Homeಅಂತರಾಷ್ಟ್ರೀಯಗುಡ್ ನ್ಯೂಸ್: ಬೊಲಿವಿಯಾದಲ್ಲಿ ಮಹಿಳಾ ಜನಪ್ರತಿನಿಧಿಗಳ ಸಂಖ್ಯೆ ಶೇ.50ಕ್ಕಿಂತಲೂ ಹೆಚ್ಚು!

ಗುಡ್ ನ್ಯೂಸ್: ಬೊಲಿವಿಯಾದಲ್ಲಿ ಮಹಿಳಾ ಜನಪ್ರತಿನಿಧಿಗಳ ಸಂಖ್ಯೆ ಶೇ.50ಕ್ಕಿಂತಲೂ ಹೆಚ್ಚು!

ರುವಾಂಡಾ ಸಂಸತ್ತಿನಲ್ಲಿ ಮಹಿಳಾ ಪ್ರಾತಿನಿಧ್ಯವು ಅತ್ಯುತ್ತಮ ದಾಖಲೆಯನ್ನು ಹೊಂದಿದೆ. ಅಲ್ಲಿ ಪ್ರಸ್ತುತ ಸುಮಾರು ಮೂರನೇ ಎರಡರಷ್ಟು ಸ್ಥಾನಗಳನ್ನು ಮಹಿಳೆಯರು ಹೊಂದಿದ್ದಾರೆ.

- Advertisement -
- Advertisement -

‘ಆಕಾಶದ ಅರ್ಧ ನಕ್ಷತ್ರಗಳು ನಾವು. ಸಿಡಿದರೆ ಅಗ್ನಿಯ ಕಿಡಿಗಳಾಗುವೆವು’ ಎಂಬುದು ಮಹಿಳಾ ಚಳವಳಿಯ ಘೋಷವಾಕ್ಯಗಳಲ್ಲೊಂದು. ಪ್ರಪಂಚದ ಜನಸಂಖ್ಯೆಯಲ್ಲಿ ಅರ್ಧದಷ್ಟಿರುವ ಮಹಿಳೆಯರು ಸಮಾಜಕ್ಕೆ ಸಮಾನ ಕೊಡುಗೆ ನೀಡಿದರೂ ಸಹ ಬಹುತೇಕ ಕ್ಷೇತ್ರಗಳಲ್ಲಿ ಅವರ ಪಾತ್ರಿನಿಧ್ಯ ತೀರಾ ಕಡಿಮೆ ಇದೆ. ಸಮಾಜ, ಸಂಪತ್ತು ಮತ್ತು ಸರ್ಕಾರಗಳಲ್ಲಿ ಸಮಪಾಲಿನ ಬೇಡಿಕೆಗೆ ಶತಮಾನದ ಇತಿಹಾಸವಿದ್ದರೂ ಸಹ ಅದು ಕನಸಾಗಿಯೇ ಉಳಿದಿದೆ. ಇಂತಹ ಸಂಕಷ್ಟದ ದಿನಗಳಲ್ಲಿಯು ಸಹ ಕೆಲ ಬೆಳಕಿನ ಕಿರಣಗಳು ಗೋಚರಿಸುತ್ತಿವೆ. ಅಂತಹ ಒಂದು ವಿಶೇಷ ವರದಿ ಇಲ್ಲಿದೆ.

ಬೊಲಿವಿಯಾದಲ್ಲಿ ನಡೆದ ಇತ್ತೀಚಿನ ಚುನಾವಣೆಗಳಲ್ಲಿ ಸಮಾಜವಾದಿ ಪಕ್ಷಗಳನ್ನು ಮತ್ತೆ ಅಧಿಕಾರಕ್ಕೆ ತಂದಿರುವುದು ಮಾತ್ರವಲ್ಲದೆ ಅಲ್ಲಿನ ಎರಡೂ ಸದನಗಳಲ್ಲಿ ಪುರುಷರಿಗಿಂತ ಮಹಿಳೆಯರೇ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಬೊಲಿವಿಯಾದ ಅಧ್ಯಕ್ಷೀಯ ಚುನಾವಣೆಯಲ್ಲಿ ಇವೊ ಮೊರೇಲ್ಸ್ ರವರ ಮೂವ್‌ಮೆಂಟ್ ಫಾರ್ ಸೋಷಿಯಲಿಸಂ (ಎಂಎಎಸ್) ಪಕ್ಷ ಭರ್ಜರಿ ಗೆಲುವು ಸಾಧಿಸಿದೆ. ಟೆಲಿಸೂರ್ ವರದಿ ಪ್ರಕಾರ, ಸೆನೆಟ್‌ನಲ್ಲಿ 21 ಸ್ಥಾನಗಳೊಂದಿಗೆ MAS ಬಹುಮತ ಸಾಧಿಸಿದೆ, ಅದರಲ್ಲಿ 10 ಸ್ಥಾನಗಳನ್ನು ಮಹಿಳೆಯರು ಆಕ್ರಮಿಸಿಕೊಂಡಿದ್ದಾರೆ. ಅದೇ ರೀತಿ ಸಿವಿಕ್ ಕಮ್ಯೂನಿಟಿ ಪಕ್ಷವು 11 ಸ್ಥಾನಗಳನ್ನು ಗೆದ್ದರೆ, ಅದರಲ್ಲಿ 07 ಮಹಿಳೆಯರು ಸೇರಿದ್ದಾರೆ. ಕ್ರಿಮೋಸ್ (ವಿ ಬಿಲೀವ್) ಪಕ್ಷವು ನಾಲ್ಕು ಸ್ಥಾನಗಳನ್ನು ಗೆದ್ದಿದ್ದು, ಅವರಲ್ಲಿ ಇಬ್ಬರು ಮಹಿಳೆಯಾಗಿದ್ದಾರೆ.

