Homeಅಂತರಾಷ್ಟ್ರೀಯಭಾರತದ ಈಜುಗಾರ್ತಿ ಆರತಿ ಸಹಾಗೆ ಗೂಗಲ್ ಡೂಡಲ್ ಗೌರವ

ಭಾರತದ ಈಜುಗಾರ್ತಿ ಆರತಿ ಸಹಾಗೆ ಗೂಗಲ್ ಡೂಡಲ್ ಗೌರವ

ಸೆಪ್ಟೆಂಬರ್ 29, 1959 ರಂದು, ಅವರು 16 ಗಂಟೆ 20 ನಿಮಿಷಗಳಲ್ಲಿ 42 ಮೈಲಿಗಳನ್ನು ಕ್ರಮಿಸಿದ ನಂತರ ಇಂಗ್ಲಿಷ್ ತೀರವನ್ನು ತಲುಪುವ ಮೂಲಕ ಇತಿಹಾಸ ಸೃಷ್ಟಿಸಿದರು.

- Advertisement -
- Advertisement -

ಭಾರತದ ದಿವಂಗತ ಈಜುಗಾರ್ತಿ, ಒಲಂಪಿಕ್ ಪದಕ ವಿಜೇತೆ ಆರತಿ ಸಹಾ ಎರಡು ಕಾರಣಗಳಿಗಾಗಿ ಇಂದು ಸುದ್ದಿಯಲ್ಲಿದ್ದಾರೆ. ಒಂದು, ಇಂದು ಅವರ 80ನೇ ಜನ್ಮದಿನ ಮತ್ತು ಇನ್ನೊಂದು ಕಾರಣವೆಂದರೆ ಅವರಿಗೆ ಗೂಗಲ್ ತನ್ನ ಡೂಡಲ್ ಗೌರವ ಸಲ್ಲಿಸಿದೆ.

ಸೆಪ್ಟೆಂಬರ್ 29, 1959 ರಂದು ಆರತಿ ಸಹಾ, ಇಂಗ್ಲಿಷ್ ಕಡಲ್ಗಾಲುವೆ ಅನ್ನು ದಾಟಿದ ಮೊದಲ ಏಷ್ಯಾದ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾದರು. 18 ವರ್ಷದವರಿರುವಾಗಲೇ ಫ್ರಾನ್ಸ್‌ನ ಕೇಪ್ ಗ್ರಿಸ್ ನೆಜ್‌ನಿಂದ ಇಂಗ್ಲೆಂಡ್‌ನ ಸ್ಯಾಂಡ್‌ಗೇಟ್‌ಗೆ 42 ಮೈಲಿ ದೂರ ಈಜಿ ದಾಖಲೆ ನಿರ್ಮಿಸಿದ್ದರು.

ಇದನ್ನೂ ಓದಿ: ’ಶಾಹಿನ್ ಬಾಗ್ ಅಜ್ಜಿ’ ಬಿಲ್ಕೀಸ್‌ 2020 ರ ಪ್ರಭಾವಶಾಲಿ ವ್ಯಕ್ತಿ

ಈ ಮಹಿಳಾ ಸಾಧಕಿ ಚಿಕ್ಕ ವಯಸ್ಸಿನಲ್ಲಿಯೇ ಯಶಸ್ಸು ಸಾಧಿಸಿದ್ದರು. ಸೆಪ್ಟೆಂಬರ್ 24, 1940 ರಂದು ಕೋಲ್ಕತ್ತಾದಲ್ಲಿ ಜನಿಸಿದ ಅವರು, ತಮ್ಮ ಐದನೇ ವಯಸ್ಸಿನಲ್ಲಿ ಈಜು ಸ್ಪರ್ಧೆಯಲ್ಲಿ ತಮ್ಮ ಮೊದಲ ಚಿನ್ನದ ಪದಕವನ್ನು ಪಡೆದಿದ್ದರು. ತನ್ನ ವೃತ್ತಿಜೀವನದ ಆರಂಭದಲ್ಲಿ, ಸಹಾ 1949ರಲ್ಲಿ ಅಖಿಲ ಭಾರತ ದಾಖಲೆಯನ್ನು ಮಾಡುವ ಮೂಲಕ ಗಮನ ಸೆಳೆದಿದ್ದರು.

