Homeಅಂತರಾಷ್ಟ್ರೀಯಗುಡ್ ನ್ಯೂಸ್: ಬೊಲಿವಿಯಾದಲ್ಲಿ ಮಹಿಳಾ ಜನಪ್ರತಿನಿಧಿಗಳ ಸಂಖ್ಯೆ ಶೇ.50ಕ್ಕಿಂತಲೂ ಹೆಚ್ಚು!

ಗುಡ್ ನ್ಯೂಸ್: ಬೊಲಿವಿಯಾದಲ್ಲಿ ಮಹಿಳಾ ಜನಪ್ರತಿನಿಧಿಗಳ ಸಂಖ್ಯೆ ಶೇ.50ಕ್ಕಿಂತಲೂ ಹೆಚ್ಚು!

ರುವಾಂಡಾ ಸಂಸತ್ತಿನಲ್ಲಿ ಮಹಿಳಾ ಪ್ರಾತಿನಿಧ್ಯವು ಅತ್ಯುತ್ತಮ ದಾಖಲೆಯನ್ನು ಹೊಂದಿದೆ. ಅಲ್ಲಿ ಪ್ರಸ್ತುತ ಸುಮಾರು ಮೂರನೇ ಎರಡರಷ್ಟು ಸ್ಥಾನಗಳನ್ನು ಮಹಿಳೆಯರು ಹೊಂದಿದ್ದಾರೆ.

- Advertisement -
- Advertisement -

‘ಆಕಾಶದ ಅರ್ಧ ನಕ್ಷತ್ರಗಳು ನಾವು. ಸಿಡಿದರೆ ಅಗ್ನಿಯ ಕಿಡಿಗಳಾಗುವೆವು’ ಎಂಬುದು ಮಹಿಳಾ ಚಳವಳಿಯ ಘೋಷವಾಕ್ಯಗಳಲ್ಲೊಂದು. ಪ್ರಪಂಚದ ಜನಸಂಖ್ಯೆಯಲ್ಲಿ ಅರ್ಧದಷ್ಟಿರುವ ಮಹಿಳೆಯರು ಸಮಾಜಕ್ಕೆ ಸಮಾನ ಕೊಡುಗೆ ನೀಡಿದರೂ ಸಹ ಬಹುತೇಕ ಕ್ಷೇತ್ರಗಳಲ್ಲಿ ಅವರ ಪಾತ್ರಿನಿಧ್ಯ ತೀರಾ ಕಡಿಮೆ ಇದೆ. ಸಮಾಜ, ಸಂಪತ್ತು ಮತ್ತು ಸರ್ಕಾರಗಳಲ್ಲಿ ಸಮಪಾಲಿನ ಬೇಡಿಕೆಗೆ ಶತಮಾನದ ಇತಿಹಾಸವಿದ್ದರೂ ಸಹ ಅದು ಕನಸಾಗಿಯೇ ಉಳಿದಿದೆ. ಇಂತಹ ಸಂಕಷ್ಟದ ದಿನಗಳಲ್ಲಿಯು ಸಹ ಕೆಲ ಬೆಳಕಿನ ಕಿರಣಗಳು ಗೋಚರಿಸುತ್ತಿವೆ. ಅಂತಹ ಒಂದು ವಿಶೇಷ ವರದಿ ಇಲ್ಲಿದೆ.

ಬೊಲಿವಿಯಾದಲ್ಲಿ ನಡೆದ ಇತ್ತೀಚಿನ ಚುನಾವಣೆಗಳಲ್ಲಿ ಸಮಾಜವಾದಿ ಪಕ್ಷಗಳನ್ನು ಮತ್ತೆ ಅಧಿಕಾರಕ್ಕೆ ತಂದಿರುವುದು ಮಾತ್ರವಲ್ಲದೆ ಅಲ್ಲಿನ ಎರಡೂ ಸದನಗಳಲ್ಲಿ ಪುರುಷರಿಗಿಂತ ಮಹಿಳೆಯರೇ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಬೊಲಿವಿಯಾದ ಅಧ್ಯಕ್ಷೀಯ ಚುನಾವಣೆಯಲ್ಲಿ ಇವೊ ಮೊರೇಲ್ಸ್ ರವರ ಮೂವ್‌ಮೆಂಟ್ ಫಾರ್ ಸೋಷಿಯಲಿಸಂ (ಎಂಎಎಸ್) ಪಕ್ಷ ಭರ್ಜರಿ ಗೆಲುವು ಸಾಧಿಸಿದೆ. ಟೆಲಿಸೂರ್ ವರದಿ ಪ್ರಕಾರ, ಸೆನೆಟ್‌ನಲ್ಲಿ 21 ಸ್ಥಾನಗಳೊಂದಿಗೆ MAS ಬಹುಮತ ಸಾಧಿಸಿದೆ, ಅದರಲ್ಲಿ 10 ಸ್ಥಾನಗಳನ್ನು ಮಹಿಳೆಯರು ಆಕ್ರಮಿಸಿಕೊಂಡಿದ್ದಾರೆ. ಅದೇ ರೀತಿ ಸಿವಿಕ್ ಕಮ್ಯೂನಿಟಿ ಪಕ್ಷವು 11 ಸ್ಥಾನಗಳನ್ನು ಗೆದ್ದರೆ, ಅದರಲ್ಲಿ 07 ಮಹಿಳೆಯರು ಸೇರಿದ್ದಾರೆ. ಕ್ರಿಮೋಸ್ (ವಿ ಬಿಲೀವ್) ಪಕ್ಷವು ನಾಲ್ಕು ಸ್ಥಾನಗಳನ್ನು ಗೆದ್ದಿದ್ದು, ಅವರಲ್ಲಿ ಇಬ್ಬರು ಮಹಿಳೆಯಾಗಿದ್ದಾರೆ.

