Homeನ್ಯಾಯ ಪಥಪುಟಕ್ಕಿಟ್ಟ ಪುಟಗಳು: ಶುಭ ಸಂದೇಶ ಹೊಸ ಒಡಂಬಡಿಕೆ - ಯೋಗೇಶ್ ಮಾಸ್ಟರ್

ಪುಟಕ್ಕಿಟ್ಟ ಪುಟಗಳು: ಶುಭ ಸಂದೇಶ ಹೊಸ ಒಡಂಬಡಿಕೆ – ಯೋಗೇಶ್ ಮಾಸ್ಟರ್

ಬಸವನ ಕುರುಹನ್ನು ಉಳಿಸಿ ವಿಜೃಂಭಿಸಲು ಪ್ರಾರಂಭದ ಬಸವಪ್ರೇಮಿಗಳು ಪುರಾಣದ ಮೊರೆ ಹೋದಂತೆ ಪ್ರಾರಂಭದ ಕ್ರೈಸ್ತರು ಕ್ರಿಸ್ತನ ಮಹತ್ವವನ್ನು ವಿಜೃಂಭಿಸಲು ಪವಾಡಗಳ ಮೊರೆ ಹೋದರು.

- Advertisement -
- Advertisement -

ಅತ್ಯಂತ ಹೆಚ್ಚು ಮುದ್ರಣವಾದ ಪುಸ್ತಕ ಬೈಬಲ್. ಅದರ ಪ್ರತಿಗಳಷ್ಟು ಕ್ರೈಸ್ತರಿರದಿದ್ದರೂ, ಧರ್ಮಪ್ರಚಾರದ ಕರ್ತವ್ಯದಿಂದ ಪಾದ್ರಿಗಳು ಭಾಷೆಗಳನ್ನು ಕಲಿತು ಬೈಬಲ್ಲನ್ನೂ ಮತ್ತು ಕ್ರಿಸ್ತನನ್ನೂ ಜನರಿಗೆ ಪರಿಚಯಿಸಿದರು. ಇದರ ಅಡ್ಡಪರಿಣಾಮಗಳಾಗಿ ನಿಘಂಟುಗಳು ಪ್ರಾದೇಶಿಕ ಭಾಷೆಗಳಿಗೆ ಲಭ್ಯವಾದವು ಮತ್ತು ಅಕ್ಷರವಂಚಿತ ವರ್ಗದವರು ಸುಶಿಕ್ಷಿತರಾದರು. ಕನ್ನಡಕ್ಕೆ ಕಿಟ್ಟಲ್ ನಿಘಂಟನ್ನು ನೀಡಿದಂತೆ ಕ್ರೈಸ್ತರು ಬಹಳಷ್ಟು ಭಾಷೆಗಳಿಗೆ ನಿಘಂಟುಗಳನ್ನು ನೀಡಿದರು.

ಶುಭ ಸಂದೇಶವೆಂದರೆ ಕ್ರಿಸ್ತನ ಜೀವನ ಮತ್ತು ಅವನ ಆಪ್ತ ಶಿಷ್ಯರು ತಮ್ಮ ಗುರುವಿನ ಶುಭ ಸಂದೇಶವನ್ನು ಪ್ರಚಾರ ಮಾಡಿದ ಕತೆ. ಇದನ್ನು ಒಡಂಬಡಿಕೆ ಅಥವಾ ಒಪ್ಪಂದ ಎನ್ನುವುದು. ಏಕೆಂದರೆ, ದೇವರು ಮಾನವರೊಂದಿಗೆ ಮಾಡಿಕೊಂಡಿರುವ ಹೊಸ ಒಪ್ಪಂದ ಎಂದು. ಮನುಷ್ಯರ ಬಾಳ್ವೆಗೆ ಬೇಕಾದ ಸತ್ಯವನ್ನೇ ದೇವರೆಂದು, ಅದರ ಮಗನಾಗಿ ಗುರುತಿಸಿಕೊಂಡ ಯೇಸು ತನ್ನಪ್ಪನ ಒಲವ ಪಡೆಯಲು ತಾನೇ ಬೆಳಕು ಮತ್ತು ಮಾರ್ಗವಾದ.

