Homeಮುಖಪುಟಭಾರತದ ಡಿಜಿಟಲ್ ಉತ್ತೇಜನಕ್ಕೆ ಗೂಗಲ್‌ನಿಂದ 75,000 ಕೋಟಿ ರೂ. ನಿಧಿ

ಭಾರತದ ಡಿಜಿಟಲ್ ಉತ್ತೇಜನಕ್ಕೆ ಗೂಗಲ್‌ನಿಂದ 75,000 ಕೋಟಿ ರೂ. ನಿಧಿ

ಇದು ಭಾರತದ ಭವಿಷ್ಯ ಮತ್ತು ಅದರ ಡಿಜಿಟಲ್ ಆರ್ಥಿಕತೆಯ ಬಗ್ಗೆ ನಮ್ಮ ವಿಶ್ವಾಸದ ಪ್ರತಿಬಿಂಬವಾಗಿದೆ ಎಂದು ಪಿಚೈ ಹೇಳಿದ್ದಾರೆ.

- Advertisement -
- Advertisement -

ಮುಂದಿನ ಐದು ರಿಂದ ಏಳು ವರ್ಷಗಳಲ್ಲಿ ಭಾರತದಲ್ಲಿ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಮತ್ತು ಡಿಜಿಟಲ್ ಆವಿಷ್ಕಾರಕ್ಕೆ ಉತ್ತೇಜನ ನೀಡಲು ಕಂಪನಿಯು ಸುಮಾರು 10 ಬಿಲಿಯನ್ ಡಾಲರ್‌ (ಅಂದಾಜು 75 ಸಾವಿರ ಕೋಟಿ) ಹೂಡಿಕೆ ಮಾಡಲಿದೆ ಎಂದು ಗೂಗಲ್ ಸಿಇಒ ಸುಂದರ್ ಪಿಚೈ ಸೋಮವಾರ ಪ್ರಕಟಿಸಿದ್ದಾರೆ.

ಎಲೆಕ್ಟ್ರಾನಿಕ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಸಹಯೋಗದೊಂದಿಗೆ ನಡೆಸಿದ ಗೂಗಲ್ ಫಾರ್ ಇಂಡಿಯಾದ ಆರನೇ ಆವೃತ್ತಿಯಲ್ಲಿ ಪಿಚೈ ಮಾತನಾಡುತ್ತಿದ್ದರು.

ಪಿಚೈ ಈ ಘೋಷಣೆಗಳನ್ನು ಮಾಡುವ ಮೊದಲು, ಭಾರತದ ಡಿಜಿಟಲ್ ಭವಿಷ್ಯಕ್ಕಾಗಿ ಗೂಗಲ್‌ನ ವಿಚಾರಗಳನ್ನು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ವೀಡಿಯೊ-ಕಾನ್ಫರೆನ್ಸ್ ನಡೆಸಿದರು.

ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, “ಈ ಬೆಳಿಗ್ಗೆ, ಸುಂದರ್‌ ಪಿಚೈ ಅವರೊಂದಿಗೆ ಅತ್ಯಂತ ಫಲಪ್ರದವಾದ ಸಂವಾದವನ್ನು ನಡೆಸಿದೆ” ಎಂದು ಟ್ವೀಟ್ ಮಾಡಿದ್ದಾರೆ.

“ನಾವು ವ್ಯಾಪಕ ಶ್ರೇಣಿಯ ವಿಷಯಗಳ ಕುರಿತು ಮಾತನಾಡಿದ್ದೇವೆ, ವಿಶೇಷವಾಗಿ ಭಾರತದ ರೈತರು, ಯುವಕರು ಮತ್ತು ಉದ್ಯಮಿಗಳ ಜೀವನವನ್ನು ಪರಿವರ್ತಿಸಲು ತಂತ್ರಜ್ಞಾನದ ಶಕ್ತಿಯನ್ನು ಹೆಚ್ಚಿಸುತ್ತೇವೆ.” ಎಂದು ಅವರು ಹೇಳಿದ್ದಾರೆ.

“ಜಾಗತಿಕ ಸಾಂಕ್ರಾಮಿಕವು ಕ್ರೀಡೆಯಂತಹ ಕ್ಷೇತ್ರಗಳಿಗೆ ತಂದಿರುವ ಸವಾಲುಗಳನ್ನು ನಾವು ಚರ್ಚಿಸಿದ್ದೇವೆ. ಡೇಟಾ ಸುರಕ್ಷತೆ ಮತ್ತು ಸೈಬರ್ ಸುರಕ್ಷತೆಯ ಮಹತ್ವದ ಬಗ್ಗೆಯೂ ನಾವು ಮಾತನಾಡಿದ್ದೇವೆ” ಎಂದು ಪ್ರಧಾನಿ ಮೋದಿ ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.

