Homeಆರೋಗ್ಯGood News: ಕೊರೊನಾ ವಿರುದ್ಧ ಸಮರ - ಭಾರತದಲ್ಲಿ 7 ರೋಗಿಗಳು ಗುಣಮುಖ

Good News: ಕೊರೊನಾ ವಿರುದ್ಧ ಸಮರ – ಭಾರತದಲ್ಲಿ 7 ರೋಗಿಗಳು ಗುಣಮುಖ

- Advertisement -
- Advertisement -

ಭಾರತದಲ್ಲಿ ಶನಿವಾರ ಬೆಳಿಗ್ಗೆ ಕೊರೊನಾ ವೈರಸ್ (ಕೋವಿಡ್ -19)ನ ಒಂದು ಹೊಸ ಪ್ರಕರಣ ವರದಿಯಾಗಿದ್ದರೂ ಸಹ, ವೈರಲ್ ಕಾಯಿಲೆಯಿಂದ ಸೋಂಕಿತರಾದ ಒಟ್ಟು 83ರೋಗಿಗಳ ಪೈಕಿ ಏಳು ಜನರನ್ನು ರೋಗದಿಂದ ಗುಣಪಡಿಸಲಾಗಿದೆ ಮತ್ತು ವಿವಿಧ ಆಸ್ಪತ್ರೆಗಳಿಂದ ಬಿಡುಗಡೆ ಮಾಡಲಾಗಿದೆ ಎಂದು ಹಿಂದೂಸ್ತಾನ್‌ ಟೈಮ್ಸ್‌ ವರದಿ ಮಾಡಿದೆ.

ಅಲ್ಲಿಗೆ ಸೋಂಕು ತಗುಲಿದ ನಂತರವೂ ಭಾರತದಲ್ಲಿ ಗುಣಮುಖರಾದ ಒಟ್ಟು ರೋಗಿಗಳ ಸಂಖ್ಯೆ ಈಗ 10 ಆಗಿದೆ.

ಕೋವಿಡ್ -19 ಪ್ರಕರಣದಲ್ಲಿ ಇತ್ತೀಚೆಗೆ ಗುಣಮುಖವಾದ ಏಳು ಪ್ರಕರಣಗಳಲ್ಲಿ ಐದು ಪ್ರಕರಣಗಳು ಉತ್ತರ ಪ್ರದೇಶದವರಾದರೆ, ಮತ್ತು ರಾಜಸ್ಥಾನ ಮತ್ತು ದೆಹಲಿಯಲ್ಲಿ ತಲಾ ಒಬ್ಬರು ಗುಣಮುಖರಾಗಿದ್ದಾರೆ. ಈ ಮೊದಲು ಕೇರಳದಲ್ಲಿ ಮೂವರು ಗುಣಮುಖರಾಗಿದ್ದರು. ಅವರಿಗೆ ಮತ್ತೆ ಸೋಂಕು ಮರಕಳಿಸುವಿಕೆಯ ವರಿದಯಾಗಿಲ್ಲ.

“ಈ ರೋಗಿಗಳನ್ನು ಡಿಸ್ಚಾರ್ಜ್ ಮಾಡಲಾಗಿರುವುದರಿಂದ ಅವರ ಎಲ್ಲಾ ಪರೀಕ್ಷಾ ಫಲಿತಾಂಶಗಳು ನಕಾರಾತ್ಮಕವಾಗಿವೆ ಎಂದರ್ಥ, ಮತ್ತು ಅವರನ್ನು ರೋಗ ಮುಕ್ತ ಎಂದು ಕರೆಯಬಹುದು” ಎಂದು ಅಧಿಕಾರಿ ಹೇಳಿದರು.

ಕೊರೊನಾ ವೈರಸ್‌ ಅಂತಹ ಮಾರಣಾಂತಿಕ ಖಾಯಿಲೆಯಲ್ಲ. ಕೆಮ್ಮು ನೆಗಡಿ ರೀತಿ ಸಾಂಕ್ರಾಮಿಕ ರೋಗ ಅಷ್ಟೇ. ಇದರಿಂದಾಗಿಯೇ ಸಾವು ಸಂಭವಿಸುವುದಿಲ್ಲ. ಈಗಾಗಲೇ ರೋಗ ನಿರೋಧಕ ಶಕ್ತಿ ಕಡಿಮೆಯಿರುವ ವೃದ್ಧರಿಗೆ ಮತ್ತು ಹಲವು ರೋಗಗಳಿಂದ ಬಳಲುತ್ತಿರುವವರಿಗೆ ಕೊರೊನಾ ಸೋಂಕು ತಲುಲಿದರೆ ಮಾತ್ರ ಸಾವಿನ ಸಾಧ್ಯತೆ ಇರುತ್ತದೆ ಎಂದು ವೈದ್ಯರು ಖಚಿತಪಡಿಸಿದ್ದಾರೆ. ಮಕ್ಕಳು ಮತ್ತು ವಯಸ್ಕರು ಸೋಂಕು ತಗುಲಿದರೂ ಸಹ ಗುಣಮುಖರಾಗುವ ಸಾಧ್ಯತೆ ಹೆಚ್ಚಿದೆ.

ಭಾರತದಲ್ಲಿ ಈವರೆಗೆ ಇಬ್ಬರು ಜನರು ಸಾವನ್ನಪ್ಪಿದ್ದಾರೆ. ಆರೋಗ್ಯ ಸಚಿವಾಲಯದ ಪ್ರಕಾರ ಎರಡೂ ಪ್ರಕರಣಗಳು ಅಧಿಕ ರಕ್ತದೊತ್ತಡ, ಮಧುಮೇಹ, ಆಸ್ತಮಾ ಮುಂತಾದ ರೋಗಗಳು ಮೊದಲೇ ಇದ್ದು ಕೊರೊನಾ ಅವರ ದೇಹ ಸ್ಥಿತಿಯನ್ನು ಉಲ್ಬಣಗೊಳಿಸಿದ ಕಾರಣ ಮರಣ ಸಂಭವಿಸಿದೆ.

ಆದರೆ ಮಾಧ್ಯಮಗಳು ಕೊರೊನಾ ಬಗ್ಗೆ ಜನರನ್ನು ಭಯಭೀತಗೊಳಿಸುತ್ತಿವೆ. ಸರ್ಕಾರಗಳು ಮುಂಜಾಗ್ರತ ಕ್ರಮವಾಗಿ ತೆಗೆದುಕೊಂಡ ಕ್ರಮಗಳು, ತುರ್ತುಪರಿಸ್ಥಿತಿಯು ಜನರನ್ನು ಮತ್ತಷ್ಟು ಆತಂಕಕ್ಕೆ ದೂಡಿದೆ. ಸದ್ಯಕ್ಕೆ 7 ಪ್ರಕರಣಗಳಲ್ಲಿ ರೋಗಿಗಳು ಗುಣಮುಖರಾಗಿರುವುದರಿಂದ ರೋಗ ಗುಣಪಡಿಸುವ ಹೋರಾಟಕ್ಕೆ ಮತ್ತಷ್ಟು ಶಕ್ತಿ ಬಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...