Homeಕರ್ನಾಟಕಗುಡ್ ನ್ಯೂಸ್: ಸುಡು ಬಿಸಿಲಿನಲ್ಲಿ ಗಿಡ ಮಾರುತ್ತಿದ್ದ ಅಜ್ಜನ ಮುಖದಲ್ಲಿ ಮಂದಹಾಸ ಮೂಡಿಸಿದ ಫೇಸ್‌ಬುಕ್ ಪೋಸ್ಟ್!

ಗುಡ್ ನ್ಯೂಸ್: ಸುಡು ಬಿಸಿಲಿನಲ್ಲಿ ಗಿಡ ಮಾರುತ್ತಿದ್ದ ಅಜ್ಜನ ಮುಖದಲ್ಲಿ ಮಂದಹಾಸ ಮೂಡಿಸಿದ ಫೇಸ್‌ಬುಕ್ ಪೋಸ್ಟ್!

ಫೇಸ್‌ಬುಕ್, ಟ್ವಿಟರ್‌ ಕೇವಲ ಮತ್ತೊಬ್ಬರನ್ನು ಟೀಕೆ ಮಾಡಲು, ಲೈಕ್, ಕಾಮೆಂಟ್‌ಗಳನ್ನು ಮಾಡಲು ಮಾತ್ರವಲ್ಲದೆ, ಈ ರೀತಿಯ ಜನಪರ ಕಾರ್ಯಗಳಿಗೂ ಬಳಕೆಯಾಗಲಿ ಎಂಬುದು ಹಲವರ ಅಭಿಮತ.

- Advertisement -
- Advertisement -

ಕೆಲವೊಮ್ಮೆ ನಾವು ರಸ್ತೆಯಲ್ಲಿ ಓಡಾಡುವಾಗ ರಸ್ತೆ ಬದಿಗೆ ಹರಿಸುವ ಒಂದು ಸಣ್ಣ ಗಮನ ಕೆಲವೊಬ್ಬರ ಜೀವನದಲ್ಲಿ ಭಾರಿ ಬದಲಾವಣೆ ತರಬಹುದು. ಇದಕ್ಕೆ ಉದಾಹರಣೆಯಾಗಿ ರಸ್ತೆಬದಿಯಲ್ಲಿ, ಬಿಸಿಲಿನಲ್ಲಿ, ಇಳಿವಯಸ್ಸಿನಲ್ಲಿ ಜೀವನ ನಿರ್ವಹಣೆಗೆ ಕಷ್ಟ ಪಡುತ್ತಿದ್ದ ವೃದ್ಧರನ್ನು ಗಮನಿಸಿ ಬರೆದ ಫೇಸ್‌ಬುಕ್‌ ಪೋಸ್ಟ್ ಆವರ ಬದುಕನ್ನು ಬದಲಾಯಿಸಿದೆ.

ಹೌದು, ಕನಕಪುರ ರಸ್ತೆಯ ಸಾರಕ್ಕಿ ಸಿಗ್ನಲ್ ಬಳಿ ಇರುವ ಜಾಕಿ ಶೋರೂಮ್ ಮುಂದೆ ಒಬ್ಬ ಅಜ್ಜ ಚಿಕ್ಕ ಚಿಕ್ಕ ಪ್ಯಾಕೇಟ್‌ಗಳಲ್ಲಿ ಗಿಡಗಳನ್ನು ಮಾರುತ್ತಿರುತ್ತಾರೆ. ಇವರು ಮಾರುವುದು ಎಲ್ಲಾ ಔಷಧಿಯ ಸಸ್ಯಗಳು ಎಂಬುದು ಗಮನಾರ್ಹ. ಆದರೆ ರಸ್ತೆಯಲ್ಲಿ ಓಡಾಡುವವರು ಇತ್ತ ಕಡೆ ಗಮನ ಇವರೆಡೆಗೆ ಹರಿಸುತ್ತಿದ್ದುದ್ದು ತುಂಬಾ ಕಡಿಮೆ.

ಈಗಿರುವಾಗ ಸುಡು ಬಿಸಿಲಿನಲ್ಲಿ ರಸ್ತೆಯಲ್ಲಿ ಕುಳಿತು ಗಿಡ ಮಾರುವ ಅಜ್ಜ, ಫೇಸ್‌ಬುಕ್ ಬಳಕೆದಾರ ಶಿವರಾಜ್ ಬಾಬು ಎಂಬುವರ ಕಣ್ಣಿಗೆ ಬಿದ್ದಿದ್ದಾರೆ. ಅಜ್ಜನ ಕುರಿತು 2 ಚಿತ್ರಗಳ ಜೊತೆಗೆ, ಸಹಾಯ ಮಾಡುವಂತೆ ಒಂದು ಮನವಿ ಪೋಸ್ಟ್ ಹಾಕಿದ್ದರು. ಅಜ್ಜನ ಬಳಿ ಇರುವ ಗಿಡಗಳ ಕುರಿತು, ರಸ್ತೆಯಲ್ಲಿ ಓಡಾಡುವಾಗ ಗಿಡ ತೆಗೆದುಕೊಂಡು ಸಹಾಯ ಮಾಡಿ ಎಂದಿದ್ದರು.

