Homeಅಂತರಾಷ್ಟ್ರೀಯಗುಡ್ ನ್ಯೂಸ್: ಬೊಲಿವಿಯಾದಲ್ಲಿ ಮಹಿಳಾ ಜನಪ್ರತಿನಿಧಿಗಳ ಸಂಖ್ಯೆ ಶೇ.50ಕ್ಕಿಂತಲೂ ಹೆಚ್ಚು!

ಗುಡ್ ನ್ಯೂಸ್: ಬೊಲಿವಿಯಾದಲ್ಲಿ ಮಹಿಳಾ ಜನಪ್ರತಿನಿಧಿಗಳ ಸಂಖ್ಯೆ ಶೇ.50ಕ್ಕಿಂತಲೂ ಹೆಚ್ಚು!

ರುವಾಂಡಾ ಸಂಸತ್ತಿನಲ್ಲಿ ಮಹಿಳಾ ಪ್ರಾತಿನಿಧ್ಯವು ಅತ್ಯುತ್ತಮ ದಾಖಲೆಯನ್ನು ಹೊಂದಿದೆ. ಅಲ್ಲಿ ಪ್ರಸ್ತುತ ಸುಮಾರು ಮೂರನೇ ಎರಡರಷ್ಟು ಸ್ಥಾನಗಳನ್ನು ಮಹಿಳೆಯರು ಹೊಂದಿದ್ದಾರೆ.

- Advertisement -
- Advertisement -

‘ಆಕಾಶದ ಅರ್ಧ ನಕ್ಷತ್ರಗಳು ನಾವು. ಸಿಡಿದರೆ ಅಗ್ನಿಯ ಕಿಡಿಗಳಾಗುವೆವು’ ಎಂಬುದು ಮಹಿಳಾ ಚಳವಳಿಯ ಘೋಷವಾಕ್ಯಗಳಲ್ಲೊಂದು. ಪ್ರಪಂಚದ ಜನಸಂಖ್ಯೆಯಲ್ಲಿ ಅರ್ಧದಷ್ಟಿರುವ ಮಹಿಳೆಯರು ಸಮಾಜಕ್ಕೆ ಸಮಾನ ಕೊಡುಗೆ ನೀಡಿದರೂ ಸಹ ಬಹುತೇಕ ಕ್ಷೇತ್ರಗಳಲ್ಲಿ ಅವರ ಪಾತ್ರಿನಿಧ್ಯ ತೀರಾ ಕಡಿಮೆ ಇದೆ. ಸಮಾಜ, ಸಂಪತ್ತು ಮತ್ತು ಸರ್ಕಾರಗಳಲ್ಲಿ ಸಮಪಾಲಿನ ಬೇಡಿಕೆಗೆ ಶತಮಾನದ ಇತಿಹಾಸವಿದ್ದರೂ ಸಹ ಅದು ಕನಸಾಗಿಯೇ ಉಳಿದಿದೆ. ಇಂತಹ ಸಂಕಷ್ಟದ ದಿನಗಳಲ್ಲಿಯು ಸಹ ಕೆಲ ಬೆಳಕಿನ ಕಿರಣಗಳು ಗೋಚರಿಸುತ್ತಿವೆ. ಅಂತಹ ಒಂದು ವಿಶೇಷ ವರದಿ ಇಲ್ಲಿದೆ.

ಬೊಲಿವಿಯಾದಲ್ಲಿ ನಡೆದ ಇತ್ತೀಚಿನ ಚುನಾವಣೆಗಳಲ್ಲಿ ಸಮಾಜವಾದಿ ಪಕ್ಷಗಳನ್ನು ಮತ್ತೆ ಅಧಿಕಾರಕ್ಕೆ ತಂದಿರುವುದು ಮಾತ್ರವಲ್ಲದೆ ಅಲ್ಲಿನ ಎರಡೂ ಸದನಗಳಲ್ಲಿ ಪುರುಷರಿಗಿಂತ ಮಹಿಳೆಯರೇ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಬೊಲಿವಿಯಾದ ಅಧ್ಯಕ್ಷೀಯ ಚುನಾವಣೆಯಲ್ಲಿ ಇವೊ ಮೊರೇಲ್ಸ್ ರವರ ಮೂವ್‌ಮೆಂಟ್ ಫಾರ್ ಸೋಷಿಯಲಿಸಂ (ಎಂಎಎಸ್) ಪಕ್ಷ ಭರ್ಜರಿ ಗೆಲುವು ಸಾಧಿಸಿದೆ. ಟೆಲಿಸೂರ್ ವರದಿ ಪ್ರಕಾರ, ಸೆನೆಟ್‌ನಲ್ಲಿ 21 ಸ್ಥಾನಗಳೊಂದಿಗೆ MAS ಬಹುಮತ ಸಾಧಿಸಿದೆ, ಅದರಲ್ಲಿ 10 ಸ್ಥಾನಗಳನ್ನು ಮಹಿಳೆಯರು ಆಕ್ರಮಿಸಿಕೊಂಡಿದ್ದಾರೆ. ಅದೇ ರೀತಿ ಸಿವಿಕ್ ಕಮ್ಯೂನಿಟಿ ಪಕ್ಷವು 11 ಸ್ಥಾನಗಳನ್ನು ಗೆದ್ದರೆ, ಅದರಲ್ಲಿ 07 ಮಹಿಳೆಯರು ಸೇರಿದ್ದಾರೆ. ಕ್ರಿಮೋಸ್ (ವಿ ಬಿಲೀವ್) ಪಕ್ಷವು ನಾಲ್ಕು ಸ್ಥಾನಗಳನ್ನು ಗೆದ್ದಿದ್ದು, ಅವರಲ್ಲಿ ಇಬ್ಬರು ಮಹಿಳೆಯಾಗಿದ್ದಾರೆ.

