Homeಮುಖಪುಟಗುಡ್‌ ನ್ಯೂಸ್‌: ಹಿಂದೂ ಯುವಕನಿಗೆ ರಕ್ತದಾನ ಮಾಡಲು ಉಪವಾಸ ವ್ರತ ಮುರಿದ ಮುಸ್ಲಿಂ ಮಹಿಳೆ..

ಗುಡ್‌ ನ್ಯೂಸ್‌: ಹಿಂದೂ ಯುವಕನಿಗೆ ರಕ್ತದಾನ ಮಾಡಲು ಉಪವಾಸ ವ್ರತ ಮುರಿದ ಮುಸ್ಲಿಂ ಮಹಿಳೆ..

- Advertisement -
- Advertisement -

ಹಿಂದೂ ಯುವಕನಿಗೆ ರಕ್ತದಾನ ಮಾಡಲು ಮುಸ್ಲಿಂ ಮಹಿಳೆಯೊಬ್ಬರು ರಂಜಾನ್‌ ಉಪವಾಸ ವ್ರತ ಮುರಿದ ಅಪರೂಪದ ಘಟನೆ ಜರುಗಿದೆ.

ಭಾರತದಲ್ಲಿ ಕೋಮು ಸಾಮರಸ್ಯಕ್ಕೆ ದೊಡ್ಡ ಅಪಾಯ ಎದರಾಗಿರುವ ಸಂದರ್ಭದಲ್ಲಿ ಉತ್ತರ ಪ್ರದೇಶದ ಖೇರಿ ಜಿಲ್ಲೆಯ ಈ ಒಂದು ಉದಾಹರಣೆ ಭರವಸೆಯ ಸಂದೇಶವನ್ನು ನೀಡುತ್ತಿದೆ.

ಉತ್ತರ ಪ್ರದೇಶದ ಪಿಹಾನಿ ಪಟ್ಟಣದಲ್ಲಿ ಮಿಶ್ರಾನ ಸಮುದಾಯದಲ್ಲಿ ವಾಸಿಸುವ ವಿಜಯ್ ಕುಮಾರ್ ರಾಸ್ತೋಗಿ ಅವರ ಆರೋಗ್ಯ ಇದ್ದಕ್ಕಿದ್ದಂತೆ ಹದಗೆಟ್ಟಿತ್ತು. ಕೂಡಲೇ ಅವರನ್ನು ಜಿಲ್ಲಾ ಆಸ್ಪತ್ರೆಗೆ ಕರೆತಂದಾಗ ಅವರಿಗೆ ರಕ್ತದ ಅವಶ್ಯಕತೆ ಇದೆ ಎಂದು ವೈದ್ಯರು ಹೇಳಿದ್ದಾರೆ.

ಓ-ಪಾಸಿಟಿವ್ ರಕ್ತ ಅಗತ್ಯಬಿದ್ದಿದ್ದು ಕೂಡಲೇ ಯಾರ ಬಳಿಯೂ ಆ ಗುಂಪಿನ ರಕ್ತ ಲಭ್ಯವಾಗಿಲ್ಲಿ. ಬ್ಲಡ್‌ ಬ್ಯಾಂಕ್‌ನಲ್ಲಿಯೂ ಸಹ ಸಿಗದೇ ಹೋಗಿದೆ.

ಈ ವಿಷಯವನ್ನು ಸಾಮಾಜಿಕ ಜಾಲತಾಣ ಸೇರಿದಂತೆ ಹಲವೆಡೆ ಮನವಿ ಮಾಡಲಾಯಿತು. ಆಗ ಲಖಿಂಪುರ ಖೇರಿ ಜಿಲ್ಲೆಯ ಹಿದಾಯತ್ ನಗರದ ನಿವಾಸಿ ಅಲಿಶಾ ಖಾನ್ ಓ-ಪಾಸಿಟಿವ್ ರಕ್ತ ಗುಂಪನ್ನು ಹೊಂದಿದ್ದು, ಸಮಸ್ಯೆಯನ್ನು ಕೇಳಿದ ಖಾನ್ ತಕ್ಷಣ ರಕ್ತದಾನ ಮಾಡಲು ಒಪ್ಪಿದ್ದಾರೆ.

ಈ ಸಂದರ್ಭದಲ್ಲಿ ಅವರು ರಂಜಾನ್‌ ಉಪವಾಸ ವ್ರತದಲ್ಲಿದ್ದರು. ಆದರೆ ರಕ್ತದಾನ ಮಾಡಬೇಕಾದರೆ ಆಹಾರವನ್ನು ಸೇವಿಸಿರುವುದು ಕಡ್ಡಾಯವಾಗಿರುವುದರಿಂದ ಅವರು ವ್ರತ ಮುರಿದು ಆಹಾರ ಸೇವಿಸಿ ಸ್ವಲ್ಪ ಸಮಯದ ನಂತರ ರಾಸ್ತೋಗಿಗೆ ರಕ್ತದಾನ ಮಾಡಿದ್ದಾರೆ. ಈಗ ರಾಸ್ತೋಗಿಯವರ ಆರೋಗ್ಯವು ಉತ್ತಮವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಈಗ ಅಲಿಶಾ ಖಾನ್ ಅವರ ನಿಸ್ವಾರ್ಥ ಕೃತ್ಯಕ್ಕಾಗಿ ಆನ್‌ಲೈನ್‌ನಲ್ಲಿ ಭಾರೀ ಪ್ರಶಂಸೆಗೆ ಪಾತ್ರವಾಗಿದೆ. ಹಲವಾರು ಜನರು ಇದು “ಭಾರತದ ನಿಜವಾದ ಮುಖ” ಎಂದು ಕರೆಯುತ್ತಿದ್ದಾರೆ. ಬಹಳಷ್ಟು ಟ್ವಿಟ್ಟರ್‌ ಬಳಕೆದಾರರು ಅಲಿಶಾ ಖಾನ್ ರಕ್ತ ನೀಡುತ್ತಿರುವ ಚಿತ್ರವನ್ನು ಹಂಚಿಕೊಂಡು ಶುಭಾಶಯ ತಿಳಿಸಿದ್ದಾರೆ. ಜೈ ಹಿಂದ್‌ ಎಂದು ಉಲ್ಲೇಖ ಮಾಡಿದ್ದಾರೆ.


ಇದನ್ನೂ ಓದಿ: 10 ಸಾವಿರ ವೆಚ್ಚದಲ್ಲಿ ವೆಂಟಿಲೇಟರ್‌ ತಯಾರಿಸಿದ ಕಾಶ್ಮೀರಿ ಯುವಕರ ತಂಡ! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. O+ve blood ಎಲ್ಲೂ ಸಿಗಲಿಲ್ಲ ಅನ್ನೋದು ಮೊದಲ ಸುಳ್ಳು. ಪ್ರಚಾರ priyate ಅಷ್ಟೇ.
    ಸುಳ್ಯದ ಕಾಂಗ್ರೆಸ್ ನಾಯಕಿ ವಹೀದಾ ಇಸ್ಮಾಯಿಲ್ ಗೆ ಅವರದೇ ಸಮುದಾಯದ ವ್ಯಕ್ತಿ ಚೂರಿ ಹಾಕಿದಾಗ ತುರ್ತು ab + ವೇ ರಕ್ತ ನೀಡಿದ್ದು ಭಜರಂಗ್ ದಳದ ವಿನಯ್ ಕುಮಾರ್ ಮತ್ತು ಮಹೇಶ್ ಕುಮಾರ್. ಆದರೆ ಪ್ರಚಾರ ಪಡೆಯ ಲಿಲ್ಲ.

  2. ಇದರಲ್ಲಿ ಜಾತಿ ಭೆದ ಬೇಡ ನಾಲೆ ದಿವಸ ನಮಗೆ ಏನ್ ಅಗ್ಬಹುದು ಯಾರಿಗು ಎಲಲಿಕ್ಕೆ ಸಾದ್ಯ ವಿಲ್ಲ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...