Homeಕರ್ನಾಟಕಗಣರಾಜ್ಯೋತ್ಸವ ಪ್ರೊಗ್ರಾಮ್‌ ಪ್ರಸಾರ ಮಾಡಿದ್ದಕ್ಕೆ ‘ವಾರ್ತಾಭಾರತಿ’ ಯೂಟ್ಯೂಬ್‌ ಚಾನೆಲ್‌ಗೆ ನಿರ್ಬಂಧ

ಗಣರಾಜ್ಯೋತ್ಸವ ಪ್ರೊಗ್ರಾಮ್‌ ಪ್ರಸಾರ ಮಾಡಿದ್ದಕ್ಕೆ ‘ವಾರ್ತಾಭಾರತಿ’ ಯೂಟ್ಯೂಬ್‌ ಚಾನೆಲ್‌ಗೆ ನಿರ್ಬಂಧ

- Advertisement -
- Advertisement -

ಸರ್ಕಾರಿ ಯೂಟ್ಯೂಬ್‌ ಚಾನೆಲ್‌ನಲ್ಲಿ ಆಗುತ್ತಿದ್ದ ನೇರಪ್ರಸಾರವನ್ನು ಬಳಸಿ ಲೈವ್‌ ನೀಡಿದ ವಾರ್ತಾಭಾರತಿ ಯೂಟ್ಯೂಬ್‌ ಚಾನೆಲ್‌ಅನ್ನು ಗೂಗಲ್ ಸಂಸ್ಥೆ ಗುರುವಾರ ಅಮಾನತು ಮಾಡಿದೆ.

ಹಕ್ಕುಸ್ವಾಮ್ಯ ಉಲ್ಲಂಘನೆ ಎಂದು ಆರೋಪಿಸಿರುವ ಗೂಗಲ್‌, ‘ವಾರ್ತಾಭಾರತಿ’ ಯೂಟ್ಯೂಬ್‌ ಚಾನೆಲ್‌ (youtube.com/varthabharatinews) ಮೇಲೆ ಒಂದು ವಾರ ಕಾಲ ನಿರ್ಬಂಧ ಹೇರಿದೆ.

ಕನ್ನಡದ ಪ್ರಮುಖ ದಿನಪತ್ರಿಕೆಗಳಲ್ಲಿ ಒಂದಾದ ‘ವಾರ್ತಾಭಾರತಿ’ ಕಳೆದ ಇಪ್ಪತ್ತು ವರ್ಷಗಳಿಂದ ಪ್ರಕಟವಾಗುತ್ತಿದೆ. ವಾರ್ತಾ ಭಾರತಿಯ ಯೂಟ್ಯೂಬ್ ಚಾನೆಲ್ ಇತ್ತೀಚಿನ ವರ್ಷಗಳಲ್ಲಿ ಹೆಚ್ಚಿನ ವೀಕ್ಷಕರನ್ನು ಸೆಳೆಯುತ್ತಿದೆ.

“ಏಳು ದಿನಗಳವರೆಗೆ ಚಾನೆಲ್‌ನಲ್ಲಿ ಯಾವುದೇ ವಿಷಯವನ್ನು ಅಪ್‌ಲೋಡ್ ಮಾಡದಂತೆ ಅಥವಾ ಲೈವ್ ಸ್ಟ್ರೀಮ್‌ ಮಾಡದಂತೆ ನಿರ್ಬಂಧಿಸಲಾಗಿದೆ” ಎಂದು ‘ವಾರ್ತಾಭಾರತಿ’ ಇಂಗ್ಲಿಷ್ ಜಾಲತಾಣ ವರದಿ ಮಾಡಿದೆ.

