Homeನ್ಯಾಯ ಪಥಪುಟಕ್ಕಿಟ್ಟ ಪುಟಗಳು: ಶುಭ ಸಂದೇಶ ಹೊಸ ಒಡಂಬಡಿಕೆ - ಯೋಗೇಶ್ ಮಾಸ್ಟರ್

ಪುಟಕ್ಕಿಟ್ಟ ಪುಟಗಳು: ಶುಭ ಸಂದೇಶ ಹೊಸ ಒಡಂಬಡಿಕೆ – ಯೋಗೇಶ್ ಮಾಸ್ಟರ್

ಬಸವನ ಕುರುಹನ್ನು ಉಳಿಸಿ ವಿಜೃಂಭಿಸಲು ಪ್ರಾರಂಭದ ಬಸವಪ್ರೇಮಿಗಳು ಪುರಾಣದ ಮೊರೆ ಹೋದಂತೆ ಪ್ರಾರಂಭದ ಕ್ರೈಸ್ತರು ಕ್ರಿಸ್ತನ ಮಹತ್ವವನ್ನು ವಿಜೃಂಭಿಸಲು ಪವಾಡಗಳ ಮೊರೆ ಹೋದರು.

- Advertisement -
- Advertisement -

ಅತ್ಯಂತ ಹೆಚ್ಚು ಮುದ್ರಣವಾದ ಪುಸ್ತಕ ಬೈಬಲ್. ಅದರ ಪ್ರತಿಗಳಷ್ಟು ಕ್ರೈಸ್ತರಿರದಿದ್ದರೂ, ಧರ್ಮಪ್ರಚಾರದ ಕರ್ತವ್ಯದಿಂದ ಪಾದ್ರಿಗಳು ಭಾಷೆಗಳನ್ನು ಕಲಿತು ಬೈಬಲ್ಲನ್ನೂ ಮತ್ತು ಕ್ರಿಸ್ತನನ್ನೂ ಜನರಿಗೆ ಪರಿಚಯಿಸಿದರು. ಇದರ ಅಡ್ಡಪರಿಣಾಮಗಳಾಗಿ ನಿಘಂಟುಗಳು ಪ್ರಾದೇಶಿಕ ಭಾಷೆಗಳಿಗೆ ಲಭ್ಯವಾದವು ಮತ್ತು ಅಕ್ಷರವಂಚಿತ ವರ್ಗದವರು ಸುಶಿಕ್ಷಿತರಾದರು. ಕನ್ನಡಕ್ಕೆ ಕಿಟ್ಟಲ್ ನಿಘಂಟನ್ನು ನೀಡಿದಂತೆ ಕ್ರೈಸ್ತರು ಬಹಳಷ್ಟು ಭಾಷೆಗಳಿಗೆ ನಿಘಂಟುಗಳನ್ನು ನೀಡಿದರು.

ಶುಭ ಸಂದೇಶವೆಂದರೆ ಕ್ರಿಸ್ತನ ಜೀವನ ಮತ್ತು ಅವನ ಆಪ್ತ ಶಿಷ್ಯರು ತಮ್ಮ ಗುರುವಿನ ಶುಭ ಸಂದೇಶವನ್ನು ಪ್ರಚಾರ ಮಾಡಿದ ಕತೆ. ಇದನ್ನು ಒಡಂಬಡಿಕೆ ಅಥವಾ ಒಪ್ಪಂದ ಎನ್ನುವುದು. ಏಕೆಂದರೆ, ದೇವರು ಮಾನವರೊಂದಿಗೆ ಮಾಡಿಕೊಂಡಿರುವ ಹೊಸ ಒಪ್ಪಂದ ಎಂದು. ಮನುಷ್ಯರ ಬಾಳ್ವೆಗೆ ಬೇಕಾದ ಸತ್ಯವನ್ನೇ ದೇವರೆಂದು, ಅದರ ಮಗನಾಗಿ ಗುರುತಿಸಿಕೊಂಡ ಯೇಸು ತನ್ನಪ್ಪನ ಒಲವ ಪಡೆಯಲು ತಾನೇ ಬೆಳಕು ಮತ್ತು ಮಾರ್ಗವಾದ.

