Homeಕರ್ನಾಟಕಗಣರಾಜ್ಯೋತ್ಸವ ಪ್ರೊಗ್ರಾಮ್‌ ಪ್ರಸಾರ ಮಾಡಿದ್ದಕ್ಕೆ ‘ವಾರ್ತಾಭಾರತಿ’ ಯೂಟ್ಯೂಬ್‌ ಚಾನೆಲ್‌ಗೆ ನಿರ್ಬಂಧ

ಗಣರಾಜ್ಯೋತ್ಸವ ಪ್ರೊಗ್ರಾಮ್‌ ಪ್ರಸಾರ ಮಾಡಿದ್ದಕ್ಕೆ ‘ವಾರ್ತಾಭಾರತಿ’ ಯೂಟ್ಯೂಬ್‌ ಚಾನೆಲ್‌ಗೆ ನಿರ್ಬಂಧ

- Advertisement -
- Advertisement -

ಸರ್ಕಾರಿ ಯೂಟ್ಯೂಬ್‌ ಚಾನೆಲ್‌ನಲ್ಲಿ ಆಗುತ್ತಿದ್ದ ನೇರಪ್ರಸಾರವನ್ನು ಬಳಸಿ ಲೈವ್‌ ನೀಡಿದ ವಾರ್ತಾಭಾರತಿ ಯೂಟ್ಯೂಬ್‌ ಚಾನೆಲ್‌ಅನ್ನು ಗೂಗಲ್ ಸಂಸ್ಥೆ ಗುರುವಾರ ಅಮಾನತು ಮಾಡಿದೆ.

ಹಕ್ಕುಸ್ವಾಮ್ಯ ಉಲ್ಲಂಘನೆ ಎಂದು ಆರೋಪಿಸಿರುವ ಗೂಗಲ್‌, ‘ವಾರ್ತಾಭಾರತಿ’ ಯೂಟ್ಯೂಬ್‌ ಚಾನೆಲ್‌ (youtube.com/varthabharatinews) ಮೇಲೆ ಒಂದು ವಾರ ಕಾಲ ನಿರ್ಬಂಧ ಹೇರಿದೆ.

ಕನ್ನಡದ ಪ್ರಮುಖ ದಿನಪತ್ರಿಕೆಗಳಲ್ಲಿ ಒಂದಾದ ‘ವಾರ್ತಾಭಾರತಿ’ ಕಳೆದ ಇಪ್ಪತ್ತು ವರ್ಷಗಳಿಂದ ಪ್ರಕಟವಾಗುತ್ತಿದೆ. ವಾರ್ತಾ ಭಾರತಿಯ ಯೂಟ್ಯೂಬ್ ಚಾನೆಲ್ ಇತ್ತೀಚಿನ ವರ್ಷಗಳಲ್ಲಿ ಹೆಚ್ಚಿನ ವೀಕ್ಷಕರನ್ನು ಸೆಳೆಯುತ್ತಿದೆ.

“ಏಳು ದಿನಗಳವರೆಗೆ ಚಾನೆಲ್‌ನಲ್ಲಿ ಯಾವುದೇ ವಿಷಯವನ್ನು ಅಪ್‌ಲೋಡ್ ಮಾಡದಂತೆ ಅಥವಾ ಲೈವ್ ಸ್ಟ್ರೀಮ್‌ ಮಾಡದಂತೆ ನಿರ್ಬಂಧಿಸಲಾಗಿದೆ” ಎಂದು ‘ವಾರ್ತಾಭಾರತಿ’ ಇಂಗ್ಲಿಷ್ ಜಾಲತಾಣ ವರದಿ ಮಾಡಿದೆ.

ಸಾಮಾನ್ಯವಾಗಿ ಎಲ್ಲ ಮಾಧ್ಯಮಗಳು ಬಳಸುವ ರೀತಿಯಲ್ಲಿಯೇ ‘ಪ್ರಧಾನಮಂತ್ರಿ’ ಯೂಟ್ಯೂ‌ಬ್ ಚಾನೆಲ್‌ನಿಂದ ಕನೆಕ್ಷನ್‌ ಪಡೆದು, ದೆಹಲಿಯ ಕರ್ತವ್ಯ ಪಥದಲ್ಲಿ ಗುರುವಾರ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ‘ವಾರ್ತಾ ಭಾರತಿ’ ಲೈವ್ ಸ್ಟ್ರೀಮ್ ಮಾಡಿತ್ತು ಎಂದು ವರದಿ ತಿಳಿಸಿದೆ.

ನಿರ್ಬಂಧ ಹೇರಿರುವ ಸಂಬಂಧ ವಾರ್ತಾಭಾರತಿ ಮಾಧ್ಯಮವು ಸಲ್ಲಿಸಿದ ಮೇಲ್ಮನವಿಯನ್ನೂ ಗೂಗಲ್ ತಿರಸ್ಕರಿಸಿದೆ.

ಸರ್ಕಾರದಿಂದ ಲೈವ್ ಆಗಿದ್ದಾಗ ಅದನ್ನು ಬಳಸಿಕೊಂಡು ಮಾಧ್ಯಮಗಳು ಸಾಮಾನ್ಯವಾಗಿ ನೇರಪ್ರಸಾರ ಮಾಡುತ್ತವೆ ಎಂದು ‘ವಾರ್ತಾಭಾರತಿ’ ತನ್ನ ಮನವಿಯಲ್ಲಿ ಉಲ್ಲೇಖಿಸಿದೆ.

ಪ್ರಮುಖ ರಾಷ್ಟ್ರೀಯ ಹಬ್ಬಗಳು ಮತ್ತು ಆಚರಣೆಗಳ ನೇರ ಪ್ರಸಾರವನ್ನು ನೀಡಲು ಮಾಧ್ಯಮ ಸಂಸ್ಥೆಗಳು ಸರ್ಕಾರಿ ಚಾನೆಲ್‌ಗಳ ಪ್ರಸಾರಗಳನ್ನು ಬಳಸಿಕೊಳ್ಳುವುದು ಚಾಲ್ತಿಯಲ್ಲಿದೆ. ಗುರುವಾರ ಕೂಡ, ವಿವಿಧ ಪ್ರಾದೇಶಿಕ ಭಾಷೆಗಳ ಹಲವು ಯೂಟ್ಯೂಬ್ ಚಾನೆಲ್‌ಗಳು ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವ ಪರೇಡ್ ಅನ್ನು ಲೈವ್ ಸ್ಟ್ರೀಮ್ ಮಾಡಲು ಸರ್ಕಾರಿ ಯೂಟ್ಯೂಬ್‌ ಚಾನೆಲ್‌ಗಳನ್ನು ಬಳಸಿಕೊಂಡಿವೆ. ಆದಾಗ್ಯೂ ಗೂಗಲ್ ವಾರ್ತಾಭಾರತಿಯ ಮನವಿಯನ್ನು ತಿರಸ್ಕರಿಸಿದೆ. ಅಮಾನತು ಮತ್ತು ನಿರ್ಬಂಧ ಸರಿ ಎಂದಿದೆ.

‘ವಾರ್ತಾಭಾರತಿ’ಯ ಯೂಟ್ಯೂಬ್ ಚಾನೆಲ್ 2.1 ಲಕ್ಷಕ್ಕೂ ಹೆಚ್ಚು ಚಂದಾದಾರರನ್ನು ಹೊಂದಿದೆ. ಸುದ್ದಿ ಮತ್ತು ವಿಶ್ಲೇಷಣೆಗೆ ಹೆಸರಾದ ಪ್ರಖ್ಯಾತ ಯೂಟ್ಯೂಬ್‌ ಚಾನೆಲ್‌ ಕೂಡ ಇದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...