Homeಮುಖಪುಟ’ಭಾರತದ ಸ್ಯಾಟಲೈಟ್ ಮ್ಯಾನ್’ ಉಡುಪಿ ರಾಮಚಂದ್ರ ರಾವ್‌ಗೆ ಗೂಗಲ್ ಡೂಡಲ್ ಗೌರವ

’ಭಾರತದ ಸ್ಯಾಟಲೈಟ್ ಮ್ಯಾನ್’ ಉಡುಪಿ ರಾಮಚಂದ್ರ ರಾವ್‌ಗೆ ಗೂಗಲ್ ಡೂಡಲ್ ಗೌರವ

`ಆರ್ಯಭಟ' ಉಪಗ್ರಹ ಸಂವಹನ ಮತ್ತು ಹವಾಮಾನ ಸೇವೆಗಳನ್ನು ಮುಂದುವರೆಸುವ ಮೂಲಕ ಗ್ರಾಮೀಣ ಭಾರತದ ಬಹುಭಾಗವನ್ನು ಪರಿವರ್ತಿಸಿತು.

- Advertisement -
- Advertisement -

ಭಾರತದ ಖ್ಯಾತ ಭಾರತೀಯ ಪ್ರಾಧ್ಯಾಪಕ ಮತ್ತು ವಿಜ್ಞಾನಿ ಕರ್ನಾಟಕದ ಉಡುಪಿ ರಾಮಚಂದ್ರ ರಾವ್ ಅವರ 89 ನೇ ಹುಟ್ಟುಹಬ್ಬವನ್ನು ಗೂಗಲ್ ಬುಧವಾರ ಆಚರಿಸಿದ್ದು, ವಿಶೇಷ ಗೌರವ ಸಲ್ಲಿಸಿದೆ. ಉಡುಪಿ ರಾಮಚಂದ್ರ ರಾವ್ “ಭಾರತದ ಸ್ಯಾಟಲೈಟ್ ಮ್ಯಾನ್” ಎಂದು ಹೆಸರು ಪಡೆದುಕೊಂಡಿದ್ದಾರೆ.

ಭಾರತೀಯ ಬಾಹ್ಯಾಕಾಶ ವಿಜ್ಞಾನಿ ಮತ್ತು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಅಧ್ಯಕ್ಷರಾಗಿದ್ದ ರಾವ್ ಅವರು 1975 ರಲ್ಲಿ ಭಾರತದ ಮೊದಲ ಉಪಗ್ರಹ – “ಆರ್ಯಭಟ” ಉಡಾವಣೆಯ ಚಾಲಕ ಶಕ್ತಿಯಾಗಿದ್ದವರು. ರಾಮಚಂದ್ರ ರಾವ್ 2017 ರಲ್ಲಿ ನಿಧನರಾದರು.

ಡೂಡಲ್‌ನಲ್ಲಿ ಪ್ರೊಫೆಸರ್ ರಾವ್ ಅವರ ರೇಖಾಚಿತ್ರವು ಭೂಮಿಯ ಹಿನ್ನೆಲೆ ಮತ್ತು ಮಿನುಗುವ ನಕ್ಷತ್ರಗಳನ್ನು ಒಳಗೊಂಡಿದೆ. “ನಿಮ್ಮ ನಕ್ಷತ್ರೀಯ ತಾಂತ್ರಿಕ ಪ್ರಗತಿಗಳು ಗ್ಯಾಲಕ್ಸಿ ತುಂಬಾ ಪಸರಿಸುತ್ತಲೇ ಇವೆ” ಎಂದು ಗೂಗಲ್ ತನ್ನ ವಿವರಣೆಯಲ್ಲಿ ಬರೆದಿದೆ.

ಇದನ್ನೂ ಓದಿ: ಪ್ರಬಲ ಜಾತಿಗಳನ್ನು 2(ಎ) ವರ್ಗಕ್ಕೆ ಸೇರಿಸಬೇಡಿ: ಅತಿ ಹಿಂದುಳಿದ ವರ್ಗಗಳ ವೇದಿಕೆ ಆಗ್ರಹ

“1932 ರಲ್ಲಿ ಈ ದಿನ ಕರ್ನಾಟಕದ ದೂರದ ಹಳ್ಳಿಯಲ್ಲಿ ಜನಿಸಿದ ಪ್ರೊ. ರಾವ್ ಅವರು ಕಾಸ್ಮಿಕ್-ರೇ ಭೌತಶಾಸ್ತ್ರಜ್ಞರಾಗಿ ಮತ್ತು ಭಾರತದ ಬಾಹ್ಯಾಕಾಶ ಕಾರ್ಯಕ್ರಮದ ಪಿತಾಮಹ ಎಂದು ಪರಿಗಣಿಸಲ್ಪಟ್ಟ ವಿಜ್ಞಾನಿ ಡಾ. ವಿಕ್ರಮ್ ಸಾರಾಭಾಯ್ ಅವರ ಜೊತೆಯಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು.

ಡಾಕ್ಟರೇಟ್ ಪೂರ್ಣಗೊಳಿಸಿದ ನಂತರ ಪ್ರೊ. ರಾಮಚಂದ್ರ ರಾವ್ ಯುಎಸ್‌ನಲ್ಲಿ ಪ್ರಾಧ್ಯಾಪಕರಾಗಿ ಕೆಲಸ ಮಾಡಿದರು. ನಾಸಾದ ಪಯೋನೀರ್ ಮತ್ತು ಎಕ್ಸ್‌ಪ್ಲೋರರ್‌ ಬಾಹ್ಯಾಕಾಶ ಶೋಧಕಗಳಲ್ಲಿ ಪ್ರಯೋಗಗಳನ್ನು ನಡೆಸಿದ್ದರು ಎಂದು ಗೂಗಲ್ ಡೂಡಲ್ ತನ್ನ ವೆಬ್‌ಸೈಟ್‌ನಲ್ಲಿ ವಿವರಣೆ ನೀಡಿದೆ.

Udupi Ramachandra Rao, space scientist and former Isro chairman, dies in Bengaluru at 85
PC:Youtube

ಇದನ್ನೂ ಓದಿ: ಬ್ರಿಟನ್ ಸಂಸತ್‌ನಲ್ಲಿ ಭಾರತೀಯ ರೈತರ ಸುರಕ್ಷತೆಯ ಚರ್ಚೆ: ಅವಮಾನ ಎಂದ ಭಾರತ ಸರ್ಕಾರ

ಪ್ರೊಫೆಸರ್ ರಾವ್ 1966 ರಲ್ಲಿ ಭಾರತಕ್ಕೆ ಮರಳಿ, 1972 ರಲ್ಲಿ ದೇಶದ ಉಪಗ್ರಹ ಕಾರ್ಯಕ್ರಮವನ್ನು ನಡೆಸುವ ಮೊದಲು ಬಾಹ್ಯಾಕಾಶ ವಿಜ್ಞಾನಕ್ಕಾಗಿ, ಭೌತಿಕ ಸಂಶೋಧನಾ ಪ್ರಯೋಗಾಲಯದಲ್ಲಿ ಉನ್ನತ ಶಕ್ತಿ ಖಗೋಳವಿಜ್ಞಾನ ಕಾರ್ಯಕ್ರಮವನ್ನು ಪ್ರಾರಂಭಿಸಿದರು.

1975 ರಲ್ಲಿ ಭಾರತದ ಮೊದಲ ಉಪಗ್ರಹ ಉಡಾವಣೆಯನ್ನು ಮೇಲ್ವಿಚಾರಣೆ ನಡೆಸಿದ್ದರು. ರಾಮಚಂದ್ರ ರಾವ್ ಅಭಿವೃದ್ಧಿಪಡಿಸಿದ 20 ಕ್ಕೂ ಹೆಚ್ಚು ಉಪಗ್ರಹಗಳಲ್ಲಿ ಒಂದಾದ “ಆರ್ಯಭಟ” ಸಂವಹನ ಮತ್ತು ಹವಾಮಾನ ಸೇವೆಗಳನ್ನು ಮುಂದುವರೆಸುವ ಮೂಲಕ ಗ್ರಾಮೀಣ ಭಾರತದ ಬಹುಭಾಗವನ್ನು ಪರಿವರ್ತಿಸಿತು.

250 ಕ್ಕೂ ಹೆಚ್ಚು ಉಪಗ್ರಹಗಳನ್ನು ಉಡಾವಣೆ ಮಾಡಿದ ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್ (ಪಿಎಸ್‌ಎಲ್‌ವಿ) ಯಂತಹ ರಾಕೆಟ್ ತಂತ್ರಜ್ಞಾನವನ್ನು ಅವರು ಅಭಿವೃದ್ಧಿಪಡಿಸಿದ್ದರು.

ಉಡುಪಿ ರಾಮಚಂದ್ರ ರಾವ್, 2013 ರಲ್ಲಿ ಸ್ಯಾಟಲೈಟ್ ಹಾಲ್ ಆಫ್ ಫೇಮ್‌ಗೆ ಸೇರ್ಪಡೆಯಾದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಅದೇ ವರ್ಷ ಪಿಎಸ್‌ಎಲ್‌ವಿ ಭಾರತದ ಮೊದಲ ಅಂತರಗ್ರಹ ಮಿಷನ್ ’ಮಂಗಳಯಾನ’ ಪ್ರಾರಂಭಿಸಿತ್ತು.


ಇದನ್ನೂ ಓದಿ: ಎಡಪಕ್ಷಗಳ ಬೃಹತ್ ರ‍್ಯಾಲಿಯ ಫೋಟೊಗಳನ್ನು ಮೋದಿ ರ‍್ಯಾಲಿಯೆಂದು ತಪ್ಪಾಗಿ ಹಂಚಿದ ಬಿಜೆಪಿಗರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...