Homeಮುಖಪುಟ’ಭಾರತದ ಸ್ಯಾಟಲೈಟ್ ಮ್ಯಾನ್’ ಉಡುಪಿ ರಾಮಚಂದ್ರ ರಾವ್‌ಗೆ ಗೂಗಲ್ ಡೂಡಲ್ ಗೌರವ

’ಭಾರತದ ಸ್ಯಾಟಲೈಟ್ ಮ್ಯಾನ್’ ಉಡುಪಿ ರಾಮಚಂದ್ರ ರಾವ್‌ಗೆ ಗೂಗಲ್ ಡೂಡಲ್ ಗೌರವ

`ಆರ್ಯಭಟ' ಉಪಗ್ರಹ ಸಂವಹನ ಮತ್ತು ಹವಾಮಾನ ಸೇವೆಗಳನ್ನು ಮುಂದುವರೆಸುವ ಮೂಲಕ ಗ್ರಾಮೀಣ ಭಾರತದ ಬಹುಭಾಗವನ್ನು ಪರಿವರ್ತಿಸಿತು.

- Advertisement -
- Advertisement -

ಭಾರತದ ಖ್ಯಾತ ಭಾರತೀಯ ಪ್ರಾಧ್ಯಾಪಕ ಮತ್ತು ವಿಜ್ಞಾನಿ ಕರ್ನಾಟಕದ ಉಡುಪಿ ರಾಮಚಂದ್ರ ರಾವ್ ಅವರ 89 ನೇ ಹುಟ್ಟುಹಬ್ಬವನ್ನು ಗೂಗಲ್ ಬುಧವಾರ ಆಚರಿಸಿದ್ದು, ವಿಶೇಷ ಗೌರವ ಸಲ್ಲಿಸಿದೆ. ಉಡುಪಿ ರಾಮಚಂದ್ರ ರಾವ್ “ಭಾರತದ ಸ್ಯಾಟಲೈಟ್ ಮ್ಯಾನ್” ಎಂದು ಹೆಸರು ಪಡೆದುಕೊಂಡಿದ್ದಾರೆ.

ಭಾರತೀಯ ಬಾಹ್ಯಾಕಾಶ ವಿಜ್ಞಾನಿ ಮತ್ತು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಅಧ್ಯಕ್ಷರಾಗಿದ್ದ ರಾವ್ ಅವರು 1975 ರಲ್ಲಿ ಭಾರತದ ಮೊದಲ ಉಪಗ್ರಹ – “ಆರ್ಯಭಟ” ಉಡಾವಣೆಯ ಚಾಲಕ ಶಕ್ತಿಯಾಗಿದ್ದವರು. ರಾಮಚಂದ್ರ ರಾವ್ 2017 ರಲ್ಲಿ ನಿಧನರಾದರು.

ಡೂಡಲ್‌ನಲ್ಲಿ ಪ್ರೊಫೆಸರ್ ರಾವ್ ಅವರ ರೇಖಾಚಿತ್ರವು ಭೂಮಿಯ ಹಿನ್ನೆಲೆ ಮತ್ತು ಮಿನುಗುವ ನಕ್ಷತ್ರಗಳನ್ನು ಒಳಗೊಂಡಿದೆ. “ನಿಮ್ಮ ನಕ್ಷತ್ರೀಯ ತಾಂತ್ರಿಕ ಪ್ರಗತಿಗಳು ಗ್ಯಾಲಕ್ಸಿ ತುಂಬಾ ಪಸರಿಸುತ್ತಲೇ ಇವೆ” ಎಂದು ಗೂಗಲ್ ತನ್ನ ವಿವರಣೆಯಲ್ಲಿ ಬರೆದಿದೆ.

ಇದನ್ನೂ ಓದಿ: ಪ್ರಬಲ ಜಾತಿಗಳನ್ನು 2(ಎ) ವರ್ಗಕ್ಕೆ ಸೇರಿಸಬೇಡಿ: ಅತಿ ಹಿಂದುಳಿದ ವರ್ಗಗಳ ವೇದಿಕೆ ಆಗ್ರಹ

“1932 ರಲ್ಲಿ ಈ ದಿನ ಕರ್ನಾಟಕದ ದೂರದ ಹಳ್ಳಿಯಲ್ಲಿ ಜನಿಸಿದ ಪ್ರೊ. ರಾವ್ ಅವರು ಕಾಸ್ಮಿಕ್-ರೇ ಭೌತಶಾಸ್ತ್ರಜ್ಞರಾಗಿ ಮತ್ತು ಭಾರತದ ಬಾಹ್ಯಾಕಾಶ ಕಾರ್ಯಕ್ರಮದ ಪಿತಾಮಹ ಎಂದು ಪರಿಗಣಿಸಲ್ಪಟ್ಟ ವಿಜ್ಞಾನಿ ಡಾ. ವಿಕ್ರಮ್ ಸಾರಾಭಾಯ್ ಅವರ ಜೊತೆಯಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು.

ಡಾಕ್ಟರೇಟ್ ಪೂರ್ಣಗೊಳಿಸಿದ ನಂತರ ಪ್ರೊ. ರಾಮಚಂದ್ರ ರಾವ್ ಯುಎಸ್‌ನಲ್ಲಿ ಪ್ರಾಧ್ಯಾಪಕರಾಗಿ ಕೆಲಸ ಮಾಡಿದರು. ನಾಸಾದ ಪಯೋನೀರ್ ಮತ್ತು ಎಕ್ಸ್‌ಪ್ಲೋರರ್‌ ಬಾಹ್ಯಾಕಾಶ ಶೋಧಕಗಳಲ್ಲಿ ಪ್ರಯೋಗಗಳನ್ನು ನಡೆಸಿದ್ದರು ಎಂದು ಗೂಗಲ್ ಡೂಡಲ್ ತನ್ನ ವೆಬ್‌ಸೈಟ್‌ನಲ್ಲಿ ವಿವರಣೆ ನೀಡಿದೆ.

Udupi Ramachandra Rao, space scientist and former Isro chairman, dies in Bengaluru at 85
PC:Youtube

ಇದನ್ನೂ ಓದಿ: ಬ್ರಿಟನ್ ಸಂಸತ್‌ನಲ್ಲಿ ಭಾರತೀಯ ರೈತರ ಸುರಕ್ಷತೆಯ ಚರ್ಚೆ: ಅವಮಾನ ಎಂದ ಭಾರತ ಸರ್ಕಾರ

ಪ್ರೊಫೆಸರ್ ರಾವ್ 1966 ರಲ್ಲಿ ಭಾರತಕ್ಕೆ ಮರಳಿ, 1972 ರಲ್ಲಿ ದೇಶದ ಉಪಗ್ರಹ ಕಾರ್ಯಕ್ರಮವನ್ನು ನಡೆಸುವ ಮೊದಲು ಬಾಹ್ಯಾಕಾಶ ವಿಜ್ಞಾನಕ್ಕಾಗಿ, ಭೌತಿಕ ಸಂಶೋಧನಾ ಪ್ರಯೋಗಾಲಯದಲ್ಲಿ ಉನ್ನತ ಶಕ್ತಿ ಖಗೋಳವಿಜ್ಞಾನ ಕಾರ್ಯಕ್ರಮವನ್ನು ಪ್ರಾರಂಭಿಸಿದರು.

1975 ರಲ್ಲಿ ಭಾರತದ ಮೊದಲ ಉಪಗ್ರಹ ಉಡಾವಣೆಯನ್ನು ಮೇಲ್ವಿಚಾರಣೆ ನಡೆಸಿದ್ದರು. ರಾಮಚಂದ್ರ ರಾವ್ ಅಭಿವೃದ್ಧಿಪಡಿಸಿದ 20 ಕ್ಕೂ ಹೆಚ್ಚು ಉಪಗ್ರಹಗಳಲ್ಲಿ ಒಂದಾದ “ಆರ್ಯಭಟ” ಸಂವಹನ ಮತ್ತು ಹವಾಮಾನ ಸೇವೆಗಳನ್ನು ಮುಂದುವರೆಸುವ ಮೂಲಕ ಗ್ರಾಮೀಣ ಭಾರತದ ಬಹುಭಾಗವನ್ನು ಪರಿವರ್ತಿಸಿತು.

250 ಕ್ಕೂ ಹೆಚ್ಚು ಉಪಗ್ರಹಗಳನ್ನು ಉಡಾವಣೆ ಮಾಡಿದ ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್ (ಪಿಎಸ್‌ಎಲ್‌ವಿ) ಯಂತಹ ರಾಕೆಟ್ ತಂತ್ರಜ್ಞಾನವನ್ನು ಅವರು ಅಭಿವೃದ್ಧಿಪಡಿಸಿದ್ದರು.

ಉಡುಪಿ ರಾಮಚಂದ್ರ ರಾವ್, 2013 ರಲ್ಲಿ ಸ್ಯಾಟಲೈಟ್ ಹಾಲ್ ಆಫ್ ಫೇಮ್‌ಗೆ ಸೇರ್ಪಡೆಯಾದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಅದೇ ವರ್ಷ ಪಿಎಸ್‌ಎಲ್‌ವಿ ಭಾರತದ ಮೊದಲ ಅಂತರಗ್ರಹ ಮಿಷನ್ ’ಮಂಗಳಯಾನ’ ಪ್ರಾರಂಭಿಸಿತ್ತು.


ಇದನ್ನೂ ಓದಿ: ಎಡಪಕ್ಷಗಳ ಬೃಹತ್ ರ‍್ಯಾಲಿಯ ಫೋಟೊಗಳನ್ನು ಮೋದಿ ರ‍್ಯಾಲಿಯೆಂದು ತಪ್ಪಾಗಿ ಹಂಚಿದ ಬಿಜೆಪಿಗರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...