Homeಕರ್ನಾಟಕಗಣರಾಜ್ಯೋತ್ಸವ ಪ್ರೊಗ್ರಾಮ್‌ ಪ್ರಸಾರ ಮಾಡಿದ್ದಕ್ಕೆ ‘ವಾರ್ತಾಭಾರತಿ’ ಯೂಟ್ಯೂಬ್‌ ಚಾನೆಲ್‌ಗೆ ನಿರ್ಬಂಧ

ಗಣರಾಜ್ಯೋತ್ಸವ ಪ್ರೊಗ್ರಾಮ್‌ ಪ್ರಸಾರ ಮಾಡಿದ್ದಕ್ಕೆ ‘ವಾರ್ತಾಭಾರತಿ’ ಯೂಟ್ಯೂಬ್‌ ಚಾನೆಲ್‌ಗೆ ನಿರ್ಬಂಧ

- Advertisement -
- Advertisement -

ಸರ್ಕಾರಿ ಯೂಟ್ಯೂಬ್‌ ಚಾನೆಲ್‌ನಲ್ಲಿ ಆಗುತ್ತಿದ್ದ ನೇರಪ್ರಸಾರವನ್ನು ಬಳಸಿ ಲೈವ್‌ ನೀಡಿದ ವಾರ್ತಾಭಾರತಿ ಯೂಟ್ಯೂಬ್‌ ಚಾನೆಲ್‌ಅನ್ನು ಗೂಗಲ್ ಸಂಸ್ಥೆ ಗುರುವಾರ ಅಮಾನತು ಮಾಡಿದೆ.

ಹಕ್ಕುಸ್ವಾಮ್ಯ ಉಲ್ಲಂಘನೆ ಎಂದು ಆರೋಪಿಸಿರುವ ಗೂಗಲ್‌, ‘ವಾರ್ತಾಭಾರತಿ’ ಯೂಟ್ಯೂಬ್‌ ಚಾನೆಲ್‌ (youtube.com/varthabharatinews) ಮೇಲೆ ಒಂದು ವಾರ ಕಾಲ ನಿರ್ಬಂಧ ಹೇರಿದೆ.

ಕನ್ನಡದ ಪ್ರಮುಖ ದಿನಪತ್ರಿಕೆಗಳಲ್ಲಿ ಒಂದಾದ ‘ವಾರ್ತಾಭಾರತಿ’ ಕಳೆದ ಇಪ್ಪತ್ತು ವರ್ಷಗಳಿಂದ ಪ್ರಕಟವಾಗುತ್ತಿದೆ. ವಾರ್ತಾ ಭಾರತಿಯ ಯೂಟ್ಯೂಬ್ ಚಾನೆಲ್ ಇತ್ತೀಚಿನ ವರ್ಷಗಳಲ್ಲಿ ಹೆಚ್ಚಿನ ವೀಕ್ಷಕರನ್ನು ಸೆಳೆಯುತ್ತಿದೆ.

“ಏಳು ದಿನಗಳವರೆಗೆ ಚಾನೆಲ್‌ನಲ್ಲಿ ಯಾವುದೇ ವಿಷಯವನ್ನು ಅಪ್‌ಲೋಡ್ ಮಾಡದಂತೆ ಅಥವಾ ಲೈವ್ ಸ್ಟ್ರೀಮ್‌ ಮಾಡದಂತೆ ನಿರ್ಬಂಧಿಸಲಾಗಿದೆ” ಎಂದು ‘ವಾರ್ತಾಭಾರತಿ’ ಇಂಗ್ಲಿಷ್ ಜಾಲತಾಣ ವರದಿ ಮಾಡಿದೆ.

ಸಾಮಾನ್ಯವಾಗಿ ಎಲ್ಲ ಮಾಧ್ಯಮಗಳು ಬಳಸುವ ರೀತಿಯಲ್ಲಿಯೇ ‘ಪ್ರಧಾನಮಂತ್ರಿ’ ಯೂಟ್ಯೂ‌ಬ್ ಚಾನೆಲ್‌ನಿಂದ ಕನೆಕ್ಷನ್‌ ಪಡೆದು, ದೆಹಲಿಯ ಕರ್ತವ್ಯ ಪಥದಲ್ಲಿ ಗುರುವಾರ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ‘ವಾರ್ತಾ ಭಾರತಿ’ ಲೈವ್ ಸ್ಟ್ರೀಮ್ ಮಾಡಿತ್ತು ಎಂದು ವರದಿ ತಿಳಿಸಿದೆ.

ನಿರ್ಬಂಧ ಹೇರಿರುವ ಸಂಬಂಧ ವಾರ್ತಾಭಾರತಿ ಮಾಧ್ಯಮವು ಸಲ್ಲಿಸಿದ ಮೇಲ್ಮನವಿಯನ್ನೂ ಗೂಗಲ್ ತಿರಸ್ಕರಿಸಿದೆ.

ಸರ್ಕಾರದಿಂದ ಲೈವ್ ಆಗಿದ್ದಾಗ ಅದನ್ನು ಬಳಸಿಕೊಂಡು ಮಾಧ್ಯಮಗಳು ಸಾಮಾನ್ಯವಾಗಿ ನೇರಪ್ರಸಾರ ಮಾಡುತ್ತವೆ ಎಂದು ‘ವಾರ್ತಾಭಾರತಿ’ ತನ್ನ ಮನವಿಯಲ್ಲಿ ಉಲ್ಲೇಖಿಸಿದೆ.

ಪ್ರಮುಖ ರಾಷ್ಟ್ರೀಯ ಹಬ್ಬಗಳು ಮತ್ತು ಆಚರಣೆಗಳ ನೇರ ಪ್ರಸಾರವನ್ನು ನೀಡಲು ಮಾಧ್ಯಮ ಸಂಸ್ಥೆಗಳು ಸರ್ಕಾರಿ ಚಾನೆಲ್‌ಗಳ ಪ್ರಸಾರಗಳನ್ನು ಬಳಸಿಕೊಳ್ಳುವುದು ಚಾಲ್ತಿಯಲ್ಲಿದೆ. ಗುರುವಾರ ಕೂಡ, ವಿವಿಧ ಪ್ರಾದೇಶಿಕ ಭಾಷೆಗಳ ಹಲವು ಯೂಟ್ಯೂಬ್ ಚಾನೆಲ್‌ಗಳು ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವ ಪರೇಡ್ ಅನ್ನು ಲೈವ್ ಸ್ಟ್ರೀಮ್ ಮಾಡಲು ಸರ್ಕಾರಿ ಯೂಟ್ಯೂಬ್‌ ಚಾನೆಲ್‌ಗಳನ್ನು ಬಳಸಿಕೊಂಡಿವೆ. ಆದಾಗ್ಯೂ ಗೂಗಲ್ ವಾರ್ತಾಭಾರತಿಯ ಮನವಿಯನ್ನು ತಿರಸ್ಕರಿಸಿದೆ. ಅಮಾನತು ಮತ್ತು ನಿರ್ಬಂಧ ಸರಿ ಎಂದಿದೆ.

‘ವಾರ್ತಾಭಾರತಿ’ಯ ಯೂಟ್ಯೂಬ್ ಚಾನೆಲ್ 2.1 ಲಕ್ಷಕ್ಕೂ ಹೆಚ್ಚು ಚಂದಾದಾರರನ್ನು ಹೊಂದಿದೆ. ಸುದ್ದಿ ಮತ್ತು ವಿಶ್ಲೇಷಣೆಗೆ ಹೆಸರಾದ ಪ್ರಖ್ಯಾತ ಯೂಟ್ಯೂಬ್‌ ಚಾನೆಲ್‌ ಕೂಡ ಇದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...

‘ಬಹುಸಂಖ್ಯಾತ ಭಾವನೆಯು ಸಾಂವಿಧಾನಿಕ ಹಕ್ಕುಗಳನ್ನು ಮರೆಮಾಡಲು ಸಾಧ್ಯವಿಲ್ಲ’: ಇಸ್ಲಾಂ ಧರ್ಮ ಸ್ವೀಕರಿಸಿದ್ದ ಸಹೋದರಿಯರ ಅಕ್ರಮ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತೀವ್ರ ತರಾಟೆ

ಹಿಂದೂ ಧರ್ಮದಿಂದ ಸ್ವಯಂಪ್ರೇರಿತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ನಂತರ, ಸ್ವಂತ ತಂದೆ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಕ್ರಮ ಹಸ್ತಕ್ಷೇಪದಿಂದಾಗಿ ವರ್ಷಗಳ ಕಾಲ ತಮ್ಮ ಮೂಲಭೂತ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದ ಇಬ್ಬರು ವಯಸ್ಕ...

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...

SIR: ಚುನಾವಣಾ ಆಯೋಗ ನೀಡಿದ ಅಂಕಿ ಅಂಶಕ್ಕೂ, ಬೆಂಗಳೂರು ಮತದಾರರ ಪಟ್ಟಿಗೂ ತಲೆಬುಡವಿಲ್ಲ, ಮತ ಕಾವಲು ಸಮಿತಿ ಆರೋಪ

ರಾಜ್ಯದಲ್ಲಿ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಹೆಸರಿನಲ್ಲಿ ಲಕ್ಷಾಂತರ ಅರ್ಹ ಮತದಾರರ ಹಕ್ಕುಗಳನ್ನು ಕಸಿಯಲಾಗುತ್ತಿದ್ದು, ಬೆಂಗಳೂರು ನಗರದ ಶೇಕಡಾ 48.41 ರಷ್ಟು—ಅಂದರೆ ಸುಮಾರು ಇಬ್ಬರಲ್ಲಿ ಒಬ್ಬ ಮತದಾರನನ್ನು—ಆಗಸ್ಟ್ 17ರ ಒಳಗಾಗಿ ಮತದಾರರ...

ಬೆಂಗಳೂರಿನಲ್ಲಿ ಮುಂದುವರೆದ ಆಹಾರ ಸುರಕ್ಷತೆಗೆ ವಿಶೇಷ ಕಾರ್ಯಾಚರಣೆ: ಯುಬಿ ಸಿಟಿಯ ಹೋಟೆಲ್‌ಗಳಲ್ಲಿ ಕೊಳೆತ ಮಾಂಸ ಪತ್ತೆ!

'ಆಹಾರ ಸುರಕ್ಷತೆ ಇಲಾಖೆ ಮತ್ತು ಔಷಧಿ ಆಡಳಿತ ಇಲಾಖೆ'ಯ ಆಹಾರ ಸುರಕ್ಷತೆಗೆ ವಿಶೇಷ ಕಾರ್ಯಾಚರಣೆ ಮುಂದುವರೆದಿದ್ದು, ಬೆಂಗಳೂರಿನ ಯುಬಿ ಸಿಟಿಯ ಐದು ಪ್ರಮುಖ ಹೋಟೆಲ್‌ಗಳ ಅಡುಗೆ ಮನೆಗಳ ಮೇಲೆ ಅಧಿಕಾರಿಗಳು ಇಂದು (ಆ.10)...