ಅಲ್ಲಿಗೆ ಸೆನಟ್ ನಲ್ಲಿ ಒಟ್ಟು 36 ಸ್ಥಾನಗಳಲ್ಲಿ 19 ಸ್ಥಾನಗಳು ಮಹಿಳೆಯರ ಪಾಲಾಗಿವೆ. ಮತ್ತೊಂದು ವಿಧಾನಸಭಾ ಚೆಂಬರ್‌ನಲ್ಲಿ ಶೇ.48.33 ರಷ್ಟು ಸ್ಥಾನಗಳಲ್ಲಿ ಪುರುಷರು ಜಯಗಳಿಸಿದರೆ, ಶೇ. 51.6 ರಷ್ಟು ಸೀಟುಗಳನ್ನು ಮಹಿಳೆಯರು ಹೊಂದಿದ್ದಾರೆ. ಸೆನೆಟ್ ಮತ್ತು ಚೇಂಬರ್ ಎರಡೂ ಸೇರಿದರೆ ಬೊಲಿವಿಯಾ ಮಹಿಳಾ ಪ್ರತಿನಿಧಿಗಳ ಸಂಖ್ಯೆ ಶೇ.53.1%.

ಇದು ಹೇಗಾಯಿತು?

ಬೊಲಿವಿಯನ್ ರಾಜಕೀಯದಲ್ಲಿ ಮಹಿಳಾ ಪ್ರಾತಿನಿಧ್ಯ ಹೆಚ್ಚಿರುವುದು ಹೊಸ ವಿದ್ಯಮಾನವಲ್ಲ. 2014 ರ ಚುನಾವಣೆಗಳು ಐತಿಹಾಸಿಕವಾಗಿದ್ದು, ಆಗಲೇ ವಿಧಾನಸಭೆಯಲ್ಲಿ 51% ಮಹಿಳಾ ಪ್ರಾತಿನಿಧ್ಯವಿದ್ದಿತು.

ಬೊಲಿವಿಯಾದ ರಾಜಕೀಯ ಸಂವಿಧಾನದ (2009) ಅನುಮೋದನೆ, ವಿವಿಧ ಮಹಿಳಾ ಚಳುವಳಿಗಳ ವ್ಯಾಪಕ ಮತ್ತು ನಿರಂತರ ಭಾಗವಹಿಸುವಿಕೆ, ಸಮಾನತೆ ಮತ್ತು ಪರ್ಯಾಯ ತತ್ವಗಳಿಗೆ ಹೆಚ್ಚಿನ ಮಾನ್ಯತೆಯು  ಮಹಿಳೆಯರು ಮತ್ತು ಪುರುಷರ ನಡುವೆ ಸಮಾನ ಭಾಗವಹಿಸುವಿಕೆಯನ್ನು ಬಲಪಡಿಸಲು ದಾರಿ ಮಾಡಿಕೊಟ್ಟವು. 32 ವರ್ಷಗಳ ಪ್ರಜಾಪ್ರಭುತ್ವದ ನಂತರ 166 ವಿಧಾನಸಭಾ ಸದಸ್ಯರಲ್ಲಿ 82 ಮಹಿಳೆಯರ ಆಯ್ಕೆ ಬೊಲಿವಿಯನ್ ಇತಿಹಾಸದಲ್ಲಿಯೇ ಅತಿ ಹೆಚ್ಚು. 1982 ರಲ್ಲಿ ದೇಶದ ಶಾಸಕಾಂಗದಲ್ಲಿ ಶೇಕಡಾ 2 ರಷ್ಟು ಮಹಿಳಾ ಪ್ರತಿನಿಧಿಗಳನ್ನು ಹೊಂದಿರಲಿಲ್ಲ ಎಂದರೆ ನೀವು ನಂಬಲೇಬೇಕು.

ಅತಿ ಹೆಚ್ಚು ಮಹಿಳಾ ಪ್ರಾತಿನಿದ್ಯ ಹೊಂದಿರುವ ಇತರ ದೇಶಗಳು

ಅಂತರ-ಸಂಸದೀಯ ಒಕ್ಕೂಟ ಮತ್ತು ವಿಶ್ವಸಂಸ್ಥೆಯ ರಾಜಕೀಯದಲ್ಲಿ ಮಹಿಳೆಯರು- 2020 ನಕ್ಷೆಯ ಪ್ರಕಾರ, ಅತಿ ಹೆಚ್ಚು ಮಹಿಳಾ ಜನಪ್ರತಿನಿಧ್ಯದ ದೃಷ್ಟಿಯಿಂದ ಬೊಲಿವಿಯಾವು ರುವಾಂಡಾ ಮತ್ತು ಕ್ಯೂಬಾ ದೇಶಗಳ ನಂತರ ವಿಶ್ವದ ಮೂರನೇ ಸ್ಥಾನದಲ್ಲಿದೆ.