ಯೇಸು ದೇವಾಲಯಗಳಲ್ಲಿನ ವ್ಯಾಪಾರಿ ಧೋರಣೆಗಳನ್ನು ಖಂಡಿಸಿ ಆ್ಯಂಗ್ರೀ ಯಂಗ್‍ಮ್ಯಾನ್‍ನಂತೆ ಅಲ್ಲಿ ವಸ್ತುಗಳನ್ನೆಲ್ಲಾ ಚೆಲ್ಲಾಡಿ, ಚಾಟಿ ಬೀಸಿ ಕೂಗಾಡುತ್ತಾನೆ “ದೇವಾಲಯವನ್ನು ಸಂತೆಯನ್ನಾಗಿಸಬೇಡಿ” ಎಂದು. ರೋಮ್ ಚಕ್ರಾಧಿಪತ್ಯದ ಅಂಕೆಯಲ್ಲಿದ್ದ ಯೆಹೂದಿಗಳು ಮೌಢ್ಯ ಮತ್ತು ಸಂಪ್ರದಾಯಗಳಲ್ಲಿ ಬಿದ್ದಿದ್ದಾರೆಂದು ಅರ್ಥವಾಗಿ ಯೇಸುವೂ ಕಲ್ಯಾಣದ ಬಸವಣ್ಣನಂತೆ ಸಮಾಜದಿಂದ ಬಹಿಷ್ಕೃತರೊಂದಿಗೆ, ತಳವರ್ಗದವರೊಂದಿಗೆಯೇ ಸೇರಿ ಕಣ್ಣು ತೆರೆಸಲು ಪ್ರಾರಂಭಿಸುತ್ತಾನೆ.

ಅವನ ಬೆಟ್ಟದ ಮೇಲಿನ ಬೋಧನೆ ಮತ್ತು ಸಂದರ್ಭಾನುಸಾರ ನೀಡುವ ತಿಳುವಳಿಕೆ ಈಗೂ ಅತ್ಯದ್ಭುತ ಮತ್ತು ಸೂಕ್ಷ್ಮ ಒಳನೋಟಗಳು. ತಲೆ ಮೇಲೆ ಆಣೆ ಮಾಡಿದರೆ ಕಪ್ಪು ಕೂದಲನ್ನು ಬೆಳ್ಳಗಾಗಿಸದು, ಬಿಳಿಯದನ್ನು ಕಪ್ಪಾಗಿಸದು ಎನ್ನುತ್ತಾ ಮೌಢ್ಯವನ್ನು ಧಿಕ್ಕರಿಸಿದರೆ, ದೇವರಿಗೆ ನೈವೇದ್ಯ ನೀಡುವಾಗ ಮೊದಲು ನಿನ್ನ ನೆರೆಯವನೊಂದಿಗಿನ ವ್ಯಾಜ್ಯವನ್ನು ಬಗೆಹರಿಸಿ ಆರಾಧನೆ ಸಲ್ಲಿಸು ಎನ್ನುತ್ತಾ ದೇವರಿಗಿಂತ ಮುಖ್ಯ ಮಾನವನೊಂದಿಗಿನ ನಿನ್ನ ಸಂಬಂಧ ಎಂದು ಸೌಹಾರ್ದತೆ ತೋರುತ್ತಾನೆ. ಹಾದರದವಳಿಗೆ ಕಲ್ಲೊಗೆಯುವ ಮಂದಿಗೆ ತಪ್ಪು ಮಾಡದವರು ಮೊದಲು ಕಲ್ಲು ಬೀರಲಿ ಎಂದು ಸಮಾಜದ ಸೋಗಲಾಡಿ ನೈತಿಕತೆಯನ್ನು ಪ್ರಶ್ನಿಸುತ್ತಾನೆ. ಭೀತಿಯ ದೇವರನ್ನು ಪ್ರೀತಿಯ ತಂದೆಯನ್ನಾಗಿಸಿ ಸಾಂಪ್ರದಾಯಕ ಪರಿಕಲ್ಪನೆಯನ್ನು ತೊಲಗಿಸಿಬಿಡುತ್ತಾನೆ. ಬದುಕು ಮತ್ತು ಬೋಧನೆಗಳ ಪೂರ್ತಿ ಪ್ರೀತಿ, ಸಾಮರಸ್ಯ, ಕ್ಷಮೆ, ಆತ್ಮಾವಲೋಕನ, ಪಶ್ಚಾತ್ತಾಪದಂತಹ ಮೌಲ್ಯಗಳನ್ನೇ ಪ್ರತಿಪಾದಿಸುತ್ತಾನೆ.

