Homeಚಳವಳಿಸ್ವಾತಂತ್ರ್ಯ ಹೋರಾಟಗಾರ್ತಿ, ಕವಯತ್ರಿ ಸುಭದ್ರಾ ಕುಮಾರಿ ಚೌಹಾಣ್‌ಗೆ ಗೂಗಲ್ ಡೂಡಲ್ ಗೌರವ

ಸ್ವಾತಂತ್ರ್ಯ ಹೋರಾಟಗಾರ್ತಿ, ಕವಯತ್ರಿ ಸುಭದ್ರಾ ಕುಮಾರಿ ಚೌಹಾಣ್‌ಗೆ ಗೂಗಲ್ ಡೂಡಲ್ ಗೌರವ

- Advertisement -
- Advertisement -

ಝಾನ್ಸಿ ಕಿ ರಾಣಿ ಪ್ರಸಿದ್ಧ ಕವಿತೆಯ ರಚನೆಕಾರರಾದ ಕವಯತ್ರಿ, ಸ್ವಾತಂತ್ರ್ಯ ಹೋರಾಟಗಾರ್ತಿ ಸುಭದ್ರಾ ಕುಮಾರಿ ಚೌಹಾಣ್ ಅವರ 117 ನೇ ಜನ್ಮ ದಿನಾಚರಣೆಯಂದು ಗೂಗಲ್ ಡೂಡಲ್ ಸೋಮವಾರ ವಿಶೇಷ ಗೌರವ ಸಲ್ಲಿಸಿದೆ.

ಸುಭದ್ರಾ ಕುಮಾರಿ ಚೌಹಾಣ್‌ ಪೆನ್ನು ಮತ್ತು ಪೇಪರ್‌ನೊಂದಿಗೆ ಕವಿತೆ ಬರೆಯಲು ಕುಳಿತಿರುವುದನ್ನು ಗೂಗಲ್ ಡೂಡಲ್ ತೋರಿಸುತ್ತದೆ. ಪ್ರಸಿದ್ಧ ಕವಿತೆ ಝಾನ್ಸಿ ಕಿ ರಾಣಿಯ ಸನ್ನಿವೇಶವನ್ನು ತೋರಿಸುವ ಸಲುವಾಗಿ ಒಂದು ಬದಿಯಲ್ಲಿ ರಾಣಿ ಲಕ್ಷ್ಮಿ ಬಾಯಿ ಕುದುರೆ ಸವಾರಿ ಮಾಡುತ್ತಿರುವುದನ್ನು ಚಿತ್ರಿಸಲಾಗಿದೆ. ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಮೆರವಣಿಗೆ ಹೊರಟಿರುವ ಸ್ವಾತಂತ್ರ್ಯ ಹೋರಾಟಗಾರರನ್ನು ಮತ್ತೊಂದು ಬದಿಯಲ್ಲಿ ತೋರಿಸಲಾಗಿದೆ.

ಸುಭದ್ರಾ ಕುಮಾರಿ ಹಿಂದಿ ಕಾವ್ಯದಲ್ಲಿ ಹಲವಾರು ಕೃತಿಗಳನ್ನು ಬರೆದಿದ್ದಾರೆ, ಝಾನ್ಸಿ ಕಿ ರಾಣಿ ಅವರ ಅತ್ಯಂತ ಪ್ರಸಿದ್ಧ ಕವಿತೆ. ರಾಣಿ ಲಕ್ಷ್ಮಿ ಬಾಯಿ ಅವರ ಜೀವನವನ್ನು ವಿವರಿಸುವ ಈ ಕವಿತೆಯು ಹಿಂದಿ ಸಾಹಿತ್ಯದಲ್ಲಿ ಹೆಚ್ಚು ಓದಿಸಿಕೊಂಡಿರುವ ಮತ್ತು ಹಾಡಿರುವ ಕವಿತೆಗಳಲ್ಲಿ ಒಂದಾಗಿದೆ.

ಇದನ್ನೂ ಓದಿ: ಹೊಸ ಐಟಿ ನಿಯಮ: ಏಪ್ರಿಲ್‌ನಲ್ಲಿ 59,350 ಕಂಟೆಂಟ್‌‌‌ಗಳನ್ನು ಕಿತ್ತು ಹಾಕಿದ ಗೂಗಲ್!

ಗೂಗಲ್ ಡೂಡಲ್ ಪ್ರಕಟಿಸಿರುವ ಚಿತ್ರವನ್ನು ನ್ಯೂಜಿಲೆಂಡ್ ಮೂಲದ ಅತಿಥಿ ಕಲಾವಿದೆ ಪ್ರಭಾ ಮಲ್ಯ ರಚಿಸಿದ್ದಾರೆ.

