Homeಮುಖಪುಟಮೊದಲ ದಲಿತ ನಟಿ ಪಿಕೆ ರೋಸಿಗೆ ಗೂಗಲ್ ಡೂಡಲ್ ಗೌರವ

ಮೊದಲ ದಲಿತ ನಟಿ ಪಿಕೆ ರೋಸಿಗೆ ಗೂಗಲ್ ಡೂಡಲ್ ಗೌರವ

- Advertisement -
- Advertisement -

ಇಂದು ಮಲಯಾಳಂ ಸಿನಿಮಾದ ಮೊದಲ ನಟಿ ಪಿಕೆ ರೋಸಿಯವರ 120ನೇ ಜನ್ಮದಿನವನ್ನು ಗೌರವಿಸುವುದಕ್ಕಾಗಿ ಗೂಗಲ್‌ ತನ್ನ‌ ಡೂಡಲ್ ಗೌರವ ಸೂಚಿಸಿದೆ

ಭಾರತೀಯ ಸಿನಿಮಾ ಚರಿತ್ರೆ ಅಷ್ಟಾಗಿ ಗುರುತಿಸಿಲ್ಲದ ಪಿ‌ಕೆ ರೋಸಿ ಕೇವಲ ಮೊದಲ ಮಲಯಾಳಿ ನಟಿ ಮಾತ್ರವಲ್ಲ, ಮೊದಲ ದಲಿತ ಸಮುದಾಯದ ನಟಿ ಕೂಡ ಎನ್ನುವುದು ಗಮನಿಸಬೇಕಾದ ವಿಷಯ. ಕೇವಲ ದಲಿತ ಸಮುದಾಯದಲ್ಲಿ ಹುಟ್ಟಿದ ಕಾರಣಕ್ಕಾಗಿಯೇ ಸಿನಿಮಾರಂಗವನ್ನು, ಅಷ್ಟೇಕೆ ತಾನು ಹುಟ್ಟಿ ಬೆಳೆದ ತನ್ನ ಸ್ವಂತ ನೆಲವನ್ನು ಸಹ ಬಿಟ್ಟು ಬದುಕಬೇಕಾಯಿತು.

1903ನೇ ಇಸವಿಯ ಫೆಬ್ರವರಿ 10ರಂದು ಕೇರಳದ ಪುಲಯ ಸಮುದಾಯದ ನಂಡನ್ ಕೊಡಿಲ್ ಪೌಲೋಸ್ ಮತ್ತು ಕುಂಜಿ ದಂಪತಿಗಳ ಮಗಳಾಗಿ ಪಿಕೆ ರೋಸಿ ಜನಿಸಿದರು‌. ದಲಿತ ಅಸ್ಪೃಶ್ಯ ಪುಲಯ ಸಮುದಾಯದ ರೋಸಿ ಕುಟುಂಬ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದರು. ಬಾಲ್ಯದಲ್ಲೆ ತಂದೆಯನ್ನು ಕಳೆದುಕೊಂಡು ಬಡತನದಲ್ಲಿ ಬದುಕಿದ ರೋಸಿ ಕೃಷಿ ಕೂಲಿಯಾಗಿದ್ದವರು. ಅಭಿನಯದ ಕಡೆ ಆಸಕ್ತಿಯಿದ್ದುದರಿಂದಾಗಿ ಬದುಕು ಕಟ್ಟಿಕೊಳ್ಳಲು ರಂಗಭೂಮಿಯತ್ತ ಆಕರ್ಷಿತರಾಗಿ ಒಂದು ರಂಗತಂಡವನ್ನು ಸೇರಿಕೊಂಡರು. ಆ ಕಾಲದಲ್ಲಿ ರಂಗಭೂಮಿಯಲ್ಲಿ ಕೆಲಸ ಮಾಡುವುದು ಅಗೌರವದ ನಡೆಯಾಗಿತ್ತು, ರಂಗನಟಿಯರನ್ನು ಕೀಳಾಗಿ ನೋಡಲಾಗುತ್ತಿತ್ತು. ಸಮಾಜ ಎಷ್ಟೇ ಅಪಮಾನದಿಂದ ನೋಡಿದರು ಅಭಿನಯದ ಕುರಿತ ತಮ್ಮ ಪ್ರೀತಿಯಿಂದಾಗಿ ರೋಸಿ ರಂಗಭೂಮಿಯನ್ನು ತ್ಯಜಿಸಲಿಲ್ಲ.