ಅಲ್ಲಿಗೆ ಸೆನಟ್ ನಲ್ಲಿ ಒಟ್ಟು 36 ಸ್ಥಾನಗಳಲ್ಲಿ 19 ಸ್ಥಾನಗಳು ಮಹಿಳೆಯರ ಪಾಲಾಗಿವೆ. ಮತ್ತೊಂದು ವಿಧಾನಸಭಾ ಚೆಂಬರ್‌ನಲ್ಲಿ ಶೇ.48.33 ರಷ್ಟು ಸ್ಥಾನಗಳಲ್ಲಿ ಪುರುಷರು ಜಯಗಳಿಸಿದರೆ, ಶೇ. 51.6 ರಷ್ಟು ಸೀಟುಗಳನ್ನು ಮಹಿಳೆಯರು ಹೊಂದಿದ್ದಾರೆ. ಸೆನೆಟ್ ಮತ್ತು ಚೇಂಬರ್ ಎರಡೂ ಸೇರಿದರೆ ಬೊಲಿವಿಯಾ ಮಹಿಳಾ ಪ್ರತಿನಿಧಿಗಳ ಸಂಖ್ಯೆ ಶೇ.53.1%.

ಇದು ಹೇಗಾಯಿತು?

ಬೊಲಿವಿಯನ್ ರಾಜಕೀಯದಲ್ಲಿ ಮಹಿಳಾ ಪ್ರಾತಿನಿಧ್ಯ ಹೆಚ್ಚಿರುವುದು ಹೊಸ ವಿದ್ಯಮಾನವಲ್ಲ. 2014 ರ ಚುನಾವಣೆಗಳು ಐತಿಹಾಸಿಕವಾಗಿದ್ದು, ಆಗಲೇ ವಿಧಾನಸಭೆಯಲ್ಲಿ 51% ಮಹಿಳಾ ಪ್ರಾತಿನಿಧ್ಯವಿದ್ದಿತು.

ಬೊಲಿವಿಯಾದ ರಾಜಕೀಯ ಸಂವಿಧಾನದ (2009) ಅನುಮೋದನೆ, ವಿವಿಧ ಮಹಿಳಾ ಚಳುವಳಿಗಳ ವ್ಯಾಪಕ ಮತ್ತು ನಿರಂತರ ಭಾಗವಹಿಸುವಿಕೆ, ಸಮಾನತೆ ಮತ್ತು ಪರ್ಯಾಯ ತತ್ವಗಳಿಗೆ ಹೆಚ್ಚಿನ ಮಾನ್ಯತೆಯು  ಮಹಿಳೆಯರು ಮತ್ತು ಪುರುಷರ ನಡುವೆ ಸಮಾನ ಭಾಗವಹಿಸುವಿಕೆಯನ್ನು ಬಲಪಡಿಸಲು ದಾರಿ ಮಾಡಿಕೊಟ್ಟವು. 32 ವರ್ಷಗಳ ಪ್ರಜಾಪ್ರಭುತ್ವದ ನಂತರ 166 ವಿಧಾನಸಭಾ ಸದಸ್ಯರಲ್ಲಿ 82 ಮಹಿಳೆಯರ ಆಯ್ಕೆ ಬೊಲಿವಿಯನ್ ಇತಿಹಾಸದಲ್ಲಿಯೇ ಅತಿ ಹೆಚ್ಚು. 1982 ರಲ್ಲಿ ದೇಶದ ಶಾಸಕಾಂಗದಲ್ಲಿ ಶೇಕಡಾ 2 ರಷ್ಟು ಮಹಿಳಾ ಪ್ರತಿನಿಧಿಗಳನ್ನು ಹೊಂದಿರಲಿಲ್ಲ ಎಂದರೆ ನೀವು ನಂಬಲೇಬೇಕು.

ಅತಿ ಹೆಚ್ಚು ಮಹಿಳಾ ಪ್ರಾತಿನಿದ್ಯ ಹೊಂದಿರುವ ಇತರ ದೇಶಗಳು

ಅಂತರ-ಸಂಸದೀಯ ಒಕ್ಕೂಟ ಮತ್ತು ವಿಶ್ವಸಂಸ್ಥೆಯ ರಾಜಕೀಯದಲ್ಲಿ ಮಹಿಳೆಯರು- 2020 ನಕ್ಷೆಯ ಪ್ರಕಾರ, ಅತಿ ಹೆಚ್ಚು ಮಹಿಳಾ ಜನಪ್ರತಿನಿಧ್ಯದ ದೃಷ್ಟಿಯಿಂದ ಬೊಲಿವಿಯಾವು ರುವಾಂಡಾ ಮತ್ತು ಕ್ಯೂಬಾ ದೇಶಗಳ ನಂತರ ವಿಶ್ವದ ಮೂರನೇ ಸ್ಥಾನದಲ್ಲಿದೆ.

