Homeಕರ್ನಾಟಕಗುಡ್ ನ್ಯೂಸ್: ಸುಡು ಬಿಸಿಲಿನಲ್ಲಿ ಗಿಡ ಮಾರುತ್ತಿದ್ದ ಅಜ್ಜನ ಮುಖದಲ್ಲಿ ಮಂದಹಾಸ ಮೂಡಿಸಿದ ಫೇಸ್‌ಬುಕ್ ಪೋಸ್ಟ್!

ಗುಡ್ ನ್ಯೂಸ್: ಸುಡು ಬಿಸಿಲಿನಲ್ಲಿ ಗಿಡ ಮಾರುತ್ತಿದ್ದ ಅಜ್ಜನ ಮುಖದಲ್ಲಿ ಮಂದಹಾಸ ಮೂಡಿಸಿದ ಫೇಸ್‌ಬುಕ್ ಪೋಸ್ಟ್!

ಫೇಸ್‌ಬುಕ್, ಟ್ವಿಟರ್‌ ಕೇವಲ ಮತ್ತೊಬ್ಬರನ್ನು ಟೀಕೆ ಮಾಡಲು, ಲೈಕ್, ಕಾಮೆಂಟ್‌ಗಳನ್ನು ಮಾಡಲು ಮಾತ್ರವಲ್ಲದೆ, ಈ ರೀತಿಯ ಜನಪರ ಕಾರ್ಯಗಳಿಗೂ ಬಳಕೆಯಾಗಲಿ ಎಂಬುದು ಹಲವರ ಅಭಿಮತ.

- Advertisement -
- Advertisement -

ಕೆಲವೊಮ್ಮೆ ನಾವು ರಸ್ತೆಯಲ್ಲಿ ಓಡಾಡುವಾಗ ರಸ್ತೆ ಬದಿಗೆ ಹರಿಸುವ ಒಂದು ಸಣ್ಣ ಗಮನ ಕೆಲವೊಬ್ಬರ ಜೀವನದಲ್ಲಿ ಭಾರಿ ಬದಲಾವಣೆ ತರಬಹುದು. ಇದಕ್ಕೆ ಉದಾಹರಣೆಯಾಗಿ ರಸ್ತೆಬದಿಯಲ್ಲಿ, ಬಿಸಿಲಿನಲ್ಲಿ, ಇಳಿವಯಸ್ಸಿನಲ್ಲಿ ಜೀವನ ನಿರ್ವಹಣೆಗೆ ಕಷ್ಟ ಪಡುತ್ತಿದ್ದ ವೃದ್ಧರನ್ನು ಗಮನಿಸಿ ಬರೆದ ಫೇಸ್‌ಬುಕ್‌ ಪೋಸ್ಟ್ ಆವರ ಬದುಕನ್ನು ಬದಲಾಯಿಸಿದೆ.

ಹೌದು, ಕನಕಪುರ ರಸ್ತೆಯ ಸಾರಕ್ಕಿ ಸಿಗ್ನಲ್ ಬಳಿ ಇರುವ ಜಾಕಿ ಶೋರೂಮ್ ಮುಂದೆ ಒಬ್ಬ ಅಜ್ಜ ಚಿಕ್ಕ ಚಿಕ್ಕ ಪ್ಯಾಕೇಟ್‌ಗಳಲ್ಲಿ ಗಿಡಗಳನ್ನು ಮಾರುತ್ತಿರುತ್ತಾರೆ. ಇವರು ಮಾರುವುದು ಎಲ್ಲಾ ಔಷಧಿಯ ಸಸ್ಯಗಳು ಎಂಬುದು ಗಮನಾರ್ಹ. ಆದರೆ ರಸ್ತೆಯಲ್ಲಿ ಓಡಾಡುವವರು ಇತ್ತ ಕಡೆ ಗಮನ ಇವರೆಡೆಗೆ ಹರಿಸುತ್ತಿದ್ದುದ್ದು ತುಂಬಾ ಕಡಿಮೆ.

ಈಗಿರುವಾಗ ಸುಡು ಬಿಸಿಲಿನಲ್ಲಿ ರಸ್ತೆಯಲ್ಲಿ ಕುಳಿತು ಗಿಡ ಮಾರುವ ಅಜ್ಜ, ಫೇಸ್‌ಬುಕ್ ಬಳಕೆದಾರ ಶಿವರಾಜ್ ಬಾಬು ಎಂಬುವರ ಕಣ್ಣಿಗೆ ಬಿದ್ದಿದ್ದಾರೆ. ಅಜ್ಜನ ಕುರಿತು 2 ಚಿತ್ರಗಳ ಜೊತೆಗೆ, ಸಹಾಯ ಮಾಡುವಂತೆ ಒಂದು ಮನವಿ ಪೋಸ್ಟ್ ಹಾಕಿದ್ದರು. ಅಜ್ಜನ ಬಳಿ ಇರುವ ಗಿಡಗಳ ಕುರಿತು, ರಸ್ತೆಯಲ್ಲಿ ಓಡಾಡುವಾಗ ಗಿಡ ತೆಗೆದುಕೊಂಡು ಸಹಾಯ ಮಾಡಿ ಎಂದಿದ್ದರು.