ಸುಭದ್ರಾ ಕುಮಾರಿ ಚೌಹಾಣ್ ಅವರ ಕವಿತೆ ಮತ್ತು ಗದ್ಯವು ಪ್ರಾಥಮಿಕವಾಗಿ ಲಿಂಗ ತಾರತಮ್ಯ ಮತ್ತು ಜಾತಿ ತಾರತಮ್ಯದಂತಹ ಭಾರತೀಯ ಮಹಿಳೆಯರು ಎದುರಿಸಿದ ಕಷ್ಟಗಳನ್ನು ಕೇಂದ್ರೀಕರಿಸಿವೆ.

Subhadra Kumari Chauhan Special | कविता और कहानियों से कहीं ज्यादा है Subhadra  Kumari Chauhan का योगदान
PC: thequint

ಸುಭದ್ರಾ ಕುಮಾರಿ ಆಗಸ್ಟ್ 16, 1904 ರಂದು ಉತ್ತರ ಪ್ರದೇಶದ ಪ್ರಯಾಗರಾಜ್‌ನ ನಿಹಾಲ್ಪುರ್ ಹಳ್ಳಿಯ ರಾಜಪುರ ಕುಟುಂಬದಲ್ಲಿ ಜನಿಸಿದರು. ಆಕೆ ಆರಂಭದಲ್ಲಿ ಪ್ರಯಾಗರಾಜ್‌ನ ಕ್ರೋಸ್ಟ್‌ವೈಟ್ ಬಾಲಕಿಯರ ಶಾಲೆಯಲ್ಲಿ ಅಧ್ಯಯನ ನಡೆಸಿದರು. 1919 ರಲ್ಲಿ ತಮ್ಮ 16 ನೇ ವಯಸ್ಸಿನಲ್ಲಿ ಖಾಂಡ್ವಾದ ಠಾಕೂರ್ ಲಕ್ಷ್ಮಣ್ ಸಿಂಗ್ ಚೌಹಾಣ್ ಅವರನ್ನು ವಿವಾಹವಾದರು.

ಸ್ವಾತಂತ್ರ್ಯ ಹೋರಾಟಗಾರ್ತಿ ಸುಭದ್ರಾ ಮತ್ತು ಅವರ ಪತಿ 1921 ರಲ್ಲಿ ಮಹಾತ್ಮಾ ಗಾಂಧಿಯವರ ಅಸಹಕಾರ ಚಳುವಳಿಗೆ ಸೇರಿದರು. ನಾಗ್ಪುರದಲ್ಲಿ ಬಂಧನಕ್ಕೊಳಗಾದ ಮೊದಲ ಮಹಿಳಾ ಸತ್ಯಾಗ್ರಹಿಯಾದರು.

1940 ರ ದಶಕದವರೆಗೆ ಸ್ವಾತಂತ್ರ್ಯ ಹೋರಾಟಕ್ಕಾಗಿ ಕ್ರಾಂತಿಕಾರಿ ಕವಿತೆಗಳು, ಹೇಳಿಕೆಗಳನ್ನು ಬರೆಯುವುದನ್ನು ಮುಂದುವರೆಸಿದರು. 1923 ಮತ್ತು 1942 ರಲ್ಲಿ ಬ್ರಿಟಿಷ್ ಆಡಳಿತದ ವಿರುದ್ಧದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಕ್ಕಾಗಿ ಎರಡು ಬಾರಿ ಜೈಲುವಾಸ ಅನುಭವಿಸಿದರು.  ಒಟ್ಟು 88 ಕವಿತೆಗಳು ಮತ್ತು 46 ಸಣ್ಣ ಕಥೆಗಳನ್ನು ಪ್ರಕಟಿಸಿದ್ದರು. ಫೆಬ್ರವರಿ 15, 1948ರಲ್ಲಿ ಕಾರು ಅಪಘಾತದಲ್ಲಿ ನಿಧನರಾದರು.


ಇದನ್ನೂ ಓದಿ: ಕನ್ನಡವನ್ನು ಕೊಳಕು ಭಾಷೆ ಎಂದು ತೋರಿಸಿದ್ದ ವೆಬ್‌ಸೈಟ್, ಕನ್ನಡಿಗರ ಆಕ್ರೋಶಕ್ಕೆ ಮಣಿದ ಗೂಗಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...