Homeಅಂತರಾಷ್ಟ್ರೀಯಭಾರತದ ಈಜುಗಾರ್ತಿ ಆರತಿ ಸಹಾಗೆ ಗೂಗಲ್ ಡೂಡಲ್ ಗೌರವ

ಭಾರತದ ಈಜುಗಾರ್ತಿ ಆರತಿ ಸಹಾಗೆ ಗೂಗಲ್ ಡೂಡಲ್ ಗೌರವ

ಸೆಪ್ಟೆಂಬರ್ 29, 1959 ರಂದು, ಅವರು 16 ಗಂಟೆ 20 ನಿಮಿಷಗಳಲ್ಲಿ 42 ಮೈಲಿಗಳನ್ನು ಕ್ರಮಿಸಿದ ನಂತರ ಇಂಗ್ಲಿಷ್ ತೀರವನ್ನು ತಲುಪುವ ಮೂಲಕ ಇತಿಹಾಸ ಸೃಷ್ಟಿಸಿದರು.

- Advertisement -
- Advertisement -

ಭಾರತದ ದಿವಂಗತ ಈಜುಗಾರ್ತಿ, ಒಲಂಪಿಕ್ ಪದಕ ವಿಜೇತೆ ಆರತಿ ಸಹಾ ಎರಡು ಕಾರಣಗಳಿಗಾಗಿ ಇಂದು ಸುದ್ದಿಯಲ್ಲಿದ್ದಾರೆ. ಒಂದು, ಇಂದು ಅವರ 80ನೇ ಜನ್ಮದಿನ ಮತ್ತು ಇನ್ನೊಂದು ಕಾರಣವೆಂದರೆ ಅವರಿಗೆ ಗೂಗಲ್ ತನ್ನ ಡೂಡಲ್ ಗೌರವ ಸಲ್ಲಿಸಿದೆ.

ಸೆಪ್ಟೆಂಬರ್ 29, 1959 ರಂದು ಆರತಿ ಸಹಾ, ಇಂಗ್ಲಿಷ್ ಕಡಲ್ಗಾಲುವೆ ಅನ್ನು ದಾಟಿದ ಮೊದಲ ಏಷ್ಯಾದ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾದರು. 18 ವರ್ಷದವರಿರುವಾಗಲೇ ಫ್ರಾನ್ಸ್‌ನ ಕೇಪ್ ಗ್ರಿಸ್ ನೆಜ್‌ನಿಂದ ಇಂಗ್ಲೆಂಡ್‌ನ ಸ್ಯಾಂಡ್‌ಗೇಟ್‌ಗೆ 42 ಮೈಲಿ ದೂರ ಈಜಿ ದಾಖಲೆ ನಿರ್ಮಿಸಿದ್ದರು.

ಇದನ್ನೂ ಓದಿ: ’ಶಾಹಿನ್ ಬಾಗ್ ಅಜ್ಜಿ’ ಬಿಲ್ಕೀಸ್‌ 2020 ರ ಪ್ರಭಾವಶಾಲಿ ವ್ಯಕ್ತಿ

ಈ ಮಹಿಳಾ ಸಾಧಕಿ ಚಿಕ್ಕ ವಯಸ್ಸಿನಲ್ಲಿಯೇ ಯಶಸ್ಸು ಸಾಧಿಸಿದ್ದರು. ಸೆಪ್ಟೆಂಬರ್ 24, 1940 ರಂದು ಕೋಲ್ಕತ್ತಾದಲ್ಲಿ ಜನಿಸಿದ ಅವರು, ತಮ್ಮ ಐದನೇ ವಯಸ್ಸಿನಲ್ಲಿ ಈಜು ಸ್ಪರ್ಧೆಯಲ್ಲಿ ತಮ್ಮ ಮೊದಲ ಚಿನ್ನದ ಪದಕವನ್ನು ಪಡೆದಿದ್ದರು. ತನ್ನ ವೃತ್ತಿಜೀವನದ ಆರಂಭದಲ್ಲಿ, ಸಹಾ 1949ರಲ್ಲಿ ಅಖಿಲ ಭಾರತ ದಾಖಲೆಯನ್ನು ಮಾಡುವ ಮೂಲಕ ಗಮನ ಸೆಳೆದಿದ್ದರು.

