Homeಮುಖಪುಟಭಾರತದ ಡಿಜಿಟಲ್ ಉತ್ತೇಜನಕ್ಕೆ ಗೂಗಲ್‌ನಿಂದ 75,000 ಕೋಟಿ ರೂ. ನಿಧಿ

ಭಾರತದ ಡಿಜಿಟಲ್ ಉತ್ತೇಜನಕ್ಕೆ ಗೂಗಲ್‌ನಿಂದ 75,000 ಕೋಟಿ ರೂ. ನಿಧಿ

ಇದು ಭಾರತದ ಭವಿಷ್ಯ ಮತ್ತು ಅದರ ಡಿಜಿಟಲ್ ಆರ್ಥಿಕತೆಯ ಬಗ್ಗೆ ನಮ್ಮ ವಿಶ್ವಾಸದ ಪ್ರತಿಬಿಂಬವಾಗಿದೆ ಎಂದು ಪಿಚೈ ಹೇಳಿದ್ದಾರೆ.

- Advertisement -
- Advertisement -

ಮುಂದಿನ ಐದು ರಿಂದ ಏಳು ವರ್ಷಗಳಲ್ಲಿ ಭಾರತದಲ್ಲಿ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಮತ್ತು ಡಿಜಿಟಲ್ ಆವಿಷ್ಕಾರಕ್ಕೆ ಉತ್ತೇಜನ ನೀಡಲು ಕಂಪನಿಯು ಸುಮಾರು 10 ಬಿಲಿಯನ್ ಡಾಲರ್‌ (ಅಂದಾಜು 75 ಸಾವಿರ ಕೋಟಿ) ಹೂಡಿಕೆ ಮಾಡಲಿದೆ ಎಂದು ಗೂಗಲ್ ಸಿಇಒ ಸುಂದರ್ ಪಿಚೈ ಸೋಮವಾರ ಪ್ರಕಟಿಸಿದ್ದಾರೆ.

ಎಲೆಕ್ಟ್ರಾನಿಕ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಸಹಯೋಗದೊಂದಿಗೆ ನಡೆಸಿದ ಗೂಗಲ್ ಫಾರ್ ಇಂಡಿಯಾದ ಆರನೇ ಆವೃತ್ತಿಯಲ್ಲಿ ಪಿಚೈ ಮಾತನಾಡುತ್ತಿದ್ದರು.

ಪಿಚೈ ಈ ಘೋಷಣೆಗಳನ್ನು ಮಾಡುವ ಮೊದಲು, ಭಾರತದ ಡಿಜಿಟಲ್ ಭವಿಷ್ಯಕ್ಕಾಗಿ ಗೂಗಲ್‌ನ ವಿಚಾರಗಳನ್ನು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ವೀಡಿಯೊ-ಕಾನ್ಫರೆನ್ಸ್ ನಡೆಸಿದರು.

ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, “ಈ ಬೆಳಿಗ್ಗೆ, ಸುಂದರ್‌ ಪಿಚೈ ಅವರೊಂದಿಗೆ ಅತ್ಯಂತ ಫಲಪ್ರದವಾದ ಸಂವಾದವನ್ನು ನಡೆಸಿದೆ” ಎಂದು ಟ್ವೀಟ್ ಮಾಡಿದ್ದಾರೆ.

“ನಾವು ವ್ಯಾಪಕ ಶ್ರೇಣಿಯ ವಿಷಯಗಳ ಕುರಿತು ಮಾತನಾಡಿದ್ದೇವೆ, ವಿಶೇಷವಾಗಿ ಭಾರತದ ರೈತರು, ಯುವಕರು ಮತ್ತು ಉದ್ಯಮಿಗಳ ಜೀವನವನ್ನು ಪರಿವರ್ತಿಸಲು ತಂತ್ರಜ್ಞಾನದ ಶಕ್ತಿಯನ್ನು ಹೆಚ್ಚಿಸುತ್ತೇವೆ.” ಎಂದು ಅವರು ಹೇಳಿದ್ದಾರೆ.

“ಜಾಗತಿಕ ಸಾಂಕ್ರಾಮಿಕವು ಕ್ರೀಡೆಯಂತಹ ಕ್ಷೇತ್ರಗಳಿಗೆ ತಂದಿರುವ ಸವಾಲುಗಳನ್ನು ನಾವು ಚರ್ಚಿಸಿದ್ದೇವೆ. ಡೇಟಾ ಸುರಕ್ಷತೆ ಮತ್ತು ಸೈಬರ್ ಸುರಕ್ಷತೆಯ ಮಹತ್ವದ ಬಗ್ಗೆಯೂ ನಾವು ಮಾತನಾಡಿದ್ದೇವೆ” ಎಂದು ಪ್ರಧಾನಿ ಮೋದಿ ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.