1951ರ ಪಶ್ಚಿಮ ಬಂಗಾಳದಲ್ಲಿ ಡಾಲಿ ನಜೀರ್ ಅವರ ಅಲ್ ಇಂಡಿಯಾ ರೆಕಾರ್ಡ್ ಮುರಿದದ್ದು ಅವರ ವೃತ್ತಿಜೀವನದ ಅತಿದೊಡ್ಡ ಮೈಲಿಗಲ್ಲುಗಳಲ್ಲಿ ಒಂದಾಗಿದೆ. 1952ರ ಒಲಿಂಪಿಕ್ಸ್‌ನಲ್ಲಿ ಸಹಾ ಮತ್ತು ನಜೀರ್  ಭಾರತವನ್ನು ಪ್ರತಿನಿಧಿಸಿದರು.

ಇದನ್ನೂ ಓದಿ: 2024ರಲ್ಲಿ ಮೊದಲ ಬಾರಿಗೆ ಚಂದ್ರನ ಮೇಲೆ ಕಾಲಿಡಲಿರುವ ಮಹಿಳೆ!

ಇಂಗ್ಲಿಷ್ ಕಡಲ್ಗಾಲುವೆ ದಾಟುವ ಸಹಾ ನಿರ್ಧಾರಕ್ಕೆ ಕಾರಣವಾಗಿದ್ದು, ಬ್ರೋಜೆನ್ ದಾಸ್ ಎಂಬ ಬಾಂಗ್ಲಾದೇಶದ ಈಜುಗಾರ. ಇವರು 1952ರಲ್ಲಿ ಇಂಗ್ಲಿಷ್ ಚಾನೆಲ್ ದಾಟಿದ ಮೊದಲ ಏಷ್ಯನ್ ಈಜುಗಾರ. ಆಗಲೇ 1953 ರಲ್ಲಿ ನಡೆಯುಬೇಕಿದ್ದ  Butlin International Cross Channel Swimming Race ಗೆ ಬ್ರೋಜೆನ್ ದಾಸ್ ಸಹಾ ಅವರನ್ನು ಶಿಫಾರಸು ಮಾಡುತ್ತಾರೆ. ಆದರೆ ಇಂಗ್ಲೆಂಡ್‌ಗೆ ಪ್ರಯಾಣಿಸಲು ಆರ್ಥಿಕವಾಗಿ ತುಂಬಾ ಕಷ್ಟಪಟ್ಟ  ಈಜುಗಾರ್ತಿ ಸಹಾಗೆ ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ನೆರವು ನೀಡಿದ್ದರು.

ಇಂಗ್ಲಿಷ್ ಕಡಲ್ಗಾಲುವೆಯಲ್ಲಿ ಈಜಲು ಆರು ವರ್ಷಗಳ ಕಠಿಣ ತರಬೇತಿಯ ನಂತರ, ಅವರು ಜುಲೈ 1959ರಲ್ಲಿ ಇಂಗ್ಲೆಂಡ್‌ಗೆ ಹೋದರು. ಕಡಲ್ಗಾಲುವೆಯ ಅನ್ನು ದಾಟಲು ಸಹಾ ಮಾಡಿದ ಮೊದಲ ಪ್ರಯತ್ನವು ಇಂಗ್ಲೆಂಡ್ ಕರಾವಳಿಯಿಂದ ಕೇವಲ 5 ಮೈಲಿ ದೂರದಲ್ಲಿ ವಿಫಲವಾಯಿತು. ಆದಾದ ಒಂದು ತಿಂಗಳ ನಂತರ ಸೆಪ್ಟೆಂಬರ್ 29, 1959 ರಂದು, ಅವರು 16 ಗಂಟೆ 20 ನಿಮಿಷಗಳಲ್ಲಿ 42 ಮೈಲಿಗಳನ್ನು ಕ್ರಮಿಸಿದ ನಂತರ ಇಂಗ್ಲಿಷ್ ತೀರವನ್ನು ತಲುಪುವ ಮೂಲಕ ಇತಿಹಾಸ ಸೃಸ್ಟಿಸಿದರು.

1999 ರಲ್ಲಿ ಅಂಚೆ ಇಲಾಖೆ ಸಹಾ ಅವರ ಭಾವಚಿತ್ರವಿರು ಅಂಚೆ ಚೀಟಿ ಮುದ್ರಿಸಿ ಗೌರವಿಸಿತ್ತು. 1960 ರಲ್ಲಿ ಅವರು ಪದ್ಮಶ್ರೀ ಪ್ರಶಸ್ತಿ ಪಡೆದರು.


ಇದನ್ನೂ ಓದಿ: ಮಹಿಷಾ ದಸರಾ ಆಚರಿಸುತ್ತೇವೆ, ತಾಕತ್ತಿದ್ದರೆ ತಡೆಯಲಿ; ಸಂಸದ ಪ್ರತಾಪ್ ಸಿಂಹರವರಿಗೆ ಸವಾಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...