Homeಕರ್ನಾಟಕಗುಡ್ ನ್ಯೂಸ್: ಸುಡು ಬಿಸಿಲಿನಲ್ಲಿ ಗಿಡ ಮಾರುತ್ತಿದ್ದ ಅಜ್ಜನ ಮುಖದಲ್ಲಿ ಮಂದಹಾಸ ಮೂಡಿಸಿದ ಫೇಸ್‌ಬುಕ್ ಪೋಸ್ಟ್!

ಗುಡ್ ನ್ಯೂಸ್: ಸುಡು ಬಿಸಿಲಿನಲ್ಲಿ ಗಿಡ ಮಾರುತ್ತಿದ್ದ ಅಜ್ಜನ ಮುಖದಲ್ಲಿ ಮಂದಹಾಸ ಮೂಡಿಸಿದ ಫೇಸ್‌ಬುಕ್ ಪೋಸ್ಟ್!

ಫೇಸ್‌ಬುಕ್, ಟ್ವಿಟರ್‌ ಕೇವಲ ಮತ್ತೊಬ್ಬರನ್ನು ಟೀಕೆ ಮಾಡಲು, ಲೈಕ್, ಕಾಮೆಂಟ್‌ಗಳನ್ನು ಮಾಡಲು ಮಾತ್ರವಲ್ಲದೆ, ಈ ರೀತಿಯ ಜನಪರ ಕಾರ್ಯಗಳಿಗೂ ಬಳಕೆಯಾಗಲಿ ಎಂಬುದು ಹಲವರ ಅಭಿಮತ.

- Advertisement -
- Advertisement -

ಕೆಲವೊಮ್ಮೆ ನಾವು ರಸ್ತೆಯಲ್ಲಿ ಓಡಾಡುವಾಗ ರಸ್ತೆ ಬದಿಗೆ ಹರಿಸುವ ಒಂದು ಸಣ್ಣ ಗಮನ ಕೆಲವೊಬ್ಬರ ಜೀವನದಲ್ಲಿ ಭಾರಿ ಬದಲಾವಣೆ ತರಬಹುದು. ಇದಕ್ಕೆ ಉದಾಹರಣೆಯಾಗಿ ರಸ್ತೆಬದಿಯಲ್ಲಿ, ಬಿಸಿಲಿನಲ್ಲಿ, ಇಳಿವಯಸ್ಸಿನಲ್ಲಿ ಜೀವನ ನಿರ್ವಹಣೆಗೆ ಕಷ್ಟ ಪಡುತ್ತಿದ್ದ ವೃದ್ಧರನ್ನು ಗಮನಿಸಿ ಬರೆದ ಫೇಸ್‌ಬುಕ್‌ ಪೋಸ್ಟ್ ಆವರ ಬದುಕನ್ನು ಬದಲಾಯಿಸಿದೆ.

ಹೌದು, ಕನಕಪುರ ರಸ್ತೆಯ ಸಾರಕ್ಕಿ ಸಿಗ್ನಲ್ ಬಳಿ ಇರುವ ಜಾಕಿ ಶೋರೂಮ್ ಮುಂದೆ ಒಬ್ಬ ಅಜ್ಜ ಚಿಕ್ಕ ಚಿಕ್ಕ ಪ್ಯಾಕೇಟ್‌ಗಳಲ್ಲಿ ಗಿಡಗಳನ್ನು ಮಾರುತ್ತಿರುತ್ತಾರೆ. ಇವರು ಮಾರುವುದು ಎಲ್ಲಾ ಔಷಧಿಯ ಸಸ್ಯಗಳು ಎಂಬುದು ಗಮನಾರ್ಹ. ಆದರೆ ರಸ್ತೆಯಲ್ಲಿ ಓಡಾಡುವವರು ಇತ್ತ ಕಡೆ ಗಮನ ಇವರೆಡೆಗೆ ಹರಿಸುತ್ತಿದ್ದುದ್ದು ತುಂಬಾ ಕಡಿಮೆ.

ಈಗಿರುವಾಗ ಸುಡು ಬಿಸಿಲಿನಲ್ಲಿ ರಸ್ತೆಯಲ್ಲಿ ಕುಳಿತು ಗಿಡ ಮಾರುವ ಅಜ್ಜ, ಫೇಸ್‌ಬುಕ್ ಬಳಕೆದಾರ ಶಿವರಾಜ್ ಬಾಬು ಎಂಬುವರ ಕಣ್ಣಿಗೆ ಬಿದ್ದಿದ್ದಾರೆ. ಅಜ್ಜನ ಕುರಿತು 2 ಚಿತ್ರಗಳ ಜೊತೆಗೆ, ಸಹಾಯ ಮಾಡುವಂತೆ ಒಂದು ಮನವಿ ಪೋಸ್ಟ್ ಹಾಕಿದ್ದರು. ಅಜ್ಜನ ಬಳಿ ಇರುವ ಗಿಡಗಳ ಕುರಿತು, ರಸ್ತೆಯಲ್ಲಿ ಓಡಾಡುವಾಗ ಗಿಡ ತೆಗೆದುಕೊಂಡು ಸಹಾಯ ಮಾಡಿ ಎಂದಿದ್ದರು.

