Homeಮುಖಪುಟ’ಭಾರತದ ಸ್ಯಾಟಲೈಟ್ ಮ್ಯಾನ್’ ಉಡುಪಿ ರಾಮಚಂದ್ರ ರಾವ್‌ಗೆ ಗೂಗಲ್ ಡೂಡಲ್ ಗೌರವ

’ಭಾರತದ ಸ್ಯಾಟಲೈಟ್ ಮ್ಯಾನ್’ ಉಡುಪಿ ರಾಮಚಂದ್ರ ರಾವ್‌ಗೆ ಗೂಗಲ್ ಡೂಡಲ್ ಗೌರವ

`ಆರ್ಯಭಟ' ಉಪಗ್ರಹ ಸಂವಹನ ಮತ್ತು ಹವಾಮಾನ ಸೇವೆಗಳನ್ನು ಮುಂದುವರೆಸುವ ಮೂಲಕ ಗ್ರಾಮೀಣ ಭಾರತದ ಬಹುಭಾಗವನ್ನು ಪರಿವರ್ತಿಸಿತು.

- Advertisement -
- Advertisement -

ಭಾರತದ ಖ್ಯಾತ ಭಾರತೀಯ ಪ್ರಾಧ್ಯಾಪಕ ಮತ್ತು ವಿಜ್ಞಾನಿ ಕರ್ನಾಟಕದ ಉಡುಪಿ ರಾಮಚಂದ್ರ ರಾವ್ ಅವರ 89 ನೇ ಹುಟ್ಟುಹಬ್ಬವನ್ನು ಗೂಗಲ್ ಬುಧವಾರ ಆಚರಿಸಿದ್ದು, ವಿಶೇಷ ಗೌರವ ಸಲ್ಲಿಸಿದೆ. ಉಡುಪಿ ರಾಮಚಂದ್ರ ರಾವ್ “ಭಾರತದ ಸ್ಯಾಟಲೈಟ್ ಮ್ಯಾನ್” ಎಂದು ಹೆಸರು ಪಡೆದುಕೊಂಡಿದ್ದಾರೆ.

ಭಾರತೀಯ ಬಾಹ್ಯಾಕಾಶ ವಿಜ್ಞಾನಿ ಮತ್ತು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಅಧ್ಯಕ್ಷರಾಗಿದ್ದ ರಾವ್ ಅವರು 1975 ರಲ್ಲಿ ಭಾರತದ ಮೊದಲ ಉಪಗ್ರಹ – “ಆರ್ಯಭಟ” ಉಡಾವಣೆಯ ಚಾಲಕ ಶಕ್ತಿಯಾಗಿದ್ದವರು. ರಾಮಚಂದ್ರ ರಾವ್ 2017 ರಲ್ಲಿ ನಿಧನರಾದರು.

ಡೂಡಲ್‌ನಲ್ಲಿ ಪ್ರೊಫೆಸರ್ ರಾವ್ ಅವರ ರೇಖಾಚಿತ್ರವು ಭೂಮಿಯ ಹಿನ್ನೆಲೆ ಮತ್ತು ಮಿನುಗುವ ನಕ್ಷತ್ರಗಳನ್ನು ಒಳಗೊಂಡಿದೆ. “ನಿಮ್ಮ ನಕ್ಷತ್ರೀಯ ತಾಂತ್ರಿಕ ಪ್ರಗತಿಗಳು ಗ್ಯಾಲಕ್ಸಿ ತುಂಬಾ ಪಸರಿಸುತ್ತಲೇ ಇವೆ” ಎಂದು ಗೂಗಲ್ ತನ್ನ ವಿವರಣೆಯಲ್ಲಿ ಬರೆದಿದೆ.

ಇದನ್ನೂ ಓದಿ: ಪ್ರಬಲ ಜಾತಿಗಳನ್ನು 2(ಎ) ವರ್ಗಕ್ಕೆ ಸೇರಿಸಬೇಡಿ: ಅತಿ ಹಿಂದುಳಿದ ವರ್ಗಗಳ ವೇದಿಕೆ ಆಗ್ರಹ

“1932 ರಲ್ಲಿ ಈ ದಿನ ಕರ್ನಾಟಕದ ದೂರದ ಹಳ್ಳಿಯಲ್ಲಿ ಜನಿಸಿದ ಪ್ರೊ. ರಾವ್ ಅವರು ಕಾಸ್ಮಿಕ್-ರೇ ಭೌತಶಾಸ್ತ್ರಜ್ಞರಾಗಿ ಮತ್ತು ಭಾರತದ ಬಾಹ್ಯಾಕಾಶ ಕಾರ್ಯಕ್ರಮದ ಪಿತಾಮಹ ಎಂದು ಪರಿಗಣಿಸಲ್ಪಟ್ಟ ವಿಜ್ಞಾನಿ ಡಾ. ವಿಕ್ರಮ್ ಸಾರಾಭಾಯ್ ಅವರ ಜೊತೆಯಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು.

ಡಾಕ್ಟರೇಟ್ ಪೂರ್ಣಗೊಳಿಸಿದ ನಂತರ ಪ್ರೊ. ರಾಮಚಂದ್ರ ರಾವ್ ಯುಎಸ್‌ನಲ್ಲಿ ಪ್ರಾಧ್ಯಾಪಕರಾಗಿ ಕೆಲಸ ಮಾಡಿದರು. ನಾಸಾದ ಪಯೋನೀರ್ ಮತ್ತು ಎಕ್ಸ್‌ಪ್ಲೋರರ್‌ ಬಾಹ್ಯಾಕಾಶ ಶೋಧಕಗಳಲ್ಲಿ ಪ್ರಯೋಗಗಳನ್ನು ನಡೆಸಿದ್ದರು ಎಂದು ಗೂಗಲ್ ಡೂಡಲ್ ತನ್ನ ವೆಬ್‌ಸೈಟ್‌ನಲ್ಲಿ ವಿವರಣೆ ನೀಡಿದೆ.

Udupi Ramachandra Rao, space scientist and former Isro chairman, dies in Bengaluru at 85
PC:Youtube

ಇದನ್ನೂ ಓದಿ: ಬ್ರಿಟನ್ ಸಂಸತ್‌ನಲ್ಲಿ ಭಾರತೀಯ ರೈತರ ಸುರಕ್ಷತೆಯ ಚರ್ಚೆ: ಅವಮಾನ ಎಂದ ಭಾರತ ಸರ್ಕಾರ

ಪ್ರೊಫೆಸರ್ ರಾವ್ 1966 ರಲ್ಲಿ ಭಾರತಕ್ಕೆ ಮರಳಿ, 1972 ರಲ್ಲಿ ದೇಶದ ಉಪಗ್ರಹ ಕಾರ್ಯಕ್ರಮವನ್ನು ನಡೆಸುವ ಮೊದಲು ಬಾಹ್ಯಾಕಾಶ ವಿಜ್ಞಾನಕ್ಕಾಗಿ, ಭೌತಿಕ ಸಂಶೋಧನಾ ಪ್ರಯೋಗಾಲಯದಲ್ಲಿ ಉನ್ನತ ಶಕ್ತಿ ಖಗೋಳವಿಜ್ಞಾನ ಕಾರ್ಯಕ್ರಮವನ್ನು ಪ್ರಾರಂಭಿಸಿದರು.

1975 ರಲ್ಲಿ ಭಾರತದ ಮೊದಲ ಉಪಗ್ರಹ ಉಡಾವಣೆಯನ್ನು ಮೇಲ್ವಿಚಾರಣೆ ನಡೆಸಿದ್ದರು. ರಾಮಚಂದ್ರ ರಾವ್ ಅಭಿವೃದ್ಧಿಪಡಿಸಿದ 20 ಕ್ಕೂ ಹೆಚ್ಚು ಉಪಗ್ರಹಗಳಲ್ಲಿ ಒಂದಾದ “ಆರ್ಯಭಟ” ಸಂವಹನ ಮತ್ತು ಹವಾಮಾನ ಸೇವೆಗಳನ್ನು ಮುಂದುವರೆಸುವ ಮೂಲಕ ಗ್ರಾಮೀಣ ಭಾರತದ ಬಹುಭಾಗವನ್ನು ಪರಿವರ್ತಿಸಿತು.

250 ಕ್ಕೂ ಹೆಚ್ಚು ಉಪಗ್ರಹಗಳನ್ನು ಉಡಾವಣೆ ಮಾಡಿದ ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್ (ಪಿಎಸ್‌ಎಲ್‌ವಿ) ಯಂತಹ ರಾಕೆಟ್ ತಂತ್ರಜ್ಞಾನವನ್ನು ಅವರು ಅಭಿವೃದ್ಧಿಪಡಿಸಿದ್ದರು.

ಉಡುಪಿ ರಾಮಚಂದ್ರ ರಾವ್, 2013 ರಲ್ಲಿ ಸ್ಯಾಟಲೈಟ್ ಹಾಲ್ ಆಫ್ ಫೇಮ್‌ಗೆ ಸೇರ್ಪಡೆಯಾದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಅದೇ ವರ್ಷ ಪಿಎಸ್‌ಎಲ್‌ವಿ ಭಾರತದ ಮೊದಲ ಅಂತರಗ್ರಹ ಮಿಷನ್ ’ಮಂಗಳಯಾನ’ ಪ್ರಾರಂಭಿಸಿತ್ತು.


ಇದನ್ನೂ ಓದಿ: ಎಡಪಕ್ಷಗಳ ಬೃಹತ್ ರ‍್ಯಾಲಿಯ ಫೋಟೊಗಳನ್ನು ಮೋದಿ ರ‍್ಯಾಲಿಯೆಂದು ತಪ್ಪಾಗಿ ಹಂಚಿದ ಬಿಜೆಪಿಗರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಿಯಾ ಮುಸ್ಲಿಮರು ನಮ್ಮ ಶತ್ರುಗಳಲ್ಲ..’; ಚುನಾವಣೆ ಸನಿಹದಲ್ಲಿ ಮಾತು ಬದಲಿಸಿದ ಅಸ್ಸಾಂ ಸಿಎಂ

ಭಾರತೀಯ ಜನತಾ ಪಕ್ಷವು (ಬಿಜೆಪಿ) ಅಸ್ಸಾಂನಲ್ಲಿರುವ ಬಂಗಾಳಿ ಮೂಲದ ಮುಸ್ಲಿಂ ಸಮುದಾಯವಾದ ಮಿಯಾ ಮುಸ್ಲಿಮರನ್ನು ತನ್ನ ಶತ್ರುಗಳೆಂದು ಪರಿಗಣಿಸುವುದಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ ಹೇಳಿದ್ದಾರೆ. ಇದೇ ವರ್ಷದ...

ಜೈಲಿನಲ್ಲಿರುವ ಪಿಎಫ್‌ಐ ನಾಯಕ ಇ ಅಬೂಬಕರ್ ಆರೋಗ್ಯ ಸ್ಥಿತಿ ಗಂಭೀರ

ಸುಮಾರು ನಾಲ್ಕು ವರ್ಷಗಳ ಕಾಲ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸ್ಥಾಪಕ ಅಧ್ಯಕ್ಷ ಎರಪ್ಪುಂಗಲ್ ಅಬೂಬಕರ್ ಅವರ ಆರೋಗ್ಯ ಹದಗೆಟ್ಟ ನಂತರ ಬುಧವಾರದಿಂದ ಆಸ್ಪತ್ರೆಯಲ್ಲಿ ತೀವ್ರ ನಿಗಾ...

‘ಭಾರತ ನಮ್ಮನ್ನು ಹಿಂದುಕ್ಕುವುದಕ್ಕೆ ಬಿಡಲ್ಲ; ಅಮೆರಿಕದ ಹಿತಾಸಕ್ತಿಗಳಿಗೆ ಮೊದಲ ಆದ್ಯತೆ..’; ಕ್ರಿಸ್ಟೋಫರ್ ಲ್ಯಾಂಡೌ

ನಮ್ಮ ಪ್ರಮುಖ ಪ್ರತಿಸ್ಪರ್ಧಿಯಾಗಿ ಹೊರಹೊಮ್ಮಲು ಚೀನಾಗೆ ಮಾಡಿಕೊಟ್ಟ ಆರ್ಥಿಕ ಅನುಕೂಲಗಳನ್ನು ನಾವು ಭಾರತಕ್ಕೆ ನೀಡುವುದಿಲ್ಲ ಎಂದು ಯುನೈಟೆಡ್ ಸ್ಟೇಟ್ಸ್‌ (ಯುಎಸ್‌) ಉಪ ಕಾರ್ಯದರ್ಶಿ ಕ್ರಿಸ್ಟೋಫರ್ ಲ್ಯಾಂಡೌ ಗುರುವಾರ ಹೇಳಿದ್ದಾರೆ. ಅಮೆರಿಕ ಮತ್ತು ಭಾರತ...

ರೋಹಿತ್ ಆ್ಯಕ್ಟ್| ಸರ್ಕಾರದ ನಿರ್ಧಾರ ಸ್ವಾಗತಿಸಿದ ಹೋರಾಟಗಾರರು; ಕಾಯ್ದೆ ಪರಿಣಾಮಕಾರಿ ಜಾರಿಗೆ ಆಗ್ರಹ

“ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು” ಎಂದು...

Karnataka Budget 2026| ಸಮಾಜ ಕಲ್ಯಾಣ ಇಲಾಖೆಯಡಿ ‘ಬೌದ್ಧ ಅಭಿವೃದ್ಧಿ ನಿಗಮ’ ಸ್ಥಾಪನೆ

ಸಮಾಜ ಕಲ್ಯಾಣ ಇಲಾಖೆಯಡಿ 'ಬೌದ್ಧ ಅಭಿವೃದ್ಧಿ ನಿಗಮ' ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿನ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದರು. "ನಮ್ಮ ಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ...

Karnataka Budget 2026| ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲು; ದೇವದಾಸಿ-ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಅರಿಯಲು ಸಮೀಕ್ಷೆ

2026-27 ಸಾಲಿನ ಆಯವ್ಯಯ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸಾಕಷ್ಟು ಅನುದಾನ ಘೋಷಣೆ ಮಾಡಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲಿಡಲಾಗಿದ್ದು, ಮಾಜಿ ದೇವದಾಸಿ ಮಹಿಳೆಯರು...

ಬಂಗಾಳ ರಾಜ್ಯಪಾಲ ಸಿ.ವಿ. ಆನಂದ ಬೋಸ್ ವಿಧಾನಸಭಾ ಚುನಾವಣೆಗೆ ಮುನ್ನ ರಾಜೀನಾಮೆ; ರಾಜಕೀಯ ಒತ್ತಡದ ಆರೋಪ

ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರು ಸುಮಾರು ಮೂರುವರೆ ವರ್ಷಗಳ ಕಾಲ ಅಧಿಕಾರದಲ್ಲಿದ್ದ ನಂತರ ಗುರುವಾರ ರಾಜೀನಾಮೆ ನೀಡಿದ್ದಾರೆ. ಈ ಕ್ರಮವು ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ ರಾಜಕೀಯ...

Karnataka Budget 2026| ವಿಕ್ಟೋರಿಯಾ ಹೆಸರು ಬದಲಾವಣೆ; ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣ

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯನ್ನು ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ಬಜೆಟ್‌ ಭಾಷಣದಲ್ಲಿ ಘೋಷಿಸಿದರು. ತಮ್ಮ ಆಯವ್ಯಯದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಘೋಷಣೆಗಳನ್ನು ಮಾಡಿದ...

Karnataka Budget 2026| ವಿಶ್ವ ವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಗೆ ‘ರೋಹಿತ್ ವೇಮುಲ ಕಾಯ್ದೆ’

"ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು" ಎಂದು...

ಕರ್ನಾಟಕ ಬಜೆಟ್ 2026: 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ನಿಷೇಧ – ಸಿಎಂ ಸಿದ್ದರಾಮಯ್ಯ ಘೋಷಣೆ

ಮಾರ್ಚ್ 6, ಶುಕ್ರವಾರದಂದು 2026 ರ ರಾಜ್ಯ ಬಜೆಟ್ ಮಂಡಿಸಿದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಮಾಧ್ಯಮ ಬಳಸುವುದನ್ನು ನಿಷೇಧಿಸುವುದಾಗಿ ಘೋಷಿಸಿದರು. "ಮಕ್ಕಳ ಮೇಲೆ ಹೆಚ್ಚುತ್ತಿರುವ ಮೊಬೈಲ್...