Homeಚಳವಳಿಸ್ವಾತಂತ್ರ್ಯ ಹೋರಾಟಗಾರ್ತಿ, ಕವಯತ್ರಿ ಸುಭದ್ರಾ ಕುಮಾರಿ ಚೌಹಾಣ್‌ಗೆ ಗೂಗಲ್ ಡೂಡಲ್ ಗೌರವ

ಸ್ವಾತಂತ್ರ್ಯ ಹೋರಾಟಗಾರ್ತಿ, ಕವಯತ್ರಿ ಸುಭದ್ರಾ ಕುಮಾರಿ ಚೌಹಾಣ್‌ಗೆ ಗೂಗಲ್ ಡೂಡಲ್ ಗೌರವ

- Advertisement -
- Advertisement -

ಝಾನ್ಸಿ ಕಿ ರಾಣಿ ಪ್ರಸಿದ್ಧ ಕವಿತೆಯ ರಚನೆಕಾರರಾದ ಕವಯತ್ರಿ, ಸ್ವಾತಂತ್ರ್ಯ ಹೋರಾಟಗಾರ್ತಿ ಸುಭದ್ರಾ ಕುಮಾರಿ ಚೌಹಾಣ್ ಅವರ 117 ನೇ ಜನ್ಮ ದಿನಾಚರಣೆಯಂದು ಗೂಗಲ್ ಡೂಡಲ್ ಸೋಮವಾರ ವಿಶೇಷ ಗೌರವ ಸಲ್ಲಿಸಿದೆ.

ಸುಭದ್ರಾ ಕುಮಾರಿ ಚೌಹಾಣ್‌ ಪೆನ್ನು ಮತ್ತು ಪೇಪರ್‌ನೊಂದಿಗೆ ಕವಿತೆ ಬರೆಯಲು ಕುಳಿತಿರುವುದನ್ನು ಗೂಗಲ್ ಡೂಡಲ್ ತೋರಿಸುತ್ತದೆ. ಪ್ರಸಿದ್ಧ ಕವಿತೆ ಝಾನ್ಸಿ ಕಿ ರಾಣಿಯ ಸನ್ನಿವೇಶವನ್ನು ತೋರಿಸುವ ಸಲುವಾಗಿ ಒಂದು ಬದಿಯಲ್ಲಿ ರಾಣಿ ಲಕ್ಷ್ಮಿ ಬಾಯಿ ಕುದುರೆ ಸವಾರಿ ಮಾಡುತ್ತಿರುವುದನ್ನು ಚಿತ್ರಿಸಲಾಗಿದೆ. ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಮೆರವಣಿಗೆ ಹೊರಟಿರುವ ಸ್ವಾತಂತ್ರ್ಯ ಹೋರಾಟಗಾರರನ್ನು ಮತ್ತೊಂದು ಬದಿಯಲ್ಲಿ ತೋರಿಸಲಾಗಿದೆ.

ಸುಭದ್ರಾ ಕುಮಾರಿ ಹಿಂದಿ ಕಾವ್ಯದಲ್ಲಿ ಹಲವಾರು ಕೃತಿಗಳನ್ನು ಬರೆದಿದ್ದಾರೆ, ಝಾನ್ಸಿ ಕಿ ರಾಣಿ ಅವರ ಅತ್ಯಂತ ಪ್ರಸಿದ್ಧ ಕವಿತೆ. ರಾಣಿ ಲಕ್ಷ್ಮಿ ಬಾಯಿ ಅವರ ಜೀವನವನ್ನು ವಿವರಿಸುವ ಈ ಕವಿತೆಯು ಹಿಂದಿ ಸಾಹಿತ್ಯದಲ್ಲಿ ಹೆಚ್ಚು ಓದಿಸಿಕೊಂಡಿರುವ ಮತ್ತು ಹಾಡಿರುವ ಕವಿತೆಗಳಲ್ಲಿ ಒಂದಾಗಿದೆ.

ಇದನ್ನೂ ಓದಿ: ಹೊಸ ಐಟಿ ನಿಯಮ: ಏಪ್ರಿಲ್‌ನಲ್ಲಿ 59,350 ಕಂಟೆಂಟ್‌‌‌ಗಳನ್ನು ಕಿತ್ತು ಹಾಕಿದ ಗೂಗಲ್!

ಗೂಗಲ್ ಡೂಡಲ್ ಪ್ರಕಟಿಸಿರುವ ಚಿತ್ರವನ್ನು ನ್ಯೂಜಿಲೆಂಡ್ ಮೂಲದ ಅತಿಥಿ ಕಲಾವಿದೆ ಪ್ರಭಾ ಮಲ್ಯ ರಚಿಸಿದ್ದಾರೆ.

