Homeಕರ್ನಾಟಕಗುಡ್ ನ್ಯೂಸ್: ಸುಡು ಬಿಸಿಲಿನಲ್ಲಿ ಗಿಡ ಮಾರುತ್ತಿದ್ದ ಅಜ್ಜನ ಮುಖದಲ್ಲಿ ಮಂದಹಾಸ ಮೂಡಿಸಿದ ಫೇಸ್‌ಬುಕ್ ಪೋಸ್ಟ್!

ಗುಡ್ ನ್ಯೂಸ್: ಸುಡು ಬಿಸಿಲಿನಲ್ಲಿ ಗಿಡ ಮಾರುತ್ತಿದ್ದ ಅಜ್ಜನ ಮುಖದಲ್ಲಿ ಮಂದಹಾಸ ಮೂಡಿಸಿದ ಫೇಸ್‌ಬುಕ್ ಪೋಸ್ಟ್!

ಫೇಸ್‌ಬುಕ್, ಟ್ವಿಟರ್‌ ಕೇವಲ ಮತ್ತೊಬ್ಬರನ್ನು ಟೀಕೆ ಮಾಡಲು, ಲೈಕ್, ಕಾಮೆಂಟ್‌ಗಳನ್ನು ಮಾಡಲು ಮಾತ್ರವಲ್ಲದೆ, ಈ ರೀತಿಯ ಜನಪರ ಕಾರ್ಯಗಳಿಗೂ ಬಳಕೆಯಾಗಲಿ ಎಂಬುದು ಹಲವರ ಅಭಿಮತ.

- Advertisement -
- Advertisement -

ಕೆಲವೊಮ್ಮೆ ನಾವು ರಸ್ತೆಯಲ್ಲಿ ಓಡಾಡುವಾಗ ರಸ್ತೆ ಬದಿಗೆ ಹರಿಸುವ ಒಂದು ಸಣ್ಣ ಗಮನ ಕೆಲವೊಬ್ಬರ ಜೀವನದಲ್ಲಿ ಭಾರಿ ಬದಲಾವಣೆ ತರಬಹುದು. ಇದಕ್ಕೆ ಉದಾಹರಣೆಯಾಗಿ ರಸ್ತೆಬದಿಯಲ್ಲಿ, ಬಿಸಿಲಿನಲ್ಲಿ, ಇಳಿವಯಸ್ಸಿನಲ್ಲಿ ಜೀವನ ನಿರ್ವಹಣೆಗೆ ಕಷ್ಟ ಪಡುತ್ತಿದ್ದ ವೃದ್ಧರನ್ನು ಗಮನಿಸಿ ಬರೆದ ಫೇಸ್‌ಬುಕ್‌ ಪೋಸ್ಟ್ ಆವರ ಬದುಕನ್ನು ಬದಲಾಯಿಸಿದೆ.

ಹೌದು, ಕನಕಪುರ ರಸ್ತೆಯ ಸಾರಕ್ಕಿ ಸಿಗ್ನಲ್ ಬಳಿ ಇರುವ ಜಾಕಿ ಶೋರೂಮ್ ಮುಂದೆ ಒಬ್ಬ ಅಜ್ಜ ಚಿಕ್ಕ ಚಿಕ್ಕ ಪ್ಯಾಕೇಟ್‌ಗಳಲ್ಲಿ ಗಿಡಗಳನ್ನು ಮಾರುತ್ತಿರುತ್ತಾರೆ. ಇವರು ಮಾರುವುದು ಎಲ್ಲಾ ಔಷಧಿಯ ಸಸ್ಯಗಳು ಎಂಬುದು ಗಮನಾರ್ಹ. ಆದರೆ ರಸ್ತೆಯಲ್ಲಿ ಓಡಾಡುವವರು ಇತ್ತ ಕಡೆ ಗಮನ ಇವರೆಡೆಗೆ ಹರಿಸುತ್ತಿದ್ದುದ್ದು ತುಂಬಾ ಕಡಿಮೆ.

ಈಗಿರುವಾಗ ಸುಡು ಬಿಸಿಲಿನಲ್ಲಿ ರಸ್ತೆಯಲ್ಲಿ ಕುಳಿತು ಗಿಡ ಮಾರುವ ಅಜ್ಜ, ಫೇಸ್‌ಬುಕ್ ಬಳಕೆದಾರ ಶಿವರಾಜ್ ಬಾಬು ಎಂಬುವರ ಕಣ್ಣಿಗೆ ಬಿದ್ದಿದ್ದಾರೆ. ಅಜ್ಜನ ಕುರಿತು 2 ಚಿತ್ರಗಳ ಜೊತೆಗೆ, ಸಹಾಯ ಮಾಡುವಂತೆ ಒಂದು ಮನವಿ ಪೋಸ್ಟ್ ಹಾಕಿದ್ದರು. ಅಜ್ಜನ ಬಳಿ ಇರುವ ಗಿಡಗಳ ಕುರಿತು, ರಸ್ತೆಯಲ್ಲಿ ಓಡಾಡುವಾಗ ಗಿಡ ತೆಗೆದುಕೊಂಡು ಸಹಾಯ ಮಾಡಿ ಎಂದಿದ್ದರು.