ಸಾಮಾನ್ಯವಾಗಿ ಎಲ್ಲ ಮಾಧ್ಯಮಗಳು ಬಳಸುವ ರೀತಿಯಲ್ಲಿಯೇ ‘ಪ್ರಧಾನಮಂತ್ರಿ’ ಯೂಟ್ಯೂ‌ಬ್ ಚಾನೆಲ್‌ನಿಂದ ಕನೆಕ್ಷನ್‌ ಪಡೆದು, ದೆಹಲಿಯ ಕರ್ತವ್ಯ ಪಥದಲ್ಲಿ ಗುರುವಾರ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ‘ವಾರ್ತಾ ಭಾರತಿ’ ಲೈವ್ ಸ್ಟ್ರೀಮ್ ಮಾಡಿತ್ತು ಎಂದು ವರದಿ ತಿಳಿಸಿದೆ.

ನಿರ್ಬಂಧ ಹೇರಿರುವ ಸಂಬಂಧ ವಾರ್ತಾಭಾರತಿ ಮಾಧ್ಯಮವು ಸಲ್ಲಿಸಿದ ಮೇಲ್ಮನವಿಯನ್ನೂ ಗೂಗಲ್ ತಿರಸ್ಕರಿಸಿದೆ.

ಸರ್ಕಾರದಿಂದ ಲೈವ್ ಆಗಿದ್ದಾಗ ಅದನ್ನು ಬಳಸಿಕೊಂಡು ಮಾಧ್ಯಮಗಳು ಸಾಮಾನ್ಯವಾಗಿ ನೇರಪ್ರಸಾರ ಮಾಡುತ್ತವೆ ಎಂದು ‘ವಾರ್ತಾಭಾರತಿ’ ತನ್ನ ಮನವಿಯಲ್ಲಿ ಉಲ್ಲೇಖಿಸಿದೆ.

ಪ್ರಮುಖ ರಾಷ್ಟ್ರೀಯ ಹಬ್ಬಗಳು ಮತ್ತು ಆಚರಣೆಗಳ ನೇರ ಪ್ರಸಾರವನ್ನು ನೀಡಲು ಮಾಧ್ಯಮ ಸಂಸ್ಥೆಗಳು ಸರ್ಕಾರಿ ಚಾನೆಲ್‌ಗಳ ಪ್ರಸಾರಗಳನ್ನು ಬಳಸಿಕೊಳ್ಳುವುದು ಚಾಲ್ತಿಯಲ್ಲಿದೆ. ಗುರುವಾರ ಕೂಡ, ವಿವಿಧ ಪ್ರಾದೇಶಿಕ ಭಾಷೆಗಳ ಹಲವು ಯೂಟ್ಯೂಬ್ ಚಾನೆಲ್‌ಗಳು ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವ ಪರೇಡ್ ಅನ್ನು ಲೈವ್ ಸ್ಟ್ರೀಮ್ ಮಾಡಲು ಸರ್ಕಾರಿ ಯೂಟ್ಯೂಬ್‌ ಚಾನೆಲ್‌ಗಳನ್ನು ಬಳಸಿಕೊಂಡಿವೆ. ಆದಾಗ್ಯೂ ಗೂಗಲ್ ವಾರ್ತಾಭಾರತಿಯ ಮನವಿಯನ್ನು ತಿರಸ್ಕರಿಸಿದೆ. ಅಮಾನತು ಮತ್ತು ನಿರ್ಬಂಧ ಸರಿ ಎಂದಿದೆ.

‘ವಾರ್ತಾಭಾರತಿ’ಯ ಯೂಟ್ಯೂಬ್ ಚಾನೆಲ್ 2.1 ಲಕ್ಷಕ್ಕೂ ಹೆಚ್ಚು ಚಂದಾದಾರರನ್ನು ಹೊಂದಿದೆ. ಸುದ್ದಿ ಮತ್ತು ವಿಶ್ಲೇಷಣೆಗೆ ಹೆಸರಾದ ಪ್ರಖ್ಯಾತ ಯೂಟ್ಯೂಬ್‌ ಚಾನೆಲ್‌ ಕೂಡ ಇದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...