Homeಕರ್ನಾಟಕಗುಡ್ ನ್ಯೂಸ್: ಸುಡು ಬಿಸಿಲಿನಲ್ಲಿ ಗಿಡ ಮಾರುತ್ತಿದ್ದ ಅಜ್ಜನ ಮುಖದಲ್ಲಿ ಮಂದಹಾಸ ಮೂಡಿಸಿದ ಫೇಸ್‌ಬುಕ್ ಪೋಸ್ಟ್!

ಗುಡ್ ನ್ಯೂಸ್: ಸುಡು ಬಿಸಿಲಿನಲ್ಲಿ ಗಿಡ ಮಾರುತ್ತಿದ್ದ ಅಜ್ಜನ ಮುಖದಲ್ಲಿ ಮಂದಹಾಸ ಮೂಡಿಸಿದ ಫೇಸ್‌ಬುಕ್ ಪೋಸ್ಟ್!

ಫೇಸ್‌ಬುಕ್, ಟ್ವಿಟರ್‌ ಕೇವಲ ಮತ್ತೊಬ್ಬರನ್ನು ಟೀಕೆ ಮಾಡಲು, ಲೈಕ್, ಕಾಮೆಂಟ್‌ಗಳನ್ನು ಮಾಡಲು ಮಾತ್ರವಲ್ಲದೆ, ಈ ರೀತಿಯ ಜನಪರ ಕಾರ್ಯಗಳಿಗೂ ಬಳಕೆಯಾಗಲಿ ಎಂಬುದು ಹಲವರ ಅಭಿಮತ.

- Advertisement -
- Advertisement -

ಕೆಲವೊಮ್ಮೆ ನಾವು ರಸ್ತೆಯಲ್ಲಿ ಓಡಾಡುವಾಗ ರಸ್ತೆ ಬದಿಗೆ ಹರಿಸುವ ಒಂದು ಸಣ್ಣ ಗಮನ ಕೆಲವೊಬ್ಬರ ಜೀವನದಲ್ಲಿ ಭಾರಿ ಬದಲಾವಣೆ ತರಬಹುದು. ಇದಕ್ಕೆ ಉದಾಹರಣೆಯಾಗಿ ರಸ್ತೆಬದಿಯಲ್ಲಿ, ಬಿಸಿಲಿನಲ್ಲಿ, ಇಳಿವಯಸ್ಸಿನಲ್ಲಿ ಜೀವನ ನಿರ್ವಹಣೆಗೆ ಕಷ್ಟ ಪಡುತ್ತಿದ್ದ ವೃದ್ಧರನ್ನು ಗಮನಿಸಿ ಬರೆದ ಫೇಸ್‌ಬುಕ್‌ ಪೋಸ್ಟ್ ಆವರ ಬದುಕನ್ನು ಬದಲಾಯಿಸಿದೆ.

ಹೌದು, ಕನಕಪುರ ರಸ್ತೆಯ ಸಾರಕ್ಕಿ ಸಿಗ್ನಲ್ ಬಳಿ ಇರುವ ಜಾಕಿ ಶೋರೂಮ್ ಮುಂದೆ ಒಬ್ಬ ಅಜ್ಜ ಚಿಕ್ಕ ಚಿಕ್ಕ ಪ್ಯಾಕೇಟ್‌ಗಳಲ್ಲಿ ಗಿಡಗಳನ್ನು ಮಾರುತ್ತಿರುತ್ತಾರೆ. ಇವರು ಮಾರುವುದು ಎಲ್ಲಾ ಔಷಧಿಯ ಸಸ್ಯಗಳು ಎಂಬುದು ಗಮನಾರ್ಹ. ಆದರೆ ರಸ್ತೆಯಲ್ಲಿ ಓಡಾಡುವವರು ಇತ್ತ ಕಡೆ ಗಮನ ಇವರೆಡೆಗೆ ಹರಿಸುತ್ತಿದ್ದುದ್ದು ತುಂಬಾ ಕಡಿಮೆ.

ಈಗಿರುವಾಗ ಸುಡು ಬಿಸಿಲಿನಲ್ಲಿ ರಸ್ತೆಯಲ್ಲಿ ಕುಳಿತು ಗಿಡ ಮಾರುವ ಅಜ್ಜ, ಫೇಸ್‌ಬುಕ್ ಬಳಕೆದಾರ ಶಿವರಾಜ್ ಬಾಬು ಎಂಬುವರ ಕಣ್ಣಿಗೆ ಬಿದ್ದಿದ್ದಾರೆ. ಅಜ್ಜನ ಕುರಿತು 2 ಚಿತ್ರಗಳ ಜೊತೆಗೆ, ಸಹಾಯ ಮಾಡುವಂತೆ ಒಂದು ಮನವಿ ಪೋಸ್ಟ್ ಹಾಕಿದ್ದರು. ಅಜ್ಜನ ಬಳಿ ಇರುವ ಗಿಡಗಳ ಕುರಿತು, ರಸ್ತೆಯಲ್ಲಿ ಓಡಾಡುವಾಗ ಗಿಡ ತೆಗೆದುಕೊಂಡು ಸಹಾಯ ಮಾಡಿ ಎಂದಿದ್ದರು.

