Homeಮುಖಪುಟನಟಿ, ನೃತ್ಯಗಾರ್ತಿ ಜೊಹ್ರಾ ಸೆಹಗಲ್‌ಗೆ ಗೂಗಲ್ ಡೂಡಲ್ ನಮನ

ನಟಿ, ನೃತ್ಯಗಾರ್ತಿ ಜೊಹ್ರಾ ಸೆಹಗಲ್‌ಗೆ ಗೂಗಲ್ ಡೂಡಲ್ ನಮನ

ನಟಿ ಜೊಹ್ರಾ ಅವರ ಚಿತ್ರ ‘ನೀಚಾ ನಗರ’ 1946ರ ಇದೇ ದಿನ ಕೇನ್ಸ್ ಚಲನಚಿತ್ರೋತ್ಸವದಲ್ಲಿ ಬಿಡುಗಡೆಯಾಗಿತ್ತು, ಮತ್ತು ಉತ್ಸವದ ಅತ್ಯುನ್ನತ ಗೌರವವಾದ ’ಪಾಮ್ ಡಿ ಓರ್’ ಪ್ರಶಸ್ತಿಯನ್ನು ಪಡೆದಿತ್ತು.

- Advertisement -
- Advertisement -

ಭಾರತೀಯ ಚಿತ್ರರಂಗದ ಅಪ್ರತಿಮ ನಟಿ, ನೃತ್ಯಸಂಯೋಜಕಿ, ರಂಗಕಲಾವಿದೆ ಜೊಹ್ರಾ ಮುಮ್ತಾಜ್ ಸೆಹಗಲ್‌ಗೆ ಗೂಗಲ್ ವಿಶೇಷ ಗೌರವ ಸಲ್ಲಿಸಿದೆ. ಹಿರಿಯ ನಟಿ ಜೊಹ್ರಾ ಸೆಗಲ್‌ರನ್ನು ಶಾಸ್ತ್ರೀಯ ನೃತ್ಯ ಭಂಗಿಯಲ್ಲಿ, ಗುಲಾಬಿ ಬಣ್ಣದ ಸೀರೆಯನ್ನು ಧರಿಸಿದ ಅನಿಮೇಟೆಡ್ ಚಿತ್ರವನ್ನು ಡೂಡಲ್ ತೋರಿಸಿದೆ. ಈ ಡೂಡಲ್ ಅನ್ನು ಕಲಾವಿದೆ ಪಾರ್ವತಿ ಪಿಳ್ಳೈ ವಿನ್ಯಾಸಗೊಳಿಸಿದ್ದಾರೆ.

ನಟಿ ಜೊಹ್ರಾ ಅವರ ಚಿತ್ರ ‘ನೀಚಾ ನಗರ’ 1946ರ ಇದೇ ದಿನ ಕೇನ್ಸ್ ಚಲನಚಿತ್ರೋತ್ಸವದಲ್ಲಿ ಬಿಡುಗಡೆಯಾಗಿತ್ತು, ಮತ್ತು ಉತ್ಸವದ ಅತ್ಯುನ್ನತ ಗೌರವವಾದ ಪಾಮ್ ಡಿ ಓರ್ ಪ್ರಶಸ್ತಿಯನ್ನು ಪಡೆದಿತ್ತು. ಆ ನೆನಪಿಗಾಗಿ ಗೂಗಲ್ ಈ ವಿಶೇಷ ಗೌರವ ಸಲ್ಲಿಸಿದೆ. ಗೂಗಲ್ ತನ್ನ ಟಿಪ್ಪಣಿಯಲ್ಲಿ ನಟಿಯನ್ನು ‘ಅಂತರರಾಷ್ಟ್ರೀಯ ವೇದಿಕೆಯಲ್ಲಿ ನಿಜವಾಗಿಯೂ ಮನ್ನಣೆಗಳಿಸಿದ ದೇಶದ ಮೊದಲ ಮಹಿಳಾ ನಟಿಯರಲ್ಲಿ ಒಬ್ಬರು’ ಎಂದು ಬಣ್ಣಿಸಿದೆ.

PC: Google

ಇದನ್ನೂ ಓದಿ: ಭಾರತೀಯರು ಗೂಗಲ್‌ನಲ್ಲಿ ಅತಿ ಹೆಚ್ಚು ಹುಡುಕಿದ್ದು ಏನನ್ನು? : ಆಗಸ್ಟ್‌ ತಿಂಗಳ ಮಾಹಿತಿ

ಹಿರಿಯ ನಟಿ ಸೆಹಗಲ್ ಏಪ್ರಿಲ್ 27, 1912 ರಂದು ಉತ್ತರಪ್ರದೇಶದಲ್ಲಿ ಜನಿಸಿದರು. ತನ್ನ 20 ರ ದಶಕದ ಆರಂಭದಲ್ಲಿ ಬ್ಯಾಲೆ ನೃತ್ಯ ಕಲಿಯಲು ಜರ್ಮನಿಯ ಪ್ರತಿಷ್ಠಿತ ಶಾಲೆಗೆ ಸೇರಿಕೊಂಡಿದ್ದರು. ಭಾರತೀಯ ಪ್ರಸಿದ್ಧ ನೃತ್ಯಗಾರ ಉದಯ್ ಶಂಕರ್ ಅವರೊಂದಿಗೆ ಅಂತರರಾಷ್ಟ್ರೀಯ ಪ್ರವಾಸ ಕೈಗೊಂಡಿದ್ದರು. ನಂತರ ಉದಯ್ ಶಂಕರ್ ಅವರ ತಂಡದಲ್ಲಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸಿದರು. 1942ರ ಆಗಸ್ಟ್‌ನಲ್ಲಿ ಕಾಮೇಶ್ವರ ಸೆಹಗಲ್‌ರನ್ನು ವಿವಾಹವಾದರು.

PC: Scroll.in

ಜೊಹ್ರಾ ಸೆಹಗಲ್ ಬಾಲಿವುಡ್‌ಗೆ ಭಾರಿ ಕೊಡುಗೆ ನೀಡಿದ್ದು, ಅವರು ಕೊನೆಯ ಬಾರಿಗೆ ಸಂಜಯ್ ಲೀಲಾ ಭನ್ಸಾಲಿಯವರ ‘ಸಾವರಿಯಾ’ ಚಿತ್ರದಲ್ಲಿ ರಣಬೀರ್ ಕಪೂರ್ ಮತ್ತು ಸೋನಮ್ ಕಪೂರ್ ಜೊತೆ ಕಾಣಿಸಿಕೊಂಡಿದ್ದಾರೆ. ಅವರು ಯಶಸ್ವಿ ಚಿತ್ರಗಳಾದ ‘ಚೀನಿ ಕಮ್’, ‘ಹಮ್ ದಿಲ್ ದೇ ಚುಕೆ ಸನಮ್’, ‘ದಿಲ್ ಸೆ’, ‘ಕಭಿ ಖುಷಿ ಕಭಿ ಗಮ್’, ಮತ್ತು ‘ವೀರ್ ಜಾರಾ’ ಮುಂತಾದ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

PC: Outlook India

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಪತ್ನಿ ಗುರ್ಷರಣ್ ಕೌರ್ ನವದೆಹಲಿಯಲ್ಲಿ ಜೊಹ್ರಾ ಸೆಹಗಲ್‌ ಅವರ 100ನೇ ಹುಟ್ಟುಹಬ್ಬದಂದು ‘ಜೊಹ್ರಾ ಸೆಗಲ್’ ಪುಸ್ತಕವನ್ನು ಬಿಡುಗಡೆ ಮಾಡಿದ್ದರು.

ಪದ್ಮಶ್ರೀ (1998), ಕಾಳಿದಾಸ್ ಸಮ್ಮನ್ (2001), ಮತ್ತು ಪದ್ಮವಿಭೂಷಣ್ (2010) ಸೇರಿ ಹಲವು ಗೌರವಗಳನ್ನು ಸೆಹಗಲ್ ಪಡೆದಿದ್ದಾರೆ. ತಮ್ಮ 102 ನೇ ವಯಸ್ಸಿನಲ್ಲಿ ನವದೆಹಲಿಯಲ್ಲಿ ನಿಧನರಾದರು.


ಇದನ್ನೂ ಓದಿ: ಭಾರತದ ಈಜುಗಾರ್ತಿ ಆರತಿ ಸಹಾಗೆ ಗೂಗಲ್ ಡೂಡಲ್ ಗೌರವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...