Homeಅಂತರಾಷ್ಟ್ರೀಯಭಾರತದ ಈಜುಗಾರ್ತಿ ಆರತಿ ಸಹಾಗೆ ಗೂಗಲ್ ಡೂಡಲ್ ಗೌರವ

ಭಾರತದ ಈಜುಗಾರ್ತಿ ಆರತಿ ಸಹಾಗೆ ಗೂಗಲ್ ಡೂಡಲ್ ಗೌರವ

ಸೆಪ್ಟೆಂಬರ್ 29, 1959 ರಂದು, ಅವರು 16 ಗಂಟೆ 20 ನಿಮಿಷಗಳಲ್ಲಿ 42 ಮೈಲಿಗಳನ್ನು ಕ್ರಮಿಸಿದ ನಂತರ ಇಂಗ್ಲಿಷ್ ತೀರವನ್ನು ತಲುಪುವ ಮೂಲಕ ಇತಿಹಾಸ ಸೃಷ್ಟಿಸಿದರು.

- Advertisement -
- Advertisement -

ಭಾರತದ ದಿವಂಗತ ಈಜುಗಾರ್ತಿ, ಒಲಂಪಿಕ್ ಪದಕ ವಿಜೇತೆ ಆರತಿ ಸಹಾ ಎರಡು ಕಾರಣಗಳಿಗಾಗಿ ಇಂದು ಸುದ್ದಿಯಲ್ಲಿದ್ದಾರೆ. ಒಂದು, ಇಂದು ಅವರ 80ನೇ ಜನ್ಮದಿನ ಮತ್ತು ಇನ್ನೊಂದು ಕಾರಣವೆಂದರೆ ಅವರಿಗೆ ಗೂಗಲ್ ತನ್ನ ಡೂಡಲ್ ಗೌರವ ಸಲ್ಲಿಸಿದೆ.

ಸೆಪ್ಟೆಂಬರ್ 29, 1959 ರಂದು ಆರತಿ ಸಹಾ, ಇಂಗ್ಲಿಷ್ ಕಡಲ್ಗಾಲುವೆ ಅನ್ನು ದಾಟಿದ ಮೊದಲ ಏಷ್ಯಾದ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾದರು. 18 ವರ್ಷದವರಿರುವಾಗಲೇ ಫ್ರಾನ್ಸ್‌ನ ಕೇಪ್ ಗ್ರಿಸ್ ನೆಜ್‌ನಿಂದ ಇಂಗ್ಲೆಂಡ್‌ನ ಸ್ಯಾಂಡ್‌ಗೇಟ್‌ಗೆ 42 ಮೈಲಿ ದೂರ ಈಜಿ ದಾಖಲೆ ನಿರ್ಮಿಸಿದ್ದರು.

ಇದನ್ನೂ ಓದಿ: ’ಶಾಹಿನ್ ಬಾಗ್ ಅಜ್ಜಿ’ ಬಿಲ್ಕೀಸ್‌ 2020 ರ ಪ್ರಭಾವಶಾಲಿ ವ್ಯಕ್ತಿ

ಈ ಮಹಿಳಾ ಸಾಧಕಿ ಚಿಕ್ಕ ವಯಸ್ಸಿನಲ್ಲಿಯೇ ಯಶಸ್ಸು ಸಾಧಿಸಿದ್ದರು. ಸೆಪ್ಟೆಂಬರ್ 24, 1940 ರಂದು ಕೋಲ್ಕತ್ತಾದಲ್ಲಿ ಜನಿಸಿದ ಅವರು, ತಮ್ಮ ಐದನೇ ವಯಸ್ಸಿನಲ್ಲಿ ಈಜು ಸ್ಪರ್ಧೆಯಲ್ಲಿ ತಮ್ಮ ಮೊದಲ ಚಿನ್ನದ ಪದಕವನ್ನು ಪಡೆದಿದ್ದರು. ತನ್ನ ವೃತ್ತಿಜೀವನದ ಆರಂಭದಲ್ಲಿ, ಸಹಾ 1949ರಲ್ಲಿ ಅಖಿಲ ಭಾರತ ದಾಖಲೆಯನ್ನು ಮಾಡುವ ಮೂಲಕ ಗಮನ ಸೆಳೆದಿದ್ದರು.