“ಕನಕಪುರ ರಸ್ತೆಯ ಸಾರಕ್ಕಿ ಸಿಗ್ನಲ್ ಬಳಿ ಇರುವ ಜಾಕಿ ಶೋರೂಮ್ ಮುಂದೆ ಕೂತಿರುವ ಈ  ವೃದ್ಧನ ಹೆಸರು    ರೇವಣ್ಣಸಿದ್ದಪ್ಪ. ಈ ವಯಸ್ಸಿನಲ್ಲೂ ಭಿಕ್ಷೆ ಬೇಡದೆ ದುಡಿಯುವ ಹುಮ್ಮಸ್ಸು. ಇತನ ಬಳಿ ಇರುವುದು ಔಷಧಿ ಗಿಡಗಳು ಹಾಗೂ ವಿವಿಧ  ರೀತಿಯ ಗಿಡಗಳು. ದೊಡ್ಡ ಪತ್ರೆ, ಅಲೋವೆರಾ, ಕಾಮ ಸಂಜೀವಿನಿ, ಬ್ರಹ್ಮ ಕಮಲ  ಇತ್ಯಾದಿ ಗಿಡಗಳು. ಈ ರಸ್ತೆಯ ಬಳಿ ನೀವು ಹೋಗುವಾಗ ದಯವಿಟ್ಟು ಈ ವೃದ್ಧರ ಬಳಿ ಇರುವ ಗಿಡಗಳನ್ನು ತೆಗೆದುಕೊಂಡು ಹೋಗಿ ಈತನಿಗೆ ಸಹಾಯ ಮಾಡಿ. ಕೇವಲ 10 ರಿಂದ 30 ರೂಪಾಯಿ ಮಾತ್ರ” ಎಂದು ಫೋಸ್ಟ್ ಶೇರ್‌ ಮಾಡಿದ್ದರು.

ಫೇಸ್‌ಬುಕ್ ವೃದ್ಧರಿಗೆ ಸಹಾಯ
PC: screenshot@Shivaraj Babu

ಜೊತೆಗೆ “ನಂಬಿಕಸ್ತರಿಂದ ಮೋಸ ಹೋದೆವು ಎಂದು ಪ್ರಾಮಾಣಿಕರು ಚಿಂತಿಸಬೇಕಾಗಿಲ್ಲ!!!  ಏಕೆಂದರೆ  ಇತಿಹಾಸದಲ್ಲಿ ಉಳಿದಿರುವುದು ಪ್ರಾಮಾಣಿಕರೆ ಹೊರತು ಮೋಸಗಾರರಲ್ಲ!!!” ಎಂದು ಶೀರ್ಷಿಕೆ ಕೂಡ ನೀಡಿದ್ದರು. ಈ ಪೋಸ್ಟ್ ಎರಡು ಸಾವಿರಕ್ಕೂ ಅಧಿಕ ಮಂದಿ ಶೇರ್ ಮಾಡಿದ್ದರು. ಇದರ ಪ್ರತಿಫಲ ಇಂದು ಅಜ್ಜನ ಸ್ವಂತ ಪುಟ್ಟ ಅಂಗಡಿ ಆರಂಭವಾಗಿದೆ.

ಫೇಸ್‌ಬುಕ್‌ನಲ್ಲಿ ವಿಷಯ ತಿಳಿದ ಅನೇಕ ಮಂದಿ ವೃದ್ಧರ ಸಹಾಯಕ್ಕೆ ಮುಂದಾಗಿದ್ದಾರೆ. ನೆರಳಿಗಾಗಿ ಒಬ್ಬರು ದೊಡ್ಡ ಛತ್ರಿ ಒದಗಿಸಿದರೇ, ಇನ್ನೋಬ್ಬರು ಕುಳಿತುಕೊಳ್ಳು ಚೇರ್, ಗಿಡಗಳನ್ನು ಇಟ್ಟುಕೊಳ್ಳಲು ಟೇಬಲ್ ಹೀಗೆ ಅಜ್ಜನ ಹೊಸ ಪುಟ್ಟ ಅಂಗಡಿ ನಿರ್ಮಾಣವಾಗಿದೆ.