“ಕನಕಪುರ ರಸ್ತೆಯ ಸಾರಕ್ಕಿ ಸಿಗ್ನಲ್ ಬಳಿ ಇರುವ ಜಾಕಿ ಶೋರೂಮ್ ಮುಂದೆ ಕೂತಿರುವ ಈ  ವೃದ್ಧನ ಹೆಸರು    ರೇವಣ್ಣಸಿದ್ದಪ್ಪ. ಈ ವಯಸ್ಸಿನಲ್ಲೂ ಭಿಕ್ಷೆ ಬೇಡದೆ ದುಡಿಯುವ ಹುಮ್ಮಸ್ಸು. ಇತನ ಬಳಿ ಇರುವುದು ಔಷಧಿ ಗಿಡಗಳು ಹಾಗೂ ವಿವಿಧ  ರೀತಿಯ ಗಿಡಗಳು. ದೊಡ್ಡ ಪತ್ರೆ, ಅಲೋವೆರಾ, ಕಾಮ ಸಂಜೀವಿನಿ, ಬ್ರಹ್ಮ ಕಮಲ  ಇತ್ಯಾದಿ ಗಿಡಗಳು. ಈ ರಸ್ತೆಯ ಬಳಿ ನೀವು ಹೋಗುವಾಗ ದಯವಿಟ್ಟು ಈ ವೃದ್ಧರ ಬಳಿ ಇರುವ ಗಿಡಗಳನ್ನು ತೆಗೆದುಕೊಂಡು ಹೋಗಿ ಈತನಿಗೆ ಸಹಾಯ ಮಾಡಿ. ಕೇವಲ 10 ರಿಂದ 30 ರೂಪಾಯಿ ಮಾತ್ರ” ಎಂದು ಫೋಸ್ಟ್ ಶೇರ್‌ ಮಾಡಿದ್ದರು.

ಫೇಸ್‌ಬುಕ್ ವೃದ್ಧರಿಗೆ ಸಹಾಯ
PC: screenshot@Shivaraj Babu

ಜೊತೆಗೆ “ನಂಬಿಕಸ್ತರಿಂದ ಮೋಸ ಹೋದೆವು ಎಂದು ಪ್ರಾಮಾಣಿಕರು ಚಿಂತಿಸಬೇಕಾಗಿಲ್ಲ!!!  ಏಕೆಂದರೆ  ಇತಿಹಾಸದಲ್ಲಿ ಉಳಿದಿರುವುದು ಪ್ರಾಮಾಣಿಕರೆ ಹೊರತು ಮೋಸಗಾರರಲ್ಲ!!!” ಎಂದು ಶೀರ್ಷಿಕೆ ಕೂಡ ನೀಡಿದ್ದರು. ಈ ಪೋಸ್ಟ್ ಎರಡು ಸಾವಿರಕ್ಕೂ ಅಧಿಕ ಮಂದಿ ಶೇರ್ ಮಾಡಿದ್ದರು. ಇದರ ಪ್ರತಿಫಲ ಇಂದು ಅಜ್ಜನ ಸ್ವಂತ ಪುಟ್ಟ ಅಂಗಡಿ ಆರಂಭವಾಗಿದೆ.

ಫೇಸ್‌ಬುಕ್‌ನಲ್ಲಿ ವಿಷಯ ತಿಳಿದ ಅನೇಕ ಮಂದಿ ವೃದ್ಧರ ಸಹಾಯಕ್ಕೆ ಮುಂದಾಗಿದ್ದಾರೆ. ನೆರಳಿಗಾಗಿ ಒಬ್ಬರು ದೊಡ್ಡ ಛತ್ರಿ ಒದಗಿಸಿದರೇ, ಇನ್ನೋಬ್ಬರು ಕುಳಿತುಕೊಳ್ಳು ಚೇರ್, ಗಿಡಗಳನ್ನು ಇಟ್ಟುಕೊಳ್ಳಲು ಟೇಬಲ್ ಹೀಗೆ ಅಜ್ಜನ ಹೊಸ ಪುಟ್ಟ ಅಂಗಡಿ ನಿರ್ಮಾಣವಾಗಿದೆ.

