Homeಕರ್ನಾಟಕಗುಡ್ ನ್ಯೂಸ್: ಸುಡು ಬಿಸಿಲಿನಲ್ಲಿ ಗಿಡ ಮಾರುತ್ತಿದ್ದ ಅಜ್ಜನ ಮುಖದಲ್ಲಿ ಮಂದಹಾಸ ಮೂಡಿಸಿದ ಫೇಸ್‌ಬುಕ್ ಪೋಸ್ಟ್!

ಗುಡ್ ನ್ಯೂಸ್: ಸುಡು ಬಿಸಿಲಿನಲ್ಲಿ ಗಿಡ ಮಾರುತ್ತಿದ್ದ ಅಜ್ಜನ ಮುಖದಲ್ಲಿ ಮಂದಹಾಸ ಮೂಡಿಸಿದ ಫೇಸ್‌ಬುಕ್ ಪೋಸ್ಟ್!

ಫೇಸ್‌ಬುಕ್, ಟ್ವಿಟರ್‌ ಕೇವಲ ಮತ್ತೊಬ್ಬರನ್ನು ಟೀಕೆ ಮಾಡಲು, ಲೈಕ್, ಕಾಮೆಂಟ್‌ಗಳನ್ನು ಮಾಡಲು ಮಾತ್ರವಲ್ಲದೆ, ಈ ರೀತಿಯ ಜನಪರ ಕಾರ್ಯಗಳಿಗೂ ಬಳಕೆಯಾಗಲಿ ಎಂಬುದು ಹಲವರ ಅಭಿಮತ.

- Advertisement -
- Advertisement -

ಕೆಲವೊಮ್ಮೆ ನಾವು ರಸ್ತೆಯಲ್ಲಿ ಓಡಾಡುವಾಗ ರಸ್ತೆ ಬದಿಗೆ ಹರಿಸುವ ಒಂದು ಸಣ್ಣ ಗಮನ ಕೆಲವೊಬ್ಬರ ಜೀವನದಲ್ಲಿ ಭಾರಿ ಬದಲಾವಣೆ ತರಬಹುದು. ಇದಕ್ಕೆ ಉದಾಹರಣೆಯಾಗಿ ರಸ್ತೆಬದಿಯಲ್ಲಿ, ಬಿಸಿಲಿನಲ್ಲಿ, ಇಳಿವಯಸ್ಸಿನಲ್ಲಿ ಜೀವನ ನಿರ್ವಹಣೆಗೆ ಕಷ್ಟ ಪಡುತ್ತಿದ್ದ ವೃದ್ಧರನ್ನು ಗಮನಿಸಿ ಬರೆದ ಫೇಸ್‌ಬುಕ್‌ ಪೋಸ್ಟ್ ಆವರ ಬದುಕನ್ನು ಬದಲಾಯಿಸಿದೆ.

ಹೌದು, ಕನಕಪುರ ರಸ್ತೆಯ ಸಾರಕ್ಕಿ ಸಿಗ್ನಲ್ ಬಳಿ ಇರುವ ಜಾಕಿ ಶೋರೂಮ್ ಮುಂದೆ ಒಬ್ಬ ಅಜ್ಜ ಚಿಕ್ಕ ಚಿಕ್ಕ ಪ್ಯಾಕೇಟ್‌ಗಳಲ್ಲಿ ಗಿಡಗಳನ್ನು ಮಾರುತ್ತಿರುತ್ತಾರೆ. ಇವರು ಮಾರುವುದು ಎಲ್ಲಾ ಔಷಧಿಯ ಸಸ್ಯಗಳು ಎಂಬುದು ಗಮನಾರ್ಹ. ಆದರೆ ರಸ್ತೆಯಲ್ಲಿ ಓಡಾಡುವವರು ಇತ್ತ ಕಡೆ ಗಮನ ಇವರೆಡೆಗೆ ಹರಿಸುತ್ತಿದ್ದುದ್ದು ತುಂಬಾ ಕಡಿಮೆ.

ಈಗಿರುವಾಗ ಸುಡು ಬಿಸಿಲಿನಲ್ಲಿ ರಸ್ತೆಯಲ್ಲಿ ಕುಳಿತು ಗಿಡ ಮಾರುವ ಅಜ್ಜ, ಫೇಸ್‌ಬುಕ್ ಬಳಕೆದಾರ ಶಿವರಾಜ್ ಬಾಬು ಎಂಬುವರ ಕಣ್ಣಿಗೆ ಬಿದ್ದಿದ್ದಾರೆ. ಅಜ್ಜನ ಕುರಿತು 2 ಚಿತ್ರಗಳ ಜೊತೆಗೆ, ಸಹಾಯ ಮಾಡುವಂತೆ ಒಂದು ಮನವಿ ಪೋಸ್ಟ್ ಹಾಕಿದ್ದರು. ಅಜ್ಜನ ಬಳಿ ಇರುವ ಗಿಡಗಳ ಕುರಿತು, ರಸ್ತೆಯಲ್ಲಿ ಓಡಾಡುವಾಗ ಗಿಡ ತೆಗೆದುಕೊಂಡು ಸಹಾಯ ಮಾಡಿ ಎಂದಿದ್ದರು.

