Homeನ್ಯಾಯ ಪಥಪುಟಕ್ಕಿಟ್ಟ ಪುಟಗಳು: ಶುಭ ಸಂದೇಶ ಹೊಸ ಒಡಂಬಡಿಕೆ - ಯೋಗೇಶ್ ಮಾಸ್ಟರ್

ಪುಟಕ್ಕಿಟ್ಟ ಪುಟಗಳು: ಶುಭ ಸಂದೇಶ ಹೊಸ ಒಡಂಬಡಿಕೆ – ಯೋಗೇಶ್ ಮಾಸ್ಟರ್

ಬಸವನ ಕುರುಹನ್ನು ಉಳಿಸಿ ವಿಜೃಂಭಿಸಲು ಪ್ರಾರಂಭದ ಬಸವಪ್ರೇಮಿಗಳು ಪುರಾಣದ ಮೊರೆ ಹೋದಂತೆ ಪ್ರಾರಂಭದ ಕ್ರೈಸ್ತರು ಕ್ರಿಸ್ತನ ಮಹತ್ವವನ್ನು ವಿಜೃಂಭಿಸಲು ಪವಾಡಗಳ ಮೊರೆ ಹೋದರು.

- Advertisement -
- Advertisement -

ಅತ್ಯಂತ ಹೆಚ್ಚು ಮುದ್ರಣವಾದ ಪುಸ್ತಕ ಬೈಬಲ್. ಅದರ ಪ್ರತಿಗಳಷ್ಟು ಕ್ರೈಸ್ತರಿರದಿದ್ದರೂ, ಧರ್ಮಪ್ರಚಾರದ ಕರ್ತವ್ಯದಿಂದ ಪಾದ್ರಿಗಳು ಭಾಷೆಗಳನ್ನು ಕಲಿತು ಬೈಬಲ್ಲನ್ನೂ ಮತ್ತು ಕ್ರಿಸ್ತನನ್ನೂ ಜನರಿಗೆ ಪರಿಚಯಿಸಿದರು. ಇದರ ಅಡ್ಡಪರಿಣಾಮಗಳಾಗಿ ನಿಘಂಟುಗಳು ಪ್ರಾದೇಶಿಕ ಭಾಷೆಗಳಿಗೆ ಲಭ್ಯವಾದವು ಮತ್ತು ಅಕ್ಷರವಂಚಿತ ವರ್ಗದವರು ಸುಶಿಕ್ಷಿತರಾದರು. ಕನ್ನಡಕ್ಕೆ ಕಿಟ್ಟಲ್ ನಿಘಂಟನ್ನು ನೀಡಿದಂತೆ ಕ್ರೈಸ್ತರು ಬಹಳಷ್ಟು ಭಾಷೆಗಳಿಗೆ ನಿಘಂಟುಗಳನ್ನು ನೀಡಿದರು.

ಶುಭ ಸಂದೇಶವೆಂದರೆ ಕ್ರಿಸ್ತನ ಜೀವನ ಮತ್ತು ಅವನ ಆಪ್ತ ಶಿಷ್ಯರು ತಮ್ಮ ಗುರುವಿನ ಶುಭ ಸಂದೇಶವನ್ನು ಪ್ರಚಾರ ಮಾಡಿದ ಕತೆ. ಇದನ್ನು ಒಡಂಬಡಿಕೆ ಅಥವಾ ಒಪ್ಪಂದ ಎನ್ನುವುದು. ಏಕೆಂದರೆ, ದೇವರು ಮಾನವರೊಂದಿಗೆ ಮಾಡಿಕೊಂಡಿರುವ ಹೊಸ ಒಪ್ಪಂದ ಎಂದು. ಮನುಷ್ಯರ ಬಾಳ್ವೆಗೆ ಬೇಕಾದ ಸತ್ಯವನ್ನೇ ದೇವರೆಂದು, ಅದರ ಮಗನಾಗಿ ಗುರುತಿಸಿಕೊಂಡ ಯೇಸು ತನ್ನಪ್ಪನ ಒಲವ ಪಡೆಯಲು ತಾನೇ ಬೆಳಕು ಮತ್ತು ಮಾರ್ಗವಾದ.