ನಟಿ, ಸಾಮಾಜಿಕ ಕಾರ್ಯಕರ್ತೆ ಸಂಯುಕ್ತ ಹೊರನಾಡು ತಮ್ಮ Change Makers of Kanakapura Road ತಂಡದ ಜತೆಗೂಡಿ ಆ ಅಜ್ಜನಿಗೆ ಒಂದು ಕೆನೊಪಿ, ಟೇಬಲ್ ಮತ್ತಿತರ ವಸ್ತುಗಳನ್ನು ಒದಗಿಸಿದ್ದಷ್ಟೇ ಅಲ್ಲದೇ  ಸಂಯುಕ್ತ ಅವರು ಒಂದಷ್ಟು ಗಿಡಗಳನ್ನು ಖರೀದಿಸಿದ್ದಾರೆ. ನಾವು ಅಶ್ವಿನಿ ಎಂಬುವರ ಟ್ವೀಟ್ ಗಮನಿಸಿ ಸಹಾಯಕ್ಕೆ ಬಂದಿದ್ದಾಗಿ ಫೇಸ್‌ಬುಕ್ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

PC: screenshot@Samyukta Hornad

ಸದ್ಯ ಅಜ್ಜ ಖುಷಿಯಲ್ಲಿದ್ದಾರೆ. ವೃದ್ಧರ ಬಗ್ಗೆ ಫೇಸ್‌ಬುಕ್ ಪೋಸ್ಟ್ ಮಾಡಿದ್ದ ಶಿವರಾಜ್ ಬಾಬು ಪೋಸ್ಟ್ ಶೇರ್ ಮಾಡಿ, ಅಜ್ಜನಿಗೆ ಸಹಾಯ ಮಾಡಿದ ಎಲ್ಲಾ ಬೆಂಗಳೂರು ಜನತೆಗೆ ಧನ್ಯವಾದ ಎಂದಿದ್ದಾರೆ.

ಇದನ್ನೂ ಓದಿ: ಗುಡ್ ನ್ಯೂಸ್: ಬೊಲಿವಿಯಾದಲ್ಲಿ ಮಹಿಳಾ ಜನಪ್ರತಿನಿಧಿಗಳ ಸಂಖ್ಯೆ ಶೇ.50ಕ್ಕಿಂತಲೂ ಹೆಚ್ಚು!

“ಧನ್ಯವಾದ ಬೆಂಗಳೂರು…. ವೃದ್ದನಿಗೆ ಸಹಾಯ ಮಾಡಿದ ಪ್ರತಿಯೊಬ್ಬ ರಿಗೂ ಧನ್ಯವಾದಗಳು.. ಶೇರ್ ಮಾಡಿ. ಈ ವಿಷಯವನ್ನು ನಮ್ಮ ಬೆಂಗಳೂರು ಜನತೆಗೆ ತಲುಪಿಸಿ ಅವರಿಗೆ ಸಹಾಯ ಮಾಡಿದ ಪ್ರತಿಯೊಬ್ಬರಿಗೂ ಧನ್ಯವಾದಗಳು” ಎಂದಿದ್ದಾರೆ.

Shivaraj Babu
PC: screenshot@Shivaraj Babu

ಇಂತಹ ಪುಟ್ಟ ಪುಟ್ಟ ಪ್ರಯತ್ನಗಳು ಸಾಕು ನಮ್ಮ ನಡುವೆ ಇರುವ ಎಷ್ಟೋ ಜೀವಗಳಿಗೆ ಸಹಾಯ ಮಾಡಲು ಎನ್ನುತ್ತಾರೆ ನೆಟ್ಟಿಗರು. ನಮ್ಮೊಳಗೆ ಒಂದು ಮನಸ್ಸಿದ್ದರೇ, ಇನ್ನೊಬ್ಬರ ನೋವಿಗೆ ಆಸರೆಯಾಗುವ ಕೊಂಚ ಸಹನೆಯಿದ್ದರೇ ಸಾಕು, ನಾವು ದಾರಿಯಲ್ಲಿ ನೋಡುವ ಒಂದು ಚಿಕ್ಕ ಚಿತ್ರಪಟ ಕೂಡ ಮತ್ತೊಂದು ಆಯಾಮವನ್ನು ಸೃಷ್ಟಿಸುತ್ತದೆ.

ಫೇಸ್‌ಬುಕ್, ಟ್ವಿಟರ್‌ ಕೇವಲ ಮತ್ತೊಬ್ಬರನ್ನು ಟೀಕೆ ಮಾಡಲು, ಲೈಕ್, ಕಾಮೆಂಟ್‌ಗಳನ್ನು ಮಾಡಲು ಮಾತ್ರವಲ್ಲ ಈ ರೀತಿಯ ಜನಪರ ಕಾರ್ಯಗಳಿಗೂ ಬಳಕೆಯಾಗಲಿ ಎನ್ನುವುದೇ ವೃದ್ಧರಿಗೆ ಸಹಾಯ ಮಾಡಿದವರ ಅಭಿಪ್ರಾಯವಾಗಿದೆ.


ಇದನ್ನೂ ಓದಿ: ಮಹಿಳೆಯರು ಕೆಲಸಕ್ಕೆ ಹೋಗಿದ್ದರಿಂದ METOO ಆರಂಭ: ಮುಖೇಶ್ ಖನ್ನಾ ಹೇಳಿಕೆಗೆ ತೀವ್ರ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...