ಮ್ಯಾಥ್ಯೂ, ಮಾರ್ಕ್, ಲೂಕ್ ಮತ್ತು ಜಾನ್ ಅವರದ್ದನ್ನೇ ಪ್ರಧಾನವಾಗಿ ಬೈಬಲ್ಲಿನಲ್ಲಿ ಹೊಂದಿದ್ದರೂ ಅವರ ಬರವಣಿಗೆಗಳಲ್ಲಿಯೇ ವ್ಯತ್ಯಾಸಗಳಿವೆ. ಯೇಸುವಿನ ಕಾಲದಲ್ಲಿ ಬದುಕಿದ್ದ ಜೋಸೆಫಸ್‍ನ ಬರವಣಿಗೆಗಳನ್ನು ಇವರು ತೆಗೆದುಕೊಳ್ಳದೇ ಇರುವುದಕ್ಕೆ ಕಾರಣ ಧಾರ್ಮಿಕತೆಯನ್ನು ಗಟ್ಟಿಗೊಳಿಸದೇ ವಾಸ್ತವದ ಶೈಲಿಯಲ್ಲಿರಬಹುದು. ಯೇಸುವೇ ಪವಾಡಗಳನ್ನು ಅಲ್ಲಗಳೆಯುವಾಗ ಬೈಬಲ್ಲು ಪವಾಡಗಳಿಂದಲೇ ತುಂಬಿವೆ. ಉತ್ಪ್ರೇಕ್ಷೆ ಮತ್ತು ರೂಪಕಗಳಲ್ಲಿ ನಾವು ಯೇಸುವನ್ನು ಗುರುತಿಸಬೇಕು.

ಕರ್ನಾಟಕದಲ್ಲಿ ಬಸವಣ್ಣನ ಮರಣಾನಂತರ ಶರಣರು ಚೆಲ್ಲಾಪಿಲ್ಲಿಯಾದಂತೆ ಕ್ರಿಸ್ತನ ಮರಣಾನಂತರವೂ ಅವನ ಶಿಷ್ಯರು ಚೆಲ್ಲಾಪಿಲ್ಲಿಯಾಗಿದ್ದರು. ಬಸವನ ಕುರುಹನ್ನು ಉಳಿಸಿ ವಿಜೃಂಭಿಸಲು ಪ್ರಾರಂಭದ ಬಸವಪ್ರೇಮಿಗಳು ಪುರಾಣದ ಮೊರೆ ಹೋದಂತೆ ಪ್ರಾರಂಭದ ಕ್ರೈಸ್ತರು ಕ್ರಿಸ್ತನ ಮಹತ್ವವನ್ನು ವಿಜೃಂಭಿಸಲು ಪವಾಡಗಳ ಮೊರೆ ಹೋದರು. ಗುಟ್ಟಾಗಿ ಒಟ್ಟಾಗುತ್ತಾ ಧರ್ಮಸಭೆಗಳನ್ನು ಮಾಡುತ್ತಾ ಹೊರಗಿನ ಸಮಾಜಕ್ಕೆ ಬಂದಿದ್ದು ಅವರ ತ್ಯಾಗ ಬಲಿದಾನಗಳ ಕತೆಯೇ.

ಕ್ರಿಸ್ತನೆಂಬ ಕ್ರಾಂತಿಯೋಗಿ ತನ್ನ ಜೀವಿತಾವಧಿಯಲ್ಲಿ ಪ್ರೀತಿ, ಕರುಣೆ, ಸೌಹಾರ್ದ, ಕ್ಷಮೆ, ಪಶ್ಚಾತ್ತಾಪ, ಸಮಾನತೆ ಇವುಗಳೆಲ್ಲವನ್ನೂ ಹೊಂದಿರುವ ವ್ಯಕ್ತಿಗಳನ್ನು ರೂಪಿಸಲು, ಸಮಾಜವನ್ನು ಕಟ್ಟಲು ಯತ್ನಿಸಿದ್ದೇ ಪವಾಡ. ಇದೇ ಶುಭ ಸಂದೇಶದ ಪುಟಗಳಲ್ಲಿ ಪುಟಕ್ಕಿಟ್ಟಂತೆ ಹೊಳೆಯುವುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...