Homeಮುಖಪುಟಭಾರತದ ಡಿಜಿಟಲ್ ಉತ್ತೇಜನಕ್ಕೆ ಗೂಗಲ್‌ನಿಂದ 75,000 ಕೋಟಿ ರೂ. ನಿಧಿ

ಭಾರತದ ಡಿಜಿಟಲ್ ಉತ್ತೇಜನಕ್ಕೆ ಗೂಗಲ್‌ನಿಂದ 75,000 ಕೋಟಿ ರೂ. ನಿಧಿ

ಇದು ಭಾರತದ ಭವಿಷ್ಯ ಮತ್ತು ಅದರ ಡಿಜಿಟಲ್ ಆರ್ಥಿಕತೆಯ ಬಗ್ಗೆ ನಮ್ಮ ವಿಶ್ವಾಸದ ಪ್ರತಿಬಿಂಬವಾಗಿದೆ ಎಂದು ಪಿಚೈ ಹೇಳಿದ್ದಾರೆ.

- Advertisement -
- Advertisement -

ಮುಂದಿನ ಐದು ರಿಂದ ಏಳು ವರ್ಷಗಳಲ್ಲಿ ಭಾರತದಲ್ಲಿ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಮತ್ತು ಡಿಜಿಟಲ್ ಆವಿಷ್ಕಾರಕ್ಕೆ ಉತ್ತೇಜನ ನೀಡಲು ಕಂಪನಿಯು ಸುಮಾರು 10 ಬಿಲಿಯನ್ ಡಾಲರ್‌ (ಅಂದಾಜು 75 ಸಾವಿರ ಕೋಟಿ) ಹೂಡಿಕೆ ಮಾಡಲಿದೆ ಎಂದು ಗೂಗಲ್ ಸಿಇಒ ಸುಂದರ್ ಪಿಚೈ ಸೋಮವಾರ ಪ್ರಕಟಿಸಿದ್ದಾರೆ.

ಎಲೆಕ್ಟ್ರಾನಿಕ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಸಹಯೋಗದೊಂದಿಗೆ ನಡೆಸಿದ ಗೂಗಲ್ ಫಾರ್ ಇಂಡಿಯಾದ ಆರನೇ ಆವೃತ್ತಿಯಲ್ಲಿ ಪಿಚೈ ಮಾತನಾಡುತ್ತಿದ್ದರು.

ಪಿಚೈ ಈ ಘೋಷಣೆಗಳನ್ನು ಮಾಡುವ ಮೊದಲು, ಭಾರತದ ಡಿಜಿಟಲ್ ಭವಿಷ್ಯಕ್ಕಾಗಿ ಗೂಗಲ್‌ನ ವಿಚಾರಗಳನ್ನು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ವೀಡಿಯೊ-ಕಾನ್ಫರೆನ್ಸ್ ನಡೆಸಿದರು.

ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, “ಈ ಬೆಳಿಗ್ಗೆ, ಸುಂದರ್‌ ಪಿಚೈ ಅವರೊಂದಿಗೆ ಅತ್ಯಂತ ಫಲಪ್ರದವಾದ ಸಂವಾದವನ್ನು ನಡೆಸಿದೆ” ಎಂದು ಟ್ವೀಟ್ ಮಾಡಿದ್ದಾರೆ.

“ನಾವು ವ್ಯಾಪಕ ಶ್ರೇಣಿಯ ವಿಷಯಗಳ ಕುರಿತು ಮಾತನಾಡಿದ್ದೇವೆ, ವಿಶೇಷವಾಗಿ ಭಾರತದ ರೈತರು, ಯುವಕರು ಮತ್ತು ಉದ್ಯಮಿಗಳ ಜೀವನವನ್ನು ಪರಿವರ್ತಿಸಲು ತಂತ್ರಜ್ಞಾನದ ಶಕ್ತಿಯನ್ನು ಹೆಚ್ಚಿಸುತ್ತೇವೆ.” ಎಂದು ಅವರು ಹೇಳಿದ್ದಾರೆ.

“ಜಾಗತಿಕ ಸಾಂಕ್ರಾಮಿಕವು ಕ್ರೀಡೆಯಂತಹ ಕ್ಷೇತ್ರಗಳಿಗೆ ತಂದಿರುವ ಸವಾಲುಗಳನ್ನು ನಾವು ಚರ್ಚಿಸಿದ್ದೇವೆ. ಡೇಟಾ ಸುರಕ್ಷತೆ ಮತ್ತು ಸೈಬರ್ ಸುರಕ್ಷತೆಯ ಮಹತ್ವದ ಬಗ್ಗೆಯೂ ನಾವು ಮಾತನಾಡಿದ್ದೇವೆ” ಎಂದು ಪ್ರಧಾನಿ ಮೋದಿ ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.

