Homeಅಂತರಾಷ್ಟ್ರೀಯಭಾರತದ ಈಜುಗಾರ್ತಿ ಆರತಿ ಸಹಾಗೆ ಗೂಗಲ್ ಡೂಡಲ್ ಗೌರವ

ಭಾರತದ ಈಜುಗಾರ್ತಿ ಆರತಿ ಸಹಾಗೆ ಗೂಗಲ್ ಡೂಡಲ್ ಗೌರವ

ಸೆಪ್ಟೆಂಬರ್ 29, 1959 ರಂದು, ಅವರು 16 ಗಂಟೆ 20 ನಿಮಿಷಗಳಲ್ಲಿ 42 ಮೈಲಿಗಳನ್ನು ಕ್ರಮಿಸಿದ ನಂತರ ಇಂಗ್ಲಿಷ್ ತೀರವನ್ನು ತಲುಪುವ ಮೂಲಕ ಇತಿಹಾಸ ಸೃಷ್ಟಿಸಿದರು.

- Advertisement -
- Advertisement -

ಭಾರತದ ದಿವಂಗತ ಈಜುಗಾರ್ತಿ, ಒಲಂಪಿಕ್ ಪದಕ ವಿಜೇತೆ ಆರತಿ ಸಹಾ ಎರಡು ಕಾರಣಗಳಿಗಾಗಿ ಇಂದು ಸುದ್ದಿಯಲ್ಲಿದ್ದಾರೆ. ಒಂದು, ಇಂದು ಅವರ 80ನೇ ಜನ್ಮದಿನ ಮತ್ತು ಇನ್ನೊಂದು ಕಾರಣವೆಂದರೆ ಅವರಿಗೆ ಗೂಗಲ್ ತನ್ನ ಡೂಡಲ್ ಗೌರವ ಸಲ್ಲಿಸಿದೆ.

ಸೆಪ್ಟೆಂಬರ್ 29, 1959 ರಂದು ಆರತಿ ಸಹಾ, ಇಂಗ್ಲಿಷ್ ಕಡಲ್ಗಾಲುವೆ ಅನ್ನು ದಾಟಿದ ಮೊದಲ ಏಷ್ಯಾದ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾದರು. 18 ವರ್ಷದವರಿರುವಾಗಲೇ ಫ್ರಾನ್ಸ್‌ನ ಕೇಪ್ ಗ್ರಿಸ್ ನೆಜ್‌ನಿಂದ ಇಂಗ್ಲೆಂಡ್‌ನ ಸ್ಯಾಂಡ್‌ಗೇಟ್‌ಗೆ 42 ಮೈಲಿ ದೂರ ಈಜಿ ದಾಖಲೆ ನಿರ್ಮಿಸಿದ್ದರು.

ಇದನ್ನೂ ಓದಿ: ’ಶಾಹಿನ್ ಬಾಗ್ ಅಜ್ಜಿ’ ಬಿಲ್ಕೀಸ್‌ 2020 ರ ಪ್ರಭಾವಶಾಲಿ ವ್ಯಕ್ತಿ

ಈ ಮಹಿಳಾ ಸಾಧಕಿ ಚಿಕ್ಕ ವಯಸ್ಸಿನಲ್ಲಿಯೇ ಯಶಸ್ಸು ಸಾಧಿಸಿದ್ದರು. ಸೆಪ್ಟೆಂಬರ್ 24, 1940 ರಂದು ಕೋಲ್ಕತ್ತಾದಲ್ಲಿ ಜನಿಸಿದ ಅವರು, ತಮ್ಮ ಐದನೇ ವಯಸ್ಸಿನಲ್ಲಿ ಈಜು ಸ್ಪರ್ಧೆಯಲ್ಲಿ ತಮ್ಮ ಮೊದಲ ಚಿನ್ನದ ಪದಕವನ್ನು ಪಡೆದಿದ್ದರು. ತನ್ನ ವೃತ್ತಿಜೀವನದ ಆರಂಭದಲ್ಲಿ, ಸಹಾ 1949ರಲ್ಲಿ ಅಖಿಲ ಭಾರತ ದಾಖಲೆಯನ್ನು ಮಾಡುವ ಮೂಲಕ ಗಮನ ಸೆಳೆದಿದ್ದರು.