ಯೇಸು ದೇವಾಲಯಗಳಲ್ಲಿನ ವ್ಯಾಪಾರಿ ಧೋರಣೆಗಳನ್ನು ಖಂಡಿಸಿ ಆ್ಯಂಗ್ರೀ ಯಂಗ್‍ಮ್ಯಾನ್‍ನಂತೆ ಅಲ್ಲಿ ವಸ್ತುಗಳನ್ನೆಲ್ಲಾ ಚೆಲ್ಲಾಡಿ, ಚಾಟಿ ಬೀಸಿ ಕೂಗಾಡುತ್ತಾನೆ “ದೇವಾಲಯವನ್ನು ಸಂತೆಯನ್ನಾಗಿಸಬೇಡಿ” ಎಂದು. ರೋಮ್ ಚಕ್ರಾಧಿಪತ್ಯದ ಅಂಕೆಯಲ್ಲಿದ್ದ ಯೆಹೂದಿಗಳು ಮೌಢ್ಯ ಮತ್ತು ಸಂಪ್ರದಾಯಗಳಲ್ಲಿ ಬಿದ್ದಿದ್ದಾರೆಂದು ಅರ್ಥವಾಗಿ ಯೇಸುವೂ ಕಲ್ಯಾಣದ ಬಸವಣ್ಣನಂತೆ ಸಮಾಜದಿಂದ ಬಹಿಷ್ಕೃತರೊಂದಿಗೆ, ತಳವರ್ಗದವರೊಂದಿಗೆಯೇ ಸೇರಿ ಕಣ್ಣು ತೆರೆಸಲು ಪ್ರಾರಂಭಿಸುತ್ತಾನೆ.

ಅವನ ಬೆಟ್ಟದ ಮೇಲಿನ ಬೋಧನೆ ಮತ್ತು ಸಂದರ್ಭಾನುಸಾರ ನೀಡುವ ತಿಳುವಳಿಕೆ ಈಗೂ ಅತ್ಯದ್ಭುತ ಮತ್ತು ಸೂಕ್ಷ್ಮ ಒಳನೋಟಗಳು. ತಲೆ ಮೇಲೆ ಆಣೆ ಮಾಡಿದರೆ ಕಪ್ಪು ಕೂದಲನ್ನು ಬೆಳ್ಳಗಾಗಿಸದು, ಬಿಳಿಯದನ್ನು ಕಪ್ಪಾಗಿಸದು ಎನ್ನುತ್ತಾ ಮೌಢ್ಯವನ್ನು ಧಿಕ್ಕರಿಸಿದರೆ, ದೇವರಿಗೆ ನೈವೇದ್ಯ ನೀಡುವಾಗ ಮೊದಲು ನಿನ್ನ ನೆರೆಯವನೊಂದಿಗಿನ ವ್ಯಾಜ್ಯವನ್ನು ಬಗೆಹರಿಸಿ ಆರಾಧನೆ ಸಲ್ಲಿಸು ಎನ್ನುತ್ತಾ ದೇವರಿಗಿಂತ ಮುಖ್ಯ ಮಾನವನೊಂದಿಗಿನ ನಿನ್ನ ಸಂಬಂಧ ಎಂದು ಸೌಹಾರ್ದತೆ ತೋರುತ್ತಾನೆ. ಹಾದರದವಳಿಗೆ ಕಲ್ಲೊಗೆಯುವ ಮಂದಿಗೆ ತಪ್ಪು ಮಾಡದವರು ಮೊದಲು ಕಲ್ಲು ಬೀರಲಿ ಎಂದು ಸಮಾಜದ ಸೋಗಲಾಡಿ ನೈತಿಕತೆಯನ್ನು ಪ್ರಶ್ನಿಸುತ್ತಾನೆ. ಭೀತಿಯ ದೇವರನ್ನು ಪ್ರೀತಿಯ ತಂದೆಯನ್ನಾಗಿಸಿ ಸಾಂಪ್ರದಾಯಕ ಪರಿಕಲ್ಪನೆಯನ್ನು ತೊಲಗಿಸಿಬಿಡುತ್ತಾನೆ. ಬದುಕು ಮತ್ತು ಬೋಧನೆಗಳ ಪೂರ್ತಿ ಪ್ರೀತಿ, ಸಾಮರಸ್ಯ, ಕ್ಷಮೆ, ಆತ್ಮಾವಲೋಕನ, ಪಶ್ಚಾತ್ತಾಪದಂತಹ ಮೌಲ್ಯಗಳನ್ನೇ ಪ್ರತಿಪಾದಿಸುತ್ತಾನೆ.