ಸುಭದ್ರಾ ಕುಮಾರಿ ಚೌಹಾಣ್ ಅವರ ಕವಿತೆ ಮತ್ತು ಗದ್ಯವು ಪ್ರಾಥಮಿಕವಾಗಿ ಲಿಂಗ ತಾರತಮ್ಯ ಮತ್ತು ಜಾತಿ ತಾರತಮ್ಯದಂತಹ ಭಾರತೀಯ ಮಹಿಳೆಯರು ಎದುರಿಸಿದ ಕಷ್ಟಗಳನ್ನು ಕೇಂದ್ರೀಕರಿಸಿವೆ.

Subhadra Kumari Chauhan Special | कविता और कहानियों से कहीं ज्यादा है Subhadra  Kumari Chauhan का योगदान
PC: thequint

ಸುಭದ್ರಾ ಕುಮಾರಿ ಆಗಸ್ಟ್ 16, 1904 ರಂದು ಉತ್ತರ ಪ್ರದೇಶದ ಪ್ರಯಾಗರಾಜ್‌ನ ನಿಹಾಲ್ಪುರ್ ಹಳ್ಳಿಯ ರಾಜಪುರ ಕುಟುಂಬದಲ್ಲಿ ಜನಿಸಿದರು. ಆಕೆ ಆರಂಭದಲ್ಲಿ ಪ್ರಯಾಗರಾಜ್‌ನ ಕ್ರೋಸ್ಟ್‌ವೈಟ್ ಬಾಲಕಿಯರ ಶಾಲೆಯಲ್ಲಿ ಅಧ್ಯಯನ ನಡೆಸಿದರು. 1919 ರಲ್ಲಿ ತಮ್ಮ 16 ನೇ ವಯಸ್ಸಿನಲ್ಲಿ ಖಾಂಡ್ವಾದ ಠಾಕೂರ್ ಲಕ್ಷ್ಮಣ್ ಸಿಂಗ್ ಚೌಹಾಣ್ ಅವರನ್ನು ವಿವಾಹವಾದರು.

ಸ್ವಾತಂತ್ರ್ಯ ಹೋರಾಟಗಾರ್ತಿ ಸುಭದ್ರಾ ಮತ್ತು ಅವರ ಪತಿ 1921 ರಲ್ಲಿ ಮಹಾತ್ಮಾ ಗಾಂಧಿಯವರ ಅಸಹಕಾರ ಚಳುವಳಿಗೆ ಸೇರಿದರು. ನಾಗ್ಪುರದಲ್ಲಿ ಬಂಧನಕ್ಕೊಳಗಾದ ಮೊದಲ ಮಹಿಳಾ ಸತ್ಯಾಗ್ರಹಿಯಾದರು.

1940 ರ ದಶಕದವರೆಗೆ ಸ್ವಾತಂತ್ರ್ಯ ಹೋರಾಟಕ್ಕಾಗಿ ಕ್ರಾಂತಿಕಾರಿ ಕವಿತೆಗಳು, ಹೇಳಿಕೆಗಳನ್ನು ಬರೆಯುವುದನ್ನು ಮುಂದುವರೆಸಿದರು. 1923 ಮತ್ತು 1942 ರಲ್ಲಿ ಬ್ರಿಟಿಷ್ ಆಡಳಿತದ ವಿರುದ್ಧದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಕ್ಕಾಗಿ ಎರಡು ಬಾರಿ ಜೈಲುವಾಸ ಅನುಭವಿಸಿದರು.  ಒಟ್ಟು 88 ಕವಿತೆಗಳು ಮತ್ತು 46 ಸಣ್ಣ ಕಥೆಗಳನ್ನು ಪ್ರಕಟಿಸಿದ್ದರು. ಫೆಬ್ರವರಿ 15, 1948ರಲ್ಲಿ ಕಾರು ಅಪಘಾತದಲ್ಲಿ ನಿಧನರಾದರು.


ಇದನ್ನೂ ಓದಿ: ಕನ್ನಡವನ್ನು ಕೊಳಕು ಭಾಷೆ ಎಂದು ತೋರಿಸಿದ್ದ ವೆಬ್‌ಸೈಟ್, ಕನ್ನಡಿಗರ ಆಕ್ರೋಶಕ್ಕೆ ಮಣಿದ ಗೂಗಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...