“ಕನಕಪುರ ರಸ್ತೆಯ ಸಾರಕ್ಕಿ ಸಿಗ್ನಲ್ ಬಳಿ ಇರುವ ಜಾಕಿ ಶೋರೂಮ್ ಮುಂದೆ ಕೂತಿರುವ ಈ  ವೃದ್ಧನ ಹೆಸರು    ರೇವಣ್ಣಸಿದ್ದಪ್ಪ. ಈ ವಯಸ್ಸಿನಲ್ಲೂ ಭಿಕ್ಷೆ ಬೇಡದೆ ದುಡಿಯುವ ಹುಮ್ಮಸ್ಸು. ಇತನ ಬಳಿ ಇರುವುದು ಔಷಧಿ ಗಿಡಗಳು ಹಾಗೂ ವಿವಿಧ  ರೀತಿಯ ಗಿಡಗಳು. ದೊಡ್ಡ ಪತ್ರೆ, ಅಲೋವೆರಾ, ಕಾಮ ಸಂಜೀವಿನಿ, ಬ್ರಹ್ಮ ಕಮಲ  ಇತ್ಯಾದಿ ಗಿಡಗಳು. ಈ ರಸ್ತೆಯ ಬಳಿ ನೀವು ಹೋಗುವಾಗ ದಯವಿಟ್ಟು ಈ ವೃದ್ಧರ ಬಳಿ ಇರುವ ಗಿಡಗಳನ್ನು ತೆಗೆದುಕೊಂಡು ಹೋಗಿ ಈತನಿಗೆ ಸಹಾಯ ಮಾಡಿ. ಕೇವಲ 10 ರಿಂದ 30 ರೂಪಾಯಿ ಮಾತ್ರ” ಎಂದು ಫೋಸ್ಟ್ ಶೇರ್‌ ಮಾಡಿದ್ದರು.

ಫೇಸ್‌ಬುಕ್ ವೃದ್ಧರಿಗೆ ಸಹಾಯ
PC: screenshot@Shivaraj Babu

ಜೊತೆಗೆ “ನಂಬಿಕಸ್ತರಿಂದ ಮೋಸ ಹೋದೆವು ಎಂದು ಪ್ರಾಮಾಣಿಕರು ಚಿಂತಿಸಬೇಕಾಗಿಲ್ಲ!!!  ಏಕೆಂದರೆ  ಇತಿಹಾಸದಲ್ಲಿ ಉಳಿದಿರುವುದು ಪ್ರಾಮಾಣಿಕರೆ ಹೊರತು ಮೋಸಗಾರರಲ್ಲ!!!” ಎಂದು ಶೀರ್ಷಿಕೆ ಕೂಡ ನೀಡಿದ್ದರು. ಈ ಪೋಸ್ಟ್ ಎರಡು ಸಾವಿರಕ್ಕೂ ಅಧಿಕ ಮಂದಿ ಶೇರ್ ಮಾಡಿದ್ದರು. ಇದರ ಪ್ರತಿಫಲ ಇಂದು ಅಜ್ಜನ ಸ್ವಂತ ಪುಟ್ಟ ಅಂಗಡಿ ಆರಂಭವಾಗಿದೆ.

ಫೇಸ್‌ಬುಕ್‌ನಲ್ಲಿ ವಿಷಯ ತಿಳಿದ ಅನೇಕ ಮಂದಿ ವೃದ್ಧರ ಸಹಾಯಕ್ಕೆ ಮುಂದಾಗಿದ್ದಾರೆ. ನೆರಳಿಗಾಗಿ ಒಬ್ಬರು ದೊಡ್ಡ ಛತ್ರಿ ಒದಗಿಸಿದರೇ, ಇನ್ನೋಬ್ಬರು ಕುಳಿತುಕೊಳ್ಳು ಚೇರ್, ಗಿಡಗಳನ್ನು ಇಟ್ಟುಕೊಳ್ಳಲು ಟೇಬಲ್ ಹೀಗೆ ಅಜ್ಜನ ಹೊಸ ಪುಟ್ಟ ಅಂಗಡಿ ನಿರ್ಮಾಣವಾಗಿದೆ.