ಯೇಸು ದೇವಾಲಯಗಳಲ್ಲಿನ ವ್ಯಾಪಾರಿ ಧೋರಣೆಗಳನ್ನು ಖಂಡಿಸಿ ಆ್ಯಂಗ್ರೀ ಯಂಗ್‍ಮ್ಯಾನ್‍ನಂತೆ ಅಲ್ಲಿ ವಸ್ತುಗಳನ್ನೆಲ್ಲಾ ಚೆಲ್ಲಾಡಿ, ಚಾಟಿ ಬೀಸಿ ಕೂಗಾಡುತ್ತಾನೆ “ದೇವಾಲಯವನ್ನು ಸಂತೆಯನ್ನಾಗಿಸಬೇಡಿ” ಎಂದು. ರೋಮ್ ಚಕ್ರಾಧಿಪತ್ಯದ ಅಂಕೆಯಲ್ಲಿದ್ದ ಯೆಹೂದಿಗಳು ಮೌಢ್ಯ ಮತ್ತು ಸಂಪ್ರದಾಯಗಳಲ್ಲಿ ಬಿದ್ದಿದ್ದಾರೆಂದು ಅರ್ಥವಾಗಿ ಯೇಸುವೂ ಕಲ್ಯಾಣದ ಬಸವಣ್ಣನಂತೆ ಸಮಾಜದಿಂದ ಬಹಿಷ್ಕೃತರೊಂದಿಗೆ, ತಳವರ್ಗದವರೊಂದಿಗೆಯೇ ಸೇರಿ ಕಣ್ಣು ತೆರೆಸಲು ಪ್ರಾರಂಭಿಸುತ್ತಾನೆ.

ಅವನ ಬೆಟ್ಟದ ಮೇಲಿನ ಬೋಧನೆ ಮತ್ತು ಸಂದರ್ಭಾನುಸಾರ ನೀಡುವ ತಿಳುವಳಿಕೆ ಈಗೂ ಅತ್ಯದ್ಭುತ ಮತ್ತು ಸೂಕ್ಷ್ಮ ಒಳನೋಟಗಳು. ತಲೆ ಮೇಲೆ ಆಣೆ ಮಾಡಿದರೆ ಕಪ್ಪು ಕೂದಲನ್ನು ಬೆಳ್ಳಗಾಗಿಸದು, ಬಿಳಿಯದನ್ನು ಕಪ್ಪಾಗಿಸದು ಎನ್ನುತ್ತಾ ಮೌಢ್ಯವನ್ನು ಧಿಕ್ಕರಿಸಿದರೆ, ದೇವರಿಗೆ ನೈವೇದ್ಯ ನೀಡುವಾಗ ಮೊದಲು ನಿನ್ನ ನೆರೆಯವನೊಂದಿಗಿನ ವ್ಯಾಜ್ಯವನ್ನು ಬಗೆಹರಿಸಿ ಆರಾಧನೆ ಸಲ್ಲಿಸು ಎನ್ನುತ್ತಾ ದೇವರಿಗಿಂತ ಮುಖ್ಯ ಮಾನವನೊಂದಿಗಿನ ನಿನ್ನ ಸಂಬಂಧ ಎಂದು ಸೌಹಾರ್ದತೆ ತೋರುತ್ತಾನೆ. ಹಾದರದವಳಿಗೆ ಕಲ್ಲೊಗೆಯುವ ಮಂದಿಗೆ ತಪ್ಪು ಮಾಡದವರು ಮೊದಲು ಕಲ್ಲು ಬೀರಲಿ ಎಂದು ಸಮಾಜದ ಸೋಗಲಾಡಿ ನೈತಿಕತೆಯನ್ನು ಪ್ರಶ್ನಿಸುತ್ತಾನೆ. ಭೀತಿಯ ದೇವರನ್ನು ಪ್ರೀತಿಯ ತಂದೆಯನ್ನಾಗಿಸಿ ಸಾಂಪ್ರದಾಯಕ ಪರಿಕಲ್ಪನೆಯನ್ನು ತೊಲಗಿಸಿಬಿಡುತ್ತಾನೆ. ಬದುಕು ಮತ್ತು ಬೋಧನೆಗಳ ಪೂರ್ತಿ ಪ್ರೀತಿ, ಸಾಮರಸ್ಯ, ಕ್ಷಮೆ, ಆತ್ಮಾವಲೋಕನ, ಪಶ್ಚಾತ್ತಾಪದಂತಹ ಮೌಲ್ಯಗಳನ್ನೇ ಪ್ರತಿಪಾದಿಸುತ್ತಾನೆ.