“ಹಲವಾರು ಕ್ಷೇತ್ರಗಳಲ್ಲಿ ಗೂಗಲ್‌ನ ಪ್ರಯತ್ನಗಳ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಲು ನನಗೆ ಸಂತೋಷವಾಯಿತು” ಎಂದು ಪ್ರಧಾನಿ ಹೇಳಿದ್ದಾರೆ.

ಗೂಗಲ್ ಸಿಇಒ ಸುಂದರ್ ಪಿಚೈ “ಭಾರತದ ಡಿಜಿಟಲೀಕರಣದ ಈ ಹೂಡಿಕೆ ಮುಖ್ಯವಾಗಿ ನಾಲ್ಕು ಕ್ಷೇತ್ರಗಳತ್ತ ಗಮನ ಹರಿಸುವುದಾಗಿ ಹೇಳಿದ್ದಾರೆ. ಮೊದಲನೆಯದಾಗಿ ಪ್ರತಿಯೊಬ್ಬ ಭಾರತೀಯನಿಗೆ ಅವರದ್ದೇ ಆದ ಭಾಷೆಯಲ್ಲಿ, ಅದು ಹಿಂದಿ, ತಮಿಳು, ಪಂಜಾಬಿ ಅಥವಾ ಇನ್ಯಾವುದೋ ಭಾಷೆಯಾಗಿರಬಹುದು, ಆ ಭಾಷೆಯಲ್ಲಿ ಮಾಹಿತಿ ಒದಗಿಸುವುದು, ಎರಡನೆಯದಾಗಿ ಭಾರತದ ವಿಶಿಷ್ಟ ಅಗತ್ಯತೆಗಳಿಗೆ ಅನುಗುಣವಾಗಿ ಹೊಸ ಉತ್ಪನ್ನಗಳು ಹಾಗೂ ಸೇವೆಗಳನ್ನು ಅಭಿವೃದ್ಧಿಪಡಿಸುವುದು, ಮೂರನೆಯದಾಗಿ ಉದ್ಯಮಗಳು ಡಿಜಿಟಲೀಕರಣಕ್ಕೆ ಪರಿವರ್ತನೆಯಾಗುವಾಗ ಅವುಗಳ ಸಬಲೀಕರಣಕ್ಕೆ ಆದ್ಯತೆ ಹಾಗೂ ನಾಲ್ಕನೆಯದಾಗಿ  ಸಾಮಾಜಿಕ  ಹಿತದೃಷ್ಟಿಯಿಂದ ಆರೋಗ್ಯ, ಶಿಕ್ಷಣ ಮತ್ತು ಕೃಷಿ ಕ್ಷೇತ್ರಗಳಲ್ಲಿ ತಂತ್ರಜ್ಞಾನ ಮತ್ತು ಕೃತಕ ಬುದ್ಧಿಮತ್ತೆಯ ನಡುವೆ ಸಮತೋಲನ ಸಾಧಿಸುವುದು” ಎಂದು ಹೇಳಿದ್ದಾರೆ.

“ಇದು ಭಾರತದ ಭವಿಷ್ಯ ಮತ್ತು ಅದರ ಡಿಜಿಟಲ್ ಆರ್ಥಿಕತೆಯ ಬಗ್ಗೆ ನಮ್ಮ ವಿಶ್ವಾಸದ ಪ್ರತಿಬಿಂಬವಾಗಿದೆ. ಪ್ರತಿಯೊಬ್ಬ ಭಾರತೀಯರಿಗೂ ತಮ್ಮದೇ ಭಾಷೆಯಲ್ಲಿ ಕೈಗೆಟುಕುವ ಇಂಟರ್ನೆಟ್ ಪ್ರವೇಶವನ್ನು ಕಲ್ಪಿಸುವ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತೇವೆ” ಎಂದು ಪಿಚೈ ಹೇಳಿದ್ದಾರೆ.

“ನಾವು ಪ್ರಧಾನಿ ಮೋದಿ ಅವರೊಂದಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇವೆ ಮತ್ತು ಮುಂದಿನ ತರಂಗ ನಾವೀನ್ಯತೆಗೆ ಭಾರತ ಮುನ್ನಡೆಸಲಿದೆ ಎಂದು ಭಾವಿಸುತ್ತೇವೆ” ಎಂದು ಪಿಚೈ ಹೇಳಿದ್ದಾರೆ.


ಓದಿ: ವೀಸಾಗಳ ಸ್ಥಗಿತ; ಟ್ರಂಪ್ ನಿರಾಶೆಯನ್ನುಂಟು ಮಾಡಿದ್ದಾರೆಂದ ಸುಂದರ್‌ ಪಿಚೈ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...