Homeಮುಖಪುಟಭಾರತದ ಡಿಜಿಟಲ್ ಉತ್ತೇಜನಕ್ಕೆ ಗೂಗಲ್‌ನಿಂದ 75,000 ಕೋಟಿ ರೂ. ನಿಧಿ

ಭಾರತದ ಡಿಜಿಟಲ್ ಉತ್ತೇಜನಕ್ಕೆ ಗೂಗಲ್‌ನಿಂದ 75,000 ಕೋಟಿ ರೂ. ನಿಧಿ

ಇದು ಭಾರತದ ಭವಿಷ್ಯ ಮತ್ತು ಅದರ ಡಿಜಿಟಲ್ ಆರ್ಥಿಕತೆಯ ಬಗ್ಗೆ ನಮ್ಮ ವಿಶ್ವಾಸದ ಪ್ರತಿಬಿಂಬವಾಗಿದೆ ಎಂದು ಪಿಚೈ ಹೇಳಿದ್ದಾರೆ.

- Advertisement -
- Advertisement -

ಮುಂದಿನ ಐದು ರಿಂದ ಏಳು ವರ್ಷಗಳಲ್ಲಿ ಭಾರತದಲ್ಲಿ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಮತ್ತು ಡಿಜಿಟಲ್ ಆವಿಷ್ಕಾರಕ್ಕೆ ಉತ್ತೇಜನ ನೀಡಲು ಕಂಪನಿಯು ಸುಮಾರು 10 ಬಿಲಿಯನ್ ಡಾಲರ್‌ (ಅಂದಾಜು 75 ಸಾವಿರ ಕೋಟಿ) ಹೂಡಿಕೆ ಮಾಡಲಿದೆ ಎಂದು ಗೂಗಲ್ ಸಿಇಒ ಸುಂದರ್ ಪಿಚೈ ಸೋಮವಾರ ಪ್ರಕಟಿಸಿದ್ದಾರೆ.

ಎಲೆಕ್ಟ್ರಾನಿಕ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಸಹಯೋಗದೊಂದಿಗೆ ನಡೆಸಿದ ಗೂಗಲ್ ಫಾರ್ ಇಂಡಿಯಾದ ಆರನೇ ಆವೃತ್ತಿಯಲ್ಲಿ ಪಿಚೈ ಮಾತನಾಡುತ್ತಿದ್ದರು.

ಪಿಚೈ ಈ ಘೋಷಣೆಗಳನ್ನು ಮಾಡುವ ಮೊದಲು, ಭಾರತದ ಡಿಜಿಟಲ್ ಭವಿಷ್ಯಕ್ಕಾಗಿ ಗೂಗಲ್‌ನ ವಿಚಾರಗಳನ್ನು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ವೀಡಿಯೊ-ಕಾನ್ಫರೆನ್ಸ್ ನಡೆಸಿದರು.

ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, “ಈ ಬೆಳಿಗ್ಗೆ, ಸುಂದರ್‌ ಪಿಚೈ ಅವರೊಂದಿಗೆ ಅತ್ಯಂತ ಫಲಪ್ರದವಾದ ಸಂವಾದವನ್ನು ನಡೆಸಿದೆ” ಎಂದು ಟ್ವೀಟ್ ಮಾಡಿದ್ದಾರೆ.

“ನಾವು ವ್ಯಾಪಕ ಶ್ರೇಣಿಯ ವಿಷಯಗಳ ಕುರಿತು ಮಾತನಾಡಿದ್ದೇವೆ, ವಿಶೇಷವಾಗಿ ಭಾರತದ ರೈತರು, ಯುವಕರು ಮತ್ತು ಉದ್ಯಮಿಗಳ ಜೀವನವನ್ನು ಪರಿವರ್ತಿಸಲು ತಂತ್ರಜ್ಞಾನದ ಶಕ್ತಿಯನ್ನು ಹೆಚ್ಚಿಸುತ್ತೇವೆ.” ಎಂದು ಅವರು ಹೇಳಿದ್ದಾರೆ.

“ಜಾಗತಿಕ ಸಾಂಕ್ರಾಮಿಕವು ಕ್ರೀಡೆಯಂತಹ ಕ್ಷೇತ್ರಗಳಿಗೆ ತಂದಿರುವ ಸವಾಲುಗಳನ್ನು ನಾವು ಚರ್ಚಿಸಿದ್ದೇವೆ. ಡೇಟಾ ಸುರಕ್ಷತೆ ಮತ್ತು ಸೈಬರ್ ಸುರಕ್ಷತೆಯ ಮಹತ್ವದ ಬಗ್ಗೆಯೂ ನಾವು ಮಾತನಾಡಿದ್ದೇವೆ” ಎಂದು ಪ್ರಧಾನಿ ಮೋದಿ ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.