ಆಗ ಮಲಯಾಳಂ ಸಿನಿಮಾದ ಪ್ರವರ್ತಕ ನಿರ್ದೇಶಕರಲ್ಲೊಬ್ಬರಾಗಿದ್ದ ಜೆಸಿ ಡೇನಿಯಲ್ ತಾವು ತಯಾರಿಸಬೇಕೆಂದುಕೊಂಡಿದ್ದ ‘ವಿಗಟಕುಮಾರನ್’ ಎನ್ನುವ ಮೂಕಿ ಸಿನಿಮಾಕ್ಕೆ ರೋಸಿಯವರನ್ನು ನಾಯಕನಟಿಯಾಗಿ ಆಯ್ಕೆ ಮಾಡಿಕೊಳ್ಳುತ್ತಾರೆ. ದಲಿತ ಸಮುದಾಯದ ರೋಸಿಯವರನ್ನು ಸಿನಿಮಾಕ್ಕೆ ಆಯ್ಕೆ ಮಾಡಿದ್ದನ್ನು ಸಂಪ್ರದಾಯಸ್ಥ ಜಾತಿವಾದಿಗಳು ಖಂಡಿಸುತ್ತಾರೆ. ಸಿನಿಮಾರಂಗ ಯಾವತ್ತೂ ಮೇಲ್ಜಾತಿಗಳ ಹಿಡಿತದಲ್ಲೇ ಇರುವುದರಿಂದ ಡೇನಿಯಲ್‌ರಿಗೆ ಈ ಸಿನಿಮಾ ಮುಗಿಸುವುದು ಬಹಳ ಕಷ್ಟವಾಗುತ್ತದೆ. ಕೆಲವು ಮೇಲ್ಜಾತಿಯ ತಂತ್ರಜ್ಞರು ಸಿನಿಮಾದಿಂದ ಹೊರನಡೆಯುತ್ತಾರೆ. ಅನೇಕ ಸವಾಲುಗಳ ನಡುವೆ ಸಿನಿಮಾ ಮುಗಿಸುವ ಡೇನಿಯಲ್ ಸಿನಿಮಾವನ್ನು ಬಿಡುಗಡೆ ಮಾಡುವ ಸಂದರ್ಭದಲ್ಲಿ ಒಂದು ಘಟನೆ ಎದುರಾಗುತ್ತದೆ.

ಸಿನಿಮಾ‌ ಬಿಡುಗಡೆಗೆ ಮುಂಚೆ ಸಿನಿಮಾದ ಪ್ರೀಮಿಯರ್ ಷೋ ಏರ್ಪಾಡಾಗುತ್ತದೆ. ಇಡೀ ಮಲಯಾಳಂ ಸಿನಿಮಾರಂಗ ಈ ಸಿನಿಮಾದ ವಿರುದ್ಧ ನಿಲ್ಲುತ್ತದೆ. ಡೇನಿಯಲ್‌ರ ಸತತ ಪ್ರಯತ್ನದಿಂದಾಗಿ ಪ್ರೀಮಿಯರ್ ಷೋ ಏರ್ಪಾಡಾಗುತ್ತದೆ. ಅಸ್ಪೃಶ್ಯ ಮಹಿಳೆಯ ಜೊತೆಗೆ ಕೂತು ಸಿನಿಮಾ ನೋಡಲು ನಿರಾಕರಿಸುವ ಸಿನಿಮಾ ಮಂದಿ ಚಿತ್ರ ಪ್ರದರ್ಶನಕ್ಕೆ ರೋಸಿ ಬರಬಾರದು ಎನ್ನುವ ಷರತ್ತನ್ನು ವಿಧಿಸುತ್ತಾರೆ. ತಾವು ನಟಿಸಿದ ಸಿನಿಮಾದ ಪ್ರದರ್ಶನಕ್ಕೆ ತಾವೇ ಹೋಗಲಾಗದ ಕಾರಣಕ್ಕೆ ಚಿತ್ರಮಂದಿರದ ಹೊರಗೆ ಕಾಯಬೇಕಾದ ಪರಿಸ್ಥಿತಿ ರೋಸಿಯವರಿಗೆ ಬರುತ್ತದೆ.