ಮ್ಯಾಥ್ಯೂ, ಮಾರ್ಕ್, ಲೂಕ್ ಮತ್ತು ಜಾನ್ ಅವರದ್ದನ್ನೇ ಪ್ರಧಾನವಾಗಿ ಬೈಬಲ್ಲಿನಲ್ಲಿ ಹೊಂದಿದ್ದರೂ ಅವರ ಬರವಣಿಗೆಗಳಲ್ಲಿಯೇ ವ್ಯತ್ಯಾಸಗಳಿವೆ. ಯೇಸುವಿನ ಕಾಲದಲ್ಲಿ ಬದುಕಿದ್ದ ಜೋಸೆಫಸ್‍ನ ಬರವಣಿಗೆಗಳನ್ನು ಇವರು ತೆಗೆದುಕೊಳ್ಳದೇ ಇರುವುದಕ್ಕೆ ಕಾರಣ ಧಾರ್ಮಿಕತೆಯನ್ನು ಗಟ್ಟಿಗೊಳಿಸದೇ ವಾಸ್ತವದ ಶೈಲಿಯಲ್ಲಿರಬಹುದು. ಯೇಸುವೇ ಪವಾಡಗಳನ್ನು ಅಲ್ಲಗಳೆಯುವಾಗ ಬೈಬಲ್ಲು ಪವಾಡಗಳಿಂದಲೇ ತುಂಬಿವೆ. ಉತ್ಪ್ರೇಕ್ಷೆ ಮತ್ತು ರೂಪಕಗಳಲ್ಲಿ ನಾವು ಯೇಸುವನ್ನು ಗುರುತಿಸಬೇಕು.

ಕರ್ನಾಟಕದಲ್ಲಿ ಬಸವಣ್ಣನ ಮರಣಾನಂತರ ಶರಣರು ಚೆಲ್ಲಾಪಿಲ್ಲಿಯಾದಂತೆ ಕ್ರಿಸ್ತನ ಮರಣಾನಂತರವೂ ಅವನ ಶಿಷ್ಯರು ಚೆಲ್ಲಾಪಿಲ್ಲಿಯಾಗಿದ್ದರು. ಬಸವನ ಕುರುಹನ್ನು ಉಳಿಸಿ ವಿಜೃಂಭಿಸಲು ಪ್ರಾರಂಭದ ಬಸವಪ್ರೇಮಿಗಳು ಪುರಾಣದ ಮೊರೆ ಹೋದಂತೆ ಪ್ರಾರಂಭದ ಕ್ರೈಸ್ತರು ಕ್ರಿಸ್ತನ ಮಹತ್ವವನ್ನು ವಿಜೃಂಭಿಸಲು ಪವಾಡಗಳ ಮೊರೆ ಹೋದರು. ಗುಟ್ಟಾಗಿ ಒಟ್ಟಾಗುತ್ತಾ ಧರ್ಮಸಭೆಗಳನ್ನು ಮಾಡುತ್ತಾ ಹೊರಗಿನ ಸಮಾಜಕ್ಕೆ ಬಂದಿದ್ದು ಅವರ ತ್ಯಾಗ ಬಲಿದಾನಗಳ ಕತೆಯೇ.

ಕ್ರಿಸ್ತನೆಂಬ ಕ್ರಾಂತಿಯೋಗಿ ತನ್ನ ಜೀವಿತಾವಧಿಯಲ್ಲಿ ಪ್ರೀತಿ, ಕರುಣೆ, ಸೌಹಾರ್ದ, ಕ್ಷಮೆ, ಪಶ್ಚಾತ್ತಾಪ, ಸಮಾನತೆ ಇವುಗಳೆಲ್ಲವನ್ನೂ ಹೊಂದಿರುವ ವ್ಯಕ್ತಿಗಳನ್ನು ರೂಪಿಸಲು, ಸಮಾಜವನ್ನು ಕಟ್ಟಲು ಯತ್ನಿಸಿದ್ದೇ ಪವಾಡ. ಇದೇ ಶುಭ ಸಂದೇಶದ ಪುಟಗಳಲ್ಲಿ ಪುಟಕ್ಕಿಟ್ಟಂತೆ ಹೊಳೆಯುವುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...