Homeಅಂತರಾಷ್ಟ್ರೀಯಗುಡ್ ನ್ಯೂಸ್: ಬೊಲಿವಿಯಾದಲ್ಲಿ ಮಹಿಳಾ ಜನಪ್ರತಿನಿಧಿಗಳ ಸಂಖ್ಯೆ ಶೇ.50ಕ್ಕಿಂತಲೂ ಹೆಚ್ಚು!

ಗುಡ್ ನ್ಯೂಸ್: ಬೊಲಿವಿಯಾದಲ್ಲಿ ಮಹಿಳಾ ಜನಪ್ರತಿನಿಧಿಗಳ ಸಂಖ್ಯೆ ಶೇ.50ಕ್ಕಿಂತಲೂ ಹೆಚ್ಚು!

ರುವಾಂಡಾ ಸಂಸತ್ತಿನಲ್ಲಿ ಮಹಿಳಾ ಪ್ರಾತಿನಿಧ್ಯವು ಅತ್ಯುತ್ತಮ ದಾಖಲೆಯನ್ನು ಹೊಂದಿದೆ. ಅಲ್ಲಿ ಪ್ರಸ್ತುತ ಸುಮಾರು ಮೂರನೇ ಎರಡರಷ್ಟು ಸ್ಥಾನಗಳನ್ನು ಮಹಿಳೆಯರು ಹೊಂದಿದ್ದಾರೆ.

- Advertisement -
- Advertisement -

‘ಆಕಾಶದ ಅರ್ಧ ನಕ್ಷತ್ರಗಳು ನಾವು. ಸಿಡಿದರೆ ಅಗ್ನಿಯ ಕಿಡಿಗಳಾಗುವೆವು’ ಎಂಬುದು ಮಹಿಳಾ ಚಳವಳಿಯ ಘೋಷವಾಕ್ಯಗಳಲ್ಲೊಂದು. ಪ್ರಪಂಚದ ಜನಸಂಖ್ಯೆಯಲ್ಲಿ ಅರ್ಧದಷ್ಟಿರುವ ಮಹಿಳೆಯರು ಸಮಾಜಕ್ಕೆ ಸಮಾನ ಕೊಡುಗೆ ನೀಡಿದರೂ ಸಹ ಬಹುತೇಕ ಕ್ಷೇತ್ರಗಳಲ್ಲಿ ಅವರ ಪಾತ್ರಿನಿಧ್ಯ ತೀರಾ ಕಡಿಮೆ ಇದೆ. ಸಮಾಜ, ಸಂಪತ್ತು ಮತ್ತು ಸರ್ಕಾರಗಳಲ್ಲಿ ಸಮಪಾಲಿನ ಬೇಡಿಕೆಗೆ ಶತಮಾನದ ಇತಿಹಾಸವಿದ್ದರೂ ಸಹ ಅದು ಕನಸಾಗಿಯೇ ಉಳಿದಿದೆ. ಇಂತಹ ಸಂಕಷ್ಟದ ದಿನಗಳಲ್ಲಿಯು ಸಹ ಕೆಲ ಬೆಳಕಿನ ಕಿರಣಗಳು ಗೋಚರಿಸುತ್ತಿವೆ. ಅಂತಹ ಒಂದು ವಿಶೇಷ ವರದಿ ಇಲ್ಲಿದೆ.

ಬೊಲಿವಿಯಾದಲ್ಲಿ ನಡೆದ ಇತ್ತೀಚಿನ ಚುನಾವಣೆಗಳಲ್ಲಿ ಸಮಾಜವಾದಿ ಪಕ್ಷಗಳನ್ನು ಮತ್ತೆ ಅಧಿಕಾರಕ್ಕೆ ತಂದಿರುವುದು ಮಾತ್ರವಲ್ಲದೆ ಅಲ್ಲಿನ ಎರಡೂ ಸದನಗಳಲ್ಲಿ ಪುರುಷರಿಗಿಂತ ಮಹಿಳೆಯರೇ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಬೊಲಿವಿಯಾದ ಅಧ್ಯಕ್ಷೀಯ ಚುನಾವಣೆಯಲ್ಲಿ ಇವೊ ಮೊರೇಲ್ಸ್ ರವರ ಮೂವ್‌ಮೆಂಟ್ ಫಾರ್ ಸೋಷಿಯಲಿಸಂ (ಎಂಎಎಸ್) ಪಕ್ಷ ಭರ್ಜರಿ ಗೆಲುವು ಸಾಧಿಸಿದೆ. ಟೆಲಿಸೂರ್ ವರದಿ ಪ್ರಕಾರ, ಸೆನೆಟ್‌ನಲ್ಲಿ 21 ಸ್ಥಾನಗಳೊಂದಿಗೆ MAS ಬಹುಮತ ಸಾಧಿಸಿದೆ, ಅದರಲ್ಲಿ 10 ಸ್ಥಾನಗಳನ್ನು ಮಹಿಳೆಯರು ಆಕ್ರಮಿಸಿಕೊಂಡಿದ್ದಾರೆ. ಅದೇ ರೀತಿ ಸಿವಿಕ್ ಕಮ್ಯೂನಿಟಿ ಪಕ್ಷವು 11 ಸ್ಥಾನಗಳನ್ನು ಗೆದ್ದರೆ, ಅದರಲ್ಲಿ 07 ಮಹಿಳೆಯರು ಸೇರಿದ್ದಾರೆ. ಕ್ರಿಮೋಸ್ (ವಿ ಬಿಲೀವ್) ಪಕ್ಷವು ನಾಲ್ಕು ಸ್ಥಾನಗಳನ್ನು ಗೆದ್ದಿದ್ದು, ಅವರಲ್ಲಿ ಇಬ್ಬರು ಮಹಿಳೆಯಾಗಿದ್ದಾರೆ.