“ಕನಕಪುರ ರಸ್ತೆಯ ಸಾರಕ್ಕಿ ಸಿಗ್ನಲ್ ಬಳಿ ಇರುವ ಜಾಕಿ ಶೋರೂಮ್ ಮುಂದೆ ಕೂತಿರುವ ಈ  ವೃದ್ಧನ ಹೆಸರು    ರೇವಣ್ಣಸಿದ್ದಪ್ಪ. ಈ ವಯಸ್ಸಿನಲ್ಲೂ ಭಿಕ್ಷೆ ಬೇಡದೆ ದುಡಿಯುವ ಹುಮ್ಮಸ್ಸು. ಇತನ ಬಳಿ ಇರುವುದು ಔಷಧಿ ಗಿಡಗಳು ಹಾಗೂ ವಿವಿಧ  ರೀತಿಯ ಗಿಡಗಳು. ದೊಡ್ಡ ಪತ್ರೆ, ಅಲೋವೆರಾ, ಕಾಮ ಸಂಜೀವಿನಿ, ಬ್ರಹ್ಮ ಕಮಲ  ಇತ್ಯಾದಿ ಗಿಡಗಳು. ಈ ರಸ್ತೆಯ ಬಳಿ ನೀವು ಹೋಗುವಾಗ ದಯವಿಟ್ಟು ಈ ವೃದ್ಧರ ಬಳಿ ಇರುವ ಗಿಡಗಳನ್ನು ತೆಗೆದುಕೊಂಡು ಹೋಗಿ ಈತನಿಗೆ ಸಹಾಯ ಮಾಡಿ. ಕೇವಲ 10 ರಿಂದ 30 ರೂಪಾಯಿ ಮಾತ್ರ” ಎಂದು ಫೋಸ್ಟ್ ಶೇರ್‌ ಮಾಡಿದ್ದರು.

ಫೇಸ್‌ಬುಕ್ ವೃದ್ಧರಿಗೆ ಸಹಾಯ
PC: screenshot@Shivaraj Babu

ಜೊತೆಗೆ “ನಂಬಿಕಸ್ತರಿಂದ ಮೋಸ ಹೋದೆವು ಎಂದು ಪ್ರಾಮಾಣಿಕರು ಚಿಂತಿಸಬೇಕಾಗಿಲ್ಲ!!!  ಏಕೆಂದರೆ  ಇತಿಹಾಸದಲ್ಲಿ ಉಳಿದಿರುವುದು ಪ್ರಾಮಾಣಿಕರೆ ಹೊರತು ಮೋಸಗಾರರಲ್ಲ!!!” ಎಂದು ಶೀರ್ಷಿಕೆ ಕೂಡ ನೀಡಿದ್ದರು. ಈ ಪೋಸ್ಟ್ ಎರಡು ಸಾವಿರಕ್ಕೂ ಅಧಿಕ ಮಂದಿ ಶೇರ್ ಮಾಡಿದ್ದರು. ಇದರ ಪ್ರತಿಫಲ ಇಂದು ಅಜ್ಜನ ಸ್ವಂತ ಪುಟ್ಟ ಅಂಗಡಿ ಆರಂಭವಾಗಿದೆ.

ಫೇಸ್‌ಬುಕ್‌ನಲ್ಲಿ ವಿಷಯ ತಿಳಿದ ಅನೇಕ ಮಂದಿ ವೃದ್ಧರ ಸಹಾಯಕ್ಕೆ ಮುಂದಾಗಿದ್ದಾರೆ. ನೆರಳಿಗಾಗಿ ಒಬ್ಬರು ದೊಡ್ಡ ಛತ್ರಿ ಒದಗಿಸಿದರೇ, ಇನ್ನೋಬ್ಬರು ಕುಳಿತುಕೊಳ್ಳು ಚೇರ್, ಗಿಡಗಳನ್ನು ಇಟ್ಟುಕೊಳ್ಳಲು ಟೇಬಲ್ ಹೀಗೆ ಅಜ್ಜನ ಹೊಸ ಪುಟ್ಟ ಅಂಗಡಿ ನಿರ್ಮಾಣವಾಗಿದೆ.