“ಕನಕಪುರ ರಸ್ತೆಯ ಸಾರಕ್ಕಿ ಸಿಗ್ನಲ್ ಬಳಿ ಇರುವ ಜಾಕಿ ಶೋರೂಮ್ ಮುಂದೆ ಕೂತಿರುವ ಈ  ವೃದ್ಧನ ಹೆಸರು    ರೇವಣ್ಣಸಿದ್ದಪ್ಪ. ಈ ವಯಸ್ಸಿನಲ್ಲೂ ಭಿಕ್ಷೆ ಬೇಡದೆ ದುಡಿಯುವ ಹುಮ್ಮಸ್ಸು. ಇತನ ಬಳಿ ಇರುವುದು ಔಷಧಿ ಗಿಡಗಳು ಹಾಗೂ ವಿವಿಧ  ರೀತಿಯ ಗಿಡಗಳು. ದೊಡ್ಡ ಪತ್ರೆ, ಅಲೋವೆರಾ, ಕಾಮ ಸಂಜೀವಿನಿ, ಬ್ರಹ್ಮ ಕಮಲ  ಇತ್ಯಾದಿ ಗಿಡಗಳು. ಈ ರಸ್ತೆಯ ಬಳಿ ನೀವು ಹೋಗುವಾಗ ದಯವಿಟ್ಟು ಈ ವೃದ್ಧರ ಬಳಿ ಇರುವ ಗಿಡಗಳನ್ನು ತೆಗೆದುಕೊಂಡು ಹೋಗಿ ಈತನಿಗೆ ಸಹಾಯ ಮಾಡಿ. ಕೇವಲ 10 ರಿಂದ 30 ರೂಪಾಯಿ ಮಾತ್ರ” ಎಂದು ಫೋಸ್ಟ್ ಶೇರ್‌ ಮಾಡಿದ್ದರು.

ಫೇಸ್‌ಬುಕ್ ವೃದ್ಧರಿಗೆ ಸಹಾಯ
PC: screenshot@Shivaraj Babu

ಜೊತೆಗೆ “ನಂಬಿಕಸ್ತರಿಂದ ಮೋಸ ಹೋದೆವು ಎಂದು ಪ್ರಾಮಾಣಿಕರು ಚಿಂತಿಸಬೇಕಾಗಿಲ್ಲ!!!  ಏಕೆಂದರೆ  ಇತಿಹಾಸದಲ್ಲಿ ಉಳಿದಿರುವುದು ಪ್ರಾಮಾಣಿಕರೆ ಹೊರತು ಮೋಸಗಾರರಲ್ಲ!!!” ಎಂದು ಶೀರ್ಷಿಕೆ ಕೂಡ ನೀಡಿದ್ದರು. ಈ ಪೋಸ್ಟ್ ಎರಡು ಸಾವಿರಕ್ಕೂ ಅಧಿಕ ಮಂದಿ ಶೇರ್ ಮಾಡಿದ್ದರು. ಇದರ ಪ್ರತಿಫಲ ಇಂದು ಅಜ್ಜನ ಸ್ವಂತ ಪುಟ್ಟ ಅಂಗಡಿ ಆರಂಭವಾಗಿದೆ.

ಫೇಸ್‌ಬುಕ್‌ನಲ್ಲಿ ವಿಷಯ ತಿಳಿದ ಅನೇಕ ಮಂದಿ ವೃದ್ಧರ ಸಹಾಯಕ್ಕೆ ಮುಂದಾಗಿದ್ದಾರೆ. ನೆರಳಿಗಾಗಿ ಒಬ್ಬರು ದೊಡ್ಡ ಛತ್ರಿ ಒದಗಿಸಿದರೇ, ಇನ್ನೋಬ್ಬರು ಕುಳಿತುಕೊಳ್ಳು ಚೇರ್, ಗಿಡಗಳನ್ನು ಇಟ್ಟುಕೊಳ್ಳಲು ಟೇಬಲ್ ಹೀಗೆ ಅಜ್ಜನ ಹೊಸ ಪುಟ್ಟ ಅಂಗಡಿ ನಿರ್ಮಾಣವಾಗಿದೆ.