ಇದನ್ನೂ ಓದಿ: ‘ಪ್ಯಾನ್‌ ಇಂಡಿಯಾ’ ಆಚೆಗಿನ ಚಿತ್ರ ಜಗತ್ತು: 2022ರಲ್ಲಿ ತೆರೆಕಂಡ ಹತ್ತು ಸದಭಿರುಚಿಯ ಸಿನಿಮಾಗಳು

ಚಿತ್ರ ಶುರುವಾದ ಮೇಲೆ ಚಿತ್ರಮಂದಿರದಲ್ಲಿ ಗದ್ದಲವಾಗುತ್ತದೆ. ಕಾರಣ ರೋಸಿ ನಟಿಸಿದ್ದ ಪಾತ್ರ ನಾಯರ್ ಸಮುದಾಯದ ಹೆಣ್ಣಿನ ಪಾತ್ರ‌. ಚಿತ್ರದ ಒಂದು ದೃಶ್ಯದಲ್ಲಿ ಮಲ್ಲಿಗೆ ಹೂವನ್ನು ಮುಡಿದಿರುವ ನಾಯಕಿಯ ಹತ್ತಿರಕ್ಕೆ ಬರುವ ನಾಯಕ ಆಕೆಯ ಮುಡಿಯಲ್ಲಿರುವ ಮಲ್ಲಿಗೆ ಹೂವನ್ನು ಮೂಸಿ ಸಂಭ್ರಮಿಸುತ್ತಾನೆ. ಅಸ್ಪೃಶ್ಯ ದಲಿತ ಸಮುದಾಯದ ಹೆಣ್ಣೊಬ್ಬಳು ನಾಯರ್ ಮಹಿಳೆಯ ಪಾತ್ರ ಮಾಡಿದ್ದಲ್ಲದೆ, ಮೇಲ್ಜಾತಿಯ ಪಾತ್ರವೊಂದು ಆಕೆಯನ್ನು ಕಾಮಿಸುವಂತೆ ಚಿತ್ರಿಸಿದ ಕಾರಣಕ್ಕೆ ಜನ ಸಿಟ್ಟಿಗೆದ್ದು ನಿರ್ದೇಶಕ ಡೇನಿಯಲ್‌ರ ಮೇಲೆ ಹಲ್ಲೆ ಮಾಡುತ್ತಾರೆ. ರೋಸಿಯವರನ್ನು ಹುಡುಕಿಕೊಂಡು ಹೋದ ಹಲ್ಲೆಕೋರರು ಆಕೆಯ ಗುಡಿಸಲಿಗೆ ಬೆಂಕಿ ಹಚ್ಚುತ್ತಾರೆ. ತಮ್ಮ ಜೀವ ಉಳಿಸಿಕೊಳ್ಳಲು ದಾರಿಯಲ್ಲಿ ಸಿಕ್ಕ ಲಾರಿಯನ್ನು ಹತ್ತಿಕೊಂಡು ಆವತ್ತು ತ್ರಿವೆಂಡ್ರಂ ಅನ್ನು ಬಿಟ್ಟು ಹೋದ ರೋಸಿ ಕೊನೆಯವರೆಗೂ ತಮ್ಮ ಊರಿಗೆ ಮರಳಲೇ‌ ಇಲ್ಲ. ರೋಸಿ ನಟಿಸಿರುವ ಸಿನಿಮಾ ಎನ್ನುವ ಕಾರಣಕ್ಕೆ ಈ ಸಿನಿಮಾವನ್ನು ಬಾಯ್ಕಾಟ್ ಮಾಡಿದ್ದಕ್ಕಾಗಿ ಚಿತ್ರದ ನಿರ್ಮಾಪಕ ಡೇನಿಯಲ್ ದಿವಾಳಿಯಾಗುತ್ತಾರೆ. ಮಲಯಾಳಂ ಸಿನಿಮಾರಂಗಕ್ಕೆ ರೋಸಿಯವರ ಮೇಲೆ ಎಷ್ಟು ಸಿಟ್ಟಿರುತ್ತದೆ ಎಂದರೆ ಅವರ ಕೊನೆಗಾಲದವರೆಗೂ ತಮ್ಮ ಐಡೆಂಟಿಟಿಯನ್ನು ಮುಚ್ಚಿಟ್ಟೆ ಬದುಕುತ್ತಾರೆ. ತಾವು ನಟಿ ಎನ್ನುವುದನ್ನು ಹೇಳಿಕೊಳ್ಳಲಾಗದೆ ಜೀವಮಾನವಿಡಿ ನರಳುತ್ತಾರೆ.

