Homeಕರ್ನಾಟಕರಾಜ್ಯದ ಮಹಿಳೆಯರಿಗೆ ಸಿಹಿ ಸುದ್ದಿ: ಇಂದಿನಿಂದಲೇ ಉಚಿತ ಬಸ್ ಪ್ರಯಾಣ; ಸಿಎಂ ಸಿದ್ದರಾಮಯ್ಯರಿಂದ ಶಕ್ತಿ ಯೋಜನೆಗೆ...

ರಾಜ್ಯದ ಮಹಿಳೆಯರಿಗೆ ಸಿಹಿ ಸುದ್ದಿ: ಇಂದಿನಿಂದಲೇ ಉಚಿತ ಬಸ್ ಪ್ರಯಾಣ; ಸಿಎಂ ಸಿದ್ದರಾಮಯ್ಯರಿಂದ ಶಕ್ತಿ ಯೋಜನೆಗೆ ಚಾಲನೆ

- Advertisement -
- Advertisement -

ಸರ್ಕಾರ ಘೋಷಿಸಿದ್ದ ಐದು ‘ಗ್ಯಾರಂಟಿ’ಗಳ ಪೈಕಿ, ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಬಸ್‌ ಪ್ರಯಾಣ ಉಚಿತ ಯೋಜನೆ ‘ಶಕ್ತಿ’ಗೆ ಭಾನುವಾರ ಚಾಲನೆ ನೀಡಲಾಯಿತು.. ಈ ಬಗ್ಗೆ ಕಾಂಗ್ರೆಸ್ ಪಕ್ಷ ತನ್ನ ಅಧಿಕೃತ ಟ್ವಿಟರ್ ಅಕೌಂಟ್ ನಲ್ಲಿ ಮಾಹಿತಿ ನೀಡಿದೆ.

ವಿಧಾನಸೌಧದ ಎದುರು ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯೋಜನೆಯನ್ನು ಉದ್ಘಾಟಿಸಿದರು. ಇದೇ ಹೊತ್ತಿಗೆ ಸರಿಯಾಗಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಉಸ್ತುವಾರಿ ಸಚಿವರು ಯೋಜನೆಗೆ ಚಾಲನೆ ಕೊಟ್ಟರು.

ಡಿಸಿಎಂ ಡಿ.ಕೆ ಶಿವಕುಮಾರ್, ಸಚಿವರಾದ ಕೆ.ಜೆ ಜಾರ್ಜ್, ರಾಮಲಿಂಗಾ ರೆಡ್ಡಿ, ಮಧು ಬಂಗಾರಪ್ಪ ಮತ್ತು ಪಕ್ಷದ ಶಾಸಕರು ಕಾರ್ಯಕ್ರಮದಲ್ಲಿದ್ದರು.

ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, ”ನಾವು ನುಡಿದಂತೆ ನಡೆದಿದ್ದೇವೆ, ನಾವು ನೀಡಿದ ಭರವಸೆಯನ್ನು ಈಡೇರಿಸುವ ನಿಟ್ಟಿನಲ್ಲಿ ಮೊದಲ ಹೆಜ್ಜೆಯಲ್ಲಿದ್ದೇವೆ. ಇಂದಿನಿಂದ ನಮ್ಮ ಮೊದಲ ಗ್ಯಾರಂಟಿಯ ಅನುಷ್ಠಾನವಾಗುತ್ತಿದೆ. ಕರ್ನಾಟಕದ ಸರ್ವತೋಮುಖ ಅಭಿವೃದ್ದಿಯೇ ನಮ್ಮ ಗುರಿ, ಸರ್ವ ಜನಾಂಗದ ಶಾಂತಿಯ ತೋಟವನ್ನಾಗಿಸುವುದೇ ನಮ್ಮ ಧ್ಯೇಯ. # ಜನಪರಕಾಂಗ್ರೆಸ್” ಎಂದು ಹೇಳಿದೆ.

ಇಂದು (ಭಾನುವಾರ) ಬೆಳಿಗ್ಗೆ 11 ಗಂಟೆಗೆ ವಿಧಾನಸೌಧದ ಮುಂಭಾಗದಲ್ಲಿ ನಡೆಯಲಿರುವ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಿಳೆಯರಿಗೆ ಬಸ್‌ ಪ್ರಯಾಣ ಉಚಿತ ಯೋಜನೆ ಶಕ್ತಿಯನ್ನು ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಸ್ಥಳೀಯ ಶಾಸಕರು ಈ ಯೋಜನೆಗೆ ಚಾಲನೆ ನೀಡಲಿದ್ದಾರೆ.

ಮಧ್ಯಾಹ್ನ 1.00 ಗಂಟೆಯ ನಂತರ ಎಲ್ಲ ಮಹಿಳೆಯರು ಮತ್ತು ವಿದ್ಯಾರ್ಥಿನಿಯರಿಗೆ ಈ ಸೌಲಭ್ಯ ಸಿಗಲಿದೆ. ”ಬಡ ಮತ್ತು ಕೆಳ ಮಧ್ಯಮವರ್ಗದ ದುಡಿಯುವ ಮಹಿಳೆಯರ ದಿನದ ಖರ್ಚಿನ ಹೊರೆಯನ್ನು ಇಳಿಸಿ, ಮಹಿಳಾ ಸಬಲೀಕರಣಕ್ಕೆ ಈ ಯೋಜನೆ ಹೊಸ ಭಾಷ್ಯ ಬರೆಯಲಿದೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ: ಮಹಿಳೆಯರ ಉಚಿತ ಪ್ರಯಾಣಕ್ಕೆ ಸ್ಮಾರ್ಟ್ ಕಾರ್ಡ್ ಕಡ್ಡಾಯ: ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ

ಉದ್ಘಾಟನಾ ಕಾರ್ಯಕ್ರಮಕ್ಕೂ ಮುಂಚೆ ಸುದ್ದಿಗಾರರ ಜೊತೆ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ”ಮುಖ್ಯಮಂತ್ರಿಯವರು ಯೋಜನೆಗೆ ಚಾಲನೆ ನೀಡಿದ ಬಳಿಕ ಬಸ್‌ನಲ್ಲಿ ನಾವೂ ಒಂದು ಸುತ್ತು ಹೋಗುತ್ತೇವೆ. ಕೆಲವರಿಗೆ ಸಾಂಕೇತಿಕವಾಗಿ ಸ್ಮಾರ್ಟ್ ಕಾರ್ಡ್ ಕೊಡುತ್ತೇವೆ. ಮೂರು ತಿಂಗಳ ಒಳಗೆ ಎಲ್ಲರೂ ಸ್ಮಾರ್ಟ್ ಮಾಡಿಸಿಕೊಳ್ಳಬೇಕು” ಎಂದು ತಿಳಿಸಿದರು.

”ಯಾವ ಬಸ್‌ಗಳಲ್ಲಿ ಉಚಿತ ಪ್ರಯಾಣ ಅವಕಾಶ ಸಿಗಲಿದೆ ಎಂದು ಈಗಾಗಲೇ ಜಾಹೀರಾತುಗಳ ಮೂಲಕ ಮಾಹಿತಿ ನೀಡಿದ್ದೇವೆ. ಈ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ” ಎಂದೂ ಅವರು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...