Homeಅಂತರಾಷ್ಟ್ರೀಯಭಾರತದ ಈಜುಗಾರ್ತಿ ಆರತಿ ಸಹಾಗೆ ಗೂಗಲ್ ಡೂಡಲ್ ಗೌರವ

ಭಾರತದ ಈಜುಗಾರ್ತಿ ಆರತಿ ಸಹಾಗೆ ಗೂಗಲ್ ಡೂಡಲ್ ಗೌರವ

ಸೆಪ್ಟೆಂಬರ್ 29, 1959 ರಂದು, ಅವರು 16 ಗಂಟೆ 20 ನಿಮಿಷಗಳಲ್ಲಿ 42 ಮೈಲಿಗಳನ್ನು ಕ್ರಮಿಸಿದ ನಂತರ ಇಂಗ್ಲಿಷ್ ತೀರವನ್ನು ತಲುಪುವ ಮೂಲಕ ಇತಿಹಾಸ ಸೃಷ್ಟಿಸಿದರು.

- Advertisement -
- Advertisement -

ಭಾರತದ ದಿವಂಗತ ಈಜುಗಾರ್ತಿ, ಒಲಂಪಿಕ್ ಪದಕ ವಿಜೇತೆ ಆರತಿ ಸಹಾ ಎರಡು ಕಾರಣಗಳಿಗಾಗಿ ಇಂದು ಸುದ್ದಿಯಲ್ಲಿದ್ದಾರೆ. ಒಂದು, ಇಂದು ಅವರ 80ನೇ ಜನ್ಮದಿನ ಮತ್ತು ಇನ್ನೊಂದು ಕಾರಣವೆಂದರೆ ಅವರಿಗೆ ಗೂಗಲ್ ತನ್ನ ಡೂಡಲ್ ಗೌರವ ಸಲ್ಲಿಸಿದೆ.

ಸೆಪ್ಟೆಂಬರ್ 29, 1959 ರಂದು ಆರತಿ ಸಹಾ, ಇಂಗ್ಲಿಷ್ ಕಡಲ್ಗಾಲುವೆ ಅನ್ನು ದಾಟಿದ ಮೊದಲ ಏಷ್ಯಾದ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾದರು. 18 ವರ್ಷದವರಿರುವಾಗಲೇ ಫ್ರಾನ್ಸ್‌ನ ಕೇಪ್ ಗ್ರಿಸ್ ನೆಜ್‌ನಿಂದ ಇಂಗ್ಲೆಂಡ್‌ನ ಸ್ಯಾಂಡ್‌ಗೇಟ್‌ಗೆ 42 ಮೈಲಿ ದೂರ ಈಜಿ ದಾಖಲೆ ನಿರ್ಮಿಸಿದ್ದರು.

ಇದನ್ನೂ ಓದಿ: ’ಶಾಹಿನ್ ಬಾಗ್ ಅಜ್ಜಿ’ ಬಿಲ್ಕೀಸ್‌ 2020 ರ ಪ್ರಭಾವಶಾಲಿ ವ್ಯಕ್ತಿ

ಈ ಮಹಿಳಾ ಸಾಧಕಿ ಚಿಕ್ಕ ವಯಸ್ಸಿನಲ್ಲಿಯೇ ಯಶಸ್ಸು ಸಾಧಿಸಿದ್ದರು. ಸೆಪ್ಟೆಂಬರ್ 24, 1940 ರಂದು ಕೋಲ್ಕತ್ತಾದಲ್ಲಿ ಜನಿಸಿದ ಅವರು, ತಮ್ಮ ಐದನೇ ವಯಸ್ಸಿನಲ್ಲಿ ಈಜು ಸ್ಪರ್ಧೆಯಲ್ಲಿ ತಮ್ಮ ಮೊದಲ ಚಿನ್ನದ ಪದಕವನ್ನು ಪಡೆದಿದ್ದರು. ತನ್ನ ವೃತ್ತಿಜೀವನದ ಆರಂಭದಲ್ಲಿ, ಸಹಾ 1949ರಲ್ಲಿ ಅಖಿಲ ಭಾರತ ದಾಖಲೆಯನ್ನು ಮಾಡುವ ಮೂಲಕ ಗಮನ ಸೆಳೆದಿದ್ದರು.