ನಟಿ, ಸಾಮಾಜಿಕ ಕಾರ್ಯಕರ್ತೆ ಸಂಯುಕ್ತ ಹೊರನಾಡು ತಮ್ಮ Change Makers of Kanakapura Road ತಂಡದ ಜತೆಗೂಡಿ ಆ ಅಜ್ಜನಿಗೆ ಒಂದು ಕೆನೊಪಿ, ಟೇಬಲ್ ಮತ್ತಿತರ ವಸ್ತುಗಳನ್ನು ಒದಗಿಸಿದ್ದಷ್ಟೇ ಅಲ್ಲದೇ  ಸಂಯುಕ್ತ ಅವರು ಒಂದಷ್ಟು ಗಿಡಗಳನ್ನು ಖರೀದಿಸಿದ್ದಾರೆ. ನಾವು ಅಶ್ವಿನಿ ಎಂಬುವರ ಟ್ವೀಟ್ ಗಮನಿಸಿ ಸಹಾಯಕ್ಕೆ ಬಂದಿದ್ದಾಗಿ ಫೇಸ್‌ಬುಕ್ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

PC: screenshot@Samyukta Hornad

ಸದ್ಯ ಅಜ್ಜ ಖುಷಿಯಲ್ಲಿದ್ದಾರೆ. ವೃದ್ಧರ ಬಗ್ಗೆ ಫೇಸ್‌ಬುಕ್ ಪೋಸ್ಟ್ ಮಾಡಿದ್ದ ಶಿವರಾಜ್ ಬಾಬು ಪೋಸ್ಟ್ ಶೇರ್ ಮಾಡಿ, ಅಜ್ಜನಿಗೆ ಸಹಾಯ ಮಾಡಿದ ಎಲ್ಲಾ ಬೆಂಗಳೂರು ಜನತೆಗೆ ಧನ್ಯವಾದ ಎಂದಿದ್ದಾರೆ.

ಇದನ್ನೂ ಓದಿ: ಗುಡ್ ನ್ಯೂಸ್: ಬೊಲಿವಿಯಾದಲ್ಲಿ ಮಹಿಳಾ ಜನಪ್ರತಿನಿಧಿಗಳ ಸಂಖ್ಯೆ ಶೇ.50ಕ್ಕಿಂತಲೂ ಹೆಚ್ಚು!

“ಧನ್ಯವಾದ ಬೆಂಗಳೂರು…. ವೃದ್ದನಿಗೆ ಸಹಾಯ ಮಾಡಿದ ಪ್ರತಿಯೊಬ್ಬ ರಿಗೂ ಧನ್ಯವಾದಗಳು.. ಶೇರ್ ಮಾಡಿ. ಈ ವಿಷಯವನ್ನು ನಮ್ಮ ಬೆಂಗಳೂರು ಜನತೆಗೆ ತಲುಪಿಸಿ ಅವರಿಗೆ ಸಹಾಯ ಮಾಡಿದ ಪ್ರತಿಯೊಬ್ಬರಿಗೂ ಧನ್ಯವಾದಗಳು” ಎಂದಿದ್ದಾರೆ.

Shivaraj Babu
PC: screenshot@Shivaraj Babu

ಇಂತಹ ಪುಟ್ಟ ಪುಟ್ಟ ಪ್ರಯತ್ನಗಳು ಸಾಕು ನಮ್ಮ ನಡುವೆ ಇರುವ ಎಷ್ಟೋ ಜೀವಗಳಿಗೆ ಸಹಾಯ ಮಾಡಲು ಎನ್ನುತ್ತಾರೆ ನೆಟ್ಟಿಗರು. ನಮ್ಮೊಳಗೆ ಒಂದು ಮನಸ್ಸಿದ್ದರೇ, ಇನ್ನೊಬ್ಬರ ನೋವಿಗೆ ಆಸರೆಯಾಗುವ ಕೊಂಚ ಸಹನೆಯಿದ್ದರೇ ಸಾಕು, ನಾವು ದಾರಿಯಲ್ಲಿ ನೋಡುವ ಒಂದು ಚಿಕ್ಕ ಚಿತ್ರಪಟ ಕೂಡ ಮತ್ತೊಂದು ಆಯಾಮವನ್ನು ಸೃಷ್ಟಿಸುತ್ತದೆ.

ಫೇಸ್‌ಬುಕ್, ಟ್ವಿಟರ್‌ ಕೇವಲ ಮತ್ತೊಬ್ಬರನ್ನು ಟೀಕೆ ಮಾಡಲು, ಲೈಕ್, ಕಾಮೆಂಟ್‌ಗಳನ್ನು ಮಾಡಲು ಮಾತ್ರವಲ್ಲ ಈ ರೀತಿಯ ಜನಪರ ಕಾರ್ಯಗಳಿಗೂ ಬಳಕೆಯಾಗಲಿ ಎನ್ನುವುದೇ ವೃದ್ಧರಿಗೆ ಸಹಾಯ ಮಾಡಿದವರ ಅಭಿಪ್ರಾಯವಾಗಿದೆ.


ಇದನ್ನೂ ಓದಿ: ಮಹಿಳೆಯರು ಕೆಲಸಕ್ಕೆ ಹೋಗಿದ್ದರಿಂದ METOO ಆರಂಭ: ಮುಖೇಶ್ ಖನ್ನಾ ಹೇಳಿಕೆಗೆ ತೀವ್ರ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...