Homeಕರ್ನಾಟಕಗಣರಾಜ್ಯೋತ್ಸವ ಪ್ರೊಗ್ರಾಮ್‌ ಪ್ರಸಾರ ಮಾಡಿದ್ದಕ್ಕೆ ‘ವಾರ್ತಾಭಾರತಿ’ ಯೂಟ್ಯೂಬ್‌ ಚಾನೆಲ್‌ಗೆ ನಿರ್ಬಂಧ

ಗಣರಾಜ್ಯೋತ್ಸವ ಪ್ರೊಗ್ರಾಮ್‌ ಪ್ರಸಾರ ಮಾಡಿದ್ದಕ್ಕೆ ‘ವಾರ್ತಾಭಾರತಿ’ ಯೂಟ್ಯೂಬ್‌ ಚಾನೆಲ್‌ಗೆ ನಿರ್ಬಂಧ

- Advertisement -
- Advertisement -

ಸರ್ಕಾರಿ ಯೂಟ್ಯೂಬ್‌ ಚಾನೆಲ್‌ನಲ್ಲಿ ಆಗುತ್ತಿದ್ದ ನೇರಪ್ರಸಾರವನ್ನು ಬಳಸಿ ಲೈವ್‌ ನೀಡಿದ ವಾರ್ತಾಭಾರತಿ ಯೂಟ್ಯೂಬ್‌ ಚಾನೆಲ್‌ಅನ್ನು ಗೂಗಲ್ ಸಂಸ್ಥೆ ಗುರುವಾರ ಅಮಾನತು ಮಾಡಿದೆ.

ಹಕ್ಕುಸ್ವಾಮ್ಯ ಉಲ್ಲಂಘನೆ ಎಂದು ಆರೋಪಿಸಿರುವ ಗೂಗಲ್‌, ‘ವಾರ್ತಾಭಾರತಿ’ ಯೂಟ್ಯೂಬ್‌ ಚಾನೆಲ್‌ (youtube.com/varthabharatinews) ಮೇಲೆ ಒಂದು ವಾರ ಕಾಲ ನಿರ್ಬಂಧ ಹೇರಿದೆ.

ಕನ್ನಡದ ಪ್ರಮುಖ ದಿನಪತ್ರಿಕೆಗಳಲ್ಲಿ ಒಂದಾದ ‘ವಾರ್ತಾಭಾರತಿ’ ಕಳೆದ ಇಪ್ಪತ್ತು ವರ್ಷಗಳಿಂದ ಪ್ರಕಟವಾಗುತ್ತಿದೆ. ವಾರ್ತಾ ಭಾರತಿಯ ಯೂಟ್ಯೂಬ್ ಚಾನೆಲ್ ಇತ್ತೀಚಿನ ವರ್ಷಗಳಲ್ಲಿ ಹೆಚ್ಚಿನ ವೀಕ್ಷಕರನ್ನು ಸೆಳೆಯುತ್ತಿದೆ.

“ಏಳು ದಿನಗಳವರೆಗೆ ಚಾನೆಲ್‌ನಲ್ಲಿ ಯಾವುದೇ ವಿಷಯವನ್ನು ಅಪ್‌ಲೋಡ್ ಮಾಡದಂತೆ ಅಥವಾ ಲೈವ್ ಸ್ಟ್ರೀಮ್‌ ಮಾಡದಂತೆ ನಿರ್ಬಂಧಿಸಲಾಗಿದೆ” ಎಂದು ‘ವಾರ್ತಾಭಾರತಿ’ ಇಂಗ್ಲಿಷ್ ಜಾಲತಾಣ ವರದಿ ಮಾಡಿದೆ.

ಸಾಮಾನ್ಯವಾಗಿ ಎಲ್ಲ ಮಾಧ್ಯಮಗಳು ಬಳಸುವ ರೀತಿಯಲ್ಲಿಯೇ ‘ಪ್ರಧಾನಮಂತ್ರಿ’ ಯೂಟ್ಯೂ‌ಬ್ ಚಾನೆಲ್‌ನಿಂದ ಕನೆಕ್ಷನ್‌ ಪಡೆದು, ದೆಹಲಿಯ ಕರ್ತವ್ಯ ಪಥದಲ್ಲಿ ಗುರುವಾರ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ‘ವಾರ್ತಾ ಭಾರತಿ’ ಲೈವ್ ಸ್ಟ್ರೀಮ್ ಮಾಡಿತ್ತು ಎಂದು ವರದಿ ತಿಳಿಸಿದೆ.

ನಿರ್ಬಂಧ ಹೇರಿರುವ ಸಂಬಂಧ ವಾರ್ತಾಭಾರತಿ ಮಾಧ್ಯಮವು ಸಲ್ಲಿಸಿದ ಮೇಲ್ಮನವಿಯನ್ನೂ ಗೂಗಲ್ ತಿರಸ್ಕರಿಸಿದೆ.

ಸರ್ಕಾರದಿಂದ ಲೈವ್ ಆಗಿದ್ದಾಗ ಅದನ್ನು ಬಳಸಿಕೊಂಡು ಮಾಧ್ಯಮಗಳು ಸಾಮಾನ್ಯವಾಗಿ ನೇರಪ್ರಸಾರ ಮಾಡುತ್ತವೆ ಎಂದು ‘ವಾರ್ತಾಭಾರತಿ’ ತನ್ನ ಮನವಿಯಲ್ಲಿ ಉಲ್ಲೇಖಿಸಿದೆ.

ಪ್ರಮುಖ ರಾಷ್ಟ್ರೀಯ ಹಬ್ಬಗಳು ಮತ್ತು ಆಚರಣೆಗಳ ನೇರ ಪ್ರಸಾರವನ್ನು ನೀಡಲು ಮಾಧ್ಯಮ ಸಂಸ್ಥೆಗಳು ಸರ್ಕಾರಿ ಚಾನೆಲ್‌ಗಳ ಪ್ರಸಾರಗಳನ್ನು ಬಳಸಿಕೊಳ್ಳುವುದು ಚಾಲ್ತಿಯಲ್ಲಿದೆ. ಗುರುವಾರ ಕೂಡ, ವಿವಿಧ ಪ್ರಾದೇಶಿಕ ಭಾಷೆಗಳ ಹಲವು ಯೂಟ್ಯೂಬ್ ಚಾನೆಲ್‌ಗಳು ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವ ಪರೇಡ್ ಅನ್ನು ಲೈವ್ ಸ್ಟ್ರೀಮ್ ಮಾಡಲು ಸರ್ಕಾರಿ ಯೂಟ್ಯೂಬ್‌ ಚಾನೆಲ್‌ಗಳನ್ನು ಬಳಸಿಕೊಂಡಿವೆ. ಆದಾಗ್ಯೂ ಗೂಗಲ್ ವಾರ್ತಾಭಾರತಿಯ ಮನವಿಯನ್ನು ತಿರಸ್ಕರಿಸಿದೆ. ಅಮಾನತು ಮತ್ತು ನಿರ್ಬಂಧ ಸರಿ ಎಂದಿದೆ.

‘ವಾರ್ತಾಭಾರತಿ’ಯ ಯೂಟ್ಯೂಬ್ ಚಾನೆಲ್ 2.1 ಲಕ್ಷಕ್ಕೂ ಹೆಚ್ಚು ಚಂದಾದಾರರನ್ನು ಹೊಂದಿದೆ. ಸುದ್ದಿ ಮತ್ತು ವಿಶ್ಲೇಷಣೆಗೆ ಹೆಸರಾದ ಪ್ರಖ್ಯಾತ ಯೂಟ್ಯೂಬ್‌ ಚಾನೆಲ್‌ ಕೂಡ ಇದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....