1951ರ ಪಶ್ಚಿಮ ಬಂಗಾಳದಲ್ಲಿ ಡಾಲಿ ನಜೀರ್ ಅವರ ಅಲ್ ಇಂಡಿಯಾ ರೆಕಾರ್ಡ್ ಮುರಿದದ್ದು ಅವರ ವೃತ್ತಿಜೀವನದ ಅತಿದೊಡ್ಡ ಮೈಲಿಗಲ್ಲುಗಳಲ್ಲಿ ಒಂದಾಗಿದೆ. 1952ರ ಒಲಿಂಪಿಕ್ಸ್‌ನಲ್ಲಿ ಸಹಾ ಮತ್ತು ನಜೀರ್  ಭಾರತವನ್ನು ಪ್ರತಿನಿಧಿಸಿದರು.

ಇದನ್ನೂ ಓದಿ: 2024ರಲ್ಲಿ ಮೊದಲ ಬಾರಿಗೆ ಚಂದ್ರನ ಮೇಲೆ ಕಾಲಿಡಲಿರುವ ಮಹಿಳೆ!

ಇಂಗ್ಲಿಷ್ ಕಡಲ್ಗಾಲುವೆ ದಾಟುವ ಸಹಾ ನಿರ್ಧಾರಕ್ಕೆ ಕಾರಣವಾಗಿದ್ದು, ಬ್ರೋಜೆನ್ ದಾಸ್ ಎಂಬ ಬಾಂಗ್ಲಾದೇಶದ ಈಜುಗಾರ. ಇವರು 1952ರಲ್ಲಿ ಇಂಗ್ಲಿಷ್ ಚಾನೆಲ್ ದಾಟಿದ ಮೊದಲ ಏಷ್ಯನ್ ಈಜುಗಾರ. ಆಗಲೇ 1953 ರಲ್ಲಿ ನಡೆಯುಬೇಕಿದ್ದ  Butlin International Cross Channel Swimming Race ಗೆ ಬ್ರೋಜೆನ್ ದಾಸ್ ಸಹಾ ಅವರನ್ನು ಶಿಫಾರಸು ಮಾಡುತ್ತಾರೆ. ಆದರೆ ಇಂಗ್ಲೆಂಡ್‌ಗೆ ಪ್ರಯಾಣಿಸಲು ಆರ್ಥಿಕವಾಗಿ ತುಂಬಾ ಕಷ್ಟಪಟ್ಟ  ಈಜುಗಾರ್ತಿ ಸಹಾಗೆ ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ನೆರವು ನೀಡಿದ್ದರು.

ಇಂಗ್ಲಿಷ್ ಕಡಲ್ಗಾಲುವೆಯಲ್ಲಿ ಈಜಲು ಆರು ವರ್ಷಗಳ ಕಠಿಣ ತರಬೇತಿಯ ನಂತರ, ಅವರು ಜುಲೈ 1959ರಲ್ಲಿ ಇಂಗ್ಲೆಂಡ್‌ಗೆ ಹೋದರು. ಕಡಲ್ಗಾಲುವೆಯ ಅನ್ನು ದಾಟಲು ಸಹಾ ಮಾಡಿದ ಮೊದಲ ಪ್ರಯತ್ನವು ಇಂಗ್ಲೆಂಡ್ ಕರಾವಳಿಯಿಂದ ಕೇವಲ 5 ಮೈಲಿ ದೂರದಲ್ಲಿ ವಿಫಲವಾಯಿತು. ಆದಾದ ಒಂದು ತಿಂಗಳ ನಂತರ ಸೆಪ್ಟೆಂಬರ್ 29, 1959 ರಂದು, ಅವರು 16 ಗಂಟೆ 20 ನಿಮಿಷಗಳಲ್ಲಿ 42 ಮೈಲಿಗಳನ್ನು ಕ್ರಮಿಸಿದ ನಂತರ ಇಂಗ್ಲಿಷ್ ತೀರವನ್ನು ತಲುಪುವ ಮೂಲಕ ಇತಿಹಾಸ ಸೃಸ್ಟಿಸಿದರು.

1999 ರಲ್ಲಿ ಅಂಚೆ ಇಲಾಖೆ ಸಹಾ ಅವರ ಭಾವಚಿತ್ರವಿರು ಅಂಚೆ ಚೀಟಿ ಮುದ್ರಿಸಿ ಗೌರವಿಸಿತ್ತು. 1960 ರಲ್ಲಿ ಅವರು ಪದ್ಮಶ್ರೀ ಪ್ರಶಸ್ತಿ ಪಡೆದರು.


ಇದನ್ನೂ ಓದಿ: ಮಹಿಷಾ ದಸರಾ ಆಚರಿಸುತ್ತೇವೆ, ತಾಕತ್ತಿದ್ದರೆ ತಡೆಯಲಿ; ಸಂಸದ ಪ್ರತಾಪ್ ಸಿಂಹರವರಿಗೆ ಸವಾಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...