿ 7 ರೋಗಿಗಳು ಗುಣಮುಖ

Good News: ಕೊರೊನಾ ವಿರುದ್ಧ ಸಮರ – ಭಾರತದಲ್ಲಿ 7 ರೋಗಿಗಳು ಗುಣಮುಖ

- Advertisement -
- Advertisement -

ಭಾರತದಲ್ಲಿ ಶನಿವಾರ ಬೆಳಿಗ್ಗೆ ಕೊರೊನಾ ವೈರಸ್ (ಕೋವಿಡ್ -19)ನ ಒಂದು ಹೊಸ ಪ್ರಕರಣ ವರದಿಯಾಗಿದ್ದರೂ ಸಹ, ವೈರಲ್ ಕಾಯಿಲೆಯಿಂದ ಸೋಂಕಿತರಾದ ಒಟ್ಟು 83ರೋಗಿಗಳ ಪೈಕಿ ಏಳು ಜನರನ್ನು ರೋಗದಿಂದ ಗುಣಪಡಿಸಲಾಗಿದೆ ಮತ್ತು ವಿವಿಧ ಆಸ್ಪತ್ರೆಗಳಿಂದ ಬಿಡುಗಡೆ ಮಾಡಲಾಗಿದೆ ಎಂದು ಹಿಂದೂಸ್ತಾನ್‌ ಟೈಮ್ಸ್‌ ವರದಿ ಮಾಡಿದೆ.

ಅಲ್ಲಿಗೆ ಸೋಂಕು ತಗುಲಿದ ನಂತರವೂ ಭಾರತದಲ್ಲಿ ಗುಣಮುಖರಾದ ಒಟ್ಟು ರೋಗಿಗಳ ಸಂಖ್ಯೆ ಈಗ 10 ಆಗಿದೆ.

ಕೋವಿಡ್ -19 ಪ್ರಕರಣದಲ್ಲಿ ಇತ್ತೀಚೆಗೆ ಗುಣಮುಖವಾದ ಏಳು ಪ್ರಕರಣಗಳಲ್ಲಿ ಐದು ಪ್ರಕರಣಗಳು ಉತ್ತರ ಪ್ರದೇಶದವರಾದರೆ, ಮತ್ತು ರಾಜಸ್ಥಾನ ಮತ್ತು ದೆಹಲಿಯಲ್ಲಿ ತಲಾ ಒಬ್ಬರು ಗುಣಮುಖರಾಗಿದ್ದಾರೆ. ಈ ಮೊದಲು ಕೇರಳದಲ್ಲಿ ಮೂವರು ಗುಣಮುಖರಾಗಿದ್ದರು. ಅವರಿಗೆ ಮತ್ತೆ ಸೋಂಕು ಮರಕಳಿಸುವಿಕೆಯ ವರಿದಯಾಗಿಲ್ಲ.

“ಈ ರೋಗಿಗಳನ್ನು ಡಿಸ್ಚಾರ್ಜ್ ಮಾಡಲಾಗಿರುವುದರಿಂದ ಅವರ ಎಲ್ಲಾ ಪರೀಕ್ಷಾ ಫಲಿತಾಂಶಗಳು ನಕಾರಾತ್ಮಕವಾಗಿವೆ ಎಂದರ್ಥ, ಮತ್ತು ಅವರನ್ನು ರೋಗ ಮುಕ್ತ ಎಂದು ಕರೆಯಬಹುದು” ಎಂದು ಅಧಿಕಾರಿ ಹೇಳಿದರು.

ಕೊರೊನಾ ವೈರಸ್‌ ಅಂತಹ ಮಾರಣಾಂತಿಕ ಖಾಯಿಲೆಯಲ್ಲ. ಕೆಮ್ಮು ನೆಗಡಿ ರೀತಿ ಸಾಂಕ್ರಾಮಿಕ ರೋಗ ಅಷ್ಟೇ. ಇದರಿಂದಾಗಿಯೇ ಸಾವು ಸಂಭವಿಸುವುದಿಲ್ಲ. ಈಗಾಗಲೇ ರೋಗ ನಿರೋಧಕ ಶಕ್ತಿ ಕಡಿಮೆಯಿರುವ ವೃದ್ಧರಿಗೆ ಮತ್ತು ಹಲವು ರೋಗಗಳಿಂದ ಬಳಲುತ್ತಿರುವವರಿಗೆ ಕೊರೊನಾ ಸೋಂಕು ತಲುಲಿದರೆ ಮಾತ್ರ ಸಾವಿನ ಸಾಧ್ಯತೆ ಇರುತ್ತದೆ ಎಂದು ವೈದ್ಯರು ಖಚಿತಪಡಿಸಿದ್ದಾರೆ. ಮಕ್ಕಳು ಮತ್ತು ವಯಸ್ಕರು ಸೋಂಕು ತಗುಲಿದರೂ ಸಹ ಗುಣಮುಖರಾಗುವ ಸಾಧ್ಯತೆ ಹೆಚ್ಚಿದೆ.

ಭಾರತದಲ್ಲಿ ಈವರೆಗೆ ಇಬ್ಬರು ಜನರು ಸಾವನ್ನಪ್ಪಿದ್ದಾರೆ. ಆರೋಗ್ಯ ಸಚಿವಾಲಯದ ಪ್ರಕಾರ ಎರಡೂ ಪ್ರಕರಣಗಳು ಅಧಿಕ ರಕ್ತದೊತ್ತಡ, ಮಧುಮೇಹ, ಆಸ್ತಮಾ ಮುಂತಾದ ರೋಗಗಳು ಮೊದಲೇ ಇದ್ದು ಕೊರೊನಾ ಅವರ ದೇಹ ಸ್ಥಿತಿಯನ್ನು ಉಲ್ಬಣಗೊಳಿಸಿದ ಕಾರಣ ಮರಣ ಸಂಭವಿಸಿದೆ.

ಆದರೆ ಮಾಧ್ಯಮಗಳು ಕೊರೊನಾ ಬಗ್ಗೆ ಜನರನ್ನು ಭಯಭೀತಗೊಳಿಸುತ್ತಿವೆ. ಸರ್ಕಾರಗಳು ಮುಂಜಾಗ್ರತ ಕ್ರಮವಾಗಿ ತೆಗೆದುಕೊಂಡ ಕ್ರಮಗಳು, ತುರ್ತುಪರಿಸ್ಥಿತಿಯು ಜನರನ್ನು ಮತ್ತಷ್ಟು ಆತಂಕಕ್ಕೆ ದೂಡಿದೆ. ಸದ್ಯಕ್ಕೆ 7 ಪ್ರಕರಣಗಳಲ್ಲಿ ರೋಗಿಗಳು ಗುಣಮುಖರಾಗಿರುವುದರಿಂದ ರೋಗ ಗುಣಪಡಿಸುವ ಹೋರಾಟಕ್ಕೆ ಮತ್ತಷ್ಟು ಶಕ್ತಿ ಬಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...