ಮ್ಯಾಥ್ಯೂ, ಮಾರ್ಕ್, ಲೂಕ್ ಮತ್ತು ಜಾನ್ ಅವರದ್ದನ್ನೇ ಪ್ರಧಾನವಾಗಿ ಬೈಬಲ್ಲಿನಲ್ಲಿ ಹೊಂದಿದ್ದರೂ ಅವರ ಬರವಣಿಗೆಗಳಲ್ಲಿಯೇ ವ್ಯತ್ಯಾಸಗಳಿವೆ. ಯೇಸುವಿನ ಕಾಲದಲ್ಲಿ ಬದುಕಿದ್ದ ಜೋಸೆಫಸ್‍ನ ಬರವಣಿಗೆಗಳನ್ನು ಇವರು ತೆಗೆದುಕೊಳ್ಳದೇ ಇರುವುದಕ್ಕೆ ಕಾರಣ ಧಾರ್ಮಿಕತೆಯನ್ನು ಗಟ್ಟಿಗೊಳಿಸದೇ ವಾಸ್ತವದ ಶೈಲಿಯಲ್ಲಿರಬಹುದು. ಯೇಸುವೇ ಪವಾಡಗಳನ್ನು ಅಲ್ಲಗಳೆಯುವಾಗ ಬೈಬಲ್ಲು ಪವಾಡಗಳಿಂದಲೇ ತುಂಬಿವೆ. ಉತ್ಪ್ರೇಕ್ಷೆ ಮತ್ತು ರೂಪಕಗಳಲ್ಲಿ ನಾವು ಯೇಸುವನ್ನು ಗುರುತಿಸಬೇಕು.

ಕರ್ನಾಟಕದಲ್ಲಿ ಬಸವಣ್ಣನ ಮರಣಾನಂತರ ಶರಣರು ಚೆಲ್ಲಾಪಿಲ್ಲಿಯಾದಂತೆ ಕ್ರಿಸ್ತನ ಮರಣಾನಂತರವೂ ಅವನ ಶಿಷ್ಯರು ಚೆಲ್ಲಾಪಿಲ್ಲಿಯಾಗಿದ್ದರು. ಬಸವನ ಕುರುಹನ್ನು ಉಳಿಸಿ ವಿಜೃಂಭಿಸಲು ಪ್ರಾರಂಭದ ಬಸವಪ್ರೇಮಿಗಳು ಪುರಾಣದ ಮೊರೆ ಹೋದಂತೆ ಪ್ರಾರಂಭದ ಕ್ರೈಸ್ತರು ಕ್ರಿಸ್ತನ ಮಹತ್ವವನ್ನು ವಿಜೃಂಭಿಸಲು ಪವಾಡಗಳ ಮೊರೆ ಹೋದರು. ಗುಟ್ಟಾಗಿ ಒಟ್ಟಾಗುತ್ತಾ ಧರ್ಮಸಭೆಗಳನ್ನು ಮಾಡುತ್ತಾ ಹೊರಗಿನ ಸಮಾಜಕ್ಕೆ ಬಂದಿದ್ದು ಅವರ ತ್ಯಾಗ ಬಲಿದಾನಗಳ ಕತೆಯೇ.

ಕ್ರಿಸ್ತನೆಂಬ ಕ್ರಾಂತಿಯೋಗಿ ತನ್ನ ಜೀವಿತಾವಧಿಯಲ್ಲಿ ಪ್ರೀತಿ, ಕರುಣೆ, ಸೌಹಾರ್ದ, ಕ್ಷಮೆ, ಪಶ್ಚಾತ್ತಾಪ, ಸಮಾನತೆ ಇವುಗಳೆಲ್ಲವನ್ನೂ ಹೊಂದಿರುವ ವ್ಯಕ್ತಿಗಳನ್ನು ರೂಪಿಸಲು, ಸಮಾಜವನ್ನು ಕಟ್ಟಲು ಯತ್ನಿಸಿದ್ದೇ ಪವಾಡ. ಇದೇ ಶುಭ ಸಂದೇಶದ ಪುಟಗಳಲ್ಲಿ ಪುಟಕ್ಕಿಟ್ಟಂತೆ ಹೊಳೆಯುವುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...