ರುವಾಂಡಾ ಸಂಸತ್ತಿನಲ್ಲಿ ಮಹಿಳಾ ಪ್ರಾತಿನಿಧ್ಯವು ಅತ್ಯುತ್ತಮ ದಾಖಲೆಯನ್ನು ಹೊಂದಿದೆ. ಅಲ್ಲಿ ಪ್ರಸ್ತುತ ಸುಮಾರು ಮೂರನೇ ಎರಡರಷ್ಟು ಸ್ಥಾನಗಳನ್ನು ಮಹಿಳೆಯರು ಹೊಂದಿದ್ದಾರೆ.

ಕ್ಯೂಬಾದಲ್ಲಿಯೂ ಸಹ 53.2% ಮಹಿಳಾ ಪ್ರತಿನಿಧಿಗಳಿದ್ದಾರೆ. ಮೂರನೇ ಸ್ಥಾನದಲ್ಲಿ ಬೊಲಿವಿಯಾ (53.1%) ಇದೆ. ನಂತರದ ಸ್ಥಾನಗಳಲ್ಲಿ ಮೆಕ್ಸಿಕೊ (48.2%), ಗ್ರೆನಡಾ (46.7%), ನಿಕರಾಗುವಾ (45.7%), ಕೋಸ್ಟರಿಕಾ (45.6%), ನಮೀಬಿಯಾ (46.2%), ದಕ್ಷಿಣ ಆಫ್ರಿಕಾ (42.7%) ಮತ್ತು ಸ್ವೀಡನ್ (46.1%) ಇವೆ.

ನಾರ್ಡಿಕ್ ದೇಶಗಳ ಗುಂಪು 42.3% ಸ್ಥಾನಗಳೊಂದಿಗೆ ಮಹಿಳೆಯರ ಪ್ರಾತಿನಿಧ್ಯದಲ್ಲಿ ಮುಂಚೂಣಿಯಲ್ಲಿದೆ. ಅಮೆರಿಕ (30.3%), ಯುರೋಪ್ (26.5%), ಮತ್ತು ಆಫ್ರಿಕಾ ದೇಶಗಳಲ್ಲಿ (23.8%) ಮಹಿಳಾ ಪ್ರಾತಿನಿಧ್ಯವಿದೆ. ಮಹಿಳೆಯರ ಪ್ರಾತಿನಿಧ್ಯದಲ್ಲಿ ಏಷ್ಯಾ (19.7%) ಮತ್ತು ಅರಬ್ ರಾಜ್ಯಗಳು (18.7%) ಜಾಗತಿಕ ಸರಾಸರಿಗಿಂತ ಹಿಂದುಳಿದಿವೆ. ಆದರೆ ಪೆಸಿಫಿಕ್ ರಾಷ್ಟ್ರಗಳು (15.5%) ಅತ್ಯಂತ ಕೆಟ್ಟ ದಾಖಲೆಯನ್ನು ಹೊಂದಿವೆ.

ರೈತರು, ಮಹಿಳೆಯರು, ಆದಿವಾಸಿಗಳು, ವಿವಿಧ ಸಮುದಾಯದ ಮುಖಂಡರು, ಶಿಕ್ಷಣ ತಜ್ಞರಂತಹ ವೈವಿಧ್ಯಮಯ ಕ್ಷೇತ್ರಗಳ ವ್ಯಕ್ತಿಗಳ ಪ್ರಾತಿನಿಧ್ಯವು ಹೆಚ್ಚು ಸಮಾನ ಸಮಾಜದ ಅಭಿವೃದ್ಧಿಯನ್ನು ಖಾತ್ರಿಗೊಳಿಸುತ್ತದೆ. ಮಹಿಳೆಯರ ಮೇಲಿನ ದಬ್ಬಾಳಿಕೆ ಮತ್ತು ಲಿಂಗ ಆಧಾರಿತ ಹಿಂಸಾಚಾರವನ್ನು ತಡೆಯಲು ನಿಯಮಗಳನ್ನು ರೂಪಿಸಲು ಮಹಿಳೆಯರ ಪ್ರಾತಿನಿಧ್ಯ ಅಗತ್ಯವಾಗಿದೆ.


ಇದನ್ನೂ ಓದಿ: ಸ್ವಿಟ್ಜರ್ ಲೆಂಡ್ ನ ಲಕ್ಷಾಂತರ ಮಹಿಳೆಯರು ಒಮ್ಮೆಗೆ ಬೀದಿಗಿಳಿದಿದ್ದು ಏಕೆ ಗೊತ್ತಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...