Homeಮುಖಪುಟಮೊದಲ ದಲಿತ ನಟಿ ಪಿಕೆ ರೋಸಿಗೆ ಗೂಗಲ್ ಡೂಡಲ್ ಗೌರವ

ಮೊದಲ ದಲಿತ ನಟಿ ಪಿಕೆ ರೋಸಿಗೆ ಗೂಗಲ್ ಡೂಡಲ್ ಗೌರವ

- Advertisement -
- Advertisement -

ಇಂದು ಮಲಯಾಳಂ ಸಿನಿಮಾದ ಮೊದಲ ನಟಿ ಪಿಕೆ ರೋಸಿಯವರ 120ನೇ ಜನ್ಮದಿನವನ್ನು ಗೌರವಿಸುವುದಕ್ಕಾಗಿ ಗೂಗಲ್‌ ತನ್ನ‌ ಡೂಡಲ್ ಗೌರವ ಸೂಚಿಸಿದೆ

ಭಾರತೀಯ ಸಿನಿಮಾ ಚರಿತ್ರೆ ಅಷ್ಟಾಗಿ ಗುರುತಿಸಿಲ್ಲದ ಪಿ‌ಕೆ ರೋಸಿ ಕೇವಲ ಮೊದಲ ಮಲಯಾಳಿ ನಟಿ ಮಾತ್ರವಲ್ಲ, ಮೊದಲ ದಲಿತ ಸಮುದಾಯದ ನಟಿ ಕೂಡ ಎನ್ನುವುದು ಗಮನಿಸಬೇಕಾದ ವಿಷಯ. ಕೇವಲ ದಲಿತ ಸಮುದಾಯದಲ್ಲಿ ಹುಟ್ಟಿದ ಕಾರಣಕ್ಕಾಗಿಯೇ ಸಿನಿಮಾರಂಗವನ್ನು, ಅಷ್ಟೇಕೆ ತಾನು ಹುಟ್ಟಿ ಬೆಳೆದ ತನ್ನ ಸ್ವಂತ ನೆಲವನ್ನು ಸಹ ಬಿಟ್ಟು ಬದುಕಬೇಕಾಯಿತು.

1903ನೇ ಇಸವಿಯ ಫೆಬ್ರವರಿ 10ರಂದು ಕೇರಳದ ಪುಲಯ ಸಮುದಾಯದ ನಂಡನ್ ಕೊಡಿಲ್ ಪೌಲೋಸ್ ಮತ್ತು ಕುಂಜಿ ದಂಪತಿಗಳ ಮಗಳಾಗಿ ಪಿಕೆ ರೋಸಿ ಜನಿಸಿದರು‌. ದಲಿತ ಅಸ್ಪೃಶ್ಯ ಪುಲಯ ಸಮುದಾಯದ ರೋಸಿ ಕುಟುಂಬ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದರು. ಬಾಲ್ಯದಲ್ಲೆ ತಂದೆಯನ್ನು ಕಳೆದುಕೊಂಡು ಬಡತನದಲ್ಲಿ ಬದುಕಿದ ರೋಸಿ ಕೃಷಿ ಕೂಲಿಯಾಗಿದ್ದವರು. ಅಭಿನಯದ ಕಡೆ ಆಸಕ್ತಿಯಿದ್ದುದರಿಂದಾಗಿ ಬದುಕು ಕಟ್ಟಿಕೊಳ್ಳಲು ರಂಗಭೂಮಿಯತ್ತ ಆಕರ್ಷಿತರಾಗಿ ಒಂದು ರಂಗತಂಡವನ್ನು ಸೇರಿಕೊಂಡರು. ಆ ಕಾಲದಲ್ಲಿ ರಂಗಭೂಮಿಯಲ್ಲಿ ಕೆಲಸ ಮಾಡುವುದು ಅಗೌರವದ ನಡೆಯಾಗಿತ್ತು, ರಂಗನಟಿಯರನ್ನು ಕೀಳಾಗಿ ನೋಡಲಾಗುತ್ತಿತ್ತು. ಸಮಾಜ ಎಷ್ಟೇ ಅಪಮಾನದಿಂದ ನೋಡಿದರು ಅಭಿನಯದ ಕುರಿತ ತಮ್ಮ ಪ್ರೀತಿಯಿಂದಾಗಿ ರೋಸಿ ರಂಗಭೂಮಿಯನ್ನು ತ್ಯಜಿಸಲಿಲ್ಲ.

ಆಗ ಮಲಯಾಳಂ ಸಿನಿಮಾದ ಪ್ರವರ್ತಕ ನಿರ್ದೇಶಕರಲ್ಲೊಬ್ಬರಾಗಿದ್ದ ಜೆಸಿ ಡೇನಿಯಲ್ ತಾವು ತಯಾರಿಸಬೇಕೆಂದುಕೊಂಡಿದ್ದ ‘ವಿಗಟಕುಮಾರನ್’ ಎನ್ನುವ ಮೂಕಿ ಸಿನಿಮಾಕ್ಕೆ ರೋಸಿಯವರನ್ನು ನಾಯಕನಟಿಯಾಗಿ ಆಯ್ಕೆ ಮಾಡಿಕೊಳ್ಳುತ್ತಾರೆ. ದಲಿತ ಸಮುದಾಯದ ರೋಸಿಯವರನ್ನು ಸಿನಿಮಾಕ್ಕೆ ಆಯ್ಕೆ ಮಾಡಿದ್ದನ್ನು ಸಂಪ್ರದಾಯಸ್ಥ ಜಾತಿವಾದಿಗಳು ಖಂಡಿಸುತ್ತಾರೆ. ಸಿನಿಮಾರಂಗ ಯಾವತ್ತೂ ಮೇಲ್ಜಾತಿಗಳ ಹಿಡಿತದಲ್ಲೇ ಇರುವುದರಿಂದ ಡೇನಿಯಲ್‌ರಿಗೆ ಈ ಸಿನಿಮಾ ಮುಗಿಸುವುದು ಬಹಳ ಕಷ್ಟವಾಗುತ್ತದೆ. ಕೆಲವು ಮೇಲ್ಜಾತಿಯ ತಂತ್ರಜ್ಞರು ಸಿನಿಮಾದಿಂದ ಹೊರನಡೆಯುತ್ತಾರೆ. ಅನೇಕ ಸವಾಲುಗಳ ನಡುವೆ ಸಿನಿಮಾ ಮುಗಿಸುವ ಡೇನಿಯಲ್ ಸಿನಿಮಾವನ್ನು ಬಿಡುಗಡೆ ಮಾಡುವ ಸಂದರ್ಭದಲ್ಲಿ ಒಂದು ಘಟನೆ ಎದುರಾಗುತ್ತದೆ.

ಸಿನಿಮಾ‌ ಬಿಡುಗಡೆಗೆ ಮುಂಚೆ ಸಿನಿಮಾದ ಪ್ರೀಮಿಯರ್ ಷೋ ಏರ್ಪಾಡಾಗುತ್ತದೆ. ಇಡೀ ಮಲಯಾಳಂ ಸಿನಿಮಾರಂಗ ಈ ಸಿನಿಮಾದ ವಿರುದ್ಧ ನಿಲ್ಲುತ್ತದೆ. ಡೇನಿಯಲ್‌ರ ಸತತ ಪ್ರಯತ್ನದಿಂದಾಗಿ ಪ್ರೀಮಿಯರ್ ಷೋ ಏರ್ಪಾಡಾಗುತ್ತದೆ. ಅಸ್ಪೃಶ್ಯ ಮಹಿಳೆಯ ಜೊತೆಗೆ ಕೂತು ಸಿನಿಮಾ ನೋಡಲು ನಿರಾಕರಿಸುವ ಸಿನಿಮಾ ಮಂದಿ ಚಿತ್ರ ಪ್ರದರ್ಶನಕ್ಕೆ ರೋಸಿ ಬರಬಾರದು ಎನ್ನುವ ಷರತ್ತನ್ನು ವಿಧಿಸುತ್ತಾರೆ. ತಾವು ನಟಿಸಿದ ಸಿನಿಮಾದ ಪ್ರದರ್ಶನಕ್ಕೆ ತಾವೇ ಹೋಗಲಾಗದ ಕಾರಣಕ್ಕೆ ಚಿತ್ರಮಂದಿರದ ಹೊರಗೆ ಕಾಯಬೇಕಾದ ಪರಿಸ್ಥಿತಿ ರೋಸಿಯವರಿಗೆ ಬರುತ್ತದೆ.

ಇದನ್ನೂ ಓದಿ: ‘ಪ್ಯಾನ್‌ ಇಂಡಿಯಾ’ ಆಚೆಗಿನ ಚಿತ್ರ ಜಗತ್ತು: 2022ರಲ್ಲಿ ತೆರೆಕಂಡ ಹತ್ತು ಸದಭಿರುಚಿಯ ಸಿನಿಮಾಗಳು

ಚಿತ್ರ ಶುರುವಾದ ಮೇಲೆ ಚಿತ್ರಮಂದಿರದಲ್ಲಿ ಗದ್ದಲವಾಗುತ್ತದೆ. ಕಾರಣ ರೋಸಿ ನಟಿಸಿದ್ದ ಪಾತ್ರ ನಾಯರ್ ಸಮುದಾಯದ ಹೆಣ್ಣಿನ ಪಾತ್ರ‌. ಚಿತ್ರದ ಒಂದು ದೃಶ್ಯದಲ್ಲಿ ಮಲ್ಲಿಗೆ ಹೂವನ್ನು ಮುಡಿದಿರುವ ನಾಯಕಿಯ ಹತ್ತಿರಕ್ಕೆ ಬರುವ ನಾಯಕ ಆಕೆಯ ಮುಡಿಯಲ್ಲಿರುವ ಮಲ್ಲಿಗೆ ಹೂವನ್ನು ಮೂಸಿ ಸಂಭ್ರಮಿಸುತ್ತಾನೆ. ಅಸ್ಪೃಶ್ಯ ದಲಿತ ಸಮುದಾಯದ ಹೆಣ್ಣೊಬ್ಬಳು ನಾಯರ್ ಮಹಿಳೆಯ ಪಾತ್ರ ಮಾಡಿದ್ದಲ್ಲದೆ, ಮೇಲ್ಜಾತಿಯ ಪಾತ್ರವೊಂದು ಆಕೆಯನ್ನು ಕಾಮಿಸುವಂತೆ ಚಿತ್ರಿಸಿದ ಕಾರಣಕ್ಕೆ ಜನ ಸಿಟ್ಟಿಗೆದ್ದು ನಿರ್ದೇಶಕ ಡೇನಿಯಲ್‌ರ ಮೇಲೆ ಹಲ್ಲೆ ಮಾಡುತ್ತಾರೆ. ರೋಸಿಯವರನ್ನು ಹುಡುಕಿಕೊಂಡು ಹೋದ ಹಲ್ಲೆಕೋರರು ಆಕೆಯ ಗುಡಿಸಲಿಗೆ ಬೆಂಕಿ ಹಚ್ಚುತ್ತಾರೆ. ತಮ್ಮ ಜೀವ ಉಳಿಸಿಕೊಳ್ಳಲು ದಾರಿಯಲ್ಲಿ ಸಿಕ್ಕ ಲಾರಿಯನ್ನು ಹತ್ತಿಕೊಂಡು ಆವತ್ತು ತ್ರಿವೆಂಡ್ರಂ ಅನ್ನು ಬಿಟ್ಟು ಹೋದ ರೋಸಿ ಕೊನೆಯವರೆಗೂ ತಮ್ಮ ಊರಿಗೆ ಮರಳಲೇ‌ ಇಲ್ಲ. ರೋಸಿ ನಟಿಸಿರುವ ಸಿನಿಮಾ ಎನ್ನುವ ಕಾರಣಕ್ಕೆ ಈ ಸಿನಿಮಾವನ್ನು ಬಾಯ್ಕಾಟ್ ಮಾಡಿದ್ದಕ್ಕಾಗಿ ಚಿತ್ರದ ನಿರ್ಮಾಪಕ ಡೇನಿಯಲ್ ದಿವಾಳಿಯಾಗುತ್ತಾರೆ. ಮಲಯಾಳಂ ಸಿನಿಮಾರಂಗಕ್ಕೆ ರೋಸಿಯವರ ಮೇಲೆ ಎಷ್ಟು ಸಿಟ್ಟಿರುತ್ತದೆ ಎಂದರೆ ಅವರ ಕೊನೆಗಾಲದವರೆಗೂ ತಮ್ಮ ಐಡೆಂಟಿಟಿಯನ್ನು ಮುಚ್ಚಿಟ್ಟೆ ಬದುಕುತ್ತಾರೆ. ತಾವು ನಟಿ ಎನ್ನುವುದನ್ನು ಹೇಳಿಕೊಳ್ಳಲಾಗದೆ ಜೀವಮಾನವಿಡಿ ನರಳುತ್ತಾರೆ.

ದಲಿತರು ಇವತ್ತಿಗೂ ಸಿನಿಮಾರಂಗದಲ್ಲಿ survive ಆಗಬೇಕಾದರೆ ತಮ್ಮ ಐಡೆಂಟಿಟಿಯನ್ನು ಅಡಗಿಸಿಟ್ಟುಕೊಳ್ಳಬೇಕಾದ ಪರಿಸ್ಥಿತಿ ಇದೆ. ದಲಿತರ ಈ Invisibilityಗೆ ಮೊದಲ ಸಂಕೇತವಾಗಿ ಪಿಕೆ ರೋಸಿಯವರು ಇತಿಹಾಸದಲ್ಲಿ ಉಳಿದಿದ್ದಾರೆ.

ಭಾರತೀಯ ಸಿನಿಮಾರಂಗದ ಆರಂಭದ ದಿನಗಳಲ್ಲೆ ರೋಸಿಯವರು ಸಿನಿಮಾರಂಗವನ್ನು ಪ್ರವೇಶಿಸಿದರೂ ತಮ್ಮ ಜಾತಿಯ ಕಾರಣಕ್ಕೆ ಶಾಶ್ವತವಾಗಿ ಅಂಚಿಗೆ ತಳ್ಳಲ್ಪಟ್ಟರು. ಅವರ ಬದುಕನ್ನು, ಭಾರತೀಯ ಸಿನಿಮಾದಲ್ಲಿ ದಲಿತರ ಬದುಕಿನ ಆರಂಭದ ಬಿಂದು ಎಂದು ‘Dalit Cinema in India’ ಎನ್ನುವ ತಮ್ಮ ಲೇಖನದಲ್ಲಿ ದಲಿತ ಸಮುದಾಯದ ಮಾರ್ಗಪ್ರವರ್ತಕ ಲೇಖಕ ಪ ರಂಜಿತ್ ದಾಖಲಿಸುತ್ತಾರೆ. ಅಲ್ಲದೆ ತಮ್ಮ Neelam Cultural Centerನ ಮೂಲಕ ಪ್ರತಿವರ್ಷ ಆಚರಿಸುವ Dalit History Monthನ ಭಾಗವಾಗಿ ಕಳೆದ ವರ್ಷ ಪಿಕೆ ರೋಸಿಯವರ ನೆನಪಿನಲ್ಲಿ ದಲಿತ ಸಿನಿಮಾ ಹಬ್ಬವನ್ನು ಆಯೋಜಿಸುವ ಮೂಲಕ ಗೌರವಿಸಿದ್ದರು.

ಇವತ್ತು ನಾಗರಾಜ್ ಮಂಜುಳೆ, ಪ ರಂಜಿತ್, ಮಾರಿ ಸೆಲ್ವರಾಜ್, ನೀರಜ್ ಗಾಯ್‌ವಾನ್ ಮುಂತಾದವರು ತಮ್ಮ ಸಿನಿಮಾಗಳ ಮೂಲಕ ದಲಿತ ಸಂವೇದನೆಯನ್ನು ಭಾರತೀಯ ಸಿನಿಮಾರಂಗದಲ್ಲಿ ಮೂಡಿಸಿದ್ದಾರೆ. ದಲಿತ ಸಿನಿಮಾ ಎನ್ನುವುದು ಮುಖ್ಯವಾಹಿನಿಯ ಸಿನಿಮಾ ಆಗಬಹುದು, ದಲಿತರ ವಸ್ತುವನ್ನಿಟ್ಟುಕೊಂಡ ಸಿನಿಮಾಗಳಲ್ಲಿ ರಜನಿಕಾಂತ್ ತರದ ಸ್ಟಾರ್ ನಟರು ಕೂಡ ನಟಿಸಬಹುದು ಅನ್ನುವಷ್ಟರ ಮಟ್ಟಿಗೆ ಮಾನ್ಯತೆ, ಯಶಸ್ಸು ದಲಿತ ಸಿನಿಮಾಗಳಿಗೆ ಸಿಕ್ಕಿದೆ. ಆದರೆ ದಲಿತ ವಸ್ತುಗಳನ್ನು ಇಟ್ಟುಕೊಂಡು ದಲಿತ ನಿರ್ದೇಶಕರೇ ಮಾಡುವ ಸಿನಿಮಾಗಳಲ್ಲಿ ಸ್ತ್ರೀಪಾತ್ರಗಳನ್ನು ಯಾರು ನಿರ್ವಹಿಸುತ್ತಿದ್ದಾರೆ ಎನ್ನುವ ದಲಿತ ಮಹಿಳೆಯರ‌ ಪ್ರಾತಿನಿಧ್ಯದ ಪ್ರಶ್ನೆಯನ್ನು ದಲಿತ ಮಹಿಳೆಯರು ಬಹಳ ಗಂಭೀರವಾಗಿ ಎತ್ತಿದ್ದಾರೆ.

ಪ ರಂಜಿತ್ ತರದ ಮಾರ್ಗ ಪ್ರವರ್ತಕ ಸಿನಿಮಾ‌ ನಿರ್ದೇಶಕರ ಸಿನಿಮಾಗಳಲ್ಲಿಯೂ ಕೂಡ ದಲಿತ ಮಹಿಳೆಯರ ಪಾತ್ರಗಳನ್ನು ಮೇಲ್ಜಾತಿಗಳಿಂದ ಬಂದ, ಶ್ವೇತವರ್ಣದ ನಟಿಯರೇ ನಿರ್ವಹಿಸುತ್ತಿದ್ದಾರೆ. ಹಾಗಾಗಿ ಆ ಪಾತ್ರಗಳ ಜೊತೆಗೆ ನಮ್ಮನ್ನು ಸಮೀಕರಿಸಿಕೊಳ್ಳಲು ಸಾಧ್ಯವಿಲ್ಲ ಎನ್ನುವ ವಿಮರ್ಶೆಯನ್ನು ಕಿರುಬ ಮುನಿಸ್ವಾಮಿ ತರದ ಹೊಸತಲೆಮಾರಿನ ಚಿಂತಕಿಯರು ಎತ್ತಿದ್ದಾರೆ. ದಲಿತ ವಸ್ತುವಿನ ಸಿನಿಮಾಗಳು authentic ಅನ್ನಿಸಿಕೊಳ್ಳಬೇಕಾದರೆ ದಲಿತ ನಿರ್ದೇಶಕರೇ ಬರಬೇಕಾಯಿತು. ಇದೇ ರೀತಿ ದಲಿತ ಹೆಣ್ಣುಮಕ್ಕಳೆ ದಲಿತ ಪಾತ್ರಗಳನ್ನು ನಿರ್ವಹಿಸುವ ಕಾಲ ಬೇಗ ಬರಲಿ ಎಂದು ಆಶಿಸಬೇಕಾಗುತ್ತದೆ.

ನೂರು ವರ್ಷಕ್ಕೂ ಮೀರಿ ಸಿನಿಮಾ‌‌ ಇತಿಹಾಸವಿರುವ ದೇಶದಲ್ಲಿ ದಲಿತ ಮಹಿಳೆಯರು ಇವತ್ತಿಗೂ ಸಿನಿಮಾ ರಂಗದಲ್ಲಿ ಅದೃಶ್ಯರಾಗಿಯೇ ಉಳಿದಿರುವಾಗ ಪಿಕೆ ರೋಸಿಯವರು ಶತಮಾನದ ಹಿಂದೆಯೇ ಚಿತ್ರರಂಗಕ್ಕೆ ಬಂದು ಜಾತಿವ್ಯವಸ್ಥೆಗೆ ಸವಾಲು ಹಾಕ್ಕಿದ್ದು ಆ ಕಾರಣಕ್ಕಾಗಿಯೇ ತಮ್ಮ ಜೀವಮಾನದುದ್ದಕ್ಕೂ ಅಜ್ಞಾತವಾಗಿಯೇ ಉಳಿದಿದ್ದು ಯಾವತ್ತೂ ದಲಿತ ಸಮುದಾಯ ಮರೆಯಬಾರದ ವಿಷಯ.

ತಾವು ಅದೃಶ್ಯರಾದರೂ ಒಂದು ಮಾದರಿಯಾಗಿ ಇತಿಹಾಸದಲ್ಲಿ ಉಳಿದುಹೋಗಿರುವ ಪಿಕೆ ರೋಸಿಯವರಿಗೆ ಅವರ ನೂರಾ ಇಪ್ಪತ್ತನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಜೈ ಭೀಮ್.

ಕೃಪೆ: ಈ ದಿನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...