“ಹಲವಾರು ಕ್ಷೇತ್ರಗಳಲ್ಲಿ ಗೂಗಲ್‌ನ ಪ್ರಯತ್ನಗಳ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಲು ನನಗೆ ಸಂತೋಷವಾಯಿತು” ಎಂದು ಪ್ರಧಾನಿ ಹೇಳಿದ್ದಾರೆ.

ಗೂಗಲ್ ಸಿಇಒ ಸುಂದರ್ ಪಿಚೈ “ಭಾರತದ ಡಿಜಿಟಲೀಕರಣದ ಈ ಹೂಡಿಕೆ ಮುಖ್ಯವಾಗಿ ನಾಲ್ಕು ಕ್ಷೇತ್ರಗಳತ್ತ ಗಮನ ಹರಿಸುವುದಾಗಿ ಹೇಳಿದ್ದಾರೆ. ಮೊದಲನೆಯದಾಗಿ ಪ್ರತಿಯೊಬ್ಬ ಭಾರತೀಯನಿಗೆ ಅವರದ್ದೇ ಆದ ಭಾಷೆಯಲ್ಲಿ, ಅದು ಹಿಂದಿ, ತಮಿಳು, ಪಂಜಾಬಿ ಅಥವಾ ಇನ್ಯಾವುದೋ ಭಾಷೆಯಾಗಿರಬಹುದು, ಆ ಭಾಷೆಯಲ್ಲಿ ಮಾಹಿತಿ ಒದಗಿಸುವುದು, ಎರಡನೆಯದಾಗಿ ಭಾರತದ ವಿಶಿಷ್ಟ ಅಗತ್ಯತೆಗಳಿಗೆ ಅನುಗುಣವಾಗಿ ಹೊಸ ಉತ್ಪನ್ನಗಳು ಹಾಗೂ ಸೇವೆಗಳನ್ನು ಅಭಿವೃದ್ಧಿಪಡಿಸುವುದು, ಮೂರನೆಯದಾಗಿ ಉದ್ಯಮಗಳು ಡಿಜಿಟಲೀಕರಣಕ್ಕೆ ಪರಿವರ್ತನೆಯಾಗುವಾಗ ಅವುಗಳ ಸಬಲೀಕರಣಕ್ಕೆ ಆದ್ಯತೆ ಹಾಗೂ ನಾಲ್ಕನೆಯದಾಗಿ  ಸಾಮಾಜಿಕ  ಹಿತದೃಷ್ಟಿಯಿಂದ ಆರೋಗ್ಯ, ಶಿಕ್ಷಣ ಮತ್ತು ಕೃಷಿ ಕ್ಷೇತ್ರಗಳಲ್ಲಿ ತಂತ್ರಜ್ಞಾನ ಮತ್ತು ಕೃತಕ ಬುದ್ಧಿಮತ್ತೆಯ ನಡುವೆ ಸಮತೋಲನ ಸಾಧಿಸುವುದು” ಎಂದು ಹೇಳಿದ್ದಾರೆ.

“ಇದು ಭಾರತದ ಭವಿಷ್ಯ ಮತ್ತು ಅದರ ಡಿಜಿಟಲ್ ಆರ್ಥಿಕತೆಯ ಬಗ್ಗೆ ನಮ್ಮ ವಿಶ್ವಾಸದ ಪ್ರತಿಬಿಂಬವಾಗಿದೆ. ಪ್ರತಿಯೊಬ್ಬ ಭಾರತೀಯರಿಗೂ ತಮ್ಮದೇ ಭಾಷೆಯಲ್ಲಿ ಕೈಗೆಟುಕುವ ಇಂಟರ್ನೆಟ್ ಪ್ರವೇಶವನ್ನು ಕಲ್ಪಿಸುವ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತೇವೆ” ಎಂದು ಪಿಚೈ ಹೇಳಿದ್ದಾರೆ.

“ನಾವು ಪ್ರಧಾನಿ ಮೋದಿ ಅವರೊಂದಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇವೆ ಮತ್ತು ಮುಂದಿನ ತರಂಗ ನಾವೀನ್ಯತೆಗೆ ಭಾರತ ಮುನ್ನಡೆಸಲಿದೆ ಎಂದು ಭಾವಿಸುತ್ತೇವೆ” ಎಂದು ಪಿಚೈ ಹೇಳಿದ್ದಾರೆ.


ಓದಿ: ವೀಸಾಗಳ ಸ್ಥಗಿತ; ಟ್ರಂಪ್ ನಿರಾಶೆಯನ್ನುಂಟು ಮಾಡಿದ್ದಾರೆಂದ ಸುಂದರ್‌ ಪಿಚೈ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...