ಅಲ್ಲಿಗೆ ಸೆನಟ್ ನಲ್ಲಿ ಒಟ್ಟು 36 ಸ್ಥಾನಗಳಲ್ಲಿ 19 ಸ್ಥಾನಗಳು ಮಹಿಳೆಯರ ಪಾಲಾಗಿವೆ. ಮತ್ತೊಂದು ವಿಧಾನಸಭಾ ಚೆಂಬರ್‌ನಲ್ಲಿ ಶೇ.48.33 ರಷ್ಟು ಸ್ಥಾನಗಳಲ್ಲಿ ಪುರುಷರು ಜಯಗಳಿಸಿದರೆ, ಶೇ. 51.6 ರಷ್ಟು ಸೀಟುಗಳನ್ನು ಮಹಿಳೆಯರು ಹೊಂದಿದ್ದಾರೆ. ಸೆನೆಟ್ ಮತ್ತು ಚೇಂಬರ್ ಎರಡೂ ಸೇರಿದರೆ ಬೊಲಿವಿಯಾ ಮಹಿಳಾ ಪ್ರತಿನಿಧಿಗಳ ಸಂಖ್ಯೆ ಶೇ.53.1%.

ಇದು ಹೇಗಾಯಿತು?

ಬೊಲಿವಿಯನ್ ರಾಜಕೀಯದಲ್ಲಿ ಮಹಿಳಾ ಪ್ರಾತಿನಿಧ್ಯ ಹೆಚ್ಚಿರುವುದು ಹೊಸ ವಿದ್ಯಮಾನವಲ್ಲ. 2014 ರ ಚುನಾವಣೆಗಳು ಐತಿಹಾಸಿಕವಾಗಿದ್ದು, ಆಗಲೇ ವಿಧಾನಸಭೆಯಲ್ಲಿ 51% ಮಹಿಳಾ ಪ್ರಾತಿನಿಧ್ಯವಿದ್ದಿತು.

ಬೊಲಿವಿಯಾದ ರಾಜಕೀಯ ಸಂವಿಧಾನದ (2009) ಅನುಮೋದನೆ, ವಿವಿಧ ಮಹಿಳಾ ಚಳುವಳಿಗಳ ವ್ಯಾಪಕ ಮತ್ತು ನಿರಂತರ ಭಾಗವಹಿಸುವಿಕೆ, ಸಮಾನತೆ ಮತ್ತು ಪರ್ಯಾಯ ತತ್ವಗಳಿಗೆ ಹೆಚ್ಚಿನ ಮಾನ್ಯತೆಯು  ಮಹಿಳೆಯರು ಮತ್ತು ಪುರುಷರ ನಡುವೆ ಸಮಾನ ಭಾಗವಹಿಸುವಿಕೆಯನ್ನು ಬಲಪಡಿಸಲು ದಾರಿ ಮಾಡಿಕೊಟ್ಟವು. 32 ವರ್ಷಗಳ ಪ್ರಜಾಪ್ರಭುತ್ವದ ನಂತರ 166 ವಿಧಾನಸಭಾ ಸದಸ್ಯರಲ್ಲಿ 82 ಮಹಿಳೆಯರ ಆಯ್ಕೆ ಬೊಲಿವಿಯನ್ ಇತಿಹಾಸದಲ್ಲಿಯೇ ಅತಿ ಹೆಚ್ಚು. 1982 ರಲ್ಲಿ ದೇಶದ ಶಾಸಕಾಂಗದಲ್ಲಿ ಶೇಕಡಾ 2 ರಷ್ಟು ಮಹಿಳಾ ಪ್ರತಿನಿಧಿಗಳನ್ನು ಹೊಂದಿರಲಿಲ್ಲ ಎಂದರೆ ನೀವು ನಂಬಲೇಬೇಕು.

ಅತಿ ಹೆಚ್ಚು ಮಹಿಳಾ ಪ್ರಾತಿನಿದ್ಯ ಹೊಂದಿರುವ ಇತರ ದೇಶಗಳು

ಅಂತರ-ಸಂಸದೀಯ ಒಕ್ಕೂಟ ಮತ್ತು ವಿಶ್ವಸಂಸ್ಥೆಯ ರಾಜಕೀಯದಲ್ಲಿ ಮಹಿಳೆಯರು- 2020 ನಕ್ಷೆಯ ಪ್ರಕಾರ, ಅತಿ ಹೆಚ್ಚು ಮಹಿಳಾ ಜನಪ್ರತಿನಿಧ್ಯದ ದೃಷ್ಟಿಯಿಂದ ಬೊಲಿವಿಯಾವು ರುವಾಂಡಾ ಮತ್ತು ಕ್ಯೂಬಾ ದೇಶಗಳ ನಂತರ ವಿಶ್ವದ ಮೂರನೇ ಸ್ಥಾನದಲ್ಲಿದೆ.

