Homeಮುಖಪುಟ’ಭಾರತದ ಸ್ಯಾಟಲೈಟ್ ಮ್ಯಾನ್’ ಉಡುಪಿ ರಾಮಚಂದ್ರ ರಾವ್‌ಗೆ ಗೂಗಲ್ ಡೂಡಲ್ ಗೌರವ

’ಭಾರತದ ಸ್ಯಾಟಲೈಟ್ ಮ್ಯಾನ್’ ಉಡುಪಿ ರಾಮಚಂದ್ರ ರಾವ್‌ಗೆ ಗೂಗಲ್ ಡೂಡಲ್ ಗೌರವ

`ಆರ್ಯಭಟ' ಉಪಗ್ರಹ ಸಂವಹನ ಮತ್ತು ಹವಾಮಾನ ಸೇವೆಗಳನ್ನು ಮುಂದುವರೆಸುವ ಮೂಲಕ ಗ್ರಾಮೀಣ ಭಾರತದ ಬಹುಭಾಗವನ್ನು ಪರಿವರ್ತಿಸಿತು.

- Advertisement -
- Advertisement -

ಭಾರತದ ಖ್ಯಾತ ಭಾರತೀಯ ಪ್ರಾಧ್ಯಾಪಕ ಮತ್ತು ವಿಜ್ಞಾನಿ ಕರ್ನಾಟಕದ ಉಡುಪಿ ರಾಮಚಂದ್ರ ರಾವ್ ಅವರ 89 ನೇ ಹುಟ್ಟುಹಬ್ಬವನ್ನು ಗೂಗಲ್ ಬುಧವಾರ ಆಚರಿಸಿದ್ದು, ವಿಶೇಷ ಗೌರವ ಸಲ್ಲಿಸಿದೆ. ಉಡುಪಿ ರಾಮಚಂದ್ರ ರಾವ್ “ಭಾರತದ ಸ್ಯಾಟಲೈಟ್ ಮ್ಯಾನ್” ಎಂದು ಹೆಸರು ಪಡೆದುಕೊಂಡಿದ್ದಾರೆ.

ಭಾರತೀಯ ಬಾಹ್ಯಾಕಾಶ ವಿಜ್ಞಾನಿ ಮತ್ತು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಅಧ್ಯಕ್ಷರಾಗಿದ್ದ ರಾವ್ ಅವರು 1975 ರಲ್ಲಿ ಭಾರತದ ಮೊದಲ ಉಪಗ್ರಹ – “ಆರ್ಯಭಟ” ಉಡಾವಣೆಯ ಚಾಲಕ ಶಕ್ತಿಯಾಗಿದ್ದವರು. ರಾಮಚಂದ್ರ ರಾವ್ 2017 ರಲ್ಲಿ ನಿಧನರಾದರು.

ಡೂಡಲ್‌ನಲ್ಲಿ ಪ್ರೊಫೆಸರ್ ರಾವ್ ಅವರ ರೇಖಾಚಿತ್ರವು ಭೂಮಿಯ ಹಿನ್ನೆಲೆ ಮತ್ತು ಮಿನುಗುವ ನಕ್ಷತ್ರಗಳನ್ನು ಒಳಗೊಂಡಿದೆ. “ನಿಮ್ಮ ನಕ್ಷತ್ರೀಯ ತಾಂತ್ರಿಕ ಪ್ರಗತಿಗಳು ಗ್ಯಾಲಕ್ಸಿ ತುಂಬಾ ಪಸರಿಸುತ್ತಲೇ ಇವೆ” ಎಂದು ಗೂಗಲ್ ತನ್ನ ವಿವರಣೆಯಲ್ಲಿ ಬರೆದಿದೆ.

ಇದನ್ನೂ ಓದಿ: ಪ್ರಬಲ ಜಾತಿಗಳನ್ನು 2(ಎ) ವರ್ಗಕ್ಕೆ ಸೇರಿಸಬೇಡಿ: ಅತಿ ಹಿಂದುಳಿದ ವರ್ಗಗಳ ವೇದಿಕೆ ಆಗ್ರಹ

“1932 ರಲ್ಲಿ ಈ ದಿನ ಕರ್ನಾಟಕದ ದೂರದ ಹಳ್ಳಿಯಲ್ಲಿ ಜನಿಸಿದ ಪ್ರೊ. ರಾವ್ ಅವರು ಕಾಸ್ಮಿಕ್-ರೇ ಭೌತಶಾಸ್ತ್ರಜ್ಞರಾಗಿ ಮತ್ತು ಭಾರತದ ಬಾಹ್ಯಾಕಾಶ ಕಾರ್ಯಕ್ರಮದ ಪಿತಾಮಹ ಎಂದು ಪರಿಗಣಿಸಲ್ಪಟ್ಟ ವಿಜ್ಞಾನಿ ಡಾ. ವಿಕ್ರಮ್ ಸಾರಾಭಾಯ್ ಅವರ ಜೊತೆಯಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು.