“ಹಲವಾರು ಕ್ಷೇತ್ರಗಳಲ್ಲಿ ಗೂಗಲ್‌ನ ಪ್ರಯತ್ನಗಳ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಲು ನನಗೆ ಸಂತೋಷವಾಯಿತು” ಎಂದು ಪ್ರಧಾನಿ ಹೇಳಿದ್ದಾರೆ.

ಗೂಗಲ್ ಸಿಇಒ ಸುಂದರ್ ಪಿಚೈ “ಭಾರತದ ಡಿಜಿಟಲೀಕರಣದ ಈ ಹೂಡಿಕೆ ಮುಖ್ಯವಾಗಿ ನಾಲ್ಕು ಕ್ಷೇತ್ರಗಳತ್ತ ಗಮನ ಹರಿಸುವುದಾಗಿ ಹೇಳಿದ್ದಾರೆ. ಮೊದಲನೆಯದಾಗಿ ಪ್ರತಿಯೊಬ್ಬ ಭಾರತೀಯನಿಗೆ ಅವರದ್ದೇ ಆದ ಭಾಷೆಯಲ್ಲಿ, ಅದು ಹಿಂದಿ, ತಮಿಳು, ಪಂಜಾಬಿ ಅಥವಾ ಇನ್ಯಾವುದೋ ಭಾಷೆಯಾಗಿರಬಹುದು, ಆ ಭಾಷೆಯಲ್ಲಿ ಮಾಹಿತಿ ಒದಗಿಸುವುದು, ಎರಡನೆಯದಾಗಿ ಭಾರತದ ವಿಶಿಷ್ಟ ಅಗತ್ಯತೆಗಳಿಗೆ ಅನುಗುಣವಾಗಿ ಹೊಸ ಉತ್ಪನ್ನಗಳು ಹಾಗೂ ಸೇವೆಗಳನ್ನು ಅಭಿವೃದ್ಧಿಪಡಿಸುವುದು, ಮೂರನೆಯದಾಗಿ ಉದ್ಯಮಗಳು ಡಿಜಿಟಲೀಕರಣಕ್ಕೆ ಪರಿವರ್ತನೆಯಾಗುವಾಗ ಅವುಗಳ ಸಬಲೀಕರಣಕ್ಕೆ ಆದ್ಯತೆ ಹಾಗೂ ನಾಲ್ಕನೆಯದಾಗಿ  ಸಾಮಾಜಿಕ  ಹಿತದೃಷ್ಟಿಯಿಂದ ಆರೋಗ್ಯ, ಶಿಕ್ಷಣ ಮತ್ತು ಕೃಷಿ ಕ್ಷೇತ್ರಗಳಲ್ಲಿ ತಂತ್ರಜ್ಞಾನ ಮತ್ತು ಕೃತಕ ಬುದ್ಧಿಮತ್ತೆಯ ನಡುವೆ ಸಮತೋಲನ ಸಾಧಿಸುವುದು” ಎಂದು ಹೇಳಿದ್ದಾರೆ.

“ಇದು ಭಾರತದ ಭವಿಷ್ಯ ಮತ್ತು ಅದರ ಡಿಜಿಟಲ್ ಆರ್ಥಿಕತೆಯ ಬಗ್ಗೆ ನಮ್ಮ ವಿಶ್ವಾಸದ ಪ್ರತಿಬಿಂಬವಾಗಿದೆ. ಪ್ರತಿಯೊಬ್ಬ ಭಾರತೀಯರಿಗೂ ತಮ್ಮದೇ ಭಾಷೆಯಲ್ಲಿ ಕೈಗೆಟುಕುವ ಇಂಟರ್ನೆಟ್ ಪ್ರವೇಶವನ್ನು ಕಲ್ಪಿಸುವ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತೇವೆ” ಎಂದು ಪಿಚೈ ಹೇಳಿದ್ದಾರೆ.

“ನಾವು ಪ್ರಧಾನಿ ಮೋದಿ ಅವರೊಂದಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇವೆ ಮತ್ತು ಮುಂದಿನ ತರಂಗ ನಾವೀನ್ಯತೆಗೆ ಭಾರತ ಮುನ್ನಡೆಸಲಿದೆ ಎಂದು ಭಾವಿಸುತ್ತೇವೆ” ಎಂದು ಪಿಚೈ ಹೇಳಿದ್ದಾರೆ.


ಓದಿ: ವೀಸಾಗಳ ಸ್ಥಗಿತ; ಟ್ರಂಪ್ ನಿರಾಶೆಯನ್ನುಂಟು ಮಾಡಿದ್ದಾರೆಂದ ಸುಂದರ್‌ ಪಿಚೈ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...