ನಟಿ, ಸಾಮಾಜಿಕ ಕಾರ್ಯಕರ್ತೆ ಸಂಯುಕ್ತ ಹೊರನಾಡು ತಮ್ಮ Change Makers of Kanakapura Road ತಂಡದ ಜತೆಗೂಡಿ ಆ ಅಜ್ಜನಿಗೆ ಒಂದು ಕೆನೊಪಿ, ಟೇಬಲ್ ಮತ್ತಿತರ ವಸ್ತುಗಳನ್ನು ಒದಗಿಸಿದ್ದಷ್ಟೇ ಅಲ್ಲದೇ  ಸಂಯುಕ್ತ ಅವರು ಒಂದಷ್ಟು ಗಿಡಗಳನ್ನು ಖರೀದಿಸಿದ್ದಾರೆ. ನಾವು ಅಶ್ವಿನಿ ಎಂಬುವರ ಟ್ವೀಟ್ ಗಮನಿಸಿ ಸಹಾಯಕ್ಕೆ ಬಂದಿದ್ದಾಗಿ ಫೇಸ್‌ಬುಕ್ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

PC: screenshot@Samyukta Hornad

ಸದ್ಯ ಅಜ್ಜ ಖುಷಿಯಲ್ಲಿದ್ದಾರೆ. ವೃದ್ಧರ ಬಗ್ಗೆ ಫೇಸ್‌ಬುಕ್ ಪೋಸ್ಟ್ ಮಾಡಿದ್ದ ಶಿವರಾಜ್ ಬಾಬು ಪೋಸ್ಟ್ ಶೇರ್ ಮಾಡಿ, ಅಜ್ಜನಿಗೆ ಸಹಾಯ ಮಾಡಿದ ಎಲ್ಲಾ ಬೆಂಗಳೂರು ಜನತೆಗೆ ಧನ್ಯವಾದ ಎಂದಿದ್ದಾರೆ.

ಇದನ್ನೂ ಓದಿ: ಗುಡ್ ನ್ಯೂಸ್: ಬೊಲಿವಿಯಾದಲ್ಲಿ ಮಹಿಳಾ ಜನಪ್ರತಿನಿಧಿಗಳ ಸಂಖ್ಯೆ ಶೇ.50ಕ್ಕಿಂತಲೂ ಹೆಚ್ಚು!

“ಧನ್ಯವಾದ ಬೆಂಗಳೂರು…. ವೃದ್ದನಿಗೆ ಸಹಾಯ ಮಾಡಿದ ಪ್ರತಿಯೊಬ್ಬ ರಿಗೂ ಧನ್ಯವಾದಗಳು.. ಶೇರ್ ಮಾಡಿ. ಈ ವಿಷಯವನ್ನು ನಮ್ಮ ಬೆಂಗಳೂರು ಜನತೆಗೆ ತಲುಪಿಸಿ ಅವರಿಗೆ ಸಹಾಯ ಮಾಡಿದ ಪ್ರತಿಯೊಬ್ಬರಿಗೂ ಧನ್ಯವಾದಗಳು” ಎಂದಿದ್ದಾರೆ.

Shivaraj Babu
PC: screenshot@Shivaraj Babu

ಇಂತಹ ಪುಟ್ಟ ಪುಟ್ಟ ಪ್ರಯತ್ನಗಳು ಸಾಕು ನಮ್ಮ ನಡುವೆ ಇರುವ ಎಷ್ಟೋ ಜೀವಗಳಿಗೆ ಸಹಾಯ ಮಾಡಲು ಎನ್ನುತ್ತಾರೆ ನೆಟ್ಟಿಗರು. ನಮ್ಮೊಳಗೆ ಒಂದು ಮನಸ್ಸಿದ್ದರೇ, ಇನ್ನೊಬ್ಬರ ನೋವಿಗೆ ಆಸರೆಯಾಗುವ ಕೊಂಚ ಸಹನೆಯಿದ್ದರೇ ಸಾಕು, ನಾವು ದಾರಿಯಲ್ಲಿ ನೋಡುವ ಒಂದು ಚಿಕ್ಕ ಚಿತ್ರಪಟ ಕೂಡ ಮತ್ತೊಂದು ಆಯಾಮವನ್ನು ಸೃಷ್ಟಿಸುತ್ತದೆ.

ಫೇಸ್‌ಬುಕ್, ಟ್ವಿಟರ್‌ ಕೇವಲ ಮತ್ತೊಬ್ಬರನ್ನು ಟೀಕೆ ಮಾಡಲು, ಲೈಕ್, ಕಾಮೆಂಟ್‌ಗಳನ್ನು ಮಾಡಲು ಮಾತ್ರವಲ್ಲ ಈ ರೀತಿಯ ಜನಪರ ಕಾರ್ಯಗಳಿಗೂ ಬಳಕೆಯಾಗಲಿ ಎನ್ನುವುದೇ ವೃದ್ಧರಿಗೆ ಸಹಾಯ ಮಾಡಿದವರ ಅಭಿಪ್ರಾಯವಾಗಿದೆ.


ಇದನ್ನೂ ಓದಿ: ಮಹಿಳೆಯರು ಕೆಲಸಕ್ಕೆ ಹೋಗಿದ್ದರಿಂದ METOO ಆರಂಭ: ಮುಖೇಶ್ ಖನ್ನಾ ಹೇಳಿಕೆಗೆ ತೀವ್ರ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...