“ಕನಕಪುರ ರಸ್ತೆಯ ಸಾರಕ್ಕಿ ಸಿಗ್ನಲ್ ಬಳಿ ಇರುವ ಜಾಕಿ ಶೋರೂಮ್ ಮುಂದೆ ಕೂತಿರುವ ಈ  ವೃದ್ಧನ ಹೆಸರು    ರೇವಣ್ಣಸಿದ್ದಪ್ಪ. ಈ ವಯಸ್ಸಿನಲ್ಲೂ ಭಿಕ್ಷೆ ಬೇಡದೆ ದುಡಿಯುವ ಹುಮ್ಮಸ್ಸು. ಇತನ ಬಳಿ ಇರುವುದು ಔಷಧಿ ಗಿಡಗಳು ಹಾಗೂ ವಿವಿಧ  ರೀತಿಯ ಗಿಡಗಳು. ದೊಡ್ಡ ಪತ್ರೆ, ಅಲೋವೆರಾ, ಕಾಮ ಸಂಜೀವಿನಿ, ಬ್ರಹ್ಮ ಕಮಲ  ಇತ್ಯಾದಿ ಗಿಡಗಳು. ಈ ರಸ್ತೆಯ ಬಳಿ ನೀವು ಹೋಗುವಾಗ ದಯವಿಟ್ಟು ಈ ವೃದ್ಧರ ಬಳಿ ಇರುವ ಗಿಡಗಳನ್ನು ತೆಗೆದುಕೊಂಡು ಹೋಗಿ ಈತನಿಗೆ ಸಹಾಯ ಮಾಡಿ. ಕೇವಲ 10 ರಿಂದ 30 ರೂಪಾಯಿ ಮಾತ್ರ” ಎಂದು ಫೋಸ್ಟ್ ಶೇರ್‌ ಮಾಡಿದ್ದರು.

ಫೇಸ್‌ಬುಕ್ ವೃದ್ಧರಿಗೆ ಸಹಾಯ
PC: screenshot@Shivaraj Babu

ಜೊತೆಗೆ “ನಂಬಿಕಸ್ತರಿಂದ ಮೋಸ ಹೋದೆವು ಎಂದು ಪ್ರಾಮಾಣಿಕರು ಚಿಂತಿಸಬೇಕಾಗಿಲ್ಲ!!!  ಏಕೆಂದರೆ  ಇತಿಹಾಸದಲ್ಲಿ ಉಳಿದಿರುವುದು ಪ್ರಾಮಾಣಿಕರೆ ಹೊರತು ಮೋಸಗಾರರಲ್ಲ!!!” ಎಂದು ಶೀರ್ಷಿಕೆ ಕೂಡ ನೀಡಿದ್ದರು. ಈ ಪೋಸ್ಟ್ ಎರಡು ಸಾವಿರಕ್ಕೂ ಅಧಿಕ ಮಂದಿ ಶೇರ್ ಮಾಡಿದ್ದರು. ಇದರ ಪ್ರತಿಫಲ ಇಂದು ಅಜ್ಜನ ಸ್ವಂತ ಪುಟ್ಟ ಅಂಗಡಿ ಆರಂಭವಾಗಿದೆ.

ಫೇಸ್‌ಬುಕ್‌ನಲ್ಲಿ ವಿಷಯ ತಿಳಿದ ಅನೇಕ ಮಂದಿ ವೃದ್ಧರ ಸಹಾಯಕ್ಕೆ ಮುಂದಾಗಿದ್ದಾರೆ. ನೆರಳಿಗಾಗಿ ಒಬ್ಬರು ದೊಡ್ಡ ಛತ್ರಿ ಒದಗಿಸಿದರೇ, ಇನ್ನೋಬ್ಬರು ಕುಳಿತುಕೊಳ್ಳು ಚೇರ್, ಗಿಡಗಳನ್ನು ಇಟ್ಟುಕೊಳ್ಳಲು ಟೇಬಲ್ ಹೀಗೆ ಅಜ್ಜನ ಹೊಸ ಪುಟ್ಟ ಅಂಗಡಿ ನಿರ್ಮಾಣವಾಗಿದೆ.

ನಟಿ, ಸಾಮಾಜಿಕ ಕಾರ್ಯಕರ್ತೆ ಸಂಯುಕ್ತ ಹೊರನಾಡು ತಮ್ಮ Change Makers of Kanakapura Road ತಂಡದ ಜತೆಗೂಡಿ ಆ ಅಜ್ಜನಿಗೆ ಒಂದು ಕೆನೊಪಿ, ಟೇಬಲ್ ಮತ್ತಿತರ ವಸ್ತುಗಳನ್ನು ಒದಗಿಸಿದ್ದಷ್ಟೇ ಅಲ್ಲದೇ  ಸಂಯುಕ್ತ ಅವರು ಒಂದಷ್ಟು ಗಿಡಗಳನ್ನು ಖರೀದಿಸಿದ್ದಾರೆ. ನಾವು ಅಶ್ವಿನಿ ಎಂಬುವರ ಟ್ವೀಟ್ ಗಮನಿಸಿ ಸಹಾಯಕ್ಕೆ ಬಂದಿದ್ದಾಗಿ ಫೇಸ್‌ಬುಕ್ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

PC: screenshot@Samyukta Hornad

ಸದ್ಯ ಅಜ್ಜ ಖುಷಿಯಲ್ಲಿದ್ದಾರೆ. ವೃದ್ಧರ ಬಗ್ಗೆ ಫೇಸ್‌ಬುಕ್ ಪೋಸ್ಟ್ ಮಾಡಿದ್ದ ಶಿವರಾಜ್ ಬಾಬು ಪೋಸ್ಟ್ ಶೇರ್ ಮಾಡಿ, ಅಜ್ಜನಿಗೆ ಸಹಾಯ ಮಾಡಿದ ಎಲ್ಲಾ ಬೆಂಗಳೂರು ಜನತೆಗೆ ಧನ್ಯವಾದ ಎಂದಿದ್ದಾರೆ.

ಇದನ್ನೂ ಓದಿ: ಗುಡ್ ನ್ಯೂಸ್: ಬೊಲಿವಿಯಾದಲ್ಲಿ ಮಹಿಳಾ ಜನಪ್ರತಿನಿಧಿಗಳ ಸಂಖ್ಯೆ ಶೇ.50ಕ್ಕಿಂತಲೂ ಹೆಚ್ಚು!

“ಧನ್ಯವಾದ ಬೆಂಗಳೂರು…. ವೃದ್ದನಿಗೆ ಸಹಾಯ ಮಾಡಿದ ಪ್ರತಿಯೊಬ್ಬ ರಿಗೂ ಧನ್ಯವಾದಗಳು.. ಶೇರ್ ಮಾಡಿ. ಈ ವಿಷಯವನ್ನು ನಮ್ಮ ಬೆಂಗಳೂರು ಜನತೆಗೆ ತಲುಪಿಸಿ ಅವರಿಗೆ ಸಹಾಯ ಮಾಡಿದ ಪ್ರತಿಯೊಬ್ಬರಿಗೂ ಧನ್ಯವಾದಗಳು” ಎಂದಿದ್ದಾರೆ.

Shivaraj Babu
PC: screenshot@Shivaraj Babu

ಇಂತಹ ಪುಟ್ಟ ಪುಟ್ಟ ಪ್ರಯತ್ನಗಳು ಸಾಕು ನಮ್ಮ ನಡುವೆ ಇರುವ ಎಷ್ಟೋ ಜೀವಗಳಿಗೆ ಸಹಾಯ ಮಾಡಲು ಎನ್ನುತ್ತಾರೆ ನೆಟ್ಟಿಗರು. ನಮ್ಮೊಳಗೆ ಒಂದು ಮನಸ್ಸಿದ್ದರೇ, ಇನ್ನೊಬ್ಬರ ನೋವಿಗೆ ಆಸರೆಯಾಗುವ ಕೊಂಚ ಸಹನೆಯಿದ್ದರೇ ಸಾಕು, ನಾವು ದಾರಿಯಲ್ಲಿ ನೋಡುವ ಒಂದು ಚಿಕ್ಕ ಚಿತ್ರಪಟ ಕೂಡ ಮತ್ತೊಂದು ಆಯಾಮವನ್ನು ಸೃಷ್ಟಿಸುತ್ತದೆ.

ಫೇಸ್‌ಬುಕ್, ಟ್ವಿಟರ್‌ ಕೇವಲ ಮತ್ತೊಬ್ಬರನ್ನು ಟೀಕೆ ಮಾಡಲು, ಲೈಕ್, ಕಾಮೆಂಟ್‌ಗಳನ್ನು ಮಾಡಲು ಮಾತ್ರವಲ್ಲ ಈ ರೀತಿಯ ಜನಪರ ಕಾರ್ಯಗಳಿಗೂ ಬಳಕೆಯಾಗಲಿ ಎನ್ನುವುದೇ ವೃದ್ಧರಿಗೆ ಸಹಾಯ ಮಾಡಿದವರ ಅಭಿಪ್ರಾಯವಾಗಿದೆ.


ಇದನ್ನೂ ಓದಿ: ಮಹಿಳೆಯರು ಕೆಲಸಕ್ಕೆ ಹೋಗಿದ್ದರಿಂದ METOO ಆರಂಭ: ಮುಖೇಶ್ ಖನ್ನಾ ಹೇಳಿಕೆಗೆ ತೀವ್ರ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....