Homeಕರ್ನಾಟಕಗುಡ್ ನ್ಯೂಸ್: ಸುಡು ಬಿಸಿಲಿನಲ್ಲಿ ಗಿಡ ಮಾರುತ್ತಿದ್ದ ಅಜ್ಜನ ಮುಖದಲ್ಲಿ ಮಂದಹಾಸ ಮೂಡಿಸಿದ ಫೇಸ್‌ಬುಕ್ ಪೋಸ್ಟ್!

ಗುಡ್ ನ್ಯೂಸ್: ಸುಡು ಬಿಸಿಲಿನಲ್ಲಿ ಗಿಡ ಮಾರುತ್ತಿದ್ದ ಅಜ್ಜನ ಮುಖದಲ್ಲಿ ಮಂದಹಾಸ ಮೂಡಿಸಿದ ಫೇಸ್‌ಬುಕ್ ಪೋಸ್ಟ್!

ಫೇಸ್‌ಬುಕ್, ಟ್ವಿಟರ್‌ ಕೇವಲ ಮತ್ತೊಬ್ಬರನ್ನು ಟೀಕೆ ಮಾಡಲು, ಲೈಕ್, ಕಾಮೆಂಟ್‌ಗಳನ್ನು ಮಾಡಲು ಮಾತ್ರವಲ್ಲದೆ, ಈ ರೀತಿಯ ಜನಪರ ಕಾರ್ಯಗಳಿಗೂ ಬಳಕೆಯಾಗಲಿ ಎಂಬುದು ಹಲವರ ಅಭಿಮತ.

- Advertisement -
- Advertisement -

ಕೆಲವೊಮ್ಮೆ ನಾವು ರಸ್ತೆಯಲ್ಲಿ ಓಡಾಡುವಾಗ ರಸ್ತೆ ಬದಿಗೆ ಹರಿಸುವ ಒಂದು ಸಣ್ಣ ಗಮನ ಕೆಲವೊಬ್ಬರ ಜೀವನದಲ್ಲಿ ಭಾರಿ ಬದಲಾವಣೆ ತರಬಹುದು. ಇದಕ್ಕೆ ಉದಾಹರಣೆಯಾಗಿ ರಸ್ತೆಬದಿಯಲ್ಲಿ, ಬಿಸಿಲಿನಲ್ಲಿ, ಇಳಿವಯಸ್ಸಿನಲ್ಲಿ ಜೀವನ ನಿರ್ವಹಣೆಗೆ ಕಷ್ಟ ಪಡುತ್ತಿದ್ದ ವೃದ್ಧರನ್ನು ಗಮನಿಸಿ ಬರೆದ ಫೇಸ್‌ಬುಕ್‌ ಪೋಸ್ಟ್ ಆವರ ಬದುಕನ್ನು ಬದಲಾಯಿಸಿದೆ.

ಹೌದು, ಕನಕಪುರ ರಸ್ತೆಯ ಸಾರಕ್ಕಿ ಸಿಗ್ನಲ್ ಬಳಿ ಇರುವ ಜಾಕಿ ಶೋರೂಮ್ ಮುಂದೆ ಒಬ್ಬ ಅಜ್ಜ ಚಿಕ್ಕ ಚಿಕ್ಕ ಪ್ಯಾಕೇಟ್‌ಗಳಲ್ಲಿ ಗಿಡಗಳನ್ನು ಮಾರುತ್ತಿರುತ್ತಾರೆ. ಇವರು ಮಾರುವುದು ಎಲ್ಲಾ ಔಷಧಿಯ ಸಸ್ಯಗಳು ಎಂಬುದು ಗಮನಾರ್ಹ. ಆದರೆ ರಸ್ತೆಯಲ್ಲಿ ಓಡಾಡುವವರು ಇತ್ತ ಕಡೆ ಗಮನ ಇವರೆಡೆಗೆ ಹರಿಸುತ್ತಿದ್ದುದ್ದು ತುಂಬಾ ಕಡಿಮೆ.

ಈಗಿರುವಾಗ ಸುಡು ಬಿಸಿಲಿನಲ್ಲಿ ರಸ್ತೆಯಲ್ಲಿ ಕುಳಿತು ಗಿಡ ಮಾರುವ ಅಜ್ಜ, ಫೇಸ್‌ಬುಕ್ ಬಳಕೆದಾರ ಶಿವರಾಜ್ ಬಾಬು ಎಂಬುವರ ಕಣ್ಣಿಗೆ ಬಿದ್ದಿದ್ದಾರೆ. ಅಜ್ಜನ ಕುರಿತು 2 ಚಿತ್ರಗಳ ಜೊತೆಗೆ, ಸಹಾಯ ಮಾಡುವಂತೆ ಒಂದು ಮನವಿ ಪೋಸ್ಟ್ ಹಾಕಿದ್ದರು. ಅಜ್ಜನ ಬಳಿ ಇರುವ ಗಿಡಗಳ ಕುರಿತು, ರಸ್ತೆಯಲ್ಲಿ ಓಡಾಡುವಾಗ ಗಿಡ ತೆಗೆದುಕೊಂಡು ಸಹಾಯ ಮಾಡಿ ಎಂದಿದ್ದರು.

