Homeಚಳವಳಿಸ್ವಾತಂತ್ರ್ಯ ಹೋರಾಟಗಾರ್ತಿ, ಕವಯತ್ರಿ ಸುಭದ್ರಾ ಕುಮಾರಿ ಚೌಹಾಣ್‌ಗೆ ಗೂಗಲ್ ಡೂಡಲ್ ಗೌರವ

ಸ್ವಾತಂತ್ರ್ಯ ಹೋರಾಟಗಾರ್ತಿ, ಕವಯತ್ರಿ ಸುಭದ್ರಾ ಕುಮಾರಿ ಚೌಹಾಣ್‌ಗೆ ಗೂಗಲ್ ಡೂಡಲ್ ಗೌರವ

- Advertisement -
- Advertisement -

ಝಾನ್ಸಿ ಕಿ ರಾಣಿ ಪ್ರಸಿದ್ಧ ಕವಿತೆಯ ರಚನೆಕಾರರಾದ ಕವಯತ್ರಿ, ಸ್ವಾತಂತ್ರ್ಯ ಹೋರಾಟಗಾರ್ತಿ ಸುಭದ್ರಾ ಕುಮಾರಿ ಚೌಹಾಣ್ ಅವರ 117 ನೇ ಜನ್ಮ ದಿನಾಚರಣೆಯಂದು ಗೂಗಲ್ ಡೂಡಲ್ ಸೋಮವಾರ ವಿಶೇಷ ಗೌರವ ಸಲ್ಲಿಸಿದೆ.

ಸುಭದ್ರಾ ಕುಮಾರಿ ಚೌಹಾಣ್‌ ಪೆನ್ನು ಮತ್ತು ಪೇಪರ್‌ನೊಂದಿಗೆ ಕವಿತೆ ಬರೆಯಲು ಕುಳಿತಿರುವುದನ್ನು ಗೂಗಲ್ ಡೂಡಲ್ ತೋರಿಸುತ್ತದೆ. ಪ್ರಸಿದ್ಧ ಕವಿತೆ ಝಾನ್ಸಿ ಕಿ ರಾಣಿಯ ಸನ್ನಿವೇಶವನ್ನು ತೋರಿಸುವ ಸಲುವಾಗಿ ಒಂದು ಬದಿಯಲ್ಲಿ ರಾಣಿ ಲಕ್ಷ್ಮಿ ಬಾಯಿ ಕುದುರೆ ಸವಾರಿ ಮಾಡುತ್ತಿರುವುದನ್ನು ಚಿತ್ರಿಸಲಾಗಿದೆ. ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಮೆರವಣಿಗೆ ಹೊರಟಿರುವ ಸ್ವಾತಂತ್ರ್ಯ ಹೋರಾಟಗಾರರನ್ನು ಮತ್ತೊಂದು ಬದಿಯಲ್ಲಿ ತೋರಿಸಲಾಗಿದೆ.

ಸುಭದ್ರಾ ಕುಮಾರಿ ಹಿಂದಿ ಕಾವ್ಯದಲ್ಲಿ ಹಲವಾರು ಕೃತಿಗಳನ್ನು ಬರೆದಿದ್ದಾರೆ, ಝಾನ್ಸಿ ಕಿ ರಾಣಿ ಅವರ ಅತ್ಯಂತ ಪ್ರಸಿದ್ಧ ಕವಿತೆ. ರಾಣಿ ಲಕ್ಷ್ಮಿ ಬಾಯಿ ಅವರ ಜೀವನವನ್ನು ವಿವರಿಸುವ ಈ ಕವಿತೆಯು ಹಿಂದಿ ಸಾಹಿತ್ಯದಲ್ಲಿ ಹೆಚ್ಚು ಓದಿಸಿಕೊಂಡಿರುವ ಮತ್ತು ಹಾಡಿರುವ ಕವಿತೆಗಳಲ್ಲಿ ಒಂದಾಗಿದೆ.

ಇದನ್ನೂ ಓದಿ: ಹೊಸ ಐಟಿ ನಿಯಮ: ಏಪ್ರಿಲ್‌ನಲ್ಲಿ 59,350 ಕಂಟೆಂಟ್‌‌‌ಗಳನ್ನು ಕಿತ್ತು ಹಾಕಿದ ಗೂಗಲ್!

ಗೂಗಲ್ ಡೂಡಲ್ ಪ್ರಕಟಿಸಿರುವ ಚಿತ್ರವನ್ನು ನ್ಯೂಜಿಲೆಂಡ್ ಮೂಲದ ಅತಿಥಿ ಕಲಾವಿದೆ ಪ್ರಭಾ ಮಲ್ಯ ರಚಿಸಿದ್ದಾರೆ.

ಸುಭದ್ರಾ ಕುಮಾರಿ ಚೌಹಾಣ್ ಅವರ ಕವಿತೆ ಮತ್ತು ಗದ್ಯವು ಪ್ರಾಥಮಿಕವಾಗಿ ಲಿಂಗ ತಾರತಮ್ಯ ಮತ್ತು ಜಾತಿ ತಾರತಮ್ಯದಂತಹ ಭಾರತೀಯ ಮಹಿಳೆಯರು ಎದುರಿಸಿದ ಕಷ್ಟಗಳನ್ನು ಕೇಂದ್ರೀಕರಿಸಿವೆ.

Subhadra Kumari Chauhan Special | कविता और कहानियों से कहीं ज्यादा है Subhadra  Kumari Chauhan का योगदान
PC: thequint

ಸುಭದ್ರಾ ಕುಮಾರಿ ಆಗಸ್ಟ್ 16, 1904 ರಂದು ಉತ್ತರ ಪ್ರದೇಶದ ಪ್ರಯಾಗರಾಜ್‌ನ ನಿಹಾಲ್ಪುರ್ ಹಳ್ಳಿಯ ರಾಜಪುರ ಕುಟುಂಬದಲ್ಲಿ ಜನಿಸಿದರು. ಆಕೆ ಆರಂಭದಲ್ಲಿ ಪ್ರಯಾಗರಾಜ್‌ನ ಕ್ರೋಸ್ಟ್‌ವೈಟ್ ಬಾಲಕಿಯರ ಶಾಲೆಯಲ್ಲಿ ಅಧ್ಯಯನ ನಡೆಸಿದರು. 1919 ರಲ್ಲಿ ತಮ್ಮ 16 ನೇ ವಯಸ್ಸಿನಲ್ಲಿ ಖಾಂಡ್ವಾದ ಠಾಕೂರ್ ಲಕ್ಷ್ಮಣ್ ಸಿಂಗ್ ಚೌಹಾಣ್ ಅವರನ್ನು ವಿವಾಹವಾದರು.

ಸ್ವಾತಂತ್ರ್ಯ ಹೋರಾಟಗಾರ್ತಿ ಸುಭದ್ರಾ ಮತ್ತು ಅವರ ಪತಿ 1921 ರಲ್ಲಿ ಮಹಾತ್ಮಾ ಗಾಂಧಿಯವರ ಅಸಹಕಾರ ಚಳುವಳಿಗೆ ಸೇರಿದರು. ನಾಗ್ಪುರದಲ್ಲಿ ಬಂಧನಕ್ಕೊಳಗಾದ ಮೊದಲ ಮಹಿಳಾ ಸತ್ಯಾಗ್ರಹಿಯಾದರು.

1940 ರ ದಶಕದವರೆಗೆ ಸ್ವಾತಂತ್ರ್ಯ ಹೋರಾಟಕ್ಕಾಗಿ ಕ್ರಾಂತಿಕಾರಿ ಕವಿತೆಗಳು, ಹೇಳಿಕೆಗಳನ್ನು ಬರೆಯುವುದನ್ನು ಮುಂದುವರೆಸಿದರು. 1923 ಮತ್ತು 1942 ರಲ್ಲಿ ಬ್ರಿಟಿಷ್ ಆಡಳಿತದ ವಿರುದ್ಧದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಕ್ಕಾಗಿ ಎರಡು ಬಾರಿ ಜೈಲುವಾಸ ಅನುಭವಿಸಿದರು.  ಒಟ್ಟು 88 ಕವಿತೆಗಳು ಮತ್ತು 46 ಸಣ್ಣ ಕಥೆಗಳನ್ನು ಪ್ರಕಟಿಸಿದ್ದರು. ಫೆಬ್ರವರಿ 15, 1948ರಲ್ಲಿ ಕಾರು ಅಪಘಾತದಲ್ಲಿ ನಿಧನರಾದರು.


ಇದನ್ನೂ ಓದಿ: ಕನ್ನಡವನ್ನು ಕೊಳಕು ಭಾಷೆ ಎಂದು ತೋರಿಸಿದ್ದ ವೆಬ್‌ಸೈಟ್, ಕನ್ನಡಿಗರ ಆಕ್ರೋಶಕ್ಕೆ ಮಣಿದ ಗೂಗಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....