Homeಅಂತರಾಷ್ಟ್ರೀಯಗುಡ್ ನ್ಯೂಸ್: ಬೊಲಿವಿಯಾದಲ್ಲಿ ಮಹಿಳಾ ಜನಪ್ರತಿನಿಧಿಗಳ ಸಂಖ್ಯೆ ಶೇ.50ಕ್ಕಿಂತಲೂ ಹೆಚ್ಚು!

ಗುಡ್ ನ್ಯೂಸ್: ಬೊಲಿವಿಯಾದಲ್ಲಿ ಮಹಿಳಾ ಜನಪ್ರತಿನಿಧಿಗಳ ಸಂಖ್ಯೆ ಶೇ.50ಕ್ಕಿಂತಲೂ ಹೆಚ್ಚು!

ರುವಾಂಡಾ ಸಂಸತ್ತಿನಲ್ಲಿ ಮಹಿಳಾ ಪ್ರಾತಿನಿಧ್ಯವು ಅತ್ಯುತ್ತಮ ದಾಖಲೆಯನ್ನು ಹೊಂದಿದೆ. ಅಲ್ಲಿ ಪ್ರಸ್ತುತ ಸುಮಾರು ಮೂರನೇ ಎರಡರಷ್ಟು ಸ್ಥಾನಗಳನ್ನು ಮಹಿಳೆಯರು ಹೊಂದಿದ್ದಾರೆ.

- Advertisement -
- Advertisement -

‘ಆಕಾಶದ ಅರ್ಧ ನಕ್ಷತ್ರಗಳು ನಾವು. ಸಿಡಿದರೆ ಅಗ್ನಿಯ ಕಿಡಿಗಳಾಗುವೆವು’ ಎಂಬುದು ಮಹಿಳಾ ಚಳವಳಿಯ ಘೋಷವಾಕ್ಯಗಳಲ್ಲೊಂದು. ಪ್ರಪಂಚದ ಜನಸಂಖ್ಯೆಯಲ್ಲಿ ಅರ್ಧದಷ್ಟಿರುವ ಮಹಿಳೆಯರು ಸಮಾಜಕ್ಕೆ ಸಮಾನ ಕೊಡುಗೆ ನೀಡಿದರೂ ಸಹ ಬಹುತೇಕ ಕ್ಷೇತ್ರಗಳಲ್ಲಿ ಅವರ ಪಾತ್ರಿನಿಧ್ಯ ತೀರಾ ಕಡಿಮೆ ಇದೆ. ಸಮಾಜ, ಸಂಪತ್ತು ಮತ್ತು ಸರ್ಕಾರಗಳಲ್ಲಿ ಸಮಪಾಲಿನ ಬೇಡಿಕೆಗೆ ಶತಮಾನದ ಇತಿಹಾಸವಿದ್ದರೂ ಸಹ ಅದು ಕನಸಾಗಿಯೇ ಉಳಿದಿದೆ. ಇಂತಹ ಸಂಕಷ್ಟದ ದಿನಗಳಲ್ಲಿಯು ಸಹ ಕೆಲ ಬೆಳಕಿನ ಕಿರಣಗಳು ಗೋಚರಿಸುತ್ತಿವೆ. ಅಂತಹ ಒಂದು ವಿಶೇಷ ವರದಿ ಇಲ್ಲಿದೆ.

ಬೊಲಿವಿಯಾದಲ್ಲಿ ನಡೆದ ಇತ್ತೀಚಿನ ಚುನಾವಣೆಗಳಲ್ಲಿ ಸಮಾಜವಾದಿ ಪಕ್ಷಗಳನ್ನು ಮತ್ತೆ ಅಧಿಕಾರಕ್ಕೆ ತಂದಿರುವುದು ಮಾತ್ರವಲ್ಲದೆ ಅಲ್ಲಿನ ಎರಡೂ ಸದನಗಳಲ್ಲಿ ಪುರುಷರಿಗಿಂತ ಮಹಿಳೆಯರೇ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಬೊಲಿವಿಯಾದ ಅಧ್ಯಕ್ಷೀಯ ಚುನಾವಣೆಯಲ್ಲಿ ಇವೊ ಮೊರೇಲ್ಸ್ ರವರ ಮೂವ್‌ಮೆಂಟ್ ಫಾರ್ ಸೋಷಿಯಲಿಸಂ (ಎಂಎಎಸ್) ಪಕ್ಷ ಭರ್ಜರಿ ಗೆಲುವು ಸಾಧಿಸಿದೆ. ಟೆಲಿಸೂರ್ ವರದಿ ಪ್ರಕಾರ, ಸೆನೆಟ್‌ನಲ್ಲಿ 21 ಸ್ಥಾನಗಳೊಂದಿಗೆ MAS ಬಹುಮತ ಸಾಧಿಸಿದೆ, ಅದರಲ್ಲಿ 10 ಸ್ಥಾನಗಳನ್ನು ಮಹಿಳೆಯರು ಆಕ್ರಮಿಸಿಕೊಂಡಿದ್ದಾರೆ. ಅದೇ ರೀತಿ ಸಿವಿಕ್ ಕಮ್ಯೂನಿಟಿ ಪಕ್ಷವು 11 ಸ್ಥಾನಗಳನ್ನು ಗೆದ್ದರೆ, ಅದರಲ್ಲಿ 07 ಮಹಿಳೆಯರು ಸೇರಿದ್ದಾರೆ. ಕ್ರಿಮೋಸ್ (ವಿ ಬಿಲೀವ್) ಪಕ್ಷವು ನಾಲ್ಕು ಸ್ಥಾನಗಳನ್ನು ಗೆದ್ದಿದ್ದು, ಅವರಲ್ಲಿ ಇಬ್ಬರು ಮಹಿಳೆಯಾಗಿದ್ದಾರೆ.

