Homeಮುಖಪುಟಗುಡ್‌ ನ್ಯೂಸ್‌: ಹಿಂದೂ ಯುವಕನಿಗೆ ರಕ್ತದಾನ ಮಾಡಲು ಉಪವಾಸ ವ್ರತ ಮುರಿದ ಮುಸ್ಲಿಂ ಮಹಿಳೆ..

ಗುಡ್‌ ನ್ಯೂಸ್‌: ಹಿಂದೂ ಯುವಕನಿಗೆ ರಕ್ತದಾನ ಮಾಡಲು ಉಪವಾಸ ವ್ರತ ಮುರಿದ ಮುಸ್ಲಿಂ ಮಹಿಳೆ..

- Advertisement -
- Advertisement -

ಹಿಂದೂ ಯುವಕನಿಗೆ ರಕ್ತದಾನ ಮಾಡಲು ಮುಸ್ಲಿಂ ಮಹಿಳೆಯೊಬ್ಬರು ರಂಜಾನ್‌ ಉಪವಾಸ ವ್ರತ ಮುರಿದ ಅಪರೂಪದ ಘಟನೆ ಜರುಗಿದೆ.

ಭಾರತದಲ್ಲಿ ಕೋಮು ಸಾಮರಸ್ಯಕ್ಕೆ ದೊಡ್ಡ ಅಪಾಯ ಎದರಾಗಿರುವ ಸಂದರ್ಭದಲ್ಲಿ ಉತ್ತರ ಪ್ರದೇಶದ ಖೇರಿ ಜಿಲ್ಲೆಯ ಈ ಒಂದು ಉದಾಹರಣೆ ಭರವಸೆಯ ಸಂದೇಶವನ್ನು ನೀಡುತ್ತಿದೆ.

ಉತ್ತರ ಪ್ರದೇಶದ ಪಿಹಾನಿ ಪಟ್ಟಣದಲ್ಲಿ ಮಿಶ್ರಾನ ಸಮುದಾಯದಲ್ಲಿ ವಾಸಿಸುವ ವಿಜಯ್ ಕುಮಾರ್ ರಾಸ್ತೋಗಿ ಅವರ ಆರೋಗ್ಯ ಇದ್ದಕ್ಕಿದ್ದಂತೆ ಹದಗೆಟ್ಟಿತ್ತು. ಕೂಡಲೇ ಅವರನ್ನು ಜಿಲ್ಲಾ ಆಸ್ಪತ್ರೆಗೆ ಕರೆತಂದಾಗ ಅವರಿಗೆ ರಕ್ತದ ಅವಶ್ಯಕತೆ ಇದೆ ಎಂದು ವೈದ್ಯರು ಹೇಳಿದ್ದಾರೆ.

ಓ-ಪಾಸಿಟಿವ್ ರಕ್ತ ಅಗತ್ಯಬಿದ್ದಿದ್ದು ಕೂಡಲೇ ಯಾರ ಬಳಿಯೂ ಆ ಗುಂಪಿನ ರಕ್ತ ಲಭ್ಯವಾಗಿಲ್ಲಿ. ಬ್ಲಡ್‌ ಬ್ಯಾಂಕ್‌ನಲ್ಲಿಯೂ ಸಹ ಸಿಗದೇ ಹೋಗಿದೆ.

ಈ ವಿಷಯವನ್ನು ಸಾಮಾಜಿಕ ಜಾಲತಾಣ ಸೇರಿದಂತೆ ಹಲವೆಡೆ ಮನವಿ ಮಾಡಲಾಯಿತು. ಆಗ ಲಖಿಂಪುರ ಖೇರಿ ಜಿಲ್ಲೆಯ ಹಿದಾಯತ್ ನಗರದ ನಿವಾಸಿ ಅಲಿಶಾ ಖಾನ್ ಓ-ಪಾಸಿಟಿವ್ ರಕ್ತ ಗುಂಪನ್ನು ಹೊಂದಿದ್ದು, ಸಮಸ್ಯೆಯನ್ನು ಕೇಳಿದ ಖಾನ್ ತಕ್ಷಣ ರಕ್ತದಾನ ಮಾಡಲು ಒಪ್ಪಿದ್ದಾರೆ.

ಈ ಸಂದರ್ಭದಲ್ಲಿ ಅವರು ರಂಜಾನ್‌ ಉಪವಾಸ ವ್ರತದಲ್ಲಿದ್ದರು. ಆದರೆ ರಕ್ತದಾನ ಮಾಡಬೇಕಾದರೆ ಆಹಾರವನ್ನು ಸೇವಿಸಿರುವುದು ಕಡ್ಡಾಯವಾಗಿರುವುದರಿಂದ ಅವರು ವ್ರತ ಮುರಿದು ಆಹಾರ ಸೇವಿಸಿ ಸ್ವಲ್ಪ ಸಮಯದ ನಂತರ ರಾಸ್ತೋಗಿಗೆ ರಕ್ತದಾನ ಮಾಡಿದ್ದಾರೆ. ಈಗ ರಾಸ್ತೋಗಿಯವರ ಆರೋಗ್ಯವು ಉತ್ತಮವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಈಗ ಅಲಿಶಾ ಖಾನ್ ಅವರ ನಿಸ್ವಾರ್ಥ ಕೃತ್ಯಕ್ಕಾಗಿ ಆನ್‌ಲೈನ್‌ನಲ್ಲಿ ಭಾರೀ ಪ್ರಶಂಸೆಗೆ ಪಾತ್ರವಾಗಿದೆ. ಹಲವಾರು ಜನರು ಇದು “ಭಾರತದ ನಿಜವಾದ ಮುಖ” ಎಂದು ಕರೆಯುತ್ತಿದ್ದಾರೆ. ಬಹಳಷ್ಟು ಟ್ವಿಟ್ಟರ್‌ ಬಳಕೆದಾರರು ಅಲಿಶಾ ಖಾನ್ ರಕ್ತ ನೀಡುತ್ತಿರುವ ಚಿತ್ರವನ್ನು ಹಂಚಿಕೊಂಡು ಶುಭಾಶಯ ತಿಳಿಸಿದ್ದಾರೆ. ಜೈ ಹಿಂದ್‌ ಎಂದು ಉಲ್ಲೇಖ ಮಾಡಿದ್ದಾರೆ.


ಇದನ್ನೂ ಓದಿ: 10 ಸಾವಿರ ವೆಚ್ಚದಲ್ಲಿ ವೆಂಟಿಲೇಟರ್‌ ತಯಾರಿಸಿದ ಕಾಶ್ಮೀರಿ ಯುವಕರ ತಂಡ! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. O+ve blood ಎಲ್ಲೂ ಸಿಗಲಿಲ್ಲ ಅನ್ನೋದು ಮೊದಲ ಸುಳ್ಳು. ಪ್ರಚಾರ priyate ಅಷ್ಟೇ.
    ಸುಳ್ಯದ ಕಾಂಗ್ರೆಸ್ ನಾಯಕಿ ವಹೀದಾ ಇಸ್ಮಾಯಿಲ್ ಗೆ ಅವರದೇ ಸಮುದಾಯದ ವ್ಯಕ್ತಿ ಚೂರಿ ಹಾಕಿದಾಗ ತುರ್ತು ab + ವೇ ರಕ್ತ ನೀಡಿದ್ದು ಭಜರಂಗ್ ದಳದ ವಿನಯ್ ಕುಮಾರ್ ಮತ್ತು ಮಹೇಶ್ ಕುಮಾರ್. ಆದರೆ ಪ್ರಚಾರ ಪಡೆಯ ಲಿಲ್ಲ.

  2. ಇದರಲ್ಲಿ ಜಾತಿ ಭೆದ ಬೇಡ ನಾಲೆ ದಿವಸ ನಮಗೆ ಏನ್ ಅಗ್ಬಹುದು ಯಾರಿಗು ಎಲಲಿಕ್ಕೆ ಸಾದ್ಯ ವಿಲ್ಲ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...