ರುವಾಂಡಾ ಸಂಸತ್ತಿನಲ್ಲಿ ಮಹಿಳಾ ಪ್ರಾತಿನಿಧ್ಯವು ಅತ್ಯುತ್ತಮ ದಾಖಲೆಯನ್ನು ಹೊಂದಿದೆ. ಅಲ್ಲಿ ಪ್ರಸ್ತುತ ಸುಮಾರು ಮೂರನೇ ಎರಡರಷ್ಟು ಸ್ಥಾನಗಳನ್ನು ಮಹಿಳೆಯರು ಹೊಂದಿದ್ದಾರೆ.

ಕ್ಯೂಬಾದಲ್ಲಿಯೂ ಸಹ 53.2% ಮಹಿಳಾ ಪ್ರತಿನಿಧಿಗಳಿದ್ದಾರೆ. ಮೂರನೇ ಸ್ಥಾನದಲ್ಲಿ ಬೊಲಿವಿಯಾ (53.1%) ಇದೆ. ನಂತರದ ಸ್ಥಾನಗಳಲ್ಲಿ ಮೆಕ್ಸಿಕೊ (48.2%), ಗ್ರೆನಡಾ (46.7%), ನಿಕರಾಗುವಾ (45.7%), ಕೋಸ್ಟರಿಕಾ (45.6%), ನಮೀಬಿಯಾ (46.2%), ದಕ್ಷಿಣ ಆಫ್ರಿಕಾ (42.7%) ಮತ್ತು ಸ್ವೀಡನ್ (46.1%) ಇವೆ.

ನಾರ್ಡಿಕ್ ದೇಶಗಳ ಗುಂಪು 42.3% ಸ್ಥಾನಗಳೊಂದಿಗೆ ಮಹಿಳೆಯರ ಪ್ರಾತಿನಿಧ್ಯದಲ್ಲಿ ಮುಂಚೂಣಿಯಲ್ಲಿದೆ. ಅಮೆರಿಕ (30.3%), ಯುರೋಪ್ (26.5%), ಮತ್ತು ಆಫ್ರಿಕಾ ದೇಶಗಳಲ್ಲಿ (23.8%) ಮಹಿಳಾ ಪ್ರಾತಿನಿಧ್ಯವಿದೆ. ಮಹಿಳೆಯರ ಪ್ರಾತಿನಿಧ್ಯದಲ್ಲಿ ಏಷ್ಯಾ (19.7%) ಮತ್ತು ಅರಬ್ ರಾಜ್ಯಗಳು (18.7%) ಜಾಗತಿಕ ಸರಾಸರಿಗಿಂತ ಹಿಂದುಳಿದಿವೆ. ಆದರೆ ಪೆಸಿಫಿಕ್ ರಾಷ್ಟ್ರಗಳು (15.5%) ಅತ್ಯಂತ ಕೆಟ್ಟ ದಾಖಲೆಯನ್ನು ಹೊಂದಿವೆ.

ರೈತರು, ಮಹಿಳೆಯರು, ಆದಿವಾಸಿಗಳು, ವಿವಿಧ ಸಮುದಾಯದ ಮುಖಂಡರು, ಶಿಕ್ಷಣ ತಜ್ಞರಂತಹ ವೈವಿಧ್ಯಮಯ ಕ್ಷೇತ್ರಗಳ ವ್ಯಕ್ತಿಗಳ ಪ್ರಾತಿನಿಧ್ಯವು ಹೆಚ್ಚು ಸಮಾನ ಸಮಾಜದ ಅಭಿವೃದ್ಧಿಯನ್ನು ಖಾತ್ರಿಗೊಳಿಸುತ್ತದೆ. ಮಹಿಳೆಯರ ಮೇಲಿನ ದಬ್ಬಾಳಿಕೆ ಮತ್ತು ಲಿಂಗ ಆಧಾರಿತ ಹಿಂಸಾಚಾರವನ್ನು ತಡೆಯಲು ನಿಯಮಗಳನ್ನು ರೂಪಿಸಲು ಮಹಿಳೆಯರ ಪ್ರಾತಿನಿಧ್ಯ ಅಗತ್ಯವಾಗಿದೆ.


ಇದನ್ನೂ ಓದಿ: ಸ್ವಿಟ್ಜರ್ ಲೆಂಡ್ ನ ಲಕ್ಷಾಂತರ ಮಹಿಳೆಯರು ಒಮ್ಮೆಗೆ ಬೀದಿಗಿಳಿದಿದ್ದು ಏಕೆ ಗೊತ್ತಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...