Homeಮುಖಪುಟಗುಡ್‌ ನ್ಯೂಸ್‌: ಹಿಂದೂ ಯುವಕನಿಗೆ ರಕ್ತದಾನ ಮಾಡಲು ಉಪವಾಸ ವ್ರತ ಮುರಿದ ಮುಸ್ಲಿಂ ಮಹಿಳೆ..

ಗುಡ್‌ ನ್ಯೂಸ್‌: ಹಿಂದೂ ಯುವಕನಿಗೆ ರಕ್ತದಾನ ಮಾಡಲು ಉಪವಾಸ ವ್ರತ ಮುರಿದ ಮುಸ್ಲಿಂ ಮಹಿಳೆ..

- Advertisement -
- Advertisement -

ಹಿಂದೂ ಯುವಕನಿಗೆ ರಕ್ತದಾನ ಮಾಡಲು ಮುಸ್ಲಿಂ ಮಹಿಳೆಯೊಬ್ಬರು ರಂಜಾನ್‌ ಉಪವಾಸ ವ್ರತ ಮುರಿದ ಅಪರೂಪದ ಘಟನೆ ಜರುಗಿದೆ.

ಭಾರತದಲ್ಲಿ ಕೋಮು ಸಾಮರಸ್ಯಕ್ಕೆ ದೊಡ್ಡ ಅಪಾಯ ಎದರಾಗಿರುವ ಸಂದರ್ಭದಲ್ಲಿ ಉತ್ತರ ಪ್ರದೇಶದ ಖೇರಿ ಜಿಲ್ಲೆಯ ಈ ಒಂದು ಉದಾಹರಣೆ ಭರವಸೆಯ ಸಂದೇಶವನ್ನು ನೀಡುತ್ತಿದೆ.

ಉತ್ತರ ಪ್ರದೇಶದ ಪಿಹಾನಿ ಪಟ್ಟಣದಲ್ಲಿ ಮಿಶ್ರಾನ ಸಮುದಾಯದಲ್ಲಿ ವಾಸಿಸುವ ವಿಜಯ್ ಕುಮಾರ್ ರಾಸ್ತೋಗಿ ಅವರ ಆರೋಗ್ಯ ಇದ್ದಕ್ಕಿದ್ದಂತೆ ಹದಗೆಟ್ಟಿತ್ತು. ಕೂಡಲೇ ಅವರನ್ನು ಜಿಲ್ಲಾ ಆಸ್ಪತ್ರೆಗೆ ಕರೆತಂದಾಗ ಅವರಿಗೆ ರಕ್ತದ ಅವಶ್ಯಕತೆ ಇದೆ ಎಂದು ವೈದ್ಯರು ಹೇಳಿದ್ದಾರೆ.

ಓ-ಪಾಸಿಟಿವ್ ರಕ್ತ ಅಗತ್ಯಬಿದ್ದಿದ್ದು ಕೂಡಲೇ ಯಾರ ಬಳಿಯೂ ಆ ಗುಂಪಿನ ರಕ್ತ ಲಭ್ಯವಾಗಿಲ್ಲಿ. ಬ್ಲಡ್‌ ಬ್ಯಾಂಕ್‌ನಲ್ಲಿಯೂ ಸಹ ಸಿಗದೇ ಹೋಗಿದೆ.

ಈ ವಿಷಯವನ್ನು ಸಾಮಾಜಿಕ ಜಾಲತಾಣ ಸೇರಿದಂತೆ ಹಲವೆಡೆ ಮನವಿ ಮಾಡಲಾಯಿತು. ಆಗ ಲಖಿಂಪುರ ಖೇರಿ ಜಿಲ್ಲೆಯ ಹಿದಾಯತ್ ನಗರದ ನಿವಾಸಿ ಅಲಿಶಾ ಖಾನ್ ಓ-ಪಾಸಿಟಿವ್ ರಕ್ತ ಗುಂಪನ್ನು ಹೊಂದಿದ್ದು, ಸಮಸ್ಯೆಯನ್ನು ಕೇಳಿದ ಖಾನ್ ತಕ್ಷಣ ರಕ್ತದಾನ ಮಾಡಲು ಒಪ್ಪಿದ್ದಾರೆ.