ದಲಿತರು ಇವತ್ತಿಗೂ ಸಿನಿಮಾರಂಗದಲ್ಲಿ survive ಆಗಬೇಕಾದರೆ ತಮ್ಮ ಐಡೆಂಟಿಟಿಯನ್ನು ಅಡಗಿಸಿಟ್ಟುಕೊಳ್ಳಬೇಕಾದ ಪರಿಸ್ಥಿತಿ ಇದೆ. ದಲಿತರ ಈ Invisibilityಗೆ ಮೊದಲ ಸಂಕೇತವಾಗಿ ಪಿಕೆ ರೋಸಿಯವರು ಇತಿಹಾಸದಲ್ಲಿ ಉಳಿದಿದ್ದಾರೆ.

ಭಾರತೀಯ ಸಿನಿಮಾರಂಗದ ಆರಂಭದ ದಿನಗಳಲ್ಲೆ ರೋಸಿಯವರು ಸಿನಿಮಾರಂಗವನ್ನು ಪ್ರವೇಶಿಸಿದರೂ ತಮ್ಮ ಜಾತಿಯ ಕಾರಣಕ್ಕೆ ಶಾಶ್ವತವಾಗಿ ಅಂಚಿಗೆ ತಳ್ಳಲ್ಪಟ್ಟರು. ಅವರ ಬದುಕನ್ನು, ಭಾರತೀಯ ಸಿನಿಮಾದಲ್ಲಿ ದಲಿತರ ಬದುಕಿನ ಆರಂಭದ ಬಿಂದು ಎಂದು ‘Dalit Cinema in India’ ಎನ್ನುವ ತಮ್ಮ ಲೇಖನದಲ್ಲಿ ದಲಿತ ಸಮುದಾಯದ ಮಾರ್ಗಪ್ರವರ್ತಕ ಲೇಖಕ ಪ ರಂಜಿತ್ ದಾಖಲಿಸುತ್ತಾರೆ. ಅಲ್ಲದೆ ತಮ್ಮ Neelam Cultural Centerನ ಮೂಲಕ ಪ್ರತಿವರ್ಷ ಆಚರಿಸುವ Dalit History Monthನ ಭಾಗವಾಗಿ ಕಳೆದ ವರ್ಷ ಪಿಕೆ ರೋಸಿಯವರ ನೆನಪಿನಲ್ಲಿ ದಲಿತ ಸಿನಿಮಾ ಹಬ್ಬವನ್ನು ಆಯೋಜಿಸುವ ಮೂಲಕ ಗೌರವಿಸಿದ್ದರು.

ಇವತ್ತು ನಾಗರಾಜ್ ಮಂಜುಳೆ, ಪ ರಂಜಿತ್, ಮಾರಿ ಸೆಲ್ವರಾಜ್, ನೀರಜ್ ಗಾಯ್‌ವಾನ್ ಮುಂತಾದವರು ತಮ್ಮ ಸಿನಿಮಾಗಳ ಮೂಲಕ ದಲಿತ ಸಂವೇದನೆಯನ್ನು ಭಾರತೀಯ ಸಿನಿಮಾರಂಗದಲ್ಲಿ ಮೂಡಿಸಿದ್ದಾರೆ. ದಲಿತ ಸಿನಿಮಾ ಎನ್ನುವುದು ಮುಖ್ಯವಾಹಿನಿಯ ಸಿನಿಮಾ ಆಗಬಹುದು, ದಲಿತರ ವಸ್ತುವನ್ನಿಟ್ಟುಕೊಂಡ ಸಿನಿಮಾಗಳಲ್ಲಿ ರಜನಿಕಾಂತ್ ತರದ ಸ್ಟಾರ್ ನಟರು ಕೂಡ ನಟಿಸಬಹುದು ಅನ್ನುವಷ್ಟರ ಮಟ್ಟಿಗೆ ಮಾನ್ಯತೆ, ಯಶಸ್ಸು ದಲಿತ ಸಿನಿಮಾಗಳಿಗೆ ಸಿಕ್ಕಿದೆ. ಆದರೆ ದಲಿತ ವಸ್ತುಗಳನ್ನು ಇಟ್ಟುಕೊಂಡು ದಲಿತ ನಿರ್ದೇಶಕರೇ ಮಾಡುವ ಸಿನಿಮಾಗಳಲ್ಲಿ ಸ್ತ್ರೀಪಾತ್ರಗಳನ್ನು ಯಾರು ನಿರ್ವಹಿಸುತ್ತಿದ್ದಾರೆ ಎನ್ನುವ ದಲಿತ ಮಹಿಳೆಯರ‌ ಪ್ರಾತಿನಿಧ್ಯದ ಪ್ರಶ್ನೆಯನ್ನು ದಲಿತ ಮಹಿಳೆಯರು ಬಹಳ ಗಂಭೀರವಾಗಿ ಎತ್ತಿದ್ದಾರೆ.