ರುವಾಂಡಾ ಸಂಸತ್ತಿನಲ್ಲಿ ಮಹಿಳಾ ಪ್ರಾತಿನಿಧ್ಯವು ಅತ್ಯುತ್ತಮ ದಾಖಲೆಯನ್ನು ಹೊಂದಿದೆ. ಅಲ್ಲಿ ಪ್ರಸ್ತುತ ಸುಮಾರು ಮೂರನೇ ಎರಡರಷ್ಟು ಸ್ಥಾನಗಳನ್ನು ಮಹಿಳೆಯರು ಹೊಂದಿದ್ದಾರೆ.

ಕ್ಯೂಬಾದಲ್ಲಿಯೂ ಸಹ 53.2% ಮಹಿಳಾ ಪ್ರತಿನಿಧಿಗಳಿದ್ದಾರೆ. ಮೂರನೇ ಸ್ಥಾನದಲ್ಲಿ ಬೊಲಿವಿಯಾ (53.1%) ಇದೆ. ನಂತರದ ಸ್ಥಾನಗಳಲ್ಲಿ ಮೆಕ್ಸಿಕೊ (48.2%), ಗ್ರೆನಡಾ (46.7%), ನಿಕರಾಗುವಾ (45.7%), ಕೋಸ್ಟರಿಕಾ (45.6%), ನಮೀಬಿಯಾ (46.2%), ದಕ್ಷಿಣ ಆಫ್ರಿಕಾ (42.7%) ಮತ್ತು ಸ್ವೀಡನ್ (46.1%) ಇವೆ.

ನಾರ್ಡಿಕ್ ದೇಶಗಳ ಗುಂಪು 42.3% ಸ್ಥಾನಗಳೊಂದಿಗೆ ಮಹಿಳೆಯರ ಪ್ರಾತಿನಿಧ್ಯದಲ್ಲಿ ಮುಂಚೂಣಿಯಲ್ಲಿದೆ. ಅಮೆರಿಕ (30.3%), ಯುರೋಪ್ (26.5%), ಮತ್ತು ಆಫ್ರಿಕಾ ದೇಶಗಳಲ್ಲಿ (23.8%) ಮಹಿಳಾ ಪ್ರಾತಿನಿಧ್ಯವಿದೆ. ಮಹಿಳೆಯರ ಪ್ರಾತಿನಿಧ್ಯದಲ್ಲಿ ಏಷ್ಯಾ (19.7%) ಮತ್ತು ಅರಬ್ ರಾಜ್ಯಗಳು (18.7%) ಜಾಗತಿಕ ಸರಾಸರಿಗಿಂತ ಹಿಂದುಳಿದಿವೆ. ಆದರೆ ಪೆಸಿಫಿಕ್ ರಾಷ್ಟ್ರಗಳು (15.5%) ಅತ್ಯಂತ ಕೆಟ್ಟ ದಾಖಲೆಯನ್ನು ಹೊಂದಿವೆ.

ರೈತರು, ಮಹಿಳೆಯರು, ಆದಿವಾಸಿಗಳು, ವಿವಿಧ ಸಮುದಾಯದ ಮುಖಂಡರು, ಶಿಕ್ಷಣ ತಜ್ಞರಂತಹ ವೈವಿಧ್ಯಮಯ ಕ್ಷೇತ್ರಗಳ ವ್ಯಕ್ತಿಗಳ ಪ್ರಾತಿನಿಧ್ಯವು ಹೆಚ್ಚು ಸಮಾನ ಸಮಾಜದ ಅಭಿವೃದ್ಧಿಯನ್ನು ಖಾತ್ರಿಗೊಳಿಸುತ್ತದೆ. ಮಹಿಳೆಯರ ಮೇಲಿನ ದಬ್ಬಾಳಿಕೆ ಮತ್ತು ಲಿಂಗ ಆಧಾರಿತ ಹಿಂಸಾಚಾರವನ್ನು ತಡೆಯಲು ನಿಯಮಗಳನ್ನು ರೂಪಿಸಲು ಮಹಿಳೆಯರ ಪ್ರಾತಿನಿಧ್ಯ ಅಗತ್ಯವಾಗಿದೆ.


ಇದನ್ನೂ ಓದಿ: ಸ್ವಿಟ್ಜರ್ ಲೆಂಡ್ ನ ಲಕ್ಷಾಂತರ ಮಹಿಳೆಯರು ಒಮ್ಮೆಗೆ ಬೀದಿಗಿಳಿದಿದ್ದು ಏಕೆ ಗೊತ್ತಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...