1951ರ ಪಶ್ಚಿಮ ಬಂಗಾಳದಲ್ಲಿ ಡಾಲಿ ನಜೀರ್ ಅವರ ಅಲ್ ಇಂಡಿಯಾ ರೆಕಾರ್ಡ್ ಮುರಿದದ್ದು ಅವರ ವೃತ್ತಿಜೀವನದ ಅತಿದೊಡ್ಡ ಮೈಲಿಗಲ್ಲುಗಳಲ್ಲಿ ಒಂದಾಗಿದೆ. 1952ರ ಒಲಿಂಪಿಕ್ಸ್‌ನಲ್ಲಿ ಸಹಾ ಮತ್ತು ನಜೀರ್  ಭಾರತವನ್ನು ಪ್ರತಿನಿಧಿಸಿದರು.

ಇದನ್ನೂ ಓದಿ: 2024ರಲ್ಲಿ ಮೊದಲ ಬಾರಿಗೆ ಚಂದ್ರನ ಮೇಲೆ ಕಾಲಿಡಲಿರುವ ಮಹಿಳೆ!

ಇಂಗ್ಲಿಷ್ ಕಡಲ್ಗಾಲುವೆ ದಾಟುವ ಸಹಾ ನಿರ್ಧಾರಕ್ಕೆ ಕಾರಣವಾಗಿದ್ದು, ಬ್ರೋಜೆನ್ ದಾಸ್ ಎಂಬ ಬಾಂಗ್ಲಾದೇಶದ ಈಜುಗಾರ. ಇವರು 1952ರಲ್ಲಿ ಇಂಗ್ಲಿಷ್ ಚಾನೆಲ್ ದಾಟಿದ ಮೊದಲ ಏಷ್ಯನ್ ಈಜುಗಾರ. ಆಗಲೇ 1953 ರಲ್ಲಿ ನಡೆಯುಬೇಕಿದ್ದ  Butlin International Cross Channel Swimming Race ಗೆ ಬ್ರೋಜೆನ್ ದಾಸ್ ಸಹಾ ಅವರನ್ನು ಶಿಫಾರಸು ಮಾಡುತ್ತಾರೆ. ಆದರೆ ಇಂಗ್ಲೆಂಡ್‌ಗೆ ಪ್ರಯಾಣಿಸಲು ಆರ್ಥಿಕವಾಗಿ ತುಂಬಾ ಕಷ್ಟಪಟ್ಟ  ಈಜುಗಾರ್ತಿ ಸಹಾಗೆ ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ನೆರವು ನೀಡಿದ್ದರು.

ಇಂಗ್ಲಿಷ್ ಕಡಲ್ಗಾಲುವೆಯಲ್ಲಿ ಈಜಲು ಆರು ವರ್ಷಗಳ ಕಠಿಣ ತರಬೇತಿಯ ನಂತರ, ಅವರು ಜುಲೈ 1959ರಲ್ಲಿ ಇಂಗ್ಲೆಂಡ್‌ಗೆ ಹೋದರು. ಕಡಲ್ಗಾಲುವೆಯ ಅನ್ನು ದಾಟಲು ಸಹಾ ಮಾಡಿದ ಮೊದಲ ಪ್ರಯತ್ನವು ಇಂಗ್ಲೆಂಡ್ ಕರಾವಳಿಯಿಂದ ಕೇವಲ 5 ಮೈಲಿ ದೂರದಲ್ಲಿ ವಿಫಲವಾಯಿತು. ಆದಾದ ಒಂದು ತಿಂಗಳ ನಂತರ ಸೆಪ್ಟೆಂಬರ್ 29, 1959 ರಂದು, ಅವರು 16 ಗಂಟೆ 20 ನಿಮಿಷಗಳಲ್ಲಿ 42 ಮೈಲಿಗಳನ್ನು ಕ್ರಮಿಸಿದ ನಂತರ ಇಂಗ್ಲಿಷ್ ತೀರವನ್ನು ತಲುಪುವ ಮೂಲಕ ಇತಿಹಾಸ ಸೃಸ್ಟಿಸಿದರು.

1999 ರಲ್ಲಿ ಅಂಚೆ ಇಲಾಖೆ ಸಹಾ ಅವರ ಭಾವಚಿತ್ರವಿರು ಅಂಚೆ ಚೀಟಿ ಮುದ್ರಿಸಿ ಗೌರವಿಸಿತ್ತು. 1960 ರಲ್ಲಿ ಅವರು ಪದ್ಮಶ್ರೀ ಪ್ರಶಸ್ತಿ ಪಡೆದರು.


ಇದನ್ನೂ ಓದಿ: ಮಹಿಷಾ ದಸರಾ ಆಚರಿಸುತ್ತೇವೆ, ತಾಕತ್ತಿದ್ದರೆ ತಡೆಯಲಿ; ಸಂಸದ ಪ್ರತಾಪ್ ಸಿಂಹರವರಿಗೆ ಸವಾಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...