“ಕನಕಪುರ ರಸ್ತೆಯ ಸಾರಕ್ಕಿ ಸಿಗ್ನಲ್ ಬಳಿ ಇರುವ ಜಾಕಿ ಶೋರೂಮ್ ಮುಂದೆ ಕೂತಿರುವ ಈ  ವೃದ್ಧನ ಹೆಸರು    ರೇವಣ್ಣಸಿದ್ದಪ್ಪ. ಈ ವಯಸ್ಸಿನಲ್ಲೂ ಭಿಕ್ಷೆ ಬೇಡದೆ ದುಡಿಯುವ ಹುಮ್ಮಸ್ಸು. ಇತನ ಬಳಿ ಇರುವುದು ಔಷಧಿ ಗಿಡಗಳು ಹಾಗೂ ವಿವಿಧ  ರೀತಿಯ ಗಿಡಗಳು. ದೊಡ್ಡ ಪತ್ರೆ, ಅಲೋವೆರಾ, ಕಾಮ ಸಂಜೀವಿನಿ, ಬ್ರಹ್ಮ ಕಮಲ  ಇತ್ಯಾದಿ ಗಿಡಗಳು. ಈ ರಸ್ತೆಯ ಬಳಿ ನೀವು ಹೋಗುವಾಗ ದಯವಿಟ್ಟು ಈ ವೃದ್ಧರ ಬಳಿ ಇರುವ ಗಿಡಗಳನ್ನು ತೆಗೆದುಕೊಂಡು ಹೋಗಿ ಈತನಿಗೆ ಸಹಾಯ ಮಾಡಿ. ಕೇವಲ 10 ರಿಂದ 30 ರೂಪಾಯಿ ಮಾತ್ರ” ಎಂದು ಫೋಸ್ಟ್ ಶೇರ್‌ ಮಾಡಿದ್ದರು.

ಫೇಸ್‌ಬುಕ್ ವೃದ್ಧರಿಗೆ ಸಹಾಯ
PC: screenshot@Shivaraj Babu

ಜೊತೆಗೆ “ನಂಬಿಕಸ್ತರಿಂದ ಮೋಸ ಹೋದೆವು ಎಂದು ಪ್ರಾಮಾಣಿಕರು ಚಿಂತಿಸಬೇಕಾಗಿಲ್ಲ!!!  ಏಕೆಂದರೆ  ಇತಿಹಾಸದಲ್ಲಿ ಉಳಿದಿರುವುದು ಪ್ರಾಮಾಣಿಕರೆ ಹೊರತು ಮೋಸಗಾರರಲ್ಲ!!!” ಎಂದು ಶೀರ್ಷಿಕೆ ಕೂಡ ನೀಡಿದ್ದರು. ಈ ಪೋಸ್ಟ್ ಎರಡು ಸಾವಿರಕ್ಕೂ ಅಧಿಕ ಮಂದಿ ಶೇರ್ ಮಾಡಿದ್ದರು. ಇದರ ಪ್ರತಿಫಲ ಇಂದು ಅಜ್ಜನ ಸ್ವಂತ ಪುಟ್ಟ ಅಂಗಡಿ ಆರಂಭವಾಗಿದೆ.

ಫೇಸ್‌ಬುಕ್‌ನಲ್ಲಿ ವಿಷಯ ತಿಳಿದ ಅನೇಕ ಮಂದಿ ವೃದ್ಧರ ಸಹಾಯಕ್ಕೆ ಮುಂದಾಗಿದ್ದಾರೆ. ನೆರಳಿಗಾಗಿ ಒಬ್ಬರು ದೊಡ್ಡ ಛತ್ರಿ ಒದಗಿಸಿದರೇ, ಇನ್ನೋಬ್ಬರು ಕುಳಿತುಕೊಳ್ಳು ಚೇರ್, ಗಿಡಗಳನ್ನು ಇಟ್ಟುಕೊಳ್ಳಲು ಟೇಬಲ್ ಹೀಗೆ ಅಜ್ಜನ ಹೊಸ ಪುಟ್ಟ ಅಂಗಡಿ ನಿರ್ಮಾಣವಾಗಿದೆ.