1951ರ ಪಶ್ಚಿಮ ಬಂಗಾಳದಲ್ಲಿ ಡಾಲಿ ನಜೀರ್ ಅವರ ಅಲ್ ಇಂಡಿಯಾ ರೆಕಾರ್ಡ್ ಮುರಿದದ್ದು ಅವರ ವೃತ್ತಿಜೀವನದ ಅತಿದೊಡ್ಡ ಮೈಲಿಗಲ್ಲುಗಳಲ್ಲಿ ಒಂದಾಗಿದೆ. 1952ರ ಒಲಿಂಪಿಕ್ಸ್‌ನಲ್ಲಿ ಸಹಾ ಮತ್ತು ನಜೀರ್  ಭಾರತವನ್ನು ಪ್ರತಿನಿಧಿಸಿದರು.

ಇದನ್ನೂ ಓದಿ: 2024ರಲ್ಲಿ ಮೊದಲ ಬಾರಿಗೆ ಚಂದ್ರನ ಮೇಲೆ ಕಾಲಿಡಲಿರುವ ಮಹಿಳೆ!

ಇಂಗ್ಲಿಷ್ ಕಡಲ್ಗಾಲುವೆ ದಾಟುವ ಸಹಾ ನಿರ್ಧಾರಕ್ಕೆ ಕಾರಣವಾಗಿದ್ದು, ಬ್ರೋಜೆನ್ ದಾಸ್ ಎಂಬ ಬಾಂಗ್ಲಾದೇಶದ ಈಜುಗಾರ. ಇವರು 1952ರಲ್ಲಿ ಇಂಗ್ಲಿಷ್ ಚಾನೆಲ್ ದಾಟಿದ ಮೊದಲ ಏಷ್ಯನ್ ಈಜುಗಾರ. ಆಗಲೇ 1953 ರಲ್ಲಿ ನಡೆಯುಬೇಕಿದ್ದ  Butlin International Cross Channel Swimming Race ಗೆ ಬ್ರೋಜೆನ್ ದಾಸ್ ಸಹಾ ಅವರನ್ನು ಶಿಫಾರಸು ಮಾಡುತ್ತಾರೆ. ಆದರೆ ಇಂಗ್ಲೆಂಡ್‌ಗೆ ಪ್ರಯಾಣಿಸಲು ಆರ್ಥಿಕವಾಗಿ ತುಂಬಾ ಕಷ್ಟಪಟ್ಟ  ಈಜುಗಾರ್ತಿ ಸಹಾಗೆ ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ನೆರವು ನೀಡಿದ್ದರು.

ಇಂಗ್ಲಿಷ್ ಕಡಲ್ಗಾಲುವೆಯಲ್ಲಿ ಈಜಲು ಆರು ವರ್ಷಗಳ ಕಠಿಣ ತರಬೇತಿಯ ನಂತರ, ಅವರು ಜುಲೈ 1959ರಲ್ಲಿ ಇಂಗ್ಲೆಂಡ್‌ಗೆ ಹೋದರು. ಕಡಲ್ಗಾಲುವೆಯ ಅನ್ನು ದಾಟಲು ಸಹಾ ಮಾಡಿದ ಮೊದಲ ಪ್ರಯತ್ನವು ಇಂಗ್ಲೆಂಡ್ ಕರಾವಳಿಯಿಂದ ಕೇವಲ 5 ಮೈಲಿ ದೂರದಲ್ಲಿ ವಿಫಲವಾಯಿತು. ಆದಾದ ಒಂದು ತಿಂಗಳ ನಂತರ ಸೆಪ್ಟೆಂಬರ್ 29, 1959 ರಂದು, ಅವರು 16 ಗಂಟೆ 20 ನಿಮಿಷಗಳಲ್ಲಿ 42 ಮೈಲಿಗಳನ್ನು ಕ್ರಮಿಸಿದ ನಂತರ ಇಂಗ್ಲಿಷ್ ತೀರವನ್ನು ತಲುಪುವ ಮೂಲಕ ಇತಿಹಾಸ ಸೃಸ್ಟಿಸಿದರು.

1999 ರಲ್ಲಿ ಅಂಚೆ ಇಲಾಖೆ ಸಹಾ ಅವರ ಭಾವಚಿತ್ರವಿರು ಅಂಚೆ ಚೀಟಿ ಮುದ್ರಿಸಿ ಗೌರವಿಸಿತ್ತು. 1960 ರಲ್ಲಿ ಅವರು ಪದ್ಮಶ್ರೀ ಪ್ರಶಸ್ತಿ ಪಡೆದರು.


ಇದನ್ನೂ ಓದಿ: ಮಹಿಷಾ ದಸರಾ ಆಚರಿಸುತ್ತೇವೆ, ತಾಕತ್ತಿದ್ದರೆ ತಡೆಯಲಿ; ಸಂಸದ ಪ್ರತಾಪ್ ಸಿಂಹರವರಿಗೆ ಸವಾಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....