Homeಮುಖಪುಟ’ಭಾರತದ ಸ್ಯಾಟಲೈಟ್ ಮ್ಯಾನ್’ ಉಡುಪಿ ರಾಮಚಂದ್ರ ರಾವ್‌ಗೆ ಗೂಗಲ್ ಡೂಡಲ್ ಗೌರವ

’ಭಾರತದ ಸ್ಯಾಟಲೈಟ್ ಮ್ಯಾನ್’ ಉಡುಪಿ ರಾಮಚಂದ್ರ ರಾವ್‌ಗೆ ಗೂಗಲ್ ಡೂಡಲ್ ಗೌರವ

`ಆರ್ಯಭಟ' ಉಪಗ್ರಹ ಸಂವಹನ ಮತ್ತು ಹವಾಮಾನ ಸೇವೆಗಳನ್ನು ಮುಂದುವರೆಸುವ ಮೂಲಕ ಗ್ರಾಮೀಣ ಭಾರತದ ಬಹುಭಾಗವನ್ನು ಪರಿವರ್ತಿಸಿತು.

- Advertisement -
- Advertisement -

ಭಾರತದ ಖ್ಯಾತ ಭಾರತೀಯ ಪ್ರಾಧ್ಯಾಪಕ ಮತ್ತು ವಿಜ್ಞಾನಿ ಕರ್ನಾಟಕದ ಉಡುಪಿ ರಾಮಚಂದ್ರ ರಾವ್ ಅವರ 89 ನೇ ಹುಟ್ಟುಹಬ್ಬವನ್ನು ಗೂಗಲ್ ಬುಧವಾರ ಆಚರಿಸಿದ್ದು, ವಿಶೇಷ ಗೌರವ ಸಲ್ಲಿಸಿದೆ. ಉಡುಪಿ ರಾಮಚಂದ್ರ ರಾವ್ “ಭಾರತದ ಸ್ಯಾಟಲೈಟ್ ಮ್ಯಾನ್” ಎಂದು ಹೆಸರು ಪಡೆದುಕೊಂಡಿದ್ದಾರೆ.

ಭಾರತೀಯ ಬಾಹ್ಯಾಕಾಶ ವಿಜ್ಞಾನಿ ಮತ್ತು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಅಧ್ಯಕ್ಷರಾಗಿದ್ದ ರಾವ್ ಅವರು 1975 ರಲ್ಲಿ ಭಾರತದ ಮೊದಲ ಉಪಗ್ರಹ – “ಆರ್ಯಭಟ” ಉಡಾವಣೆಯ ಚಾಲಕ ಶಕ್ತಿಯಾಗಿದ್ದವರು. ರಾಮಚಂದ್ರ ರಾವ್ 2017 ರಲ್ಲಿ ನಿಧನರಾದರು.

ಡೂಡಲ್‌ನಲ್ಲಿ ಪ್ರೊಫೆಸರ್ ರಾವ್ ಅವರ ರೇಖಾಚಿತ್ರವು ಭೂಮಿಯ ಹಿನ್ನೆಲೆ ಮತ್ತು ಮಿನುಗುವ ನಕ್ಷತ್ರಗಳನ್ನು ಒಳಗೊಂಡಿದೆ. “ನಿಮ್ಮ ನಕ್ಷತ್ರೀಯ ತಾಂತ್ರಿಕ ಪ್ರಗತಿಗಳು ಗ್ಯಾಲಕ್ಸಿ ತುಂಬಾ ಪಸರಿಸುತ್ತಲೇ ಇವೆ” ಎಂದು ಗೂಗಲ್ ತನ್ನ ವಿವರಣೆಯಲ್ಲಿ ಬರೆದಿದೆ.

ಇದನ್ನೂ ಓದಿ: ಪ್ರಬಲ ಜಾತಿಗಳನ್ನು 2(ಎ) ವರ್ಗಕ್ಕೆ ಸೇರಿಸಬೇಡಿ: ಅತಿ ಹಿಂದುಳಿದ ವರ್ಗಗಳ ವೇದಿಕೆ ಆಗ್ರಹ

“1932 ರಲ್ಲಿ ಈ ದಿನ ಕರ್ನಾಟಕದ ದೂರದ ಹಳ್ಳಿಯಲ್ಲಿ ಜನಿಸಿದ ಪ್ರೊ. ರಾವ್ ಅವರು ಕಾಸ್ಮಿಕ್-ರೇ ಭೌತಶಾಸ್ತ್ರಜ್ಞರಾಗಿ ಮತ್ತು ಭಾರತದ ಬಾಹ್ಯಾಕಾಶ ಕಾರ್ಯಕ್ರಮದ ಪಿತಾಮಹ ಎಂದು ಪರಿಗಣಿಸಲ್ಪಟ್ಟ ವಿಜ್ಞಾನಿ ಡಾ. ವಿಕ್ರಮ್ ಸಾರಾಭಾಯ್ ಅವರ ಜೊತೆಯಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು.

