Homeಮುಖಪುಟ’ಭಾರತದ ಸ್ಯಾಟಲೈಟ್ ಮ್ಯಾನ್’ ಉಡುಪಿ ರಾಮಚಂದ್ರ ರಾವ್‌ಗೆ ಗೂಗಲ್ ಡೂಡಲ್ ಗೌರವ

’ಭಾರತದ ಸ್ಯಾಟಲೈಟ್ ಮ್ಯಾನ್’ ಉಡುಪಿ ರಾಮಚಂದ್ರ ರಾವ್‌ಗೆ ಗೂಗಲ್ ಡೂಡಲ್ ಗೌರವ

`ಆರ್ಯಭಟ' ಉಪಗ್ರಹ ಸಂವಹನ ಮತ್ತು ಹವಾಮಾನ ಸೇವೆಗಳನ್ನು ಮುಂದುವರೆಸುವ ಮೂಲಕ ಗ್ರಾಮೀಣ ಭಾರತದ ಬಹುಭಾಗವನ್ನು ಪರಿವರ್ತಿಸಿತು.

- Advertisement -
- Advertisement -

ಭಾರತದ ಖ್ಯಾತ ಭಾರತೀಯ ಪ್ರಾಧ್ಯಾಪಕ ಮತ್ತು ವಿಜ್ಞಾನಿ ಕರ್ನಾಟಕದ ಉಡುಪಿ ರಾಮಚಂದ್ರ ರಾವ್ ಅವರ 89 ನೇ ಹುಟ್ಟುಹಬ್ಬವನ್ನು ಗೂಗಲ್ ಬುಧವಾರ ಆಚರಿಸಿದ್ದು, ವಿಶೇಷ ಗೌರವ ಸಲ್ಲಿಸಿದೆ. ಉಡುಪಿ ರಾಮಚಂದ್ರ ರಾವ್ “ಭಾರತದ ಸ್ಯಾಟಲೈಟ್ ಮ್ಯಾನ್” ಎಂದು ಹೆಸರು ಪಡೆದುಕೊಂಡಿದ್ದಾರೆ.

ಭಾರತೀಯ ಬಾಹ್ಯಾಕಾಶ ವಿಜ್ಞಾನಿ ಮತ್ತು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಅಧ್ಯಕ್ಷರಾಗಿದ್ದ ರಾವ್ ಅವರು 1975 ರಲ್ಲಿ ಭಾರತದ ಮೊದಲ ಉಪಗ್ರಹ – “ಆರ್ಯಭಟ” ಉಡಾವಣೆಯ ಚಾಲಕ ಶಕ್ತಿಯಾಗಿದ್ದವರು. ರಾಮಚಂದ್ರ ರಾವ್ 2017 ರಲ್ಲಿ ನಿಧನರಾದರು.

ಡೂಡಲ್‌ನಲ್ಲಿ ಪ್ರೊಫೆಸರ್ ರಾವ್ ಅವರ ರೇಖಾಚಿತ್ರವು ಭೂಮಿಯ ಹಿನ್ನೆಲೆ ಮತ್ತು ಮಿನುಗುವ ನಕ್ಷತ್ರಗಳನ್ನು ಒಳಗೊಂಡಿದೆ. “ನಿಮ್ಮ ನಕ್ಷತ್ರೀಯ ತಾಂತ್ರಿಕ ಪ್ರಗತಿಗಳು ಗ್ಯಾಲಕ್ಸಿ ತುಂಬಾ ಪಸರಿಸುತ್ತಲೇ ಇವೆ” ಎಂದು ಗೂಗಲ್ ತನ್ನ ವಿವರಣೆಯಲ್ಲಿ ಬರೆದಿದೆ.

ಇದನ್ನೂ ಓದಿ: ಪ್ರಬಲ ಜಾತಿಗಳನ್ನು 2(ಎ) ವರ್ಗಕ್ಕೆ ಸೇರಿಸಬೇಡಿ: ಅತಿ ಹಿಂದುಳಿದ ವರ್ಗಗಳ ವೇದಿಕೆ ಆಗ್ರಹ

“1932 ರಲ್ಲಿ ಈ ದಿನ ಕರ್ನಾಟಕದ ದೂರದ ಹಳ್ಳಿಯಲ್ಲಿ ಜನಿಸಿದ ಪ್ರೊ. ರಾವ್ ಅವರು ಕಾಸ್ಮಿಕ್-ರೇ ಭೌತಶಾಸ್ತ್ರಜ್ಞರಾಗಿ ಮತ್ತು ಭಾರತದ ಬಾಹ್ಯಾಕಾಶ ಕಾರ್ಯಕ್ರಮದ ಪಿತಾಮಹ ಎಂದು ಪರಿಗಣಿಸಲ್ಪಟ್ಟ ವಿಜ್ಞಾನಿ ಡಾ. ವಿಕ್ರಮ್ ಸಾರಾಭಾಯ್ ಅವರ ಜೊತೆಯಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು.