ಅಲ್ಲಿಗೆ ಸೆನಟ್ ನಲ್ಲಿ ಒಟ್ಟು 36 ಸ್ಥಾನಗಳಲ್ಲಿ 19 ಸ್ಥಾನಗಳು ಮಹಿಳೆಯರ ಪಾಲಾಗಿವೆ. ಮತ್ತೊಂದು ವಿಧಾನಸಭಾ ಚೆಂಬರ್‌ನಲ್ಲಿ ಶೇ.48.33 ರಷ್ಟು ಸ್ಥಾನಗಳಲ್ಲಿ ಪುರುಷರು ಜಯಗಳಿಸಿದರೆ, ಶೇ. 51.6 ರಷ್ಟು ಸೀಟುಗಳನ್ನು ಮಹಿಳೆಯರು ಹೊಂದಿದ್ದಾರೆ. ಸೆನೆಟ್ ಮತ್ತು ಚೇಂಬರ್ ಎರಡೂ ಸೇರಿದರೆ ಬೊಲಿವಿಯಾ ಮಹಿಳಾ ಪ್ರತಿನಿಧಿಗಳ ಸಂಖ್ಯೆ ಶೇ.53.1%.

ಇದು ಹೇಗಾಯಿತು?

ಬೊಲಿವಿಯನ್ ರಾಜಕೀಯದಲ್ಲಿ ಮಹಿಳಾ ಪ್ರಾತಿನಿಧ್ಯ ಹೆಚ್ಚಿರುವುದು ಹೊಸ ವಿದ್ಯಮಾನವಲ್ಲ. 2014 ರ ಚುನಾವಣೆಗಳು ಐತಿಹಾಸಿಕವಾಗಿದ್ದು, ಆಗಲೇ ವಿಧಾನಸಭೆಯಲ್ಲಿ 51% ಮಹಿಳಾ ಪ್ರಾತಿನಿಧ್ಯವಿದ್ದಿತು.

ಬೊಲಿವಿಯಾದ ರಾಜಕೀಯ ಸಂವಿಧಾನದ (2009) ಅನುಮೋದನೆ, ವಿವಿಧ ಮಹಿಳಾ ಚಳುವಳಿಗಳ ವ್ಯಾಪಕ ಮತ್ತು ನಿರಂತರ ಭಾಗವಹಿಸುವಿಕೆ, ಸಮಾನತೆ ಮತ್ತು ಪರ್ಯಾಯ ತತ್ವಗಳಿಗೆ ಹೆಚ್ಚಿನ ಮಾನ್ಯತೆಯು  ಮಹಿಳೆಯರು ಮತ್ತು ಪುರುಷರ ನಡುವೆ ಸಮಾನ ಭಾಗವಹಿಸುವಿಕೆಯನ್ನು ಬಲಪಡಿಸಲು ದಾರಿ ಮಾಡಿಕೊಟ್ಟವು. 32 ವರ್ಷಗಳ ಪ್ರಜಾಪ್ರಭುತ್ವದ ನಂತರ 166 ವಿಧಾನಸಭಾ ಸದಸ್ಯರಲ್ಲಿ 82 ಮಹಿಳೆಯರ ಆಯ್ಕೆ ಬೊಲಿವಿಯನ್ ಇತಿಹಾಸದಲ್ಲಿಯೇ ಅತಿ ಹೆಚ್ಚು. 1982 ರಲ್ಲಿ ದೇಶದ ಶಾಸಕಾಂಗದಲ್ಲಿ ಶೇಕಡಾ 2 ರಷ್ಟು ಮಹಿಳಾ ಪ್ರತಿನಿಧಿಗಳನ್ನು ಹೊಂದಿರಲಿಲ್ಲ ಎಂದರೆ ನೀವು ನಂಬಲೇಬೇಕು.

ಅತಿ ಹೆಚ್ಚು ಮಹಿಳಾ ಪ್ರಾತಿನಿದ್ಯ ಹೊಂದಿರುವ ಇತರ ದೇಶಗಳು

ಅಂತರ-ಸಂಸದೀಯ ಒಕ್ಕೂಟ ಮತ್ತು ವಿಶ್ವಸಂಸ್ಥೆಯ ರಾಜಕೀಯದಲ್ಲಿ ಮಹಿಳೆಯರು- 2020 ನಕ್ಷೆಯ ಪ್ರಕಾರ, ಅತಿ ಹೆಚ್ಚು ಮಹಿಳಾ ಜನಪ್ರತಿನಿಧ್ಯದ ದೃಷ್ಟಿಯಿಂದ ಬೊಲಿವಿಯಾವು ರುವಾಂಡಾ ಮತ್ತು ಕ್ಯೂಬಾ ದೇಶಗಳ ನಂತರ ವಿಶ್ವದ ಮೂರನೇ ಸ್ಥಾನದಲ್ಲಿದೆ.