ಡಾಕ್ಟರೇಟ್ ಪೂರ್ಣಗೊಳಿಸಿದ ನಂತರ ಪ್ರೊ. ರಾಮಚಂದ್ರ ರಾವ್ ಯುಎಸ್‌ನಲ್ಲಿ ಪ್ರಾಧ್ಯಾಪಕರಾಗಿ ಕೆಲಸ ಮಾಡಿದರು. ನಾಸಾದ ಪಯೋನೀರ್ ಮತ್ತು ಎಕ್ಸ್‌ಪ್ಲೋರರ್‌ ಬಾಹ್ಯಾಕಾಶ ಶೋಧಕಗಳಲ್ಲಿ ಪ್ರಯೋಗಗಳನ್ನು ನಡೆಸಿದ್ದರು ಎಂದು ಗೂಗಲ್ ಡೂಡಲ್ ತನ್ನ ವೆಬ್‌ಸೈಟ್‌ನಲ್ಲಿ ವಿವರಣೆ ನೀಡಿದೆ.

Udupi Ramachandra Rao, space scientist and former Isro chairman, dies in Bengaluru at 85
PC:Youtube

ಇದನ್ನೂ ಓದಿ: ಬ್ರಿಟನ್ ಸಂಸತ್‌ನಲ್ಲಿ ಭಾರತೀಯ ರೈತರ ಸುರಕ್ಷತೆಯ ಚರ್ಚೆ: ಅವಮಾನ ಎಂದ ಭಾರತ ಸರ್ಕಾರ

ಪ್ರೊಫೆಸರ್ ರಾವ್ 1966 ರಲ್ಲಿ ಭಾರತಕ್ಕೆ ಮರಳಿ, 1972 ರಲ್ಲಿ ದೇಶದ ಉಪಗ್ರಹ ಕಾರ್ಯಕ್ರಮವನ್ನು ನಡೆಸುವ ಮೊದಲು ಬಾಹ್ಯಾಕಾಶ ವಿಜ್ಞಾನಕ್ಕಾಗಿ, ಭೌತಿಕ ಸಂಶೋಧನಾ ಪ್ರಯೋಗಾಲಯದಲ್ಲಿ ಉನ್ನತ ಶಕ್ತಿ ಖಗೋಳವಿಜ್ಞಾನ ಕಾರ್ಯಕ್ರಮವನ್ನು ಪ್ರಾರಂಭಿಸಿದರು.

1975 ರಲ್ಲಿ ಭಾರತದ ಮೊದಲ ಉಪಗ್ರಹ ಉಡಾವಣೆಯನ್ನು ಮೇಲ್ವಿಚಾರಣೆ ನಡೆಸಿದ್ದರು. ರಾಮಚಂದ್ರ ರಾವ್ ಅಭಿವೃದ್ಧಿಪಡಿಸಿದ 20 ಕ್ಕೂ ಹೆಚ್ಚು ಉಪಗ್ರಹಗಳಲ್ಲಿ ಒಂದಾದ “ಆರ್ಯಭಟ” ಸಂವಹನ ಮತ್ತು ಹವಾಮಾನ ಸೇವೆಗಳನ್ನು ಮುಂದುವರೆಸುವ ಮೂಲಕ ಗ್ರಾಮೀಣ ಭಾರತದ ಬಹುಭಾಗವನ್ನು ಪರಿವರ್ತಿಸಿತು.

250 ಕ್ಕೂ ಹೆಚ್ಚು ಉಪಗ್ರಹಗಳನ್ನು ಉಡಾವಣೆ ಮಾಡಿದ ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್ (ಪಿಎಸ್‌ಎಲ್‌ವಿ) ಯಂತಹ ರಾಕೆಟ್ ತಂತ್ರಜ್ಞಾನವನ್ನು ಅವರು ಅಭಿವೃದ್ಧಿಪಡಿಸಿದ್ದರು.

ಉಡುಪಿ ರಾಮಚಂದ್ರ ರಾವ್, 2013 ರಲ್ಲಿ ಸ್ಯಾಟಲೈಟ್ ಹಾಲ್ ಆಫ್ ಫೇಮ್‌ಗೆ ಸೇರ್ಪಡೆಯಾದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಅದೇ ವರ್ಷ ಪಿಎಸ್‌ಎಲ್‌ವಿ ಭಾರತದ ಮೊದಲ ಅಂತರಗ್ರಹ ಮಿಷನ್ ’ಮಂಗಳಯಾನ’ ಪ್ರಾರಂಭಿಸಿತ್ತು.


ಇದನ್ನೂ ಓದಿ: ಎಡಪಕ್ಷಗಳ ಬೃಹತ್ ರ‍್ಯಾಲಿಯ ಫೋಟೊಗಳನ್ನು ಮೋದಿ ರ‍್ಯಾಲಿಯೆಂದು ತಪ್ಪಾಗಿ ಹಂಚಿದ ಬಿಜೆಪಿಗರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...