ಈ ಸಂದರ್ಭದಲ್ಲಿ ಅವರು ರಂಜಾನ್‌ ಉಪವಾಸ ವ್ರತದಲ್ಲಿದ್ದರು. ಆದರೆ ರಕ್ತದಾನ ಮಾಡಬೇಕಾದರೆ ಆಹಾರವನ್ನು ಸೇವಿಸಿರುವುದು ಕಡ್ಡಾಯವಾಗಿರುವುದರಿಂದ ಅವರು ವ್ರತ ಮುರಿದು ಆಹಾರ ಸೇವಿಸಿ ಸ್ವಲ್ಪ ಸಮಯದ ನಂತರ ರಾಸ್ತೋಗಿಗೆ ರಕ್ತದಾನ ಮಾಡಿದ್ದಾರೆ. ಈಗ ರಾಸ್ತೋಗಿಯವರ ಆರೋಗ್ಯವು ಉತ್ತಮವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಈಗ ಅಲಿಶಾ ಖಾನ್ ಅವರ ನಿಸ್ವಾರ್ಥ ಕೃತ್ಯಕ್ಕಾಗಿ ಆನ್‌ಲೈನ್‌ನಲ್ಲಿ ಭಾರೀ ಪ್ರಶಂಸೆಗೆ ಪಾತ್ರವಾಗಿದೆ. ಹಲವಾರು ಜನರು ಇದು “ಭಾರತದ ನಿಜವಾದ ಮುಖ” ಎಂದು ಕರೆಯುತ್ತಿದ್ದಾರೆ. ಬಹಳಷ್ಟು ಟ್ವಿಟ್ಟರ್‌ ಬಳಕೆದಾರರು ಅಲಿಶಾ ಖಾನ್ ರಕ್ತ ನೀಡುತ್ತಿರುವ ಚಿತ್ರವನ್ನು ಹಂಚಿಕೊಂಡು ಶುಭಾಶಯ ತಿಳಿಸಿದ್ದಾರೆ. ಜೈ ಹಿಂದ್‌ ಎಂದು ಉಲ್ಲೇಖ ಮಾಡಿದ್ದಾರೆ.


ಇದನ್ನೂ ಓದಿ: 10 ಸಾವಿರ ವೆಚ್ಚದಲ್ಲಿ ವೆಂಟಿಲೇಟರ್‌ ತಯಾರಿಸಿದ ಕಾಶ್ಮೀರಿ ಯುವಕರ ತಂಡ! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. O+ve blood ಎಲ್ಲೂ ಸಿಗಲಿಲ್ಲ ಅನ್ನೋದು ಮೊದಲ ಸುಳ್ಳು. ಪ್ರಚಾರ priyate ಅಷ್ಟೇ.
    ಸುಳ್ಯದ ಕಾಂಗ್ರೆಸ್ ನಾಯಕಿ ವಹೀದಾ ಇಸ್ಮಾಯಿಲ್ ಗೆ ಅವರದೇ ಸಮುದಾಯದ ವ್ಯಕ್ತಿ ಚೂರಿ ಹಾಕಿದಾಗ ತುರ್ತು ab + ವೇ ರಕ್ತ ನೀಡಿದ್ದು ಭಜರಂಗ್ ದಳದ ವಿನಯ್ ಕುಮಾರ್ ಮತ್ತು ಮಹೇಶ್ ಕುಮಾರ್. ಆದರೆ ಪ್ರಚಾರ ಪಡೆಯ ಲಿಲ್ಲ.

  2. ಇದರಲ್ಲಿ ಜಾತಿ ಭೆದ ಬೇಡ ನಾಲೆ ದಿವಸ ನಮಗೆ ಏನ್ ಅಗ್ಬಹುದು ಯಾರಿಗು ಎಲಲಿಕ್ಕೆ ಸಾದ್ಯ ವಿಲ್ಲ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...