ನಟಿ, ಸಾಮಾಜಿಕ ಕಾರ್ಯಕರ್ತೆ ಸಂಯುಕ್ತ ಹೊರನಾಡು ತಮ್ಮ Change Makers of Kanakapura Road ತಂಡದ ಜತೆಗೂಡಿ ಆ ಅಜ್ಜನಿಗೆ ಒಂದು ಕೆನೊಪಿ, ಟೇಬಲ್ ಮತ್ತಿತರ ವಸ್ತುಗಳನ್ನು ಒದಗಿಸಿದ್ದಷ್ಟೇ ಅಲ್ಲದೇ  ಸಂಯುಕ್ತ ಅವರು ಒಂದಷ್ಟು ಗಿಡಗಳನ್ನು ಖರೀದಿಸಿದ್ದಾರೆ. ನಾವು ಅಶ್ವಿನಿ ಎಂಬುವರ ಟ್ವೀಟ್ ಗಮನಿಸಿ ಸಹಾಯಕ್ಕೆ ಬಂದಿದ್ದಾಗಿ ಫೇಸ್‌ಬುಕ್ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

PC: screenshot@Samyukta Hornad

ಸದ್ಯ ಅಜ್ಜ ಖುಷಿಯಲ್ಲಿದ್ದಾರೆ. ವೃದ್ಧರ ಬಗ್ಗೆ ಫೇಸ್‌ಬುಕ್ ಪೋಸ್ಟ್ ಮಾಡಿದ್ದ ಶಿವರಾಜ್ ಬಾಬು ಪೋಸ್ಟ್ ಶೇರ್ ಮಾಡಿ, ಅಜ್ಜನಿಗೆ ಸಹಾಯ ಮಾಡಿದ ಎಲ್ಲಾ ಬೆಂಗಳೂರು ಜನತೆಗೆ ಧನ್ಯವಾದ ಎಂದಿದ್ದಾರೆ.

ಇದನ್ನೂ ಓದಿ: ಗುಡ್ ನ್ಯೂಸ್: ಬೊಲಿವಿಯಾದಲ್ಲಿ ಮಹಿಳಾ ಜನಪ್ರತಿನಿಧಿಗಳ ಸಂಖ್ಯೆ ಶೇ.50ಕ್ಕಿಂತಲೂ ಹೆಚ್ಚು!

“ಧನ್ಯವಾದ ಬೆಂಗಳೂರು…. ವೃದ್ದನಿಗೆ ಸಹಾಯ ಮಾಡಿದ ಪ್ರತಿಯೊಬ್ಬ ರಿಗೂ ಧನ್ಯವಾದಗಳು.. ಶೇರ್ ಮಾಡಿ. ಈ ವಿಷಯವನ್ನು ನಮ್ಮ ಬೆಂಗಳೂರು ಜನತೆಗೆ ತಲುಪಿಸಿ ಅವರಿಗೆ ಸಹಾಯ ಮಾಡಿದ ಪ್ರತಿಯೊಬ್ಬರಿಗೂ ಧನ್ಯವಾದಗಳು” ಎಂದಿದ್ದಾರೆ.

Shivaraj Babu
PC: screenshot@Shivaraj Babu

ಇಂತಹ ಪುಟ್ಟ ಪುಟ್ಟ ಪ್ರಯತ್ನಗಳು ಸಾಕು ನಮ್ಮ ನಡುವೆ ಇರುವ ಎಷ್ಟೋ ಜೀವಗಳಿಗೆ ಸಹಾಯ ಮಾಡಲು ಎನ್ನುತ್ತಾರೆ ನೆಟ್ಟಿಗರು. ನಮ್ಮೊಳಗೆ ಒಂದು ಮನಸ್ಸಿದ್ದರೇ, ಇನ್ನೊಬ್ಬರ ನೋವಿಗೆ ಆಸರೆಯಾಗುವ ಕೊಂಚ ಸಹನೆಯಿದ್ದರೇ ಸಾಕು, ನಾವು ದಾರಿಯಲ್ಲಿ ನೋಡುವ ಒಂದು ಚಿಕ್ಕ ಚಿತ್ರಪಟ ಕೂಡ ಮತ್ತೊಂದು ಆಯಾಮವನ್ನು ಸೃಷ್ಟಿಸುತ್ತದೆ.

ಫೇಸ್‌ಬುಕ್, ಟ್ವಿಟರ್‌ ಕೇವಲ ಮತ್ತೊಬ್ಬರನ್ನು ಟೀಕೆ ಮಾಡಲು, ಲೈಕ್, ಕಾಮೆಂಟ್‌ಗಳನ್ನು ಮಾಡಲು ಮಾತ್ರವಲ್ಲ ಈ ರೀತಿಯ ಜನಪರ ಕಾರ್ಯಗಳಿಗೂ ಬಳಕೆಯಾಗಲಿ ಎನ್ನುವುದೇ ವೃದ್ಧರಿಗೆ ಸಹಾಯ ಮಾಡಿದವರ ಅಭಿಪ್ರಾಯವಾಗಿದೆ.


ಇದನ್ನೂ ಓದಿ: ಮಹಿಳೆಯರು ಕೆಲಸಕ್ಕೆ ಹೋಗಿದ್ದರಿಂದ METOO ಆರಂಭ: ಮುಖೇಶ್ ಖನ್ನಾ ಹೇಳಿಕೆಗೆ ತೀವ್ರ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...