ನಟಿ, ಸಾಮಾಜಿಕ ಕಾರ್ಯಕರ್ತೆ ಸಂಯುಕ್ತ ಹೊರನಾಡು ತಮ್ಮ Change Makers of Kanakapura Road ತಂಡದ ಜತೆಗೂಡಿ ಆ ಅಜ್ಜನಿಗೆ ಒಂದು ಕೆನೊಪಿ, ಟೇಬಲ್ ಮತ್ತಿತರ ವಸ್ತುಗಳನ್ನು ಒದಗಿಸಿದ್ದಷ್ಟೇ ಅಲ್ಲದೇ  ಸಂಯುಕ್ತ ಅವರು ಒಂದಷ್ಟು ಗಿಡಗಳನ್ನು ಖರೀದಿಸಿದ್ದಾರೆ. ನಾವು ಅಶ್ವಿನಿ ಎಂಬುವರ ಟ್ವೀಟ್ ಗಮನಿಸಿ ಸಹಾಯಕ್ಕೆ ಬಂದಿದ್ದಾಗಿ ಫೇಸ್‌ಬುಕ್ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

PC: screenshot@Samyukta Hornad

ಸದ್ಯ ಅಜ್ಜ ಖುಷಿಯಲ್ಲಿದ್ದಾರೆ. ವೃದ್ಧರ ಬಗ್ಗೆ ಫೇಸ್‌ಬುಕ್ ಪೋಸ್ಟ್ ಮಾಡಿದ್ದ ಶಿವರಾಜ್ ಬಾಬು ಪೋಸ್ಟ್ ಶೇರ್ ಮಾಡಿ, ಅಜ್ಜನಿಗೆ ಸಹಾಯ ಮಾಡಿದ ಎಲ್ಲಾ ಬೆಂಗಳೂರು ಜನತೆಗೆ ಧನ್ಯವಾದ ಎಂದಿದ್ದಾರೆ.

ಇದನ್ನೂ ಓದಿ: ಗುಡ್ ನ್ಯೂಸ್: ಬೊಲಿವಿಯಾದಲ್ಲಿ ಮಹಿಳಾ ಜನಪ್ರತಿನಿಧಿಗಳ ಸಂಖ್ಯೆ ಶೇ.50ಕ್ಕಿಂತಲೂ ಹೆಚ್ಚು!

“ಧನ್ಯವಾದ ಬೆಂಗಳೂರು…. ವೃದ್ದನಿಗೆ ಸಹಾಯ ಮಾಡಿದ ಪ್ರತಿಯೊಬ್ಬ ರಿಗೂ ಧನ್ಯವಾದಗಳು.. ಶೇರ್ ಮಾಡಿ. ಈ ವಿಷಯವನ್ನು ನಮ್ಮ ಬೆಂಗಳೂರು ಜನತೆಗೆ ತಲುಪಿಸಿ ಅವರಿಗೆ ಸಹಾಯ ಮಾಡಿದ ಪ್ರತಿಯೊಬ್ಬರಿಗೂ ಧನ್ಯವಾದಗಳು” ಎಂದಿದ್ದಾರೆ.

Shivaraj Babu
PC: screenshot@Shivaraj Babu

ಇಂತಹ ಪುಟ್ಟ ಪುಟ್ಟ ಪ್ರಯತ್ನಗಳು ಸಾಕು ನಮ್ಮ ನಡುವೆ ಇರುವ ಎಷ್ಟೋ ಜೀವಗಳಿಗೆ ಸಹಾಯ ಮಾಡಲು ಎನ್ನುತ್ತಾರೆ ನೆಟ್ಟಿಗರು. ನಮ್ಮೊಳಗೆ ಒಂದು ಮನಸ್ಸಿದ್ದರೇ, ಇನ್ನೊಬ್ಬರ ನೋವಿಗೆ ಆಸರೆಯಾಗುವ ಕೊಂಚ ಸಹನೆಯಿದ್ದರೇ ಸಾಕು, ನಾವು ದಾರಿಯಲ್ಲಿ ನೋಡುವ ಒಂದು ಚಿಕ್ಕ ಚಿತ್ರಪಟ ಕೂಡ ಮತ್ತೊಂದು ಆಯಾಮವನ್ನು ಸೃಷ್ಟಿಸುತ್ತದೆ.

ಫೇಸ್‌ಬುಕ್, ಟ್ವಿಟರ್‌ ಕೇವಲ ಮತ್ತೊಬ್ಬರನ್ನು ಟೀಕೆ ಮಾಡಲು, ಲೈಕ್, ಕಾಮೆಂಟ್‌ಗಳನ್ನು ಮಾಡಲು ಮಾತ್ರವಲ್ಲ ಈ ರೀತಿಯ ಜನಪರ ಕಾರ್ಯಗಳಿಗೂ ಬಳಕೆಯಾಗಲಿ ಎನ್ನುವುದೇ ವೃದ್ಧರಿಗೆ ಸಹಾಯ ಮಾಡಿದವರ ಅಭಿಪ್ರಾಯವಾಗಿದೆ.


ಇದನ್ನೂ ಓದಿ: ಮಹಿಳೆಯರು ಕೆಲಸಕ್ಕೆ ಹೋಗಿದ್ದರಿಂದ METOO ಆರಂಭ: ಮುಖೇಶ್ ಖನ್ನಾ ಹೇಳಿಕೆಗೆ ತೀವ್ರ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...