ರುವಾಂಡಾ ಸಂಸತ್ತಿನಲ್ಲಿ ಮಹಿಳಾ ಪ್ರಾತಿನಿಧ್ಯವು ಅತ್ಯುತ್ತಮ ದಾಖಲೆಯನ್ನು ಹೊಂದಿದೆ. ಅಲ್ಲಿ ಪ್ರಸ್ತುತ ಸುಮಾರು ಮೂರನೇ ಎರಡರಷ್ಟು ಸ್ಥಾನಗಳನ್ನು ಮಹಿಳೆಯರು ಹೊಂದಿದ್ದಾರೆ.

ಕ್ಯೂಬಾದಲ್ಲಿಯೂ ಸಹ 53.2% ಮಹಿಳಾ ಪ್ರತಿನಿಧಿಗಳಿದ್ದಾರೆ. ಮೂರನೇ ಸ್ಥಾನದಲ್ಲಿ ಬೊಲಿವಿಯಾ (53.1%) ಇದೆ. ನಂತರದ ಸ್ಥಾನಗಳಲ್ಲಿ ಮೆಕ್ಸಿಕೊ (48.2%), ಗ್ರೆನಡಾ (46.7%), ನಿಕರಾಗುವಾ (45.7%), ಕೋಸ್ಟರಿಕಾ (45.6%), ನಮೀಬಿಯಾ (46.2%), ದಕ್ಷಿಣ ಆಫ್ರಿಕಾ (42.7%) ಮತ್ತು ಸ್ವೀಡನ್ (46.1%) ಇವೆ.

ನಾರ್ಡಿಕ್ ದೇಶಗಳ ಗುಂಪು 42.3% ಸ್ಥಾನಗಳೊಂದಿಗೆ ಮಹಿಳೆಯರ ಪ್ರಾತಿನಿಧ್ಯದಲ್ಲಿ ಮುಂಚೂಣಿಯಲ್ಲಿದೆ. ಅಮೆರಿಕ (30.3%), ಯುರೋಪ್ (26.5%), ಮತ್ತು ಆಫ್ರಿಕಾ ದೇಶಗಳಲ್ಲಿ (23.8%) ಮಹಿಳಾ ಪ್ರಾತಿನಿಧ್ಯವಿದೆ. ಮಹಿಳೆಯರ ಪ್ರಾತಿನಿಧ್ಯದಲ್ಲಿ ಏಷ್ಯಾ (19.7%) ಮತ್ತು ಅರಬ್ ರಾಜ್ಯಗಳು (18.7%) ಜಾಗತಿಕ ಸರಾಸರಿಗಿಂತ ಹಿಂದುಳಿದಿವೆ. ಆದರೆ ಪೆಸಿಫಿಕ್ ರಾಷ್ಟ್ರಗಳು (15.5%) ಅತ್ಯಂತ ಕೆಟ್ಟ ದಾಖಲೆಯನ್ನು ಹೊಂದಿವೆ.

ರೈತರು, ಮಹಿಳೆಯರು, ಆದಿವಾಸಿಗಳು, ವಿವಿಧ ಸಮುದಾಯದ ಮುಖಂಡರು, ಶಿಕ್ಷಣ ತಜ್ಞರಂತಹ ವೈವಿಧ್ಯಮಯ ಕ್ಷೇತ್ರಗಳ ವ್ಯಕ್ತಿಗಳ ಪ್ರಾತಿನಿಧ್ಯವು ಹೆಚ್ಚು ಸಮಾನ ಸಮಾಜದ ಅಭಿವೃದ್ಧಿಯನ್ನು ಖಾತ್ರಿಗೊಳಿಸುತ್ತದೆ. ಮಹಿಳೆಯರ ಮೇಲಿನ ದಬ್ಬಾಳಿಕೆ ಮತ್ತು ಲಿಂಗ ಆಧಾರಿತ ಹಿಂಸಾಚಾರವನ್ನು ತಡೆಯಲು ನಿಯಮಗಳನ್ನು ರೂಪಿಸಲು ಮಹಿಳೆಯರ ಪ್ರಾತಿನಿಧ್ಯ ಅಗತ್ಯವಾಗಿದೆ.


ಇದನ್ನೂ ಓದಿ: ಸ್ವಿಟ್ಜರ್ ಲೆಂಡ್ ನ ಲಕ್ಷಾಂತರ ಮಹಿಳೆಯರು ಒಮ್ಮೆಗೆ ಬೀದಿಗಿಳಿದಿದ್ದು ಏಕೆ ಗೊತ್ತಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...