1951ರ ಪಶ್ಚಿಮ ಬಂಗಾಳದಲ್ಲಿ ಡಾಲಿ ನಜೀರ್ ಅವರ ಅಲ್ ಇಂಡಿಯಾ ರೆಕಾರ್ಡ್ ಮುರಿದದ್ದು ಅವರ ವೃತ್ತಿಜೀವನದ ಅತಿದೊಡ್ಡ ಮೈಲಿಗಲ್ಲುಗಳಲ್ಲಿ ಒಂದಾಗಿದೆ. 1952ರ ಒಲಿಂಪಿಕ್ಸ್‌ನಲ್ಲಿ ಸಹಾ ಮತ್ತು ನಜೀರ್  ಭಾರತವನ್ನು ಪ್ರತಿನಿಧಿಸಿದರು.

ಇದನ್ನೂ ಓದಿ: 2024ರಲ್ಲಿ ಮೊದಲ ಬಾರಿಗೆ ಚಂದ್ರನ ಮೇಲೆ ಕಾಲಿಡಲಿರುವ ಮಹಿಳೆ!

ಇಂಗ್ಲಿಷ್ ಕಡಲ್ಗಾಲುವೆ ದಾಟುವ ಸಹಾ ನಿರ್ಧಾರಕ್ಕೆ ಕಾರಣವಾಗಿದ್ದು, ಬ್ರೋಜೆನ್ ದಾಸ್ ಎಂಬ ಬಾಂಗ್ಲಾದೇಶದ ಈಜುಗಾರ. ಇವರು 1952ರಲ್ಲಿ ಇಂಗ್ಲಿಷ್ ಚಾನೆಲ್ ದಾಟಿದ ಮೊದಲ ಏಷ್ಯನ್ ಈಜುಗಾರ. ಆಗಲೇ 1953 ರಲ್ಲಿ ನಡೆಯುಬೇಕಿದ್ದ  Butlin International Cross Channel Swimming Race ಗೆ ಬ್ರೋಜೆನ್ ದಾಸ್ ಸಹಾ ಅವರನ್ನು ಶಿಫಾರಸು ಮಾಡುತ್ತಾರೆ. ಆದರೆ ಇಂಗ್ಲೆಂಡ್‌ಗೆ ಪ್ರಯಾಣಿಸಲು ಆರ್ಥಿಕವಾಗಿ ತುಂಬಾ ಕಷ್ಟಪಟ್ಟ  ಈಜುಗಾರ್ತಿ ಸಹಾಗೆ ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ನೆರವು ನೀಡಿದ್ದರು.

ಇಂಗ್ಲಿಷ್ ಕಡಲ್ಗಾಲುವೆಯಲ್ಲಿ ಈಜಲು ಆರು ವರ್ಷಗಳ ಕಠಿಣ ತರಬೇತಿಯ ನಂತರ, ಅವರು ಜುಲೈ 1959ರಲ್ಲಿ ಇಂಗ್ಲೆಂಡ್‌ಗೆ ಹೋದರು. ಕಡಲ್ಗಾಲುವೆಯ ಅನ್ನು ದಾಟಲು ಸಹಾ ಮಾಡಿದ ಮೊದಲ ಪ್ರಯತ್ನವು ಇಂಗ್ಲೆಂಡ್ ಕರಾವಳಿಯಿಂದ ಕೇವಲ 5 ಮೈಲಿ ದೂರದಲ್ಲಿ ವಿಫಲವಾಯಿತು. ಆದಾದ ಒಂದು ತಿಂಗಳ ನಂತರ ಸೆಪ್ಟೆಂಬರ್ 29, 1959 ರಂದು, ಅವರು 16 ಗಂಟೆ 20 ನಿಮಿಷಗಳಲ್ಲಿ 42 ಮೈಲಿಗಳನ್ನು ಕ್ರಮಿಸಿದ ನಂತರ ಇಂಗ್ಲಿಷ್ ತೀರವನ್ನು ತಲುಪುವ ಮೂಲಕ ಇತಿಹಾಸ ಸೃಸ್ಟಿಸಿದರು.

1999 ರಲ್ಲಿ ಅಂಚೆ ಇಲಾಖೆ ಸಹಾ ಅವರ ಭಾವಚಿತ್ರವಿರು ಅಂಚೆ ಚೀಟಿ ಮುದ್ರಿಸಿ ಗೌರವಿಸಿತ್ತು. 1960 ರಲ್ಲಿ ಅವರು ಪದ್ಮಶ್ರೀ ಪ್ರಶಸ್ತಿ ಪಡೆದರು.


ಇದನ್ನೂ ಓದಿ: ಮಹಿಷಾ ದಸರಾ ಆಚರಿಸುತ್ತೇವೆ, ತಾಕತ್ತಿದ್ದರೆ ತಡೆಯಲಿ; ಸಂಸದ ಪ್ರತಾಪ್ ಸಿಂಹರವರಿಗೆ ಸವಾಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...