ನಟಿ, ಸಾಮಾಜಿಕ ಕಾರ್ಯಕರ್ತೆ ಸಂಯುಕ್ತ ಹೊರನಾಡು ತಮ್ಮ Change Makers of Kanakapura Road ತಂಡದ ಜತೆಗೂಡಿ ಆ ಅಜ್ಜನಿಗೆ ಒಂದು ಕೆನೊಪಿ, ಟೇಬಲ್ ಮತ್ತಿತರ ವಸ್ತುಗಳನ್ನು ಒದಗಿಸಿದ್ದಷ್ಟೇ ಅಲ್ಲದೇ  ಸಂಯುಕ್ತ ಅವರು ಒಂದಷ್ಟು ಗಿಡಗಳನ್ನು ಖರೀದಿಸಿದ್ದಾರೆ. ನಾವು ಅಶ್ವಿನಿ ಎಂಬುವರ ಟ್ವೀಟ್ ಗಮನಿಸಿ ಸಹಾಯಕ್ಕೆ ಬಂದಿದ್ದಾಗಿ ಫೇಸ್‌ಬುಕ್ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

PC: screenshot@Samyukta Hornad

ಸದ್ಯ ಅಜ್ಜ ಖುಷಿಯಲ್ಲಿದ್ದಾರೆ. ವೃದ್ಧರ ಬಗ್ಗೆ ಫೇಸ್‌ಬುಕ್ ಪೋಸ್ಟ್ ಮಾಡಿದ್ದ ಶಿವರಾಜ್ ಬಾಬು ಪೋಸ್ಟ್ ಶೇರ್ ಮಾಡಿ, ಅಜ್ಜನಿಗೆ ಸಹಾಯ ಮಾಡಿದ ಎಲ್ಲಾ ಬೆಂಗಳೂರು ಜನತೆಗೆ ಧನ್ಯವಾದ ಎಂದಿದ್ದಾರೆ.

ಇದನ್ನೂ ಓದಿ: ಗುಡ್ ನ್ಯೂಸ್: ಬೊಲಿವಿಯಾದಲ್ಲಿ ಮಹಿಳಾ ಜನಪ್ರತಿನಿಧಿಗಳ ಸಂಖ್ಯೆ ಶೇ.50ಕ್ಕಿಂತಲೂ ಹೆಚ್ಚು!

“ಧನ್ಯವಾದ ಬೆಂಗಳೂರು…. ವೃದ್ದನಿಗೆ ಸಹಾಯ ಮಾಡಿದ ಪ್ರತಿಯೊಬ್ಬ ರಿಗೂ ಧನ್ಯವಾದಗಳು.. ಶೇರ್ ಮಾಡಿ. ಈ ವಿಷಯವನ್ನು ನಮ್ಮ ಬೆಂಗಳೂರು ಜನತೆಗೆ ತಲುಪಿಸಿ ಅವರಿಗೆ ಸಹಾಯ ಮಾಡಿದ ಪ್ರತಿಯೊಬ್ಬರಿಗೂ ಧನ್ಯವಾದಗಳು” ಎಂದಿದ್ದಾರೆ.

Shivaraj Babu
PC: screenshot@Shivaraj Babu

ಇಂತಹ ಪುಟ್ಟ ಪುಟ್ಟ ಪ್ರಯತ್ನಗಳು ಸಾಕು ನಮ್ಮ ನಡುವೆ ಇರುವ ಎಷ್ಟೋ ಜೀವಗಳಿಗೆ ಸಹಾಯ ಮಾಡಲು ಎನ್ನುತ್ತಾರೆ ನೆಟ್ಟಿಗರು. ನಮ್ಮೊಳಗೆ ಒಂದು ಮನಸ್ಸಿದ್ದರೇ, ಇನ್ನೊಬ್ಬರ ನೋವಿಗೆ ಆಸರೆಯಾಗುವ ಕೊಂಚ ಸಹನೆಯಿದ್ದರೇ ಸಾಕು, ನಾವು ದಾರಿಯಲ್ಲಿ ನೋಡುವ ಒಂದು ಚಿಕ್ಕ ಚಿತ್ರಪಟ ಕೂಡ ಮತ್ತೊಂದು ಆಯಾಮವನ್ನು ಸೃಷ್ಟಿಸುತ್ತದೆ.

ಫೇಸ್‌ಬುಕ್, ಟ್ವಿಟರ್‌ ಕೇವಲ ಮತ್ತೊಬ್ಬರನ್ನು ಟೀಕೆ ಮಾಡಲು, ಲೈಕ್, ಕಾಮೆಂಟ್‌ಗಳನ್ನು ಮಾಡಲು ಮಾತ್ರವಲ್ಲ ಈ ರೀತಿಯ ಜನಪರ ಕಾರ್ಯಗಳಿಗೂ ಬಳಕೆಯಾಗಲಿ ಎನ್ನುವುದೇ ವೃದ್ಧರಿಗೆ ಸಹಾಯ ಮಾಡಿದವರ ಅಭಿಪ್ರಾಯವಾಗಿದೆ.


ಇದನ್ನೂ ಓದಿ: ಮಹಿಳೆಯರು ಕೆಲಸಕ್ಕೆ ಹೋಗಿದ್ದರಿಂದ METOO ಆರಂಭ: ಮುಖೇಶ್ ಖನ್ನಾ ಹೇಳಿಕೆಗೆ ತೀವ್ರ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...