“ಹಲವಾರು ಕ್ಷೇತ್ರಗಳಲ್ಲಿ ಗೂಗಲ್‌ನ ಪ್ರಯತ್ನಗಳ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಲು ನನಗೆ ಸಂತೋಷವಾಯಿತು” ಎಂದು ಪ್ರಧಾನಿ ಹೇಳಿದ್ದಾರೆ.

ಗೂಗಲ್ ಸಿಇಒ ಸುಂದರ್ ಪಿಚೈ “ಭಾರತದ ಡಿಜಿಟಲೀಕರಣದ ಈ ಹೂಡಿಕೆ ಮುಖ್ಯವಾಗಿ ನಾಲ್ಕು ಕ್ಷೇತ್ರಗಳತ್ತ ಗಮನ ಹರಿಸುವುದಾಗಿ ಹೇಳಿದ್ದಾರೆ. ಮೊದಲನೆಯದಾಗಿ ಪ್ರತಿಯೊಬ್ಬ ಭಾರತೀಯನಿಗೆ ಅವರದ್ದೇ ಆದ ಭಾಷೆಯಲ್ಲಿ, ಅದು ಹಿಂದಿ, ತಮಿಳು, ಪಂಜಾಬಿ ಅಥವಾ ಇನ್ಯಾವುದೋ ಭಾಷೆಯಾಗಿರಬಹುದು, ಆ ಭಾಷೆಯಲ್ಲಿ ಮಾಹಿತಿ ಒದಗಿಸುವುದು, ಎರಡನೆಯದಾಗಿ ಭಾರತದ ವಿಶಿಷ್ಟ ಅಗತ್ಯತೆಗಳಿಗೆ ಅನುಗುಣವಾಗಿ ಹೊಸ ಉತ್ಪನ್ನಗಳು ಹಾಗೂ ಸೇವೆಗಳನ್ನು ಅಭಿವೃದ್ಧಿಪಡಿಸುವುದು, ಮೂರನೆಯದಾಗಿ ಉದ್ಯಮಗಳು ಡಿಜಿಟಲೀಕರಣಕ್ಕೆ ಪರಿವರ್ತನೆಯಾಗುವಾಗ ಅವುಗಳ ಸಬಲೀಕರಣಕ್ಕೆ ಆದ್ಯತೆ ಹಾಗೂ ನಾಲ್ಕನೆಯದಾಗಿ  ಸಾಮಾಜಿಕ  ಹಿತದೃಷ್ಟಿಯಿಂದ ಆರೋಗ್ಯ, ಶಿಕ್ಷಣ ಮತ್ತು ಕೃಷಿ ಕ್ಷೇತ್ರಗಳಲ್ಲಿ ತಂತ್ರಜ್ಞಾನ ಮತ್ತು ಕೃತಕ ಬುದ್ಧಿಮತ್ತೆಯ ನಡುವೆ ಸಮತೋಲನ ಸಾಧಿಸುವುದು” ಎಂದು ಹೇಳಿದ್ದಾರೆ.

“ಇದು ಭಾರತದ ಭವಿಷ್ಯ ಮತ್ತು ಅದರ ಡಿಜಿಟಲ್ ಆರ್ಥಿಕತೆಯ ಬಗ್ಗೆ ನಮ್ಮ ವಿಶ್ವಾಸದ ಪ್ರತಿಬಿಂಬವಾಗಿದೆ. ಪ್ರತಿಯೊಬ್ಬ ಭಾರತೀಯರಿಗೂ ತಮ್ಮದೇ ಭಾಷೆಯಲ್ಲಿ ಕೈಗೆಟುಕುವ ಇಂಟರ್ನೆಟ್ ಪ್ರವೇಶವನ್ನು ಕಲ್ಪಿಸುವ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತೇವೆ” ಎಂದು ಪಿಚೈ ಹೇಳಿದ್ದಾರೆ.

“ನಾವು ಪ್ರಧಾನಿ ಮೋದಿ ಅವರೊಂದಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇವೆ ಮತ್ತು ಮುಂದಿನ ತರಂಗ ನಾವೀನ್ಯತೆಗೆ ಭಾರತ ಮುನ್ನಡೆಸಲಿದೆ ಎಂದು ಭಾವಿಸುತ್ತೇವೆ” ಎಂದು ಪಿಚೈ ಹೇಳಿದ್ದಾರೆ.


ಓದಿ: ವೀಸಾಗಳ ಸ್ಥಗಿತ; ಟ್ರಂಪ್ ನಿರಾಶೆಯನ್ನುಂಟು ಮಾಡಿದ್ದಾರೆಂದ ಸುಂದರ್‌ ಪಿಚೈ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...