ಅಲ್ಲಿಗೆ ಸೆನಟ್ ನಲ್ಲಿ ಒಟ್ಟು 36 ಸ್ಥಾನಗಳಲ್ಲಿ 19 ಸ್ಥಾನಗಳು ಮಹಿಳೆಯರ ಪಾಲಾಗಿವೆ. ಮತ್ತೊಂದು ವಿಧಾನಸಭಾ ಚೆಂಬರ್‌ನಲ್ಲಿ ಶೇ.48.33 ರಷ್ಟು ಸ್ಥಾನಗಳಲ್ಲಿ ಪುರುಷರು ಜಯಗಳಿಸಿದರೆ, ಶೇ. 51.6 ರಷ್ಟು ಸೀಟುಗಳನ್ನು ಮಹಿಳೆಯರು ಹೊಂದಿದ್ದಾರೆ. ಸೆನೆಟ್ ಮತ್ತು ಚೇಂಬರ್ ಎರಡೂ ಸೇರಿದರೆ ಬೊಲಿವಿಯಾ ಮಹಿಳಾ ಪ್ರತಿನಿಧಿಗಳ ಸಂಖ್ಯೆ ಶೇ.53.1%.

ಇದು ಹೇಗಾಯಿತು?

ಬೊಲಿವಿಯನ್ ರಾಜಕೀಯದಲ್ಲಿ ಮಹಿಳಾ ಪ್ರಾತಿನಿಧ್ಯ ಹೆಚ್ಚಿರುವುದು ಹೊಸ ವಿದ್ಯಮಾನವಲ್ಲ. 2014 ರ ಚುನಾವಣೆಗಳು ಐತಿಹಾಸಿಕವಾಗಿದ್ದು, ಆಗಲೇ ವಿಧಾನಸಭೆಯಲ್ಲಿ 51% ಮಹಿಳಾ ಪ್ರಾತಿನಿಧ್ಯವಿದ್ದಿತು.

ಬೊಲಿವಿಯಾದ ರಾಜಕೀಯ ಸಂವಿಧಾನದ (2009) ಅನುಮೋದನೆ, ವಿವಿಧ ಮಹಿಳಾ ಚಳುವಳಿಗಳ ವ್ಯಾಪಕ ಮತ್ತು ನಿರಂತರ ಭಾಗವಹಿಸುವಿಕೆ, ಸಮಾನತೆ ಮತ್ತು ಪರ್ಯಾಯ ತತ್ವಗಳಿಗೆ ಹೆಚ್ಚಿನ ಮಾನ್ಯತೆಯು  ಮಹಿಳೆಯರು ಮತ್ತು ಪುರುಷರ ನಡುವೆ ಸಮಾನ ಭಾಗವಹಿಸುವಿಕೆಯನ್ನು ಬಲಪಡಿಸಲು ದಾರಿ ಮಾಡಿಕೊಟ್ಟವು. 32 ವರ್ಷಗಳ ಪ್ರಜಾಪ್ರಭುತ್ವದ ನಂತರ 166 ವಿಧಾನಸಭಾ ಸದಸ್ಯರಲ್ಲಿ 82 ಮಹಿಳೆಯರ ಆಯ್ಕೆ ಬೊಲಿವಿಯನ್ ಇತಿಹಾಸದಲ್ಲಿಯೇ ಅತಿ ಹೆಚ್ಚು. 1982 ರಲ್ಲಿ ದೇಶದ ಶಾಸಕಾಂಗದಲ್ಲಿ ಶೇಕಡಾ 2 ರಷ್ಟು ಮಹಿಳಾ ಪ್ರತಿನಿಧಿಗಳನ್ನು ಹೊಂದಿರಲಿಲ್ಲ ಎಂದರೆ ನೀವು ನಂಬಲೇಬೇಕು.

ಅತಿ ಹೆಚ್ಚು ಮಹಿಳಾ ಪ್ರಾತಿನಿದ್ಯ ಹೊಂದಿರುವ ಇತರ ದೇಶಗಳು

ಅಂತರ-ಸಂಸದೀಯ ಒಕ್ಕೂಟ ಮತ್ತು ವಿಶ್ವಸಂಸ್ಥೆಯ ರಾಜಕೀಯದಲ್ಲಿ ಮಹಿಳೆಯರು- 2020 ನಕ್ಷೆಯ ಪ್ರಕಾರ, ಅತಿ ಹೆಚ್ಚು ಮಹಿಳಾ ಜನಪ್ರತಿನಿಧ್ಯದ ದೃಷ್ಟಿಯಿಂದ ಬೊಲಿವಿಯಾವು ರುವಾಂಡಾ ಮತ್ತು ಕ್ಯೂಬಾ ದೇಶಗಳ ನಂತರ ವಿಶ್ವದ ಮೂರನೇ ಸ್ಥಾನದಲ್ಲಿದೆ.

ರುವಾಂಡಾ ಸಂಸತ್ತಿನಲ್ಲಿ ಮಹಿಳಾ ಪ್ರಾತಿನಿಧ್ಯವು ಅತ್ಯುತ್ತಮ ದಾಖಲೆಯನ್ನು ಹೊಂದಿದೆ. ಅಲ್ಲಿ ಪ್ರಸ್ತುತ ಸುಮಾರು ಮೂರನೇ ಎರಡರಷ್ಟು ಸ್ಥಾನಗಳನ್ನು ಮಹಿಳೆಯರು ಹೊಂದಿದ್ದಾರೆ.

ಕ್ಯೂಬಾದಲ್ಲಿಯೂ ಸಹ 53.2% ಮಹಿಳಾ ಪ್ರತಿನಿಧಿಗಳಿದ್ದಾರೆ. ಮೂರನೇ ಸ್ಥಾನದಲ್ಲಿ ಬೊಲಿವಿಯಾ (53.1%) ಇದೆ. ನಂತರದ ಸ್ಥಾನಗಳಲ್ಲಿ ಮೆಕ್ಸಿಕೊ (48.2%), ಗ್ರೆನಡಾ (46.7%), ನಿಕರಾಗುವಾ (45.7%), ಕೋಸ್ಟರಿಕಾ (45.6%), ನಮೀಬಿಯಾ (46.2%), ದಕ್ಷಿಣ ಆಫ್ರಿಕಾ (42.7%) ಮತ್ತು ಸ್ವೀಡನ್ (46.1%) ಇವೆ.

ನಾರ್ಡಿಕ್ ದೇಶಗಳ ಗುಂಪು 42.3% ಸ್ಥಾನಗಳೊಂದಿಗೆ ಮಹಿಳೆಯರ ಪ್ರಾತಿನಿಧ್ಯದಲ್ಲಿ ಮುಂಚೂಣಿಯಲ್ಲಿದೆ. ಅಮೆರಿಕ (30.3%), ಯುರೋಪ್ (26.5%), ಮತ್ತು ಆಫ್ರಿಕಾ ದೇಶಗಳಲ್ಲಿ (23.8%) ಮಹಿಳಾ ಪ್ರಾತಿನಿಧ್ಯವಿದೆ. ಮಹಿಳೆಯರ ಪ್ರಾತಿನಿಧ್ಯದಲ್ಲಿ ಏಷ್ಯಾ (19.7%) ಮತ್ತು ಅರಬ್ ರಾಜ್ಯಗಳು (18.7%) ಜಾಗತಿಕ ಸರಾಸರಿಗಿಂತ ಹಿಂದುಳಿದಿವೆ. ಆದರೆ ಪೆಸಿಫಿಕ್ ರಾಷ್ಟ್ರಗಳು (15.5%) ಅತ್ಯಂತ ಕೆಟ್ಟ ದಾಖಲೆಯನ್ನು ಹೊಂದಿವೆ.

ರೈತರು, ಮಹಿಳೆಯರು, ಆದಿವಾಸಿಗಳು, ವಿವಿಧ ಸಮುದಾಯದ ಮುಖಂಡರು, ಶಿಕ್ಷಣ ತಜ್ಞರಂತಹ ವೈವಿಧ್ಯಮಯ ಕ್ಷೇತ್ರಗಳ ವ್ಯಕ್ತಿಗಳ ಪ್ರಾತಿನಿಧ್ಯವು ಹೆಚ್ಚು ಸಮಾನ ಸಮಾಜದ ಅಭಿವೃದ್ಧಿಯನ್ನು ಖಾತ್ರಿಗೊಳಿಸುತ್ತದೆ. ಮಹಿಳೆಯರ ಮೇಲಿನ ದಬ್ಬಾಳಿಕೆ ಮತ್ತು ಲಿಂಗ ಆಧಾರಿತ ಹಿಂಸಾಚಾರವನ್ನು ತಡೆಯಲು ನಿಯಮಗಳನ್ನು ರೂಪಿಸಲು ಮಹಿಳೆಯರ ಪ್ರಾತಿನಿಧ್ಯ ಅಗತ್ಯವಾಗಿದೆ.


ಇದನ್ನೂ ಓದಿ: ಸ್ವಿಟ್ಜರ್ ಲೆಂಡ್ ನ ಲಕ್ಷಾಂತರ ಮಹಿಳೆಯರು ಒಮ್ಮೆಗೆ ಬೀದಿಗಿಳಿದಿದ್ದು ಏಕೆ ಗೊತ್ತಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...