ಡಾಕ್ಟರೇಟ್ ಪೂರ್ಣಗೊಳಿಸಿದ ನಂತರ ಪ್ರೊ. ರಾಮಚಂದ್ರ ರಾವ್ ಯುಎಸ್‌ನಲ್ಲಿ ಪ್ರಾಧ್ಯಾಪಕರಾಗಿ ಕೆಲಸ ಮಾಡಿದರು. ನಾಸಾದ ಪಯೋನೀರ್ ಮತ್ತು ಎಕ್ಸ್‌ಪ್ಲೋರರ್‌ ಬಾಹ್ಯಾಕಾಶ ಶೋಧಕಗಳಲ್ಲಿ ಪ್ರಯೋಗಗಳನ್ನು ನಡೆಸಿದ್ದರು ಎಂದು ಗೂಗಲ್ ಡೂಡಲ್ ತನ್ನ ವೆಬ್‌ಸೈಟ್‌ನಲ್ಲಿ ವಿವರಣೆ ನೀಡಿದೆ.

Udupi Ramachandra Rao, space scientist and former Isro chairman, dies in Bengaluru at 85
PC:Youtube

ಇದನ್ನೂ ಓದಿ: ಬ್ರಿಟನ್ ಸಂಸತ್‌ನಲ್ಲಿ ಭಾರತೀಯ ರೈತರ ಸುರಕ್ಷತೆಯ ಚರ್ಚೆ: ಅವಮಾನ ಎಂದ ಭಾರತ ಸರ್ಕಾರ

ಪ್ರೊಫೆಸರ್ ರಾವ್ 1966 ರಲ್ಲಿ ಭಾರತಕ್ಕೆ ಮರಳಿ, 1972 ರಲ್ಲಿ ದೇಶದ ಉಪಗ್ರಹ ಕಾರ್ಯಕ್ರಮವನ್ನು ನಡೆಸುವ ಮೊದಲು ಬಾಹ್ಯಾಕಾಶ ವಿಜ್ಞಾನಕ್ಕಾಗಿ, ಭೌತಿಕ ಸಂಶೋಧನಾ ಪ್ರಯೋಗಾಲಯದಲ್ಲಿ ಉನ್ನತ ಶಕ್ತಿ ಖಗೋಳವಿಜ್ಞಾನ ಕಾರ್ಯಕ್ರಮವನ್ನು ಪ್ರಾರಂಭಿಸಿದರು.

1975 ರಲ್ಲಿ ಭಾರತದ ಮೊದಲ ಉಪಗ್ರಹ ಉಡಾವಣೆಯನ್ನು ಮೇಲ್ವಿಚಾರಣೆ ನಡೆಸಿದ್ದರು. ರಾಮಚಂದ್ರ ರಾವ್ ಅಭಿವೃದ್ಧಿಪಡಿಸಿದ 20 ಕ್ಕೂ ಹೆಚ್ಚು ಉಪಗ್ರಹಗಳಲ್ಲಿ ಒಂದಾದ “ಆರ್ಯಭಟ” ಸಂವಹನ ಮತ್ತು ಹವಾಮಾನ ಸೇವೆಗಳನ್ನು ಮುಂದುವರೆಸುವ ಮೂಲಕ ಗ್ರಾಮೀಣ ಭಾರತದ ಬಹುಭಾಗವನ್ನು ಪರಿವರ್ತಿಸಿತು.

250 ಕ್ಕೂ ಹೆಚ್ಚು ಉಪಗ್ರಹಗಳನ್ನು ಉಡಾವಣೆ ಮಾಡಿದ ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್ (ಪಿಎಸ್‌ಎಲ್‌ವಿ) ಯಂತಹ ರಾಕೆಟ್ ತಂತ್ರಜ್ಞಾನವನ್ನು ಅವರು ಅಭಿವೃದ್ಧಿಪಡಿಸಿದ್ದರು.

ಉಡುಪಿ ರಾಮಚಂದ್ರ ರಾವ್, 2013 ರಲ್ಲಿ ಸ್ಯಾಟಲೈಟ್ ಹಾಲ್ ಆಫ್ ಫೇಮ್‌ಗೆ ಸೇರ್ಪಡೆಯಾದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಅದೇ ವರ್ಷ ಪಿಎಸ್‌ಎಲ್‌ವಿ ಭಾರತದ ಮೊದಲ ಅಂತರಗ್ರಹ ಮಿಷನ್ ’ಮಂಗಳಯಾನ’ ಪ್ರಾರಂಭಿಸಿತ್ತು.


ಇದನ್ನೂ ಓದಿ: ಎಡಪಕ್ಷಗಳ ಬೃಹತ್ ರ‍್ಯಾಲಿಯ ಫೋಟೊಗಳನ್ನು ಮೋದಿ ರ‍್ಯಾಲಿಯೆಂದು ತಪ್ಪಾಗಿ ಹಂಚಿದ ಬಿಜೆಪಿಗರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...