ಡಾಕ್ಟರೇಟ್ ಪೂರ್ಣಗೊಳಿಸಿದ ನಂತರ ಪ್ರೊ. ರಾಮಚಂದ್ರ ರಾವ್ ಯುಎಸ್‌ನಲ್ಲಿ ಪ್ರಾಧ್ಯಾಪಕರಾಗಿ ಕೆಲಸ ಮಾಡಿದರು. ನಾಸಾದ ಪಯೋನೀರ್ ಮತ್ತು ಎಕ್ಸ್‌ಪ್ಲೋರರ್‌ ಬಾಹ್ಯಾಕಾಶ ಶೋಧಕಗಳಲ್ಲಿ ಪ್ರಯೋಗಗಳನ್ನು ನಡೆಸಿದ್ದರು ಎಂದು ಗೂಗಲ್ ಡೂಡಲ್ ತನ್ನ ವೆಬ್‌ಸೈಟ್‌ನಲ್ಲಿ ವಿವರಣೆ ನೀಡಿದೆ.

Udupi Ramachandra Rao, space scientist and former Isro chairman, dies in Bengaluru at 85
PC:Youtube

ಇದನ್ನೂ ಓದಿ: ಬ್ರಿಟನ್ ಸಂಸತ್‌ನಲ್ಲಿ ಭಾರತೀಯ ರೈತರ ಸುರಕ್ಷತೆಯ ಚರ್ಚೆ: ಅವಮಾನ ಎಂದ ಭಾರತ ಸರ್ಕಾರ

ಪ್ರೊಫೆಸರ್ ರಾವ್ 1966 ರಲ್ಲಿ ಭಾರತಕ್ಕೆ ಮರಳಿ, 1972 ರಲ್ಲಿ ದೇಶದ ಉಪಗ್ರಹ ಕಾರ್ಯಕ್ರಮವನ್ನು ನಡೆಸುವ ಮೊದಲು ಬಾಹ್ಯಾಕಾಶ ವಿಜ್ಞಾನಕ್ಕಾಗಿ, ಭೌತಿಕ ಸಂಶೋಧನಾ ಪ್ರಯೋಗಾಲಯದಲ್ಲಿ ಉನ್ನತ ಶಕ್ತಿ ಖಗೋಳವಿಜ್ಞಾನ ಕಾರ್ಯಕ್ರಮವನ್ನು ಪ್ರಾರಂಭಿಸಿದರು.

1975 ರಲ್ಲಿ ಭಾರತದ ಮೊದಲ ಉಪಗ್ರಹ ಉಡಾವಣೆಯನ್ನು ಮೇಲ್ವಿಚಾರಣೆ ನಡೆಸಿದ್ದರು. ರಾಮಚಂದ್ರ ರಾವ್ ಅಭಿವೃದ್ಧಿಪಡಿಸಿದ 20 ಕ್ಕೂ ಹೆಚ್ಚು ಉಪಗ್ರಹಗಳಲ್ಲಿ ಒಂದಾದ “ಆರ್ಯಭಟ” ಸಂವಹನ ಮತ್ತು ಹವಾಮಾನ ಸೇವೆಗಳನ್ನು ಮುಂದುವರೆಸುವ ಮೂಲಕ ಗ್ರಾಮೀಣ ಭಾರತದ ಬಹುಭಾಗವನ್ನು ಪರಿವರ್ತಿಸಿತು.

250 ಕ್ಕೂ ಹೆಚ್ಚು ಉಪಗ್ರಹಗಳನ್ನು ಉಡಾವಣೆ ಮಾಡಿದ ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್ (ಪಿಎಸ್‌ಎಲ್‌ವಿ) ಯಂತಹ ರಾಕೆಟ್ ತಂತ್ರಜ್ಞಾನವನ್ನು ಅವರು ಅಭಿವೃದ್ಧಿಪಡಿಸಿದ್ದರು.

ಉಡುಪಿ ರಾಮಚಂದ್ರ ರಾವ್, 2013 ರಲ್ಲಿ ಸ್ಯಾಟಲೈಟ್ ಹಾಲ್ ಆಫ್ ಫೇಮ್‌ಗೆ ಸೇರ್ಪಡೆಯಾದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಅದೇ ವರ್ಷ ಪಿಎಸ್‌ಎಲ್‌ವಿ ಭಾರತದ ಮೊದಲ ಅಂತರಗ್ರಹ ಮಿಷನ್ ’ಮಂಗಳಯಾನ’ ಪ್ರಾರಂಭಿಸಿತ್ತು.


ಇದನ್ನೂ ಓದಿ: ಎಡಪಕ್ಷಗಳ ಬೃಹತ್ ರ‍್ಯಾಲಿಯ ಫೋಟೊಗಳನ್ನು ಮೋದಿ ರ‍್ಯಾಲಿಯೆಂದು ತಪ್ಪಾಗಿ ಹಂಚಿದ ಬಿಜೆಪಿಗರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...