Homeಮುಖಪುಟಗುಡ್‌ ನ್ಯೂಸ್‌: ಹಿಂದೂ ಯುವಕನಿಗೆ ರಕ್ತದಾನ ಮಾಡಲು ಉಪವಾಸ ವ್ರತ ಮುರಿದ ಮುಸ್ಲಿಂ ಮಹಿಳೆ..

ಗುಡ್‌ ನ್ಯೂಸ್‌: ಹಿಂದೂ ಯುವಕನಿಗೆ ರಕ್ತದಾನ ಮಾಡಲು ಉಪವಾಸ ವ್ರತ ಮುರಿದ ಮುಸ್ಲಿಂ ಮಹಿಳೆ..

- Advertisement -
- Advertisement -

ಹಿಂದೂ ಯುವಕನಿಗೆ ರಕ್ತದಾನ ಮಾಡಲು ಮುಸ್ಲಿಂ ಮಹಿಳೆಯೊಬ್ಬರು ರಂಜಾನ್‌ ಉಪವಾಸ ವ್ರತ ಮುರಿದ ಅಪರೂಪದ ಘಟನೆ ಜರುಗಿದೆ.

ಭಾರತದಲ್ಲಿ ಕೋಮು ಸಾಮರಸ್ಯಕ್ಕೆ ದೊಡ್ಡ ಅಪಾಯ ಎದರಾಗಿರುವ ಸಂದರ್ಭದಲ್ಲಿ ಉತ್ತರ ಪ್ರದೇಶದ ಖೇರಿ ಜಿಲ್ಲೆಯ ಈ ಒಂದು ಉದಾಹರಣೆ ಭರವಸೆಯ ಸಂದೇಶವನ್ನು ನೀಡುತ್ತಿದೆ.

ಉತ್ತರ ಪ್ರದೇಶದ ಪಿಹಾನಿ ಪಟ್ಟಣದಲ್ಲಿ ಮಿಶ್ರಾನ ಸಮುದಾಯದಲ್ಲಿ ವಾಸಿಸುವ ವಿಜಯ್ ಕುಮಾರ್ ರಾಸ್ತೋಗಿ ಅವರ ಆರೋಗ್ಯ ಇದ್ದಕ್ಕಿದ್ದಂತೆ ಹದಗೆಟ್ಟಿತ್ತು. ಕೂಡಲೇ ಅವರನ್ನು ಜಿಲ್ಲಾ ಆಸ್ಪತ್ರೆಗೆ ಕರೆತಂದಾಗ ಅವರಿಗೆ ರಕ್ತದ ಅವಶ್ಯಕತೆ ಇದೆ ಎಂದು ವೈದ್ಯರು ಹೇಳಿದ್ದಾರೆ.

ಓ-ಪಾಸಿಟಿವ್ ರಕ್ತ ಅಗತ್ಯಬಿದ್ದಿದ್ದು ಕೂಡಲೇ ಯಾರ ಬಳಿಯೂ ಆ ಗುಂಪಿನ ರಕ್ತ ಲಭ್ಯವಾಗಿಲ್ಲಿ. ಬ್ಲಡ್‌ ಬ್ಯಾಂಕ್‌ನಲ್ಲಿಯೂ ಸಹ ಸಿಗದೇ ಹೋಗಿದೆ.

ಈ ವಿಷಯವನ್ನು ಸಾಮಾಜಿಕ ಜಾಲತಾಣ ಸೇರಿದಂತೆ ಹಲವೆಡೆ ಮನವಿ ಮಾಡಲಾಯಿತು. ಆಗ ಲಖಿಂಪುರ ಖೇರಿ ಜಿಲ್ಲೆಯ ಹಿದಾಯತ್ ನಗರದ ನಿವಾಸಿ ಅಲಿಶಾ ಖಾನ್ ಓ-ಪಾಸಿಟಿವ್ ರಕ್ತ ಗುಂಪನ್ನು ಹೊಂದಿದ್ದು, ಸಮಸ್ಯೆಯನ್ನು ಕೇಳಿದ ಖಾನ್ ತಕ್ಷಣ ರಕ್ತದಾನ ಮಾಡಲು ಒಪ್ಪಿದ್ದಾರೆ.

ಈ ಸಂದರ್ಭದಲ್ಲಿ ಅವರು ರಂಜಾನ್‌ ಉಪವಾಸ ವ್ರತದಲ್ಲಿದ್ದರು. ಆದರೆ ರಕ್ತದಾನ ಮಾಡಬೇಕಾದರೆ ಆಹಾರವನ್ನು ಸೇವಿಸಿರುವುದು ಕಡ್ಡಾಯವಾಗಿರುವುದರಿಂದ ಅವರು ವ್ರತ ಮುರಿದು ಆಹಾರ ಸೇವಿಸಿ ಸ್ವಲ್ಪ ಸಮಯದ ನಂತರ ರಾಸ್ತೋಗಿಗೆ ರಕ್ತದಾನ ಮಾಡಿದ್ದಾರೆ. ಈಗ ರಾಸ್ತೋಗಿಯವರ ಆರೋಗ್ಯವು ಉತ್ತಮವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಈಗ ಅಲಿಶಾ ಖಾನ್ ಅವರ ನಿಸ್ವಾರ್ಥ ಕೃತ್ಯಕ್ಕಾಗಿ ಆನ್‌ಲೈನ್‌ನಲ್ಲಿ ಭಾರೀ ಪ್ರಶಂಸೆಗೆ ಪಾತ್ರವಾಗಿದೆ. ಹಲವಾರು ಜನರು ಇದು “ಭಾರತದ ನಿಜವಾದ ಮುಖ” ಎಂದು ಕರೆಯುತ್ತಿದ್ದಾರೆ. ಬಹಳಷ್ಟು ಟ್ವಿಟ್ಟರ್‌ ಬಳಕೆದಾರರು ಅಲಿಶಾ ಖಾನ್ ರಕ್ತ ನೀಡುತ್ತಿರುವ ಚಿತ್ರವನ್ನು ಹಂಚಿಕೊಂಡು ಶುಭಾಶಯ ತಿಳಿಸಿದ್ದಾರೆ. ಜೈ ಹಿಂದ್‌ ಎಂದು ಉಲ್ಲೇಖ ಮಾಡಿದ್ದಾರೆ.


ಇದನ್ನೂ ಓದಿ: 10 ಸಾವಿರ ವೆಚ್ಚದಲ್ಲಿ ವೆಂಟಿಲೇಟರ್‌ ತಯಾರಿಸಿದ ಕಾಶ್ಮೀರಿ ಯುವಕರ ತಂಡ! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. O+ve blood ಎಲ್ಲೂ ಸಿಗಲಿಲ್ಲ ಅನ್ನೋದು ಮೊದಲ ಸುಳ್ಳು. ಪ್ರಚಾರ priyate ಅಷ್ಟೇ.
    ಸುಳ್ಯದ ಕಾಂಗ್ರೆಸ್ ನಾಯಕಿ ವಹೀದಾ ಇಸ್ಮಾಯಿಲ್ ಗೆ ಅವರದೇ ಸಮುದಾಯದ ವ್ಯಕ್ತಿ ಚೂರಿ ಹಾಕಿದಾಗ ತುರ್ತು ab + ವೇ ರಕ್ತ ನೀಡಿದ್ದು ಭಜರಂಗ್ ದಳದ ವಿನಯ್ ಕುಮಾರ್ ಮತ್ತು ಮಹೇಶ್ ಕುಮಾರ್. ಆದರೆ ಪ್ರಚಾರ ಪಡೆಯ ಲಿಲ್ಲ.

  2. ಇದರಲ್ಲಿ ಜಾತಿ ಭೆದ ಬೇಡ ನಾಲೆ ದಿವಸ ನಮಗೆ ಏನ್ ಅಗ್ಬಹುದು ಯಾರಿಗು ಎಲಲಿಕ್ಕೆ ಸಾದ್ಯ ವಿಲ್ಲ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...