ಪ ರಂಜಿತ್ ತರದ ಮಾರ್ಗ ಪ್ರವರ್ತಕ ಸಿನಿಮಾ‌ ನಿರ್ದೇಶಕರ ಸಿನಿಮಾಗಳಲ್ಲಿಯೂ ಕೂಡ ದಲಿತ ಮಹಿಳೆಯರ ಪಾತ್ರಗಳನ್ನು ಮೇಲ್ಜಾತಿಗಳಿಂದ ಬಂದ, ಶ್ವೇತವರ್ಣದ ನಟಿಯರೇ ನಿರ್ವಹಿಸುತ್ತಿದ್ದಾರೆ. ಹಾಗಾಗಿ ಆ ಪಾತ್ರಗಳ ಜೊತೆಗೆ ನಮ್ಮನ್ನು ಸಮೀಕರಿಸಿಕೊಳ್ಳಲು ಸಾಧ್ಯವಿಲ್ಲ ಎನ್ನುವ ವಿಮರ್ಶೆಯನ್ನು ಕಿರುಬ ಮುನಿಸ್ವಾಮಿ ತರದ ಹೊಸತಲೆಮಾರಿನ ಚಿಂತಕಿಯರು ಎತ್ತಿದ್ದಾರೆ. ದಲಿತ ವಸ್ತುವಿನ ಸಿನಿಮಾಗಳು authentic ಅನ್ನಿಸಿಕೊಳ್ಳಬೇಕಾದರೆ ದಲಿತ ನಿರ್ದೇಶಕರೇ ಬರಬೇಕಾಯಿತು. ಇದೇ ರೀತಿ ದಲಿತ ಹೆಣ್ಣುಮಕ್ಕಳೆ ದಲಿತ ಪಾತ್ರಗಳನ್ನು ನಿರ್ವಹಿಸುವ ಕಾಲ ಬೇಗ ಬರಲಿ ಎಂದು ಆಶಿಸಬೇಕಾಗುತ್ತದೆ.

ನೂರು ವರ್ಷಕ್ಕೂ ಮೀರಿ ಸಿನಿಮಾ‌‌ ಇತಿಹಾಸವಿರುವ ದೇಶದಲ್ಲಿ ದಲಿತ ಮಹಿಳೆಯರು ಇವತ್ತಿಗೂ ಸಿನಿಮಾ ರಂಗದಲ್ಲಿ ಅದೃಶ್ಯರಾಗಿಯೇ ಉಳಿದಿರುವಾಗ ಪಿಕೆ ರೋಸಿಯವರು ಶತಮಾನದ ಹಿಂದೆಯೇ ಚಿತ್ರರಂಗಕ್ಕೆ ಬಂದು ಜಾತಿವ್ಯವಸ್ಥೆಗೆ ಸವಾಲು ಹಾಕ್ಕಿದ್ದು ಆ ಕಾರಣಕ್ಕಾಗಿಯೇ ತಮ್ಮ ಜೀವಮಾನದುದ್ದಕ್ಕೂ ಅಜ್ಞಾತವಾಗಿಯೇ ಉಳಿದಿದ್ದು ಯಾವತ್ತೂ ದಲಿತ ಸಮುದಾಯ ಮರೆಯಬಾರದ ವಿಷಯ.

ತಾವು ಅದೃಶ್ಯರಾದರೂ ಒಂದು ಮಾದರಿಯಾಗಿ ಇತಿಹಾಸದಲ್ಲಿ ಉಳಿದುಹೋಗಿರುವ ಪಿಕೆ ರೋಸಿಯವರಿಗೆ ಅವರ ನೂರಾ ಇಪ್ಪತ್ತನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಜೈ ಭೀಮ್.

ಕೃಪೆ: ಈ ದಿನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...