Homeಅಂತರಾಷ್ಟ್ರೀಯಗುಡ್ ನ್ಯೂಸ್: ಬೊಲಿವಿಯಾದಲ್ಲಿ ಮಹಿಳಾ ಜನಪ್ರತಿನಿಧಿಗಳ ಸಂಖ್ಯೆ ಶೇ.50ಕ್ಕಿಂತಲೂ ಹೆಚ್ಚು!

ಗುಡ್ ನ್ಯೂಸ್: ಬೊಲಿವಿಯಾದಲ್ಲಿ ಮಹಿಳಾ ಜನಪ್ರತಿನಿಧಿಗಳ ಸಂಖ್ಯೆ ಶೇ.50ಕ್ಕಿಂತಲೂ ಹೆಚ್ಚು!

ರುವಾಂಡಾ ಸಂಸತ್ತಿನಲ್ಲಿ ಮಹಿಳಾ ಪ್ರಾತಿನಿಧ್ಯವು ಅತ್ಯುತ್ತಮ ದಾಖಲೆಯನ್ನು ಹೊಂದಿದೆ. ಅಲ್ಲಿ ಪ್ರಸ್ತುತ ಸುಮಾರು ಮೂರನೇ ಎರಡರಷ್ಟು ಸ್ಥಾನಗಳನ್ನು ಮಹಿಳೆಯರು ಹೊಂದಿದ್ದಾರೆ.

- Advertisement -
- Advertisement -

‘ಆಕಾಶದ ಅರ್ಧ ನಕ್ಷತ್ರಗಳು ನಾವು. ಸಿಡಿದರೆ ಅಗ್ನಿಯ ಕಿಡಿಗಳಾಗುವೆವು’ ಎಂಬುದು ಮಹಿಳಾ ಚಳವಳಿಯ ಘೋಷವಾಕ್ಯಗಳಲ್ಲೊಂದು. ಪ್ರಪಂಚದ ಜನಸಂಖ್ಯೆಯಲ್ಲಿ ಅರ್ಧದಷ್ಟಿರುವ ಮಹಿಳೆಯರು ಸಮಾಜಕ್ಕೆ ಸಮಾನ ಕೊಡುಗೆ ನೀಡಿದರೂ ಸಹ ಬಹುತೇಕ ಕ್ಷೇತ್ರಗಳಲ್ಲಿ ಅವರ ಪಾತ್ರಿನಿಧ್ಯ ತೀರಾ ಕಡಿಮೆ ಇದೆ. ಸಮಾಜ, ಸಂಪತ್ತು ಮತ್ತು ಸರ್ಕಾರಗಳಲ್ಲಿ ಸಮಪಾಲಿನ ಬೇಡಿಕೆಗೆ ಶತಮಾನದ ಇತಿಹಾಸವಿದ್ದರೂ ಸಹ ಅದು ಕನಸಾಗಿಯೇ ಉಳಿದಿದೆ. ಇಂತಹ ಸಂಕಷ್ಟದ ದಿನಗಳಲ್ಲಿಯು ಸಹ ಕೆಲ ಬೆಳಕಿನ ಕಿರಣಗಳು ಗೋಚರಿಸುತ್ತಿವೆ. ಅಂತಹ ಒಂದು ವಿಶೇಷ ವರದಿ ಇಲ್ಲಿದೆ.

ಬೊಲಿವಿಯಾದಲ್ಲಿ ನಡೆದ ಇತ್ತೀಚಿನ ಚುನಾವಣೆಗಳಲ್ಲಿ ಸಮಾಜವಾದಿ ಪಕ್ಷಗಳನ್ನು ಮತ್ತೆ ಅಧಿಕಾರಕ್ಕೆ ತಂದಿರುವುದು ಮಾತ್ರವಲ್ಲದೆ ಅಲ್ಲಿನ ಎರಡೂ ಸದನಗಳಲ್ಲಿ ಪುರುಷರಿಗಿಂತ ಮಹಿಳೆಯರೇ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಬೊಲಿವಿಯಾದ ಅಧ್ಯಕ್ಷೀಯ ಚುನಾವಣೆಯಲ್ಲಿ ಇವೊ ಮೊರೇಲ್ಸ್ ರವರ ಮೂವ್‌ಮೆಂಟ್ ಫಾರ್ ಸೋಷಿಯಲಿಸಂ (ಎಂಎಎಸ್) ಪಕ್ಷ ಭರ್ಜರಿ ಗೆಲುವು ಸಾಧಿಸಿದೆ. ಟೆಲಿಸೂರ್ ವರದಿ ಪ್ರಕಾರ, ಸೆನೆಟ್‌ನಲ್ಲಿ 21 ಸ್ಥಾನಗಳೊಂದಿಗೆ MAS ಬಹುಮತ ಸಾಧಿಸಿದೆ, ಅದರಲ್ಲಿ 10 ಸ್ಥಾನಗಳನ್ನು ಮಹಿಳೆಯರು ಆಕ್ರಮಿಸಿಕೊಂಡಿದ್ದಾರೆ. ಅದೇ ರೀತಿ ಸಿವಿಕ್ ಕಮ್ಯೂನಿಟಿ ಪಕ್ಷವು 11 ಸ್ಥಾನಗಳನ್ನು ಗೆದ್ದರೆ, ಅದರಲ್ಲಿ 07 ಮಹಿಳೆಯರು ಸೇರಿದ್ದಾರೆ. ಕ್ರಿಮೋಸ್ (ವಿ ಬಿಲೀವ್) ಪಕ್ಷವು ನಾಲ್ಕು ಸ್ಥಾನಗಳನ್ನು ಗೆದ್ದಿದ್ದು, ಅವರಲ್ಲಿ ಇಬ್ಬರು ಮಹಿಳೆಯಾಗಿದ್ದಾರೆ.

ಅಲ್ಲಿಗೆ ಸೆನಟ್ ನಲ್ಲಿ ಒಟ್ಟು 36 ಸ್ಥಾನಗಳಲ್ಲಿ 19 ಸ್ಥಾನಗಳು ಮಹಿಳೆಯರ ಪಾಲಾಗಿವೆ. ಮತ್ತೊಂದು ವಿಧಾನಸಭಾ ಚೆಂಬರ್‌ನಲ್ಲಿ ಶೇ.48.33 ರಷ್ಟು ಸ್ಥಾನಗಳಲ್ಲಿ ಪುರುಷರು ಜಯಗಳಿಸಿದರೆ, ಶೇ. 51.6 ರಷ್ಟು ಸೀಟುಗಳನ್ನು ಮಹಿಳೆಯರು ಹೊಂದಿದ್ದಾರೆ. ಸೆನೆಟ್ ಮತ್ತು ಚೇಂಬರ್ ಎರಡೂ ಸೇರಿದರೆ ಬೊಲಿವಿಯಾ ಮಹಿಳಾ ಪ್ರತಿನಿಧಿಗಳ ಸಂಖ್ಯೆ ಶೇ.53.1%.

ಇದು ಹೇಗಾಯಿತು?

ಬೊಲಿವಿಯನ್ ರಾಜಕೀಯದಲ್ಲಿ ಮಹಿಳಾ ಪ್ರಾತಿನಿಧ್ಯ ಹೆಚ್ಚಿರುವುದು ಹೊಸ ವಿದ್ಯಮಾನವಲ್ಲ. 2014 ರ ಚುನಾವಣೆಗಳು ಐತಿಹಾಸಿಕವಾಗಿದ್ದು, ಆಗಲೇ ವಿಧಾನಸಭೆಯಲ್ಲಿ 51% ಮಹಿಳಾ ಪ್ರಾತಿನಿಧ್ಯವಿದ್ದಿತು.

ಬೊಲಿವಿಯಾದ ರಾಜಕೀಯ ಸಂವಿಧಾನದ (2009) ಅನುಮೋದನೆ, ವಿವಿಧ ಮಹಿಳಾ ಚಳುವಳಿಗಳ ವ್ಯಾಪಕ ಮತ್ತು ನಿರಂತರ ಭಾಗವಹಿಸುವಿಕೆ, ಸಮಾನತೆ ಮತ್ತು ಪರ್ಯಾಯ ತತ್ವಗಳಿಗೆ ಹೆಚ್ಚಿನ ಮಾನ್ಯತೆಯು  ಮಹಿಳೆಯರು ಮತ್ತು ಪುರುಷರ ನಡುವೆ ಸಮಾನ ಭಾಗವಹಿಸುವಿಕೆಯನ್ನು ಬಲಪಡಿಸಲು ದಾರಿ ಮಾಡಿಕೊಟ್ಟವು. 32 ವರ್ಷಗಳ ಪ್ರಜಾಪ್ರಭುತ್ವದ ನಂತರ 166 ವಿಧಾನಸಭಾ ಸದಸ್ಯರಲ್ಲಿ 82 ಮಹಿಳೆಯರ ಆಯ್ಕೆ ಬೊಲಿವಿಯನ್ ಇತಿಹಾಸದಲ್ಲಿಯೇ ಅತಿ ಹೆಚ್ಚು. 1982 ರಲ್ಲಿ ದೇಶದ ಶಾಸಕಾಂಗದಲ್ಲಿ ಶೇಕಡಾ 2 ರಷ್ಟು ಮಹಿಳಾ ಪ್ರತಿನಿಧಿಗಳನ್ನು ಹೊಂದಿರಲಿಲ್ಲ ಎಂದರೆ ನೀವು ನಂಬಲೇಬೇಕು.

ಅತಿ ಹೆಚ್ಚು ಮಹಿಳಾ ಪ್ರಾತಿನಿದ್ಯ ಹೊಂದಿರುವ ಇತರ ದೇಶಗಳು

ಅಂತರ-ಸಂಸದೀಯ ಒಕ್ಕೂಟ ಮತ್ತು ವಿಶ್ವಸಂಸ್ಥೆಯ ರಾಜಕೀಯದಲ್ಲಿ ಮಹಿಳೆಯರು- 2020 ನಕ್ಷೆಯ ಪ್ರಕಾರ, ಅತಿ ಹೆಚ್ಚು ಮಹಿಳಾ ಜನಪ್ರತಿನಿಧ್ಯದ ದೃಷ್ಟಿಯಿಂದ ಬೊಲಿವಿಯಾವು ರುವಾಂಡಾ ಮತ್ತು ಕ್ಯೂಬಾ ದೇಶಗಳ ನಂತರ ವಿಶ್ವದ ಮೂರನೇ ಸ್ಥಾನದಲ್ಲಿದೆ.

ರುವಾಂಡಾ ಸಂಸತ್ತಿನಲ್ಲಿ ಮಹಿಳಾ ಪ್ರಾತಿನಿಧ್ಯವು ಅತ್ಯುತ್ತಮ ದಾಖಲೆಯನ್ನು ಹೊಂದಿದೆ. ಅಲ್ಲಿ ಪ್ರಸ್ತುತ ಸುಮಾರು ಮೂರನೇ ಎರಡರಷ್ಟು ಸ್ಥಾನಗಳನ್ನು ಮಹಿಳೆಯರು ಹೊಂದಿದ್ದಾರೆ.

ಕ್ಯೂಬಾದಲ್ಲಿಯೂ ಸಹ 53.2% ಮಹಿಳಾ ಪ್ರತಿನಿಧಿಗಳಿದ್ದಾರೆ. ಮೂರನೇ ಸ್ಥಾನದಲ್ಲಿ ಬೊಲಿವಿಯಾ (53.1%) ಇದೆ. ನಂತರದ ಸ್ಥಾನಗಳಲ್ಲಿ ಮೆಕ್ಸಿಕೊ (48.2%), ಗ್ರೆನಡಾ (46.7%), ನಿಕರಾಗುವಾ (45.7%), ಕೋಸ್ಟರಿಕಾ (45.6%), ನಮೀಬಿಯಾ (46.2%), ದಕ್ಷಿಣ ಆಫ್ರಿಕಾ (42.7%) ಮತ್ತು ಸ್ವೀಡನ್ (46.1%) ಇವೆ.

ನಾರ್ಡಿಕ್ ದೇಶಗಳ ಗುಂಪು 42.3% ಸ್ಥಾನಗಳೊಂದಿಗೆ ಮಹಿಳೆಯರ ಪ್ರಾತಿನಿಧ್ಯದಲ್ಲಿ ಮುಂಚೂಣಿಯಲ್ಲಿದೆ. ಅಮೆರಿಕ (30.3%), ಯುರೋಪ್ (26.5%), ಮತ್ತು ಆಫ್ರಿಕಾ ದೇಶಗಳಲ್ಲಿ (23.8%) ಮಹಿಳಾ ಪ್ರಾತಿನಿಧ್ಯವಿದೆ. ಮಹಿಳೆಯರ ಪ್ರಾತಿನಿಧ್ಯದಲ್ಲಿ ಏಷ್ಯಾ (19.7%) ಮತ್ತು ಅರಬ್ ರಾಜ್ಯಗಳು (18.7%) ಜಾಗತಿಕ ಸರಾಸರಿಗಿಂತ ಹಿಂದುಳಿದಿವೆ. ಆದರೆ ಪೆಸಿಫಿಕ್ ರಾಷ್ಟ್ರಗಳು (15.5%) ಅತ್ಯಂತ ಕೆಟ್ಟ ದಾಖಲೆಯನ್ನು ಹೊಂದಿವೆ.

ರೈತರು, ಮಹಿಳೆಯರು, ಆದಿವಾಸಿಗಳು, ವಿವಿಧ ಸಮುದಾಯದ ಮುಖಂಡರು, ಶಿಕ್ಷಣ ತಜ್ಞರಂತಹ ವೈವಿಧ್ಯಮಯ ಕ್ಷೇತ್ರಗಳ ವ್ಯಕ್ತಿಗಳ ಪ್ರಾತಿನಿಧ್ಯವು ಹೆಚ್ಚು ಸಮಾನ ಸಮಾಜದ ಅಭಿವೃದ್ಧಿಯನ್ನು ಖಾತ್ರಿಗೊಳಿಸುತ್ತದೆ. ಮಹಿಳೆಯರ ಮೇಲಿನ ದಬ್ಬಾಳಿಕೆ ಮತ್ತು ಲಿಂಗ ಆಧಾರಿತ ಹಿಂಸಾಚಾರವನ್ನು ತಡೆಯಲು ನಿಯಮಗಳನ್ನು ರೂಪಿಸಲು ಮಹಿಳೆಯರ ಪ್ರಾತಿನಿಧ್ಯ ಅಗತ್ಯವಾಗಿದೆ.


ಇದನ್ನೂ ಓದಿ: ಸ್ವಿಟ್ಜರ್ ಲೆಂಡ್ ನ ಲಕ್ಷಾಂತರ ಮಹಿಳೆಯರು ಒಮ್ಮೆಗೆ ಬೀದಿಗಿಳಿದಿದ್